Connect with us

ದಿನದ ಸುದ್ದಿ

ಎನ್‌ಎಸ್‌ಎಸ್‌ನಿಂದ ರಾಷ್ಟ್ರೀಯ ಭಾವೈಕ್ಯತೆ ಕಲಿಕೆ ಸಾಧ್ಯ : ಡಾ.ಅಶೋಕ ವೀ.ಪಾಳೇದ

Published

on

ಸುದ್ದಿದಿನ,ಹರಿಹರ:ರಾಷ್ಟ್ರೀಯ ಸೇವಾ ಯೋಜನೆಯು ದೇಶೀಯ ಭಾವೈಕ್ಯತೆ, ಏಕತೆ, ಸಮಗ್ರತೆ ಕಲಿಸುವುದರೊಂದಿಗೆ, ಶ್ರಮದಾನದ ಉದ್ದೇಶದಿಂದಲೂ ಕಾರ್ಯನಿರ್ವಹಿಸುತ್ತಿದೆ. ಯುವಜನತೆ ಸೇವಾ ಮನೋಭಾವದ ಜೊತೆ ಕೌಶಲ್ಯಯು ಶಿಕ್ಷಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಸಂಯೋಜನಾಧಿಕಾರಿ ಡಾ.ಅಶೋಕ ಕುಮಾರ ವೀ.ಪಾಳೇದ ಅವರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ-1 ಮತ್ತು 2 ರ ವತಿಯಿಂದ ಸಮೀಪದ ಸಲಗನಹಳ್ಳಿ ಗ್ರಾಮದಲ್ಲಿ 7 ದಿನಗಳ ಕಾಲ ಆಯೋಜಿಸಿರುವ ‘ವಿಕಸಿತ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ’ ಎಂಬ ಧ್ಯೇಯದ ವಾರ್ಷಿಕ ಶಿಬಿರವನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ನಾಯತ್ವದ ಗುಣ ಕಲಿಸುತ್ತದೆ. ಯುವಜನತೆಯಲ್ಲಿ ಅಡಗಿರುವ ಪ್ರತಿಭೆಯನ್ನು ಅಭಿವ್ಯಕ್ತಿಗೊಳಿಸಲು ಸಹಕಾರಿ ಎಂದು ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್‌ನ ಪ್ರತಿಯೊಂದು ಕಾರ್ಯದಲ್ಲಿ ತೊಡಗೊಕೊಳ್ಳುವಂತೆ ಪ್ರೇರೇಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ಮಾತನಾಡಿ, ದೇಶದ ಅಭಿವೃದ್ಧಿಗೆ ಗ್ರಾಮಗಳ ವಿಕಾಸ ಬಹು ಮುಖ್ಯ ಈ ಹಿನ್ನೆಲೆಯಲ್ಲಿ ಇಂತಹ ಶಿಬಿರಗಳ ಆಯೋಜನೆ, ಯುವಜನತೆಯಲ್ಲಿ ಗ್ರಾಮೀಣ ಅಭಿವೃದ್ಧಿಯ ಪರಿಕಲ್ಪನೆ, ಇಲ್ಲಿನ ಸಮಸ್ಯೆಗಳನ್ನು ಅರಿತು ಪರಿಹಾರದ ಅರಿವು ಮೂಡಿಸಲು ಸಹಕಾರಿಯಾಗುತ್ತವೆ. ನಮ್ಮ ಹಳ್ಳಿಯ ಜನತೆ, ಅವರ ಜೀವನಕ್ರಮ, ಆಚಾರ-ವಿಚಾರಗಳ ಕುರಿತು ಯುವಜನತೆ ಜಾಗೃತರಾಗಬೇಕು. ಆ ಮೂಲಕ ದೇಶದ ಉನ್ನತಿಗೆ ತಮ್ಮ ಯೋಗದಾನ ನೀಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಐ.ಕ್ಯೂ.ಎಸ್.ಸಿ ಸಂಯೋಜಕರಾದ ಡಾ.ಅನಂತನಾಗ್ ಹೆಚ್.ಪಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳನ್ನು ಅರಿತು, ಅದಕ್ಕೆ ಅಗತ್ಯ ಇರುವ ಪರಿಹಾರಗಳನ್ನು ತಿಳಿಯುವುದು ಇಂದಿನ ಯುವಶಕ್ತಿಗೆ ಅಗತ್ಯವಾಗಿದೆ. ಗ್ರಾಮೀಣರ ಸಹಬಾಳ್ವೆ ಮತ್ತು ಸರಳ ಬದುಕು ನಮ್ಮ ಶಿಭಿರಾರ್ಥಿಗಳಿಗೆ ಸ್ಪೂರ್ತಿಯಾಗಲಿ ಎಂದು ಆಶಿಸಿ, 7 ದಿನದ ಶಿಬಿರ ಸುಸೂತ್ರವಾಗಿ ನಡೆಯಲ್ಲಿ ಎಂದು ಹಾರೈಸಿದರು.

ಕೆ.ಬೇವಿನಹಳ್ಳಿ ಗ್ರಾ.ಪಂನ ಅಧ್ಯಕ್ಷರಾದ ಶ್ರೀಮತಿ ಯಶೋಧ ಉಮಾಮಹೇಶ್ವರಪ್ಪ, ಸಲಗನಹಳ್ಳಿಯ ಗ್ರಾಪಂ ಸದಸ್ಯರುಗಳಾದ ವಿಜಯ.ಕೆ.ಡಿ, ನಾಗೇನಹಳ್ಳಿ ಗಂಗಮ್ಮ ಲೋಕಪ್ಪ, ಕೆ.ಜಯಪ್ಪ, ಡಿ.ರಾಜಪ್ಪ ಹಾಗೂ ಇನ್ನಿತರ ಗ್ರಾಮದ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು.

ಎನ್‌ಎಸ್‌ಎಸ್ ಘಟಕ-2ರ ಕಾರ್ಯಕ್ರಮಾಧಿಕಾರಿ ಯೋಗೇಶ್.ಕೆ.ಜೆ, ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಕೆ.ಮಂಜುನಾಥ್, ಗಣಿತ ವಿಭಾಗದ ಮುಖ್ಯಸ್ಥರಾದ ಡಾ.ಯೋಗೀಶ್.ಕೆ.ಎಂ, ಐ.ಕ್ಯೂ.ಎಸ್.ಸಿ ಸಹಸಂಯೋಜಕರಾದ ಅಬ್ದುಲ್ ಬಷೀರ, ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಎಂ.ಕುಮಾರ್, ಪರಿಸರವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ತಿರುಮಲ.ಎಸ್, ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ವೆಂಕಪ್ಪನವರ ಬಸವರಾಜು, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಬಾಬು ಕೆ.ಎ ಅವರುಗಳು ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ನಂತರ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ವಿದ್ಯಾರ್ಥಿನಿ ಕು.ಅರ್ಪಿತಾ.ಎನ್.ಹೆಚ್ ಪ್ರಾರ್ಥಿಸಿದರು. ಎನ್‌ಎಸ್‌ಎಸ್ ಘಟಕ-1ರ ಕಾರ್ಯಕ್ರಮಾಧಿಕಾರಿ ಡಾ.ಗಂಗರಾಜು.ಎಸ್ ಸ್ವಾಗತಿಸಿದರು. ಉಪನ್ಯಾಕರಾದ ಡಾ.ತೇಜಸ್ವಿನಿ.ಜೆ.ಎಸ್ ಕಾರ್ಯಕ್ರಮ ನಿರ್ವಹಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕರಾದ ರಾಜಪ್ಪ.ಎ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್‍ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು

Published

on

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ (ಕ್ರ್ಸ್ರೈಸ್)ಗಳಲ್ಲಿನ ಪ್ರಾಂಶುಪಾಲರು ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ವಾಸ್ತವ್ಯ ಇರುವ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಿ ಅರ್ಜಿ ನೀಡಿ 3 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ವಸತಿ ಶಾಲೆಗಳಲ್ಲಿ (ಕ್ರೈಸ್) ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಶಾಲಾ ಆವರಣದಲ್ಲಿ ವಾಸ್ತವ್ಯವಿರಲು ಸುಸಜ್ಜಿತವಾದ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದ್ದು, ಪ್ರತಿಭಾನ್ವಿತ ಮಕ್ಕಳ ಕಲಿಕೆ ಮತ್ತು ಪಾಲನೆಗೆ ಸರ್ಕಾರ ಅನುಕೂಲ ಮಾಡಿಕೊಡಲಾಗಿದೆ.

ಆದರೆ ಬಹುತೇಕ ವಸತಿ ಶಾಲೆಗಳ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ವಸತಿ ನಿಲಯದ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ವಾಸ್ತವ್ಯವಿರದೆ ಹತ್ತಿರದ ನಗರ ಪ್ರದೇಶಗಳಲ್ಲಿ ವಾಸ್ತöವ್ಯವಿರುವ ಮಾಹಿತಿಯು ಸರ್ಕಾರದ ಗಮನಕ್ಕೆ ಬಂದಿರುವ ಕಾರಣ, ಹಲವಾರು ಬಾರಿ ಸರ್ಕಾರವು ಆದೇಶ ಹೊರಡಿಸಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿಯೇ ವಾಸ್ತವ್ಯವಿದ್ದು, ಮಕ್ಕಳ ಕಲಿಕೆ, ಪಾಲನೆ, ಪೋಷಣೆಗೆ ಒತ್ತು ನೀಡುವಂತೆ ಕಟ್ಟುನಿಟ್ಟಿನ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುತೇಕ ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ಪಾಂಶುಪಾಲರು ಹಾಗೂ ಶಾಲಾ ಸಿಬ್ಬಂದಿಗಳು ವಾಸ್ತವ್ಯ ಇರದೆ ಇರುವುದು ಗಮನಕ್ಕೆ ಬಂದ ಕಾರಣ ದಿನಾಂಕ: 05-07-2025 ರಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ತನಿಖೆ ನಡೆಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದರು. ಆದರೆ 3 ತಿಂಗಳು ಕಳೆದರೂ ಈ ಬಗ್ಗೆ ಯಾವುದೇ ತನಿಖೆ ನಡೆಸದೆ ನಿರ್ಲಕ್ಷö್ಯ ತೋರಿದ ಜಂಟಿ ನಿರ್ದೇಶಕ ನಾಗರಾಜ ಕೆ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಪ್ರಕರಣ ದಾಖಲಾಗಿರುತ್ತದೆ ಎಂದು ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ವಸತಿ ಶಾಲಾ ಆವರಣದಲ್ಲಿ ಸುಸಜ್ಜಿತವಾದ ವಸತಿ ಗೃಹಗಳನ್ನು ನಿರ್ಮಾಣ ಮಾಡಿದ್ದರೂ ಬಹುತೇಕ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಾಲಾ ಸಿಬ್ಬಂದಿಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಹತ್ತಿರದ ನಗರ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಿರುತ್ತಾರೆ. ಇದರಿಂದ ಮಕ್ಕಳ ಶಿಕ್ಷಣ, ಪಾಲನೆ ಮತ್ತು ಪೋಷಣೆಗೆ ಅಡಚಣೆಯಾಗುತ್ತಿದೆ.

| ಡಾ.ಕೆ.ಎ.ಓಬಳೇಶ್,ವಕೀಲರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending