ದಿನದ ಸುದ್ದಿ
ವಿಷ ಪ್ರಸಾದ : ಸತ್ತವರ ಕುಟುಂಬಸ್ಥರಿಗೆ ಎಚ್.ಡಿ.ಕೆ ವಿಶೇಷ ಪ್ಯಾಕೇಜ್ ಘೋಷಣೆ..!?
ಸುದ್ದಿದಿನ ಡೆಸ್ಕ್ : ಇಂದು ಮದ್ಯಾಹ್ನ ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಹನೂರು ತಾಲ್ಲೂಕಿನ ಸೂಳ್ವಾಡಿ ಗ್ರಾಮಕ್ಕೆ ಭೇಟಿ ನೀಡಿ ಮಾರಮ್ಮ ದೇಗುಲ ವಿಷ ಪ್ರಸಾದ ಸೇವಿಸಿ ಸತ್ತವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ.
ಮುಖ್ಯಮಂತ್ರಿಗಳ ಆಗಮನಕ್ಕಾಗಿ ಬಿದರಳ್ಳಿ ಗ್ರಾಮದ ಹೊರ ವಲಯದಲ್ಲಿ ಹೆಲಿಪ್ಯಾಡ್ ರೆಡಿಯಾಗಿದ್ದು, ಬಿದರಳ್ಳಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದು, ಸಂತ್ರಸ್ತರ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401