ದಿನದ ಸುದ್ದಿ
ಅರಸೀಕೆರೆ | ಭೀಕರ ಅಪಘಾತ ; ಮೃತರ ಕುಟುಂಬಕ್ಕೆ 2.ಲಕ್ಷ ರೂ ಪರಿಹಾರ : ಸಿ.ಎಂ.ಬೊಮ್ಮಾಯಿ
ಸುದ್ದಿದಿನ,ಮಂಡ್ಯ : ಹಾಸನ ಜಿಲ್ಲೆಯ ( Hassan District ) ಅರಸೀಕೆರೆಯಲ್ಲಿ ಇಂದು ಬೆಳಗಿನ ಜಾವ ಟೆಂಪೋ ಟ್ರಾವೆಲರ್ ಹಾಗೂ ಕೆಎಂಎಫ್ ಹಾಲಿನ ವಾಹನ ಮುಖಾಮುಖಿ ಅಪಘಾತವಾಗಿದ್ದು ( Accident ), ಸುಮಾರು 9 ಜನ ಸ್ಥಳದಲ್ಲೇ ಮೃತರಾಗಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಅವರು ಇಂದು ಕೆ.ಆರ್.ಪೇಟೆಯ ಅಂಬಿಗ್ರಾಮ ಹೆಲಿಪ್ಯಾಡ್ ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಟ್ಯಾಂಕರ್ ಮತ್ತು ಬಸ್ಸುಗಳ ನಡುವೆ ಅಪಘಾತವಾಗಿದೆ. ಅಪಘಾತದ ಸ್ಥಳಕ್ಕೆ ಕೂಡಲೇ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಮರಣಿಸಿದವರ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.
"ಹಾಸನ ಜಿಲ್ಲೆಯ ಅರಸೀಕೆರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಒಂಬತ್ತು ಜನ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ವಿತರಿಸಲಾಗುವುದು ಹಾಗೂ ಅಪಘಾತದಲ್ಲಿ ಗಂಭೀರ ಗಾಯಗೀಡಾದವರಿಗೆ ಅಗತ್ಯ ಚಿಕಿತ್ಸೆ ನೀಡಲು ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗಿದೆ" : ಮುಖ್ಯಮಂತ್ರಿ @BSBommai
— CM of Karnataka (@CMofKarnataka) October 16, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243