ದಿನದ ಸುದ್ದಿ

ಹರಿಹರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ

Published

on

ಸುದ್ದಿದಿನ,ದಾವಣಗೆರೆ: ಮೇ 31 ರಂದು ನಡೆದ ಮತ ಎಣಿಕೆ ನಂತರ ಹರಿಹರ ನಗರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.

ಮ್ಯಾಜಿಕ್ ನಂಬರ್ 16 ಪಡೆಯುವಲ್ಲಿ ಯಾವ ಪಕ್ಷವೂ ಸಫಲವಾಗಿಲ್ಲ. 14 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆ.ಡಿ.ಎಸ್. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 10 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಭಾರತೀಯ ಜನತಾ ಪಕ್ಷ 5 ಸ್ಥಾನ ಪಡೆದರೆ ಈ ಮಧ್ಯೆ ಪಕ್ಷೇತರರಿಬ್ಬರು ಜಯಭೇರಿ ಬಾರಿಸಿದ್ದಾರೆ.

31 ವಾರ್ಡ್‌ಗಳಿಗೆ ಮೇ 29 ರಂದು ಮತದಾನ ನಡೆದಿದ್ದು, ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ, 11 ಗಂಟೆ ಸುಮಾರಿಗೆ ಪೂರ್ಣ ಚಿತ್ರಣ ಹೊರಬಂದಿತ್ತು. ಹರಿಹರ ನಗರಸಭೆಯ 1ನೇ ವಾರ್ಡ್ ಹರ್ಲಾಪುರದಿಂದ ಜನತದಾದಳ (ಜಾತ್ಯತೀತ) ಪಕ್ಷದ ಜಂಬಣ್ಣ 807 ಮತಗಳಿಂದ ಜಯ ಸಾಧಿಸಿದ್ದಾರೆ.

ಇವರ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಂ.ಮಂಜುನಾಥ, 2ನೇ ವಾರ್ಡ್ ಎ.ಕೆ ಕಾಲೋನಿಯಿಂದ ಜನತಾದಳ(ಜಾ) ಪಕ್ಷದ ಪಿ.ಎನ್ ವಿರುಪಾಕ್ಷ 533 ಮತಗಳನ್ನು ಪಡೆದು ಜಯಶಾಲಿಯಾಗಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಸ್.ಎಸ್. ಆನಂದಕುಮಾರ್, 3ನೇ ವಾರ್ಡ್ ಆಶ್ರಯ ಕಾಲೋನಿಯಿಂದ ಬಿಜೆಪಿ ಪಕ್ಷದ ಆಟೋ ಹನುಮಂತಪ್ಪ 364 ಮತಗಳಿಂದ ಜಯಶಾಲಿಯಾಗಿದ್ದು, ಇವರ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹನುಮಂತಪ್ಪ.

4ನೇ ವಾರ್ಡ್ ವಿಜಯನಗರ ಬಡಾವಣೆಯಿಂದ ಬಿಜೆಪಿ ಪಕ್ಷದ ಎನ್.ರಂಜಿನಿಕಾಂತ್ 616 ಮತ ಪಡೆಯುವುದರ ಮೂಲಕ ವಿಜಯಿಯಾಗಿದ್ದು, ಜನತಾದಳ(ಜಾ) ಪಕ್ಷದ ಸಮೀಪದ ಪ್ರತಿಸ್ಪರ್ಧಿ ಸದಾಶಿವ, 5ನೇ ವಾರ್ಡ್ ಕೆ.ಆರ್.ನಗರದಿಂದ 554 ಮತಗಳಿಂದ ಕಾಂಗ್ರೆಸ್ ಪಕ್ಷದಿಂದ ನಾಗರತ್ನಪ್ಪ ದೀಪ ಜಯಶೀಲರಾಗಿದ್ದು ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ವೈ ಇಂದಿರಾ ಮಂಜುನಾಥ 6ನೇ ವಾರ್ಡ್ ಮಹಾಲಿಂಗಪ್ಪ ಬಡಾವಣೆಯಿಂದ 426 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಸೈಯದ್ ಅಬ್ದುಲ್ ಅಲೀಂ ಜಯಶಾಲಿಯಾಗಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಕೀರ್ತಿ ಕುಮಾರ್ ಹೆಚ್.ಸಿ ಆಗಿದ್ದರು.

7ನೇ ವಾರ್ಡ್ ಗಾಂಧಿನಗರದಿಂದ ಪೆಕ್ಷೇತರ ಅಭ್ಯರ್ಥಿ ಇಬ್ರಾಹಿಂ 869 ಮತಗಳನ್ನು ಪಡೆಯುವ ಮೂಲಕ ಜಯ ಪಡೆದಿದ್ದಾರೆ. ಇವರ ಸಮೀಪದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಬಿ.ಕೆ.ಸೈಯದ್ ಬಾಷಾ. 8ನೇ ವಾರ್ಡ್ ತೆಗ್ಗಿನಕೇರಿಯಿಂದ ಬಿಜೆಪಿ ಯ ಕೆ.ಜಿ.ಸಿದ್ದೇಶ್ 1221 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಶೇಖರ ಗೌಡ ಆಗಿದ್ದರು.

9ನೇ ವಾರ್ಡ್ ಭರಂಪುರದಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ನಿಂಬಕ್ಕ ಚಂಬಾಪುರ 1148 ಮತಗಳನ್ನು ಪಡೆದು ಜಯ ಸಾಧಿಸಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಶ್ವಿನಿ ಗುತ್ಯಪ್ಪ ಆಗಿದ್ದರು. 10ನೇ ವಾರ್ಡ್ ಭಾರತ್ ಮಿಲ್ ಕಾಂಪೌಂಡ್‌ನಿಂದ ಜನತಾದಳ(ಜಾ) ಪಕ್ಷದಿಂದ ಎಂ.ಆರ್.ಮುಜಾಮಿಲ್ 626 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಫರ್ಧಿ ಬಿಜೆಪಿ ಮಾರುತಿ ಬಿ ಆಗಿದ್ದರು.

11 ನೇ ವಾರ್ಡ್ ಟಿಪ್ಪುನಗರದಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಸುಮಿತ್ರ ಕೆ.ಮರಿದೇವಪ್ಪ 943 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾ ದಳ ಪಕ್ಷದ ಹೆಚ್.ಮಂಜುಳ. 12 ನೇ ವಾರ್ಡ್ ಅಮರಾವತಿಯಿಂದ ಬಿಜೆಪಿ ಪಕ್ಷದಿಂದ ಬಿ.ಎಂ ವಿಜಯಕುಮಾರ್ 669 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಕೆ.ಹೆಚ್.ಯೋಗೇಶಪ್ಪ ಆಗಿದ್ದರು.

13ನೇ ವಾರ್ಡ್ ಜೈಭೀಮನಗರ ಜನತಾದಳ(ಜಾ) ಪಕ್ಷದ ಆರ್.ದಿನೇಶ್ ಬಾಬು 673 ಮತಗಳಿಂದ ಜಯಶಾಲಿಯಾಗಿದ್ದು ಕಾಂಗ್ರೆಸ್ ಪಕ್ಷದ ರಾಘವೇಂದ್ರ ಅಶೋಕ್ ಓಲೇಕಾರ್ ಇವರು ಸಮೀಪದ ಪ್ರತಿಸ್ಪಧಿಯಾಗಿದ್ದರು. 14 ನೇ ವಾರ್ಡ್ ಕಾಳಿದಾಸನಗರ ಕಾಂಗ್ರೆಸ್ ಪಕ್ಷದಿಂದ ಮೆಹಬೂಬ್ ಬಾಷಾ ಆರ್ 533 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದ್ ಏಜಾಜ್ ವಿರುದ್ದ ಜಯ ಸಾಧಿಸಿದ್ದಾರೆ.

15 ನೇ ವಾರ್ಡ್ ಬಹಾರ್ ಮಖಾನ್‌ನಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ರೇಷ್ಮಾ ಬಾನು 610 ಮತಗಳನ್ನು ಪಡೆಯವ ಮೂಲಕ ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲತಾಶ್ರೀ ವೀರಾಚಾರ ವಿರುದ್ದ ಜಯ ಗಳಿಸಿದ್ದಾರೆ. 16 ನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಫಕೀರಮ್ಮ 829 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಜನತಾ ದಳದ ಬಿ.ಐ ಮಮತಾ ಮುಂದೆ ಜಯ ಸಾಧಿಸಿದ್ದಾರೆ.

17ನೇ ವಾರ್ಡ್ ಹೊಸಪೇಟೆ ಬೀದಿಯಿಂದ ಜನತಾದಳ(ಜಾ)ದ ಲಕ್ಷ್ಮೀ ಮೋಹನ್ ದುರುಗೋಜಿ ಇವರು 741 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸುನಂದ ಪಕ್ಕೀರಸಾ ಭೂತೆ ರ ವಿರುದ್ದ ಜಯಗಳಿಸಿದ್ದಾರೆ. 18 ನೇ ವಾರ್ಡ್ ಇಮಾಂ ಮೊಹಲ್ಲಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಂಕರ್ ಖಟಾವ್‌ಕರ್ 825 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)ದ ಹೆಚ್.ಅಬ್ದುಲ್ ರೆಹಮಾನ್ ಖಾನ್ ರ ವಿರುದ್ದ ಜಯ ಸಾಧಿಸಿದ್ದಾರೆ.

19ನೇ ವಾರ್ಡ್ ಹಳ್ಳದಕೇರಿಯಿಂದ ಜನತಾದಳ(ಜಾ) ಪಕ್ಷದ ನೂರ್‌ಸಭಾ 834 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಪಕ್ಷದ ಆಶಾ ರವೀಂದ್ರ ವಿರುದ್ದ ಗೆಲುವು ಪಡೆದಿದ್ದಾರೆ. 20 ನೇ ವಾರ್ಡ್ ಕುಂಬಾರ ಓಣಿಯಿಂದ ಜನತಾದಳ(ಜಾ)(ಜಾ) ರತ್ನ ಡಿ.ಯು 779 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಬಿ ಸುಜಾತ ಇವರ ವಿರುದ್ದ ಜಯಶಾಲಿಯಾಗಿದ್ದಾರೆ.

21ನೇ ವಾರ್ಡ್ ಜೆಸಿಆರ್ ಬಡಾವಣೆ-1 ರಿಂದ ಬಿಜೆಪಿಯ ನೀತಾ ಇವರು 663 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಶಹಜಾದ್ ಎಸ್.ಕೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ. 22ನೇ ವಾರ್ಡ್ ಜೆಸಿಆರ್ ಬಡಾವಣೆ-2 ರಿಂದ ಜನತಾದಳ(ಜಾ)(ಜಾ)ದ ಜಮಾಲುದ್ದೀನ್ 660 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಹುಲಿಗೆಪ್ಪ ಸಿ ಎನ್ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

23ನೇ ವಾರ್ಡ್ ರಾಜಾರಾಂ ಕಾಲೋನಿಯಿಂದ ಕಾಂಗ್ರೆಸ್ ಪಕ್ಷದ ಎಂ.ಬಾಬುಲಾಲ್ 962 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)(ಜಾ)ದ ಹಾಜೀ ಅಲಿ ಖಾನ್ ವಿರುದ್ದ ಜಯ ಗಳಿಸಿದ್ದಾರೆ. 24 ವಾರ್ಡ್ ಬೆಂಕಿನಗರದಿಂದ ಕಾಂಗ್ರೆಸ್ ಪಕ್ಷದ ಶಾಹಿನಾ ಬಾನು 554 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದಾ ಅನಿಸಾ ಇವರು ವಿರುದ್ದ ಗೆಲುವು ಸಾಧಿಸಿದ್ದಾರೆ.
25 ನೇ ವಾರ್ಡ್ ಪ್ರಶಾಂತ್ ನಗರದಿಂದ ಜನತಾದಳ(ಜಾ)(ಜಾ)ದ ದಾದಾ ಖಲಂದರ್ ಇವರು 776 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸಂತೋಷ್‌ಕುಮಾರ್ ಎಂ ವಿರುದ್ದ ಗೆಲುವು ಸಾಧಿಸಿದ್ದಾರೆ. 26 ನೇ ವಾರ್ಡ್ ಜೆಸಿಆರ್ ಬಡಾವಣೆ -3 ರಿಂದ ಜನತಾದಳ(ಜಾ)(ಜಾ)ದ ವಾಮನಮೂರ್ತಿ ಎ ಇವರು 506 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಜೀಜ್ ಮೇಸ್ತ್ರಿಯವರನ್ನು ಸೋಲಿಸಿದ್ದಾರೆ.

27ನೇ ವಾರ್ಡ್ ಜೆಸಿಆರ್ ಬಡಾವಣೆ-4 ರಿಂದ ಜನತಾದಳ(ಜಾ)(ಜಾ)ದ ಉಷಾ ಮಂಜುನಾಥ್ 544 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರೋಹಿಣಿ ರಾಜು ಐರಣಿ ವಿರುದ್ದ ಜಯ ಗಳಿಸಿದ್ದಾರೆ. 28 ವಾರ್ಡ್ ಸುಣಗಾರ ಬೀದಿಯಿಂದ ಪಕ್ಷೇತರ ಅಭ್ಯರ್ಥಿ ಪಾರ್ವತಮ್ಮ ಐರಣಿ 582 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ನಾಗರತ್ನಮ್ಮರ ವಿರುದ್ದ ಗೆಲುವು ಸಾಧಿಸಿದ್ದಾರೆ.

29ನೇ ವಾರ್ಡ್ ಗಂಗಾನಗರದಿಂದ ಕಾಂಗ್ರೆಸ್ ಪಕ್ಷದ ಎಸ್.ಎಂ.ವಸಂತ್ 754 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೋಹನ್ ಹೆಚ್. ವಿರುದ್ದ ಜಯ ಗಳಿಸಿದ್ದಾರೆ. 30 ವಾರ್ಡ್ ವಿದ್ಯಾನಗರದಿಂದ ಬಿಜೆಪಿ ಪಕ್ಷದ ಮಹಿಳಾ ಅಭ್ಯರ್ಥಿ ಅಶ್ವಿನಿ ಕೃಷ್ಣ ಇವರು 530 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಗೀತಾ ವಿಶ್ವನಾಥ ಭೂತೆ ವಿರುದ್ದ ಗೆಲುವು ಸಾಧಿಸಿದ್ದಾರೆ. ಹಾಗೂ 31 ನೇ ವಾರ್ಡ್ ಇಂದಿರಾನಗರದಿಂದ ಜನತಾದಳ(ಜಾ)ಕವಿತಾ ಮಾರುತಿ ಬೇಡರ್ 807 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮಾಧವಿ ಉಮೇಶ್ ತುಂಬಿದಮನೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

ಅಂಚೆಮತಗಳು : 03 ಅಂಚೆ ಮತಗಳನ್ನು ಸ್ವೀಕರಿಸಲಾಗಿದ್ದು ಇವುಗಳಲ್ಲಿ 02 ಮಾತ್ರ ಕ್ರಮಬದ್ದವಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version