ದಿನದ ಸುದ್ದಿ
ಹರಿಹರ – ಹೊನ್ನಾಳಿ ತಾಲೂಕಿನ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ

ಸುದ್ದಿದಿನ,ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.
ಹರಿಹರ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ24(12) 4(2) 3(2) 4(2) 1(1) 12(5)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ |ಉಪಾಧ್ಯಕ್ಷ
- ಸಾರಥಿ : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಕೊಂಡಜ್ಜಿ : ಸಾಮಾನ್ಯ ಸಾಮಾನ್ಯ(ಮಹಿಳೆ)
- ಗುತ್ತೂರು : ಅನುಸೂಚಿತ ಜಾತಿ(ಮಹಿಳೆ) ಸಾಮಾನ್ಯ
- ಹನಗವಾಡಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ರಾಜನಹಳ್ಳಿ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ನಂದಿಗಾವಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಬೆಳ್ಳೂಡಿ: ಸಾಮಾನ್ಯ(ಮಹಿಳೆ), ಸಾಮಾನ್ಯ
- ಬನ್ನಿಕೋಡು: ಅನುಸೂಚಿತ ಪಂಗಡ(ಮಹಿಳೆ), ಹಿಂದುಳಿದ ಅ ವರ್ಗ
- ಸಾಲಕಟ್ಟೆ: ಸಾಮಾನ್ಯ , ಸಾಮಾನ್ಯ
- ದೇವರಬೆಳೆಕೆರೆ : ಅನುಸೂಚಿತ ಜಾತಿ , ಸಾಮಾನ್ಯ(ಮಹಿಳೆ)
- ಕುಣಿಬೆಳಕೆರೆ : ಹಿಂದುಳಿದ ಅ ವರ್ಗ(ಮಹಿಳೆ), ಅನುಸೂಚಿತ ಜಾತಿ(ಮಹಿಳೆ)
- ಭಾನುವಳ್ಳಿ: ಹಿಂದುಳಿದ ಬ ವರ್ಗ(ಮಹಿಳೆ), ಸಾಮಾನ್ಯ
- ಸಿರಿಗೆರೆ : ಅನುಸೂಚಿತ ಪಂಗಡ(ಮಹಿಳೆ) , ಹಿಂದುಳಿದ ಬ ವರ್ಗ(ಮಹಿಳೆ)
- ಕಡರನಾಯ್ಕನಹಳ್ಳಿ : ಸಾಮಾನ್ಯ , ಹಿದುಳಿದ ಅ ವರ್ಗ(ಮಹಿಳೆ)
- ಉಕ್ಕಡಗಾತ್ರಿ : ಅನುಸೂಚಿತ ಜಾತಿ, ಹಿಂದುಳಿದ ಅ ವರ್ಗ(ಮಹಿಳೆ)
- ಯಲವಟ್ಟಿ : ಸಾಮಾನ್ಯ, ಅನುಸೂಚಿತ ಜಾತಿ
- ಕುಂಬಳೂರು : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಜಿಗಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಕೊಕ್ಕನೂರು : ಸಾಮಾನ್ಯ , ಅನುಸೂಚಿತ ಜಾತಿ(ಮಹಿಳೆ)
- ವಾಸನ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಹರಳಹಳ್ಳಿ : ಹಿಂದುಳಿದ ಅ ವರ್ಗ(ಮಹಿಳೆ), ಸಾಮಾನ್ಯ(ಮಹಿಳೆ)
- ಹಾಲಿವಾಣ : ಹಿಂದುಳಿದ ‘ಅ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಎಳೆಹೊಳೆ : ಸಾಮಾನ್ಯ ,ಸಾಮಾನ್ಯ(ಮಹಿಳೆ)
- ಕೆ.ಬೇವಿನಹಳ್ಳಿ : ಸಾಮಾನ್ಯ, ಹಿಂದುಳಿದ ಅ ವರ್ಗ
ಹೊನ್ನಾಳಿ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ29(15) 5(3) 2(1) 6(3) 1(1) 15(7)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಕತ್ತಿಗೆ : ಸಾಮಾನ್ಯ, ಅನುಸೂಚಿ ಪಂಗಡ(ಮಹಿಳೆ)
- ಹತ್ತೂರು : ಸಾಮಾನ್ಯ, ಅನುಸೂಚಿ ಪಂಗಡ
- ಹೆಚ್ ಗೋಪಗೊಂಡನಹಳ್ಳಿ: ಹಿಂದುಳಿದ ‘ಅ’ ವರ್ಗ, ಸಾಮಾನ್ಯ
- ಹನುಮಸಾಗರ: ಅನುಸೂಚಿ ಪಂಗಡ, ಸಾಮಾನ್ಯ(ಮಹಿಳೆ)
- ಸೊರಟೂರು : ಹಿಂದುಳಿದ ‘ಅ’ ವರ್ಗ (ಮಹಿಳೆ), ಹಿಂದುಳಿದ ‘ಬ’ ವರ್ಗ(ಮಹಿಳೆ)
- ಹೆಚ್ ಕಡದಕಟ್ಟೆ : ಅನುಸೂಚಿತ ಜಾತಿ , ಸಾಮಾನ್ಯ(ಮಹಿಳೆ)
- ಅರಬಗಟ್ಟ ಸಾಮಾನ್ಯ(ಮಹಿಳೆ) ಹಿಂದುಳಿದ ‘ಅ’ ವರ್ಗ (ಮಹಿಳೆ)
- ಹರಳಹಳ್ಳಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಹಿರೇಗೋಣಿಗೆರೆ : ಸಾಮಾನ್ಯ(ಮಹಿಳೆ) , ಸಾಮಾನ್ಯ
- ಬೇಲಿಮಲ್ಲೂರು : ಹಿಂದುಳಿದ ‘ಅ’ ವರ್ಗ (ಮಹಿಳೆ) ಅನುಸೂಚಿತ ಜಾತಿ
- ಅರಕೆರೆ : ಸಾಮಾನ್ಯ ಹಿಂದುಳಿದ, ‘ಅ’ ವರ್ಗ (ಮಹಿಳೆ)
- ಮಾಸಡಿ : ಸಾಮಾನ್ಯ ಹಿಂದುಳಿದ, ‘ಅ’ ವರ್ಗ (ಮಹಿಳೆ)
- ಕಮ್ಮಾರಗಟ್ಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ತಿಮ್ಲಾಪುರ : ಸಾಮಾನ್ಯ(ಮಹಿಳೆ) , ಅನುಸೂಚಿ ಜಾತಿ(ಮಹಿಳೆ)
- ಕುಂಬಳೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಕುಂದೂರು ಹಿಂದುಳಿದ ‘ಅ’ ವರ್ಗ ಸಾಮಾನ್ಯ(ಮಹಿಳೆ)
- ಯಕ್ಕನಹಳ್ಳಿ , ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕೂಲಂಬಿ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಮುಕ್ತೇನಹಳ್ಳಿ : ಹಿಂದುಳಿದ ‘ಅ’ ವರ್ಗ (ಮಹಿಳೆ), ಸಾಮಾನ್ಯ
- ಬನ್ನಿಕೋಡು : ಸಾಮಾನ್ಯ(ಮಹಿಳೆ), ಹಿಂದುಳಿದ ‘ಅ’ ವರ್ಗ
- ಬೆನಕನಹಳ್ಳಿ : ಅನುಸೂಚಿತ ಪಂಗಡ(ಮಹಿಳೆ) , ಸಾಮಾನ್ಯ
- ಬೀರಗೊಂಡನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ರಾಂಪುರ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಸಾಸ್ವೇಹಳ್ಳಿ : ಹಿಂದುಳಿದ ‘ಬ’ ವರ್ಗ (ಮಹಿಳೆ), ಅನುಸೂಚಿತ ಜಾತಿ(ಮಹಿಳೆ)
- ಕುಳಗಟ್ಟೆ: ಹಿಂದುಳಿದ ‘ಅ’ ವರ್ಗ , ಸಾಮಾನ್ಯ(ಮಹಿಳೆ)
- ಕ್ಯಾಸನಕೆರೆ : ಸಾಮಾನ್ಯ, ಸಾಮಾನ್ಯ((ಮಹಿಳೆ)
- ಹೊಸಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ ವರ್ಗ
- ಲಿಂಗಾಪುರ : ಅನುಸೂಚಿತ ಜಾತಿ, ಸಾಮಾನ್ಯ
- ಹುಣಸಘಟ್ಟೆ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ ವರ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ಧಾರವಾಡ : ಕಾನೂನು ಇಲಾಖೆ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಹಾಗೂ ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಹೊಸದಾಗಿ ನೇಮಕ ಮಾಡಿಕೊಳ್ಳಲು ಬಾರ್ ಅಸೊಸಿಯೇಷನ್ದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಸ್ಥಳೀಯ ಬಾರ್ ಅಸೋಸಿಯೇಷನ್ ಸದಸ್ಯರಾಗಿರಬೇಕು ಹಾಗೂ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 10 ವರ್ಷ ಮತ್ತು ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 7 ವರ್ಷ ವಕೀಲ ವೃತ್ತಿಯ ಅನುಭವ ಹೊಂದಿರಬೇಕು. ಮತ್ತು ಇವರ ನೇಮಕಾತಿಯು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಸೇವಾ ಷರತ್ತುಗಳ ನಿಯಮಗಳು, 1977 ರಲ್ಲಿ ಹೇಳಲಾದ ಷರತ್ತುಗಳಿಗೆ ಒಳಪಟ್ಟಿರುತ್ತದೆ.
ಇದನ್ನೂ ಓದಿ | ಹಲವು ನಾಯಕರ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ..!
ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ದಾಖಲಾತಿಗಳೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾರ್ಚ್ 15, 2021 ರೊಳಗಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಬಿ.ಶ್ರೀರಾಮುಲು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಉದ್ಘಾಟನೆ ನೆರವೇರಿತು

ಸುದ್ದಿದಿನ,ಧಾರವಾಡ : ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಕವಿವಿ ಆವರಣದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯರ್ಥಿ ನಿಲಯ ಹಾಗೂ ಸಪ್ತಾಪೂರದಲ್ಲಿ ನಿರ್ಮಿಸಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಇಂದು ಮಧ್ಯಾಹ್ನ ಕವಿವಿ ಆವರಣದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಬೃಹತ್, ಮಧ್ಯಮ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ಸೇರಿದಂತೆ ಇತರ ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ | ಟಿಎಂಸಿ ಮಣ್ಣಿನ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಲಿದೆ: ಪಿಎಂ ಮೋದಿ ಅಭಿಮತ
ಕವಿವಿ ಆವರಣದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯವನ್ನು 412.83 ಲಕ್ಷ ರೂ.ಗಳ ವೆಚ್ಚದಲ್ಲಿ ಹಾಗೂ ಸಪ್ತಾಪೂರದಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯರ್ಥಿ ನಿಲಯವನ್ನು 387 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ.
ಇದೆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆಯಡಿ ಆಯ್ಕೆಯಾಗಿದ್ದ ವಿವಿಧ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ | ದೂರು ವಾಪಾಸ್ ಪಡೆದ ದಿನೇಶ್ ಕಲ್ಲಳ್ಳಿ

ಸುದ್ದಿದಿನ,ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇದೀಗ ದೂರು ವಾಪಸ್ ಪಡೆದುಕೊಂಡಿದ್ದಾರೆ.
ದಿನೇಶ್ ಕಲ್ಲಹಳ್ಳಿ ತಮ್ಮ ವಕೀಲರನ್ನು ದೂರು ವಾಪಸ್ ಪಡೆಯಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕಳುಹಿಸಿದ್ದು, ನಿಯಮಾನುಸಾರ ದೂರು ವಾಪಸ್ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಅವರೇ ಠಾಣೆಗೆ ಆಗಮಿಸಿ ದೂರು ಪಡೆಯಲು ನಿರ್ಧರಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು 5 ಕೋಟಿ ಡೀಲ್ ಬಗ್ಗೆ ಮಾತಾಡಿದ್ದರಿಂದ ನನ್ನ ಮನಸ್ಸಿಗೆ ನೋವಾಗಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ಬಗ್ಗೆ ಚರ್ಚೆಯಾಗ ಬೇಕಿತ್ತು ಆದರೆ, ಜನ ನನ್ನ ನೈತಿಕತೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ನನಗೆ ತಿರುಗುಬಾಣವಾಗಿದೆ ಎಂದು ದೂರುದಾರ ದಿನೇಶ್ ಹೇಳಿದ್ದು, ಈ ಹಿನ್ನೆಲೆಯಲ್ಲಿ ತಾನು ದೂರು ವಾಪಸ್ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ದಿನದ ಸುದ್ದಿ6 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ನಿತ್ಯ ಭವಿಷ್ಯ7 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ5 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ನಿತ್ಯ ಭವಿಷ್ಯ6 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ
-
ಬಹಿರಂಗ3 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ನಿತ್ಯ ಭವಿಷ್ಯ5 days ago
ಬುಧವಾರ ರಾಶಿ ಭವಿಷ್ಯ : ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆತಂಕ ದೂರವಾಗಲಿದೆ
-
ದಿನದ ಸುದ್ದಿ5 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ