ದಿನದ ಸುದ್ದಿ
ಹರಿಹರ – ಹೊನ್ನಾಳಿ ತಾಲೂಕಿನ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ
ಸುದ್ದಿದಿನ,ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.
ಹರಿಹರ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ24(12) 4(2) 3(2) 4(2) 1(1) 12(5)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ |ಉಪಾಧ್ಯಕ್ಷ
- ಸಾರಥಿ : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಕೊಂಡಜ್ಜಿ : ಸಾಮಾನ್ಯ ಸಾಮಾನ್ಯ(ಮಹಿಳೆ)
- ಗುತ್ತೂರು : ಅನುಸೂಚಿತ ಜಾತಿ(ಮಹಿಳೆ) ಸಾಮಾನ್ಯ
- ಹನಗವಾಡಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ರಾಜನಹಳ್ಳಿ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ನಂದಿಗಾವಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಬೆಳ್ಳೂಡಿ: ಸಾಮಾನ್ಯ(ಮಹಿಳೆ), ಸಾಮಾನ್ಯ
- ಬನ್ನಿಕೋಡು: ಅನುಸೂಚಿತ ಪಂಗಡ(ಮಹಿಳೆ), ಹಿಂದುಳಿದ ಅ ವರ್ಗ
- ಸಾಲಕಟ್ಟೆ: ಸಾಮಾನ್ಯ , ಸಾಮಾನ್ಯ
- ದೇವರಬೆಳೆಕೆರೆ : ಅನುಸೂಚಿತ ಜಾತಿ , ಸಾಮಾನ್ಯ(ಮಹಿಳೆ)
- ಕುಣಿಬೆಳಕೆರೆ : ಹಿಂದುಳಿದ ಅ ವರ್ಗ(ಮಹಿಳೆ), ಅನುಸೂಚಿತ ಜಾತಿ(ಮಹಿಳೆ)
- ಭಾನುವಳ್ಳಿ: ಹಿಂದುಳಿದ ಬ ವರ್ಗ(ಮಹಿಳೆ), ಸಾಮಾನ್ಯ
- ಸಿರಿಗೆರೆ : ಅನುಸೂಚಿತ ಪಂಗಡ(ಮಹಿಳೆ) , ಹಿಂದುಳಿದ ಬ ವರ್ಗ(ಮಹಿಳೆ)
- ಕಡರನಾಯ್ಕನಹಳ್ಳಿ : ಸಾಮಾನ್ಯ , ಹಿದುಳಿದ ಅ ವರ್ಗ(ಮಹಿಳೆ)
- ಉಕ್ಕಡಗಾತ್ರಿ : ಅನುಸೂಚಿತ ಜಾತಿ, ಹಿಂದುಳಿದ ಅ ವರ್ಗ(ಮಹಿಳೆ)
- ಯಲವಟ್ಟಿ : ಸಾಮಾನ್ಯ, ಅನುಸೂಚಿತ ಜಾತಿ
- ಕುಂಬಳೂರು : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಜಿಗಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಕೊಕ್ಕನೂರು : ಸಾಮಾನ್ಯ , ಅನುಸೂಚಿತ ಜಾತಿ(ಮಹಿಳೆ)
- ವಾಸನ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಹರಳಹಳ್ಳಿ : ಹಿಂದುಳಿದ ಅ ವರ್ಗ(ಮಹಿಳೆ), ಸಾಮಾನ್ಯ(ಮಹಿಳೆ)
- ಹಾಲಿವಾಣ : ಹಿಂದುಳಿದ ‘ಅ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಎಳೆಹೊಳೆ : ಸಾಮಾನ್ಯ ,ಸಾಮಾನ್ಯ(ಮಹಿಳೆ)
- ಕೆ.ಬೇವಿನಹಳ್ಳಿ : ಸಾಮಾನ್ಯ, ಹಿಂದುಳಿದ ಅ ವರ್ಗ
ಹೊನ್ನಾಳಿ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ29(15) 5(3) 2(1) 6(3) 1(1) 15(7)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಕತ್ತಿಗೆ : ಸಾಮಾನ್ಯ, ಅನುಸೂಚಿ ಪಂಗಡ(ಮಹಿಳೆ)
- ಹತ್ತೂರು : ಸಾಮಾನ್ಯ, ಅನುಸೂಚಿ ಪಂಗಡ
- ಹೆಚ್ ಗೋಪಗೊಂಡನಹಳ್ಳಿ: ಹಿಂದುಳಿದ ‘ಅ’ ವರ್ಗ, ಸಾಮಾನ್ಯ
- ಹನುಮಸಾಗರ: ಅನುಸೂಚಿ ಪಂಗಡ, ಸಾಮಾನ್ಯ(ಮಹಿಳೆ)
- ಸೊರಟೂರು : ಹಿಂದುಳಿದ ‘ಅ’ ವರ್ಗ (ಮಹಿಳೆ), ಹಿಂದುಳಿದ ‘ಬ’ ವರ್ಗ(ಮಹಿಳೆ)
- ಹೆಚ್ ಕಡದಕಟ್ಟೆ : ಅನುಸೂಚಿತ ಜಾತಿ , ಸಾಮಾನ್ಯ(ಮಹಿಳೆ)
- ಅರಬಗಟ್ಟ ಸಾಮಾನ್ಯ(ಮಹಿಳೆ) ಹಿಂದುಳಿದ ‘ಅ’ ವರ್ಗ (ಮಹಿಳೆ)
- ಹರಳಹಳ್ಳಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಹಿರೇಗೋಣಿಗೆರೆ : ಸಾಮಾನ್ಯ(ಮಹಿಳೆ) , ಸಾಮಾನ್ಯ
- ಬೇಲಿಮಲ್ಲೂರು : ಹಿಂದುಳಿದ ‘ಅ’ ವರ್ಗ (ಮಹಿಳೆ) ಅನುಸೂಚಿತ ಜಾತಿ
- ಅರಕೆರೆ : ಸಾಮಾನ್ಯ ಹಿಂದುಳಿದ, ‘ಅ’ ವರ್ಗ (ಮಹಿಳೆ)
- ಮಾಸಡಿ : ಸಾಮಾನ್ಯ ಹಿಂದುಳಿದ, ‘ಅ’ ವರ್ಗ (ಮಹಿಳೆ)
- ಕಮ್ಮಾರಗಟ್ಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ತಿಮ್ಲಾಪುರ : ಸಾಮಾನ್ಯ(ಮಹಿಳೆ) , ಅನುಸೂಚಿ ಜಾತಿ(ಮಹಿಳೆ)
- ಕುಂಬಳೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಕುಂದೂರು ಹಿಂದುಳಿದ ‘ಅ’ ವರ್ಗ ಸಾಮಾನ್ಯ(ಮಹಿಳೆ)
- ಯಕ್ಕನಹಳ್ಳಿ , ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕೂಲಂಬಿ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಮುಕ್ತೇನಹಳ್ಳಿ : ಹಿಂದುಳಿದ ‘ಅ’ ವರ್ಗ (ಮಹಿಳೆ), ಸಾಮಾನ್ಯ
- ಬನ್ನಿಕೋಡು : ಸಾಮಾನ್ಯ(ಮಹಿಳೆ), ಹಿಂದುಳಿದ ‘ಅ’ ವರ್ಗ
- ಬೆನಕನಹಳ್ಳಿ : ಅನುಸೂಚಿತ ಪಂಗಡ(ಮಹಿಳೆ) , ಸಾಮಾನ್ಯ
- ಬೀರಗೊಂಡನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ರಾಂಪುರ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಸಾಸ್ವೇಹಳ್ಳಿ : ಹಿಂದುಳಿದ ‘ಬ’ ವರ್ಗ (ಮಹಿಳೆ), ಅನುಸೂಚಿತ ಜಾತಿ(ಮಹಿಳೆ)
- ಕುಳಗಟ್ಟೆ: ಹಿಂದುಳಿದ ‘ಅ’ ವರ್ಗ , ಸಾಮಾನ್ಯ(ಮಹಿಳೆ)
- ಕ್ಯಾಸನಕೆರೆ : ಸಾಮಾನ್ಯ, ಸಾಮಾನ್ಯ((ಮಹಿಳೆ)
- ಹೊಸಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ ವರ್ಗ
- ಲಿಂಗಾಪುರ : ಅನುಸೂಚಿತ ಜಾತಿ, ಸಾಮಾನ್ಯ
- ಹುಣಸಘಟ್ಟೆ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ ವರ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

