ದಿನದ ಸುದ್ದಿ
ಹಾವೇರಿ – ಹಾನಗಲ್ – ಧಾರವಾಡ ರಸ್ತೆ ಮುಳುಗಡೆ : ಮಾರ್ಗ ಬದಲಿಸಿ ಡಿಸಿ ಆದೇಶ
ಸುದ್ದಿದಿನ ,ಹಾವೇರಿ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಧರ್ಮಾ ನದಿ ಉಕ್ಕಿ ಹರಿಯುತ್ತಿದ್ದು, ಹಾವೇರಿ ಹಾನಗಲ್ ರಸ್ತೆ ಸಂಪೂರ್ಣ ಮುಳಗಡೆಯಾಗಿದೆ.ಹೆದ್ದಾರಿ ಮಾರ್ಗ ಬದಲಾಯಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.
ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮಾರ್ಗದ ನಿಪ್ಪಾಣಿ ಹತ್ತಿರ ಬಿರುಕು ಬಿಟ್ಟು ಸಂಚಾರ ಸ್ಥಗಿತಗೊಂಡಿರುವ ಕಾರಣ ಹಾವೇರಿಯಿಂದ ಧಾರವಾಡ ಕಡೆಗೆ ಹೋಗುವ ಮಾರ್ಗದ ವಾಹನಗಳನ್ನು ಶಿಗ್ಗಾಂವ ಲಕ್ಷ್ಮೇಶ್ವರ ಮುಖಾಂತರ ಗದಗ ಮಾರ್ಗವಾಗಿ ವಿಜಯಪುರ ಮುಂತಾದಕಡೆ ಸಂಚರಿಸಲು ಹಾವೇರಿ ಜಿಲ್ಲಾಧಿಕಾರಿ ಕೃಷ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ನಿಪ್ಪಾಣಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 4 ಬಿರುಕು ಬಿಟ್ಟ ಕಾರಣ ಪೂನಾ-ಬೆಂಗಳೂರು ಹಾಗೂ ಬೆಂಗಳೂರ-ಪೂನಾಕ್ಕೆ ಬರುವ ಹಾಗೂ ಹೋಗುವ ವಾಹನಗಳ ಸಂಚಾರ ಸಂಪೂರ್ಣ ನಿಲುಗಡೆಯಾಗಿದೆ. ಧಾರವಾಡ ಜಿಲ್ಲೆಯ ಸರಹದ್ದಿನಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 4ರ ಎರಡು ಬದಿಯಲ್ಲಿ ವಾಹನಗಳು ನಿಲುಗಡೆಯಾಗಿವೆ. ಮುಂದುವರೆದು ಬರುವ ವಾಹನಗಳಿಗೆ ಸ್ಥಳವಕಾಶವಿಲ್ಲದ ಕಾರಣ ಮೇಲಿನಂತೆ ಮಾರ್ಗ ಬದಲಾಯಿಸಿ ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 31ರಲ್ಲಿ ಅಧಿಕಾರದನ್ವಯ ಹಾವೇರಿ ಕಡೆಯಿಂದ ಧಾರವಾಡ ಕಡೆಗೆ ಹೋಗುವ ವಾಹನಗಳನ್ನು ಶಿಗ್ಗಾಂವ, ಲಕ್ಷ್ಮೇಶ್ವರ ಮಾರ್ಗವಾಗಿ ಗದಗ ಮುಖಾಂತರ ಸಂಚರಿಸಲು ಅವಕಾಶ ಮಾಡಿಕೊಟ್ಟು ಆದೇಶ ಹೊರಡಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243