ದಿನದ ಸುದ್ದಿ
ಗೌರಿ-ಗಣೇಶ ಹಬ್ಬಕ್ಕೆ ಶುಭಕೋರಿದ ಎಚ್.ಡಿ.ಕೆ : ವೀಡಿಯೋ ನೋಡಿ
ಸುದ್ದಿದಿನ ಡೆಸ್ಕ್ : ನಾಡಿನ ಜನತೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೌರಿ-ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಜನತೆಗೆ ಒಂದು ಮನವಿಯನ್ನೂ ಕೂಡ ಮಾಡಿದ್ದಾರೆ. “ನಾವು ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. ಮಣ್ಣಿನ ಗಣಪತಿಯ ಮೂರ್ತಿಗಳನ್ನು ಪ್ರತಿಷ್ಠಾಪಿಸಿ. ಯಾವುದೇ ಕಾರಣಕ್ಕೂ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಗಣಪತಿ ಮೂರ್ತಿಯನ್ನು ಬಳಸ ಬೇಡಿ. ಪರಿಸರಕ್ಕೆ ಹಾನಿಯಾಗುವಂತಹ ಕೆಲಸ ಮಾಡಬೇಡಿ ಎಂದು ಸಂದೇಶ ನೀಡಿದ್ದಾರೆ.