ದಿನದ ಸುದ್ದಿ
ಇತಿಹಾಸ ಪುಟ ಸೇರಲಿದೆ ದೇವೇಗೌಡರ ಯೋಗ !
![](https://suddidina.com/wp-content/uploads/2018/06/hd-devegowda-yoga.png)
ಸುದ್ದಿದಿನ ಡೆಸ್ಕ್: ವಿಶ್ವ ಯೋಗ ದಿನದ ಅಂಗವಾಗಿ ಗುರುವಾರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಯೋಗ ಮಾಡಲಿದ್ದು, ಇತಿಹಾಸದಲ್ಲಿ ದಾಖಲಾಗಲಿದೆ.
ಹೌದು, ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿಯೊಬ್ಬರು ತಮ್ಮ 86ನೇ ವಯಸ್ಸಿನಲ್ಲಿ ಯೋಗ ಪ್ರದರ್ಶನ ಮಾಡುತ್ತಿರುವುದು ಇದೇ ಮೊದಲು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ತಮ್ಮ ಹರೆಯದ ವಯಸ್ಸಿನಲ್ಲಿ ರಾಜಕೀಯ ಜೀವನ ಆರಂಭಿಸಿದ್ದ ಎಚ್.ಡಿ. ದೇವೇಗೌಡರು ಹಲವು ಏಳುಬೀಳು ನೋಡಿದ್ದಾರೆ. ತಮ್ಮ ರಾಜಕೀಯ ಚತುರ ನೀತಿಯಿಂದ ವಿರೋಧಿಗಳನ್ನು ಸಮರ್ಥವಾಗಿ ಎದರಿಸುವ ದೇವೇಗೌಡರು ತಮ್ಮ ಆರೋಗ್ಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಈ ಕಾರಣದಿಂದಲೇ ತಮ್ಮ ಇಳಿ ವಯಸ್ಸಿನಲ್ಲೂ ಯೋಗ ಮಾಡುತ್ತಿರುವುದು.
ದೇವೇಗೌಡರರಾಜಕೀಯ ಇತಿಹಾಸ
1989ರ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದಾಗ ದೇವೇಗೌಡರು ರಾಜಕೀಯ ನೇಪಥ್ಯಕ್ಕೆ ಸರಿಯಲಿದ್ದಾರೆ ಎಂಬುವುದೇ ಹಲವರ ಲೆಕ್ಕಾಚಾರವಾಗಿತ್ತು ಆದರೆ 1990 ರಲ್ಲಿ ರಾಷ್ಟ್ರಮಟ್ಟದ ರಾಜಕೀಯ ಚಿತ್ರಣ ಬದಲಾಗಿ ಚಂದ್ರಶೇಖರ್ ಅವರು ಪ್ರಧಾನಿಯಾದರು . ಚಂದ್ರಶೇಖರ್ ಅವರು ಬೊಮ್ಮಾಯಿಯವರಂತೆ ರಾಷ್ಟ್ರೀಯ ಪಕ್ಷವೊಂದರ ಅಧ್ಯಕ್ಷರಾಗುವ ಅವಕಾಶವನ್ನು ದೇವೇಗೌಡರಿಗೂ ನೀಡಿದ್ದರು ಆ ಮಟ್ಟಿನ ವಿಶ್ವಾಸ ಪ್ರಧಾನಿ ಚಂದ್ರಶೇಖರ್ ಅವರಿಗೆ ದೇವೇಗೌಡರ ಮೇಲಿತ್ತು. ಮುಂದೆ 1996 ಜೂನ್ ಒಂದರಂದು ದೇವೇಗೌಡರೇ ದೇಶದ ಪ್ರಧಾನಿಯಾದರು.
ಕೆಲವೊಂದು ಕಾರಣದಿಂದ ಅಧಿಕಾರದಿಂದ ಇಳಿಯಬೇಕಾದ ಪರಿಸ್ಥಿತಿ ಏರ್ಪಟ್ಟಾಗ ವಿರೋಧ ಪಕ್ಷದ ನಾಯಕರಾದ ವಾಜಪೇಯಿ ಸವರು ಚೀಟಿಯೊಂದನ್ನು ದೇವೇಗೌಡರಿಗೆ ಕಳುಹಿಸಿ ನಾವು ನಿಮ್ಮ ಬೆಂಬಲಕ್ಕಿದ್ದೇವೆ ನೀವು ನಿಮ್ಮ ಆಡಳಿತವನ್ನು ಮುಂದುವರೆಸಿ ಎಂದು ಹೇಳಿದ್ದರು.
ಇನ್ನು ದೇವೇಗೌಡರಿಗೆ ತಮ್ಮ ನಾಡಿನ ಬಗ್ಗೆ ಅಪಾರ ಕಾಳಜಿ ಇರೋದನ್ನು ಯಾರು ಅಲ್ಲಗೆಳೆಯಲು ಸಾಧ್ಯವೇ ಇಲ್ಲ ಪ್ರಧಾನಿಯಾಗಿ ಸಂಸತ್ತಿನಲ್ಲಿ ಬಹುಮತವನ್ನು ಸಾಬಿತುಪಡಿಸಿದ ಕೆಲವೇ ದಿನಗಳಲ್ಲಿ ಅಲಮಟ್ಟಿ ಡ್ಯಾಮ್ ನ ಎತ್ತರವನ್ನು524 ಮೀಟರ್ ಗಳಿಗೆ ಏರಿಸುವ ವಿನ್ಯಾಸಕ್ಕೆ ಅಂಗೀಕಾರ ನೀಡಿದ್ದರು.
ದೇವೇಗೌಡರು ನೆಲ, ಜಲ, ಭಾಷೆಯ ವಿಚಾರದಲ್ಲಿ ಎಂದೂ ರಾಜಕಾರಣ ಮಾಡಲಿಲ್ಲ. ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯದ ವಿರುದ್ಧ ಬಂದಾಗ ಅತ್ಯಂತ ಹೆಚ್ಚು ದ್ವೇಷಿಸುತ್ತಿದ್ದ ಸಿದ್ದರಾಮಯ್ಯನವರ ಸರಕಾರವನ್ನು ಕೆಡವಲು ಸೂಕ್ತ ಸಂದರ್ಭ ಸೃಷ್ಟಿಯಾಗಿತ್ತು ಆದರೆ ದೇವೇಗೌಡರು ಈ ಸಮಯದಲ್ಲಿ ರಾಜಕಾರಣ ಮಾಡಬಾರದು ಎಂದು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದರು.
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!