Connect with us

ದಿನದ ಸುದ್ದಿ

ಬ್ರಹ್ಮಾವರ | ಹಾವಂಜೆಯಲ್ಲಿ ‘ಭೀಮ್ ಜಯಂತೋತ್ಸವ’

Published

on

ಉಡುಪಿ – (ಬ್ರಹ್ಮಾವರ) : ಉಡುಪಿ ಜಿಲ್ಲೆಯ, ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮದಲ್ಲಿ ‘ ಭೀಮ್ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಮುಖ್ಯಭಾಷಣಕಾರರಾಗಿ ಅವರು ಮಾತನಾಡಿದರು‌.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೇವಲ ಒಬ್ಬ ಸಾಮಾನ್ಯ ವ್ಯಕ್ತಿಯಾಗಿದ್ದರೆ ನಾವು ಇಂದು ಸ್ಮರಣೆ ಮಾಡುವ ಅಗತ್ಯವೇ ಇರಲಿಲ್ಲ. ಹಾಗೆಯೇ ಇವರು ಸಾರ್ವತ್ರಿಕ ನೆಲೆಯಲ್ಲಿ ಭಾರತೀಯರ ಸ್ಮರಣೆಯಲ್ಲಿಯೂ ಉಳಿಯುತ್ತಿರಲಿಲ್ಲ. ಆದರೆ ಭಾರತದ ಪ್ರತಿಯೊಬ್ಬ ಪ್ರಜೆಯು ಇಂದು ಬಾಬಾಸಾಹೇಬರನ್ನು ಸ್ಮರಣೆ ಮಾಡಿಕೊಳ್ಳಬೇಕಾದ ಅನಿವಾರ್ಯದೆ ಇದೆ ಎಂದಾದರೆ ಅದಕ್ಕೆ ಕಾರಣ ಈ ನಿಸ್ವಾರ್ಥ ವ್ಯಕ್ತಿತ್ವದ ಹಿರಿಮೆಯ ಪ್ರತೀಕವೇ ಸರಿ ಎಂದರು.

ಡಾ.ಕೆ.ಎ.ಓಬಳೇಶ್

ಭಾರತೀಯರಾದ ನಾವು ಎಪ್ಪತ್ತು-ಎಂಬತ್ತು ವರ್ಷಗಳ ಹಿಂದಿನ ಭಾರತವನ್ನು ಒಂದು ಕ್ಷಣ ಕಣ್ಣು ಮುಚಿ ಸ್ಮರಿಸಿಕೊಂಡರೆ ನಮಗೆ ಬಾಬಾಸಾಹೇಬ್ ಅಂಬೇಡ್ಕರ್ ಎಂಬ ಭೀಮಶಕ್ತಿಯ ಸಾಹಸಮಯ ಹೋರಾಟದ ಬದುಕು ಅರ್ಥವಾಗುತ್ತದೆ.

ಇಂದು ಹಿಂದುತ್ವದ ಹೆಸರಿನಲ್ಲಿ ಕೋಮುವಾದಿಗಳ ಕೈಗೊಂಬೆಯಾಗಿ ಕುಣಿಯುತ್ತ, ಈ ನೆಲದ ಸಾಮರಸ್ಯವನ್ನು ತಮ್ಮ ಕೈಯಾರೆ ಕೆಡಿಸುತ್ತಿರುವ ಶೂದ್ರ ಸಮುದಾಯದ ಯುವ ಸಮುದಾಯವು ಒಂದು ಕ್ಷಣ ಎಂಬತ್ತು ವರ್ಷಗಳ ಹಿಂದಿನ ತಮ್ಮ ಪೂರ್ವಜರ ಸ್ಥಿತಿಗತಿಗಳನ್ನು ಅರ್ಥ ಮಾಡಿಕೊಂಡರೆ ಬ್ರಾಹ್ಮಣ್ಯದ ತಾಳಕ್ಕೆ ಕುಣಿಯುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಒಬ್ಬ ಮುಂದುವರೆದ ಜಾತಿಯ ಶೂದ್ರನನ್ನು ಅಂಬೇಡ್ಕರ್ ಯಾರು ಎಂದು ಕೇಳಿದರೆ ಅವನ ಬಾಯಿಯಿಂದ ಸಹಜವಾಗಿಯೇ ಹೊರಹೊಮ್ಮುವ ಮಾತು ಅವರೊಬ್ಬ ‘ಹೊಲೆಯ ಮಾದಿಗ’ ಸಮುದಾಯದ ನಾಯಕ ಎಂಬುದೇ ಆಗಿರುತ್ತದೆ. ಆದರೆ ಈ ಭೀಮ ಶಕ್ತಿ ನನಗೆಷ್ಟು ಸ್ವಾಭಿಮಾನ, ಸ್ವಾವಲಂಬನೆಯನ್ನು ಕಲ್ಪಿಸಿಕೊಟ್ಟಿದೆ ಎಂಬ ಅರಿವು ಶೂದ್ರರಿಗೆ ಇಲ್ಲವಾಗಿದೆ. ಇದು ಆ ವ್ಯಕ್ತಿ ಅಥವಾ ಸಮುದಾಯದ ತಪ್ಪಲ್ಲ ಎಂದು ಹೇಳಿದರು.

ಅವರ ತಲೆಯೊಳಗೆ ಅಂಬೇಡ್ಕರ್ ಎಂಬ ಶಕ್ತಿಯ ಬಗ್ಗೆ ಮೂಲಭೂತವಾದಿಗಳು ತುಂಬಿರುವ ಹುಸಿ ಹುನ್ನಾರಗಳಿವು. ಅಂಬೇಡ್ಕರ್ ಎಂಬ ಈ ವ್ಯಕ್ತಿತ್ವ ಭಾರತದ ನೆಲದಲ್ಲಿ ಜನ್ಮತಳೆಯದೆ ಹೋಗಿದ್ದರೆ ನಾವೆಲ್ಲ ಶಿಕ್ಷಣ, ರಾಜಕೀಯ, ಅಧಿಕಾರದಿಂದ ಹೊರಗುಳಿದು ಜೀತ ಮಾಡಬೇಕಾದ ಪರಿಸ್ಥಿತಿ ಇನ್ನೂ ಜೀವಂತವಾಗಿರುತ್ತಿತ್ತು ಎಂಬುದು ಶೂದ್ರ ಸಮುದಾಯಗಳಿಗೆ ಅರ್ಥವಾಗಿಯೇ ಇಲ್ಲ ಎಂದು ನುಡಿದರು.

ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ನೂರ್ ಜುಮ್ಮಾ ಮಸ್ಜಿದ್ ಕುಂಜಾಲು, ಮೊಹಮ್ಮದ್ ಶಫೀಕ್ ನಿಜಾಮಿ ಖತೀಜರು ಮತ್ತು ಧರ್ಮ ಗುರುಗಳು ಸೇಕ್ರೇಟ್ ಹಾರ್ಟ್ ಚರ್ಚ್ ಕೊಳಲಗಿರಿ, ಅನಿಲ್ ಪ್ರಕಾಶ್ ಕ್ಯಾಸ್ತೋಲಿನ್ ಹಾಗೂ ಆಡಳಿತ ಮುಕ್ತೇಸರು, ಮಹಾಲಿಂಗೇಶ್ವರ ದೇವಸ್ಥಾನ ಹಾವಂಜೆ , ಸುರೇಶ್ ಬಿ ಶೆಟ್ಟಿ ಇರ್ಮಾಡಿ ಇದ್ದರು.

ಕಾರ್ಯಕ್ರಮದ ಅದ್ಯಕ್ಷತೆಯನ್ನು ರಾಜ್ಯಖಜಾಂಜಿ ಕದಸಂಸ ಭೀಮವಾದ ಕರ್ನಾಟಕ, ಎಸ್ ಡಿ ರಾಯಮಾನೆ ವಹಿಸಿದ್ದರು.
ರಾಜ್ಯ ಸಂಘಟನಾ ಸಂಚಾಲಕರು ಕದಸಂಸ ಭೀಮವಾದ ಉಡುಪಿ, ಶೇಖರ್ ಹಾವಂಜೆ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಗೋವರ್ಧನ ಗಿರಿಶ್ಯಾಮ್. ಎನ್. ಆರ್. ಸಂಪಾದಕರು, ಸುದ್ದಿ ದಿನ ದಿನಪತ್ರಿಕೆ,ದಾವಣಗೆರೆ,ರಮೇಶ್ ಹರಿಖಂಡಿಗ, ಜಿಲ್ಲಾ ಸಂಚಾಲಕರು ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ,ಗೋಪಾಲ್ ಇಸರ್ ಮಾರ್, ಜಿಲ್ಲಾಧ್ಯಕ್ಷರು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಜಿಲ್ಲೆ ಅಜಿತ್ ಪೂಜಾರಿ ಗೋಳಿಕಟ್ಟೆ ಅಧ್ಯಕ್ಷರು ಗ್ರಾಮಪಂಚಾಯತ್ ಸಮಿತಿ , ಸತೀಶ್ ಶೆಟ್ಟಿ ಮುಂಗನ್ ಬೆಟ್ಟು, ಉದ್ಯಮಿಗಳು ಮಾಜಿ ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಸಮಿತಿ ಹಾವಂಜೆ, ವಿ ಮಂಜುನಾಥ್ ವಕೀಲರು ಉಡುಪಿ, ಉದಯ ಕುಮಾರ್ ಮಣೂರು, ಹಿರಿಯ ವಕೀಲರು ಉಡುಪಿ, ಸತೀಶ್ ಪೂಜಾರಿ ಬಾರ್ಕೂರು, ಅಧ್ಯಕ್ಷರು ಬ್ರಹ್ಮಾವರ ತಾಲೂಕು ಹೋರಾಟ ಸಮಿತಿ ಉಡುಪಿ ಜಿಲ್ಲೆ, ಸದಾಶಿವ ಶೆಟ್ಟಿ ಹೇರೂರು, ಅಧ್ಯಕ್ತರು ಉಡುಪಿ ಜಿಲ್ಲಾ ಆರ್ ಟಿ ಐ ಮತ್ತು ಸಾಮಾಜಿಕ ಹೋರಾಟ ಸಮಿತಿ, ಹಬೀಬ್ ಉಡುಪಿ ಸಾಮಾಜಿಕ ಕಾರ್ಯಕರ್ತರು, ಅಬ್ಬಾಸ್ ಸಾಹೇಬ್ ಗೋಳಿಕಟ್ಟೆ ಹಿರಿಯರು ಮುಗೇರಿ ಹಾವಂಜೆ, ಉದಯ ಕೋಟ್ಯಾನ್, ಸದಸ್ಯರು ಹಾವಂಜೆ ಗ್ರಾಮ ಪಂಚಾಯತ್ ,ಅನ್ಸಾರ್ ಅಹ್ಮದ್, ಜಿಲ್ಲಾಧ್ಯಕ್ಷರು ಕರವೇ ಉಡುಪಿ ಜಿಲ್ಲೆ ಎನ್ ರಮೇಶ್ ಶೆಟ್ಟಿ ಅಧ್ಯಕ್ಷರು ಉಳ್ಳೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಹಾಗೂ ಹಾವಂಜೆ ಗ್ರಾಮ ಪಂಚಾಯತ್ ಸದಸ್ಯ, ಮಹೇಶ್ ಕೋಟ್ಯಾನ್, ಸದಸ್ಯರು ಉಪೂರು ಗ್ರಾಮ ಪಂಚಾಯತ್, ರತ್ನಾಕರ ಮೊಗವೀರ, ಮೊಗವೀರ ಸಂಘಟನೆ ಉಡುಪಿ ಅಶ್ವಿನ್ ರೋಚ್ ಕೊಳಲಗಿರಿ, ಸದಸ್ಯರು ಉಳ್ಳೂರು ಗ್ರಾಮ ಪಂಚಾಯತ್ , ಸುಜಯ್ ಪೂಜಾರಿ, ಜಿಲ್ಲಾಧ್ಯಕ್ಷರು ಕರವೇ ಉಡುಪಿ ಜಿಲ್ಲೆ : ಫ್ರಾಂಕಿ ಡಿಸೋಜಾ ಕೊಳಲಗಿರಿ, ಅಧ್ಯಕ್ಷರು ಕರವೇ ಬ್ರಹ್ಮಾವರ ತಾಲೂಕು, ನಾಗರಾಜ್ ಹೆಗ್ಡೆ ಗೋಳಿಕಟ್ಟೆ ಉದ್ಯಮಿಗಳು ಹಾಗೂ ಸಾಮಾಜಿಕ ಕಾರ್ಯಕತ : ರವೀಂದ್ರ ಪೂಜಾರಿ ಉಜಂಗಾರು, ಉದ್ಯಮಿಗಳು ಉಡುಪಿ, ಶ್ರೀಮತಿ ಸುಜಾತ ಯು ಶೆಟ್ಟಿ ಹಾವಂಜೆ ಉಪಾಧ್ಯಕ್ಷರು ಗ್ರಾಮ ಪಂಚಾಯತ್ , ಇಬ್ರಾಹಿಂ ಕೋಟ, ಅಧ್ಯಕ್ಷರು ಅಖಿಲಭಾರತ ಜರ್ನಲಿಸ್ಟ್ ಫೆಡರೇಷನ್ ಉಡುಪಿ, ಮಿಥುನ್ ಶೆಟ್ಟಿ ಹೆಬ್ರಿ, ಉದ್ಯಮಿಗಳು, ಸಖಾರಮ್ ಗೋಳಿಕಟ್ಟೆ ಮುಖ್ಯೋಪಾಧ್ಯಾಯರು, ಬಿ ವಿ ಹೆಗ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೀಳಿಂಜೆ : ಭಾಸ್ಕರ್ ಪೂಜಾರಿ, ಬೆಲ್ಲವ ಸೇವಾ ಸಂಘ (ರಿ) ಹಾವಂಜೆ, ಶಿವರಾಜ್ ಎಂ. ಲೆಕ್ಕ ಸಹಾಯಕರು ಉದ್ಯಾವರ ಗ್ರಾಮ ಪಂಚಾಯತ್,ಚಂದ್ರ ನಾಯ್ಕ,ಗ್ರಾಮಕರಣಿಕರು ಹಾವಂಜೆ ಗ್ರಾಮ ಪಂಚಾಯತ್ : ಶ್ರೀಮತಿ ಮೋಹಿನಿ ಸದಸ್ಯರು ಗ್ರಾಮ ಪಂಚಾಯತ್ ಹಾವಂಜೆ
ಇವರು ಉಪಸ್ಥಿತರಿದ್ದರು.

ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಸಮಿತಿಯಿಂದ ಬುದ್ದವಂದನೆ ಕಾರ್ಯಕ್ರಮ ನಡೆಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending