ದಿನದ ಸುದ್ದಿ
ಹರಿಹರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ

ಸುದ್ದಿದಿನ,ದಾವಣಗೆರೆ: ಮೇ 31 ರಂದು ನಡೆದ ಮತ ಎಣಿಕೆ ನಂತರ ಹರಿಹರ ನಗರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.
ಮ್ಯಾಜಿಕ್ ನಂಬರ್ 16 ಪಡೆಯುವಲ್ಲಿ ಯಾವ ಪಕ್ಷವೂ ಸಫಲವಾಗಿಲ್ಲ. 14 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆ.ಡಿ.ಎಸ್. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 10 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಭಾರತೀಯ ಜನತಾ ಪಕ್ಷ 5 ಸ್ಥಾನ ಪಡೆದರೆ ಈ ಮಧ್ಯೆ ಪಕ್ಷೇತರರಿಬ್ಬರು ಜಯಭೇರಿ ಬಾರಿಸಿದ್ದಾರೆ.
31 ವಾರ್ಡ್ಗಳಿಗೆ ಮೇ 29 ರಂದು ಮತದಾನ ನಡೆದಿದ್ದು, ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ, 11 ಗಂಟೆ ಸುಮಾರಿಗೆ ಪೂರ್ಣ ಚಿತ್ರಣ ಹೊರಬಂದಿತ್ತು. ಹರಿಹರ ನಗರಸಭೆಯ 1ನೇ ವಾರ್ಡ್ ಹರ್ಲಾಪುರದಿಂದ ಜನತದಾದಳ (ಜಾತ್ಯತೀತ) ಪಕ್ಷದ ಜಂಬಣ್ಣ 807 ಮತಗಳಿಂದ ಜಯ ಸಾಧಿಸಿದ್ದಾರೆ.
ಇವರ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಂ.ಮಂಜುನಾಥ, 2ನೇ ವಾರ್ಡ್ ಎ.ಕೆ ಕಾಲೋನಿಯಿಂದ ಜನತಾದಳ(ಜಾ) ಪಕ್ಷದ ಪಿ.ಎನ್ ವಿರುಪಾಕ್ಷ 533 ಮತಗಳನ್ನು ಪಡೆದು ಜಯಶಾಲಿಯಾಗಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಸ್.ಎಸ್. ಆನಂದಕುಮಾರ್, 3ನೇ ವಾರ್ಡ್ ಆಶ್ರಯ ಕಾಲೋನಿಯಿಂದ ಬಿಜೆಪಿ ಪಕ್ಷದ ಆಟೋ ಹನುಮಂತಪ್ಪ 364 ಮತಗಳಿಂದ ಜಯಶಾಲಿಯಾಗಿದ್ದು, ಇವರ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹನುಮಂತಪ್ಪ.
4ನೇ ವಾರ್ಡ್ ವಿಜಯನಗರ ಬಡಾವಣೆಯಿಂದ ಬಿಜೆಪಿ ಪಕ್ಷದ ಎನ್.ರಂಜಿನಿಕಾಂತ್ 616 ಮತ ಪಡೆಯುವುದರ ಮೂಲಕ ವಿಜಯಿಯಾಗಿದ್ದು, ಜನತಾದಳ(ಜಾ) ಪಕ್ಷದ ಸಮೀಪದ ಪ್ರತಿಸ್ಪರ್ಧಿ ಸದಾಶಿವ, 5ನೇ ವಾರ್ಡ್ ಕೆ.ಆರ್.ನಗರದಿಂದ 554 ಮತಗಳಿಂದ ಕಾಂಗ್ರೆಸ್ ಪಕ್ಷದಿಂದ ನಾಗರತ್ನಪ್ಪ ದೀಪ ಜಯಶೀಲರಾಗಿದ್ದು ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ವೈ ಇಂದಿರಾ ಮಂಜುನಾಥ 6ನೇ ವಾರ್ಡ್ ಮಹಾಲಿಂಗಪ್ಪ ಬಡಾವಣೆಯಿಂದ 426 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಸೈಯದ್ ಅಬ್ದುಲ್ ಅಲೀಂ ಜಯಶಾಲಿಯಾಗಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಕೀರ್ತಿ ಕುಮಾರ್ ಹೆಚ್.ಸಿ ಆಗಿದ್ದರು.
7ನೇ ವಾರ್ಡ್ ಗಾಂಧಿನಗರದಿಂದ ಪೆಕ್ಷೇತರ ಅಭ್ಯರ್ಥಿ ಇಬ್ರಾಹಿಂ 869 ಮತಗಳನ್ನು ಪಡೆಯುವ ಮೂಲಕ ಜಯ ಪಡೆದಿದ್ದಾರೆ. ಇವರ ಸಮೀಪದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಬಿ.ಕೆ.ಸೈಯದ್ ಬಾಷಾ. 8ನೇ ವಾರ್ಡ್ ತೆಗ್ಗಿನಕೇರಿಯಿಂದ ಬಿಜೆಪಿ ಯ ಕೆ.ಜಿ.ಸಿದ್ದೇಶ್ 1221 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಶೇಖರ ಗೌಡ ಆಗಿದ್ದರು.
9ನೇ ವಾರ್ಡ್ ಭರಂಪುರದಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ನಿಂಬಕ್ಕ ಚಂಬಾಪುರ 1148 ಮತಗಳನ್ನು ಪಡೆದು ಜಯ ಸಾಧಿಸಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಶ್ವಿನಿ ಗುತ್ಯಪ್ಪ ಆಗಿದ್ದರು. 10ನೇ ವಾರ್ಡ್ ಭಾರತ್ ಮಿಲ್ ಕಾಂಪೌಂಡ್ನಿಂದ ಜನತಾದಳ(ಜಾ) ಪಕ್ಷದಿಂದ ಎಂ.ಆರ್.ಮುಜಾಮಿಲ್ 626 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಫರ್ಧಿ ಬಿಜೆಪಿ ಮಾರುತಿ ಬಿ ಆಗಿದ್ದರು.
11 ನೇ ವಾರ್ಡ್ ಟಿಪ್ಪುನಗರದಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಸುಮಿತ್ರ ಕೆ.ಮರಿದೇವಪ್ಪ 943 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾ ದಳ ಪಕ್ಷದ ಹೆಚ್.ಮಂಜುಳ. 12 ನೇ ವಾರ್ಡ್ ಅಮರಾವತಿಯಿಂದ ಬಿಜೆಪಿ ಪಕ್ಷದಿಂದ ಬಿ.ಎಂ ವಿಜಯಕುಮಾರ್ 669 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಕೆ.ಹೆಚ್.ಯೋಗೇಶಪ್ಪ ಆಗಿದ್ದರು.
13ನೇ ವಾರ್ಡ್ ಜೈಭೀಮನಗರ ಜನತಾದಳ(ಜಾ) ಪಕ್ಷದ ಆರ್.ದಿನೇಶ್ ಬಾಬು 673 ಮತಗಳಿಂದ ಜಯಶಾಲಿಯಾಗಿದ್ದು ಕಾಂಗ್ರೆಸ್ ಪಕ್ಷದ ರಾಘವೇಂದ್ರ ಅಶೋಕ್ ಓಲೇಕಾರ್ ಇವರು ಸಮೀಪದ ಪ್ರತಿಸ್ಪಧಿಯಾಗಿದ್ದರು. 14 ನೇ ವಾರ್ಡ್ ಕಾಳಿದಾಸನಗರ ಕಾಂಗ್ರೆಸ್ ಪಕ್ಷದಿಂದ ಮೆಹಬೂಬ್ ಬಾಷಾ ಆರ್ 533 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದ್ ಏಜಾಜ್ ವಿರುದ್ದ ಜಯ ಸಾಧಿಸಿದ್ದಾರೆ.
15 ನೇ ವಾರ್ಡ್ ಬಹಾರ್ ಮಖಾನ್ನಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ರೇಷ್ಮಾ ಬಾನು 610 ಮತಗಳನ್ನು ಪಡೆಯವ ಮೂಲಕ ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲತಾಶ್ರೀ ವೀರಾಚಾರ ವಿರುದ್ದ ಜಯ ಗಳಿಸಿದ್ದಾರೆ. 16 ನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಫಕೀರಮ್ಮ 829 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಜನತಾ ದಳದ ಬಿ.ಐ ಮಮತಾ ಮುಂದೆ ಜಯ ಸಾಧಿಸಿದ್ದಾರೆ.
17ನೇ ವಾರ್ಡ್ ಹೊಸಪೇಟೆ ಬೀದಿಯಿಂದ ಜನತಾದಳ(ಜಾ)ದ ಲಕ್ಷ್ಮೀ ಮೋಹನ್ ದುರುಗೋಜಿ ಇವರು 741 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ನ ಸುನಂದ ಪಕ್ಕೀರಸಾ ಭೂತೆ ರ ವಿರುದ್ದ ಜಯಗಳಿಸಿದ್ದಾರೆ. 18 ನೇ ವಾರ್ಡ್ ಇಮಾಂ ಮೊಹಲ್ಲಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಂಕರ್ ಖಟಾವ್ಕರ್ 825 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)ದ ಹೆಚ್.ಅಬ್ದುಲ್ ರೆಹಮಾನ್ ಖಾನ್ ರ ವಿರುದ್ದ ಜಯ ಸಾಧಿಸಿದ್ದಾರೆ.
19ನೇ ವಾರ್ಡ್ ಹಳ್ಳದಕೇರಿಯಿಂದ ಜನತಾದಳ(ಜಾ) ಪಕ್ಷದ ನೂರ್ಸಭಾ 834 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಪಕ್ಷದ ಆಶಾ ರವೀಂದ್ರ ವಿರುದ್ದ ಗೆಲುವು ಪಡೆದಿದ್ದಾರೆ. 20 ನೇ ವಾರ್ಡ್ ಕುಂಬಾರ ಓಣಿಯಿಂದ ಜನತಾದಳ(ಜಾ)(ಜಾ) ರತ್ನ ಡಿ.ಯು 779 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಬಿ ಸುಜಾತ ಇವರ ವಿರುದ್ದ ಜಯಶಾಲಿಯಾಗಿದ್ದಾರೆ.
21ನೇ ವಾರ್ಡ್ ಜೆಸಿಆರ್ ಬಡಾವಣೆ-1 ರಿಂದ ಬಿಜೆಪಿಯ ನೀತಾ ಇವರು 663 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಶಹಜಾದ್ ಎಸ್.ಕೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ. 22ನೇ ವಾರ್ಡ್ ಜೆಸಿಆರ್ ಬಡಾವಣೆ-2 ರಿಂದ ಜನತಾದಳ(ಜಾ)(ಜಾ)ದ ಜಮಾಲುದ್ದೀನ್ 660 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ಹುಲಿಗೆಪ್ಪ ಸಿ ಎನ್ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.
23ನೇ ವಾರ್ಡ್ ರಾಜಾರಾಂ ಕಾಲೋನಿಯಿಂದ ಕಾಂಗ್ರೆಸ್ ಪಕ್ಷದ ಎಂ.ಬಾಬುಲಾಲ್ 962 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)(ಜಾ)ದ ಹಾಜೀ ಅಲಿ ಖಾನ್ ವಿರುದ್ದ ಜಯ ಗಳಿಸಿದ್ದಾರೆ. 24 ವಾರ್ಡ್ ಬೆಂಕಿನಗರದಿಂದ ಕಾಂಗ್ರೆಸ್ ಪಕ್ಷದ ಶಾಹಿನಾ ಬಾನು 554 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದಾ ಅನಿಸಾ ಇವರು ವಿರುದ್ದ ಗೆಲುವು ಸಾಧಿಸಿದ್ದಾರೆ.
25 ನೇ ವಾರ್ಡ್ ಪ್ರಶಾಂತ್ ನಗರದಿಂದ ಜನತಾದಳ(ಜಾ)(ಜಾ)ದ ದಾದಾ ಖಲಂದರ್ ಇವರು 776 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸಂತೋಷ್ಕುಮಾರ್ ಎಂ ವಿರುದ್ದ ಗೆಲುವು ಸಾಧಿಸಿದ್ದಾರೆ. 26 ನೇ ವಾರ್ಡ್ ಜೆಸಿಆರ್ ಬಡಾವಣೆ -3 ರಿಂದ ಜನತಾದಳ(ಜಾ)(ಜಾ)ದ ವಾಮನಮೂರ್ತಿ ಎ ಇವರು 506 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಜೀಜ್ ಮೇಸ್ತ್ರಿಯವರನ್ನು ಸೋಲಿಸಿದ್ದಾರೆ.
27ನೇ ವಾರ್ಡ್ ಜೆಸಿಆರ್ ಬಡಾವಣೆ-4 ರಿಂದ ಜನತಾದಳ(ಜಾ)(ಜಾ)ದ ಉಷಾ ಮಂಜುನಾಥ್ 544 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರೋಹಿಣಿ ರಾಜು ಐರಣಿ ವಿರುದ್ದ ಜಯ ಗಳಿಸಿದ್ದಾರೆ. 28 ವಾರ್ಡ್ ಸುಣಗಾರ ಬೀದಿಯಿಂದ ಪಕ್ಷೇತರ ಅಭ್ಯರ್ಥಿ ಪಾರ್ವತಮ್ಮ ಐರಣಿ 582 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ನಾಗರತ್ನಮ್ಮರ ವಿರುದ್ದ ಗೆಲುವು ಸಾಧಿಸಿದ್ದಾರೆ.
29ನೇ ವಾರ್ಡ್ ಗಂಗಾನಗರದಿಂದ ಕಾಂಗ್ರೆಸ್ ಪಕ್ಷದ ಎಸ್.ಎಂ.ವಸಂತ್ 754 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೋಹನ್ ಹೆಚ್. ವಿರುದ್ದ ಜಯ ಗಳಿಸಿದ್ದಾರೆ. 30 ವಾರ್ಡ್ ವಿದ್ಯಾನಗರದಿಂದ ಬಿಜೆಪಿ ಪಕ್ಷದ ಮಹಿಳಾ ಅಭ್ಯರ್ಥಿ ಅಶ್ವಿನಿ ಕೃಷ್ಣ ಇವರು 530 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಗೀತಾ ವಿಶ್ವನಾಥ ಭೂತೆ ವಿರುದ್ದ ಗೆಲುವು ಸಾಧಿಸಿದ್ದಾರೆ. ಹಾಗೂ 31 ನೇ ವಾರ್ಡ್ ಇಂದಿರಾನಗರದಿಂದ ಜನತಾದಳ(ಜಾ)ಕವಿತಾ ಮಾರುತಿ ಬೇಡರ್ 807 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಮಾಧವಿ ಉಮೇಶ್ ತುಂಬಿದಮನೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.
ಅಂಚೆಮತಗಳು : 03 ಅಂಚೆ ಮತಗಳನ್ನು ಸ್ವೀಕರಿಸಲಾಗಿದ್ದು ಇವುಗಳಲ್ಲಿ 02 ಮಾತ್ರ ಕ್ರಮಬದ್ದವಾಗಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44 ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಒಟ್ಟು 44 ಅಂತಿಮ ವರ್ಷದ ವಿದ್ಯಾರ್ಥಿಗಳು ನ್ಯೂಜೈಸಾ ಟೆಕ್ನಾಲಜಿಸ್ ನಲ್ಲಿ ಉದ್ಯೋಗವಕಾಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.
ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಜಿಎಂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್ ಚಂದ್ರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಅಭಿನಂದನೆ ಸಲ್ಲಿಸಿದ್ದು, 44 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಹರುಷ ವ್ಯಕ್ತಪಡಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಸಿ. ನಿಂಗರಾಜು, ಡಿಪ್ಲೋಮೋದ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸ್ಮಿನ್ ಬೇಗಮ್, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಕೆ.ಬಿ. ಜನಾರ್ಧನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಿ.ಎನ್. ಸಂದೀಪ್, ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಎಂ. ಪ್ರವೀಣ್ ಕುಮಾರ್, ಕೆ. ಗಿರಿಜಾ ಸೇರಿದಂತೆ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ ಪತ್ರಕರ್ತರಾಗುವ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮೀಡಿಯಾ ಫೆಸ್ಟ್-2025 ಕಾರ್ಯಕ್ರಮ ಆಯೋಜಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದರು.
ಮಂಗಳವಾರ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಮಾಧ್ಯಮ ಅಕಾಡೆಮಿ, ಶರಣಬಸವ ವಿಶ್ವವಿದ್ಯಾಲಯ ಹಾಗೂ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರಗಿ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಾಗಾರ, ನುರಿತ ಪತ್ರಕರ್ತರಿಂದ ಗೋಷ್ಠಿ, ಸ್ಪರ್ಧೆಗಳು ನಡೆಯಲಿವೆ. ಕಲಬುರಗಿ ಮತ್ತು ಬೆಳಗಾವಿ ವಿಭಾಗದ ವಿಶ್ವವಿದ್ಯಾಲಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪತ್ರಿಕೋದ್ಯಮ ವಿಭಾಗದ ಸುಮಾರು 200 ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪ್ರಾಧ್ಯಾಪಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ
ಶರಣಬಸವ ವಿಶ್ವವಿದ್ಯಾಲಯದ ಪತಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಈ ಮಾಧ್ಯಮೋತ್ಸವದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಲಾಗುತ್ತಿದೆ. ಭವಿಷ್ಯದ ಸ್ಪರ್ಧಾತ್ಮಕ ಪತ್ರಕರ್ತರಲ್ಲಿ ಅತ್ಯುತ್ತಮರನ್ನು ಹೊರತರಲು ಹತ್ತು ಹಲವು ಸ್ಪರ್ಧೆಗಳನ್ನು ವಿನ್ಯಾಸಗೊಳಿಸಿದ್ದು, ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದ ವಿವಿಧ ಸ್ಥಳಗಳಲ್ಲಿ ಈ ಸ್ಪರ್ಧೆ ನಡೆಯಲಿವೆ. ಕಾರ್ಯಕ್ರಮ್ಕಕೆ ಆಗಮಿಸುವ ವಿದ್ಯಾರ್ಥಿಗಳಿಗೆ ವಿ.ವಿ.ಯಲ್ಲಿ ವಸತಿ, ಊಟದ ವ್ಯವಸ್ಥೆ ಮಾಡಿದ್ದು, ಸ್ಪರ್ಧೇಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ. ಪ್ರವೇಶ ಸಂಪೂರ್ಣ ಉಚಿತ ಇರಲಿದೆ. ಇನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯು ವಿದ್ಯಾರ್ಥಿಗಳ ನೋಂದಣಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ವೈಯಕ್ತಿಕ ಸ್ಪರ್ಧೆಗಳು ಮತ್ತು ಗುಂಪು ಸ್ಪರ್ಧೆಗಳು ಎಂದು ಎರಡು ವಿಭಾಗಗಳಾಗಿ ಸ್ಪರ್ಧೇಗಳನ್ನು ವಿಂಗಡಿಸಲಾಗಿದೆ. ವೈಯಕ್ತಿಕ ಸ್ಪರ್ಧೆಗಳಲ್ಲಿ ನೇರ ಪತ್ರಿಕಾಗೋಷ್ಠಿ ವರದಿ ಮಾಡುವಿಕೆ, ಪಿಟಿಸಿ ಮತ್ತು ಟಿವಿ ವರದಿ ಮಾಡುವಿಕೆ, ಸ್ಪಾಟ್ ಛಾಯಾಗ್ರಹಣ, ರೇಡಿಯೋ ಜಾಕಿ, ನುಡಿಚಿತ್ರ, ಜಾಹೀರಾತು ಬರವಣಿಗೆ, ಸಾಮಾಜಿಕ ಮಾಧ್ಯಮದ ವರದಿ ಮಾಡುವಿಕೆ ಮತ್ತು ಮುಖ್ಯಾಂಶಗಳನ್ನು ಬರೆಯುವ ಕಲೆ ಸೇರಿವೆ. ಗುಂಪು ಸ್ಪರ್ಧೆಗಳಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ರಸಪ್ರಶ್ನೆ, “ನಮ್ಮೂರ ಭಾಷೆ–ವರವಾ?
ಶಾಪವಾ?”
ಚರ್ಚಾ ಸ್ಪರ್ಧೆ ಸೇರಿದೆ ಎಂದರು.
ಕಲ್ಯಾಣ ಕರ್ನಾಟಕ ಮಾಧ್ಯಮೋತ್ಸವದ ಮತ್ತೊಂದು ವೈಶಿಷ್ಟ್ಯವೆಂದರೆ ಉದಯೋನ್ಮುಖ ಪತ್ರಕರ್ತರ ಕೌಶಲ್ಯಗಳನ್ನು ಉತ್ತಮಗೊಳಿಸುವ ಎರಡು ಕಾರ್ಯಾಗಾರಗಳು ಹಮ್ಮಿಕೊಳ್ಳಲಾಗಿದೆ. ಮೊದಲ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತ ಹಾಗೂ ನಟ, ನಿರ್ದೇಶಕ ಮತ್ತು ಆಲ್ಮಾ ಮೀಡಿಯಾದ ಸಂಸ್ಥಾಪಕರಾದ ಗೌರೀಶ್ ಅಕ್ಕಿ, ಮಾಧ್ಯಮದ ಸ್ಪರ್ಧಾತ್ಮಕ ಜಗತ್ತನ್ನು ಪ್ರವೇಶಿಸುವ ಹಾಗೂ ಸವಾಲುಗಳನ್ನು ಎದುರಿಸಲು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ವಿದ್ಯಾರ್ಥಿಗಳನ್ನು ಪರಿಣಾಮಕಾರಿಯಾಗಿ ಸಿದ್ಧಪಡಿಸುವ ಕುರಿತು ಮಾತನಾಡಲಿದ್ದಾರೆ. ಎರಡನೇ ಕಾರ್ಯಾಗಾರದಲ್ಲಿ ನಕಲಿ ಸುದ್ದಿಗಳನ್ನು ಹೇಗೆ ಗುರುತಿಸುವುದು ಎಂಬುದರ ಕುರಿತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಹಿರಿಯ ಪತ್ರಕರ್ತೆ ಹಾಗೂ ಪ್ರಾಧ್ಯಾಪಕಿ ಪ್ರೊ. ಕಾಂಚನ ಕೌರ್ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದ ಟಿ.ವಿ.ಶಿವಾನಂದನ್ ಅವರು, ಎರಡು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದರು.
ಫೆಬ್ರವರಿ 17 ರಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಮೀಡಿಯಾ ಫೆಸ್ಟ್ ಉದ್ಘಾಟಿಸಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನಮ್, ಕೊಪ್ಪಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಬಿ. ಕೆ. ರವಿ, ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಅನಿಲ್ಕುಮಾರ್ ಬಿಡವೆ, ಗುಲಬರ್ಗಾ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಶ್ರೀರಾಮುಲು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಅಧ್ಯಕ್ಷ ಬಾಬುರಾವ್ ಯಡ್ರಾಮಿ ಮತ್ತು ಇನ್ನಿತರ ಗಣ್ಯರು ಈ ಮಾಧ್ಯಮೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 18 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಲಬುರಗಿಯ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ, ಕಲಬುರಗಿಯ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಇತರ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಿದ್ದಾರೆ ಎಂದು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
-
ದಿನದ ಸುದ್ದಿ3 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ3 days ago
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ
-
ದಿನದ ಸುದ್ದಿ5 days ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ
-
ದಿನದ ಸುದ್ದಿ1 day ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ