Connect with us

ದಿನದ ಸುದ್ದಿ

ಸಂಸದರನ್ನು ಸ್ಮಾರ್ಟ್ ಆಗಿಸಲಷ್ಟೆ ಐಫೋನ್ ಗಿಫ್ಟ್

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದಾರೆ, ಸಾರ್ವತ್ರಿಕವಾಗಿ ಎಲ್ಲ ಸಂಸದರನ್ನು ಆಕ್ಟೀವ್ ಮಾಡುವ ಉದ್ದೇಶದಿಂದಷ್ಟೆ ಐಫೋನ್ ನೀಡಲಾಗಿದೆ ಎಂಬುದಾಗಿ ಎಚ್‍ಡಿಕೆ ಅವರು ಆಪ್ತರ ಬಳಿ ಹೇಳಿಕೊಂಡಿದ್ದಾಗಿ ತಿಳಿದುಬಂದಿದೆ.

Published

on

ಸುದ್ದಿದಿನ ಡೆಸ್ಕ್: ಮುಖ್ಯ ಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ರಾಜ್ಯದ ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ದುಬಾರಿ ಐಫೋನ್ ಗಿಫ್ಟ್ ನೀಡಿರುವ ¨ಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ.
ಆದರೆ ಇದರ ಹಿಂದಿನ ಉದ್ದೇಶವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಎಚ್‍ಡಿಕೆ ಅವರು ಬೇಸರ ವ್ಯಕ್ತಪಡಿಸಿದ್ದಾಗಿ ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯದ ಕೆಲವೇ ಸಂಸದರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದಾರೆ, ಸಾರ್ವತ್ರಿಕವಾಗಿ ಎಲ್ಲ ಸಂಸದರನ್ನು ಆಕ್ಟೀವ್ ಮಾಡುವ ಉದ್ದೇಶದಿಂದಷ್ಟೆ ಐಫೋನ್ ನೀಡಲಾಗಿದೆ ಎಂಬುದಾಗಿ ಎಚ್‍ಡಿಕೆ ಅವರು ಆಪ್ತರ ಬಳಿ ಹೇಳಿಕೊಂಡಿದ್ದಾಗಿ ತಿಳಿದುಬಂದಿದೆ.
ರಾಜ್ಯದ ಅನೇಕ ವಿಚಾರಗಳು ಕೇಂದ್ರಕ್ಕೆ ತಲುಪುತ್ತಿಲ್ಲ. ಅಧಿವೇಶನವಿದ್ದಾಗಷ್ಟೇ ಒಂದು ವೇದಿಕೆ ಸಿಗುತ್ತದೆ. ಅದರಲ್ಲೂ ಸಮಯಾವಕಾಶ ಸಿಗುವುದೇ ಕಷ್ಟ ಜಾಲತಾಣಗಳ ಮೂಲಕ ಮೇಲಿನವರಿಗೆ ವಿಷಯ ತಲುಪಿಸುವುದು ಈ ಗಿಫ್ಟ್ ಹಿಂದಿನ ಉದ್ದೇಶ ಎಂದು ಹೇಳಲಾಗಿದೆ.
ಇನ್ನು ಸಂಸದರಿಗೆ ನೀಡಲಾಗಿರುವ ಬ್ಯಾಗ್‍ನಲ್ಲಿ ಕಾವೇರಿ ನೀರಾವರಿ ವಿಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನಷ್ಟೆ ಇಡಲಾಗಿತ್ತು ಎನ್ನಲಾಗಿದೆ.
ಲಕ್ಷ ರೂ. ಮೊಬೈಲ್: ಸಂಸದರಿಗೆ ನೀಡಲಾಗಿರುವ ಐಫೋನ್ ಎಕ್ಸ್‍ನ ಬೆಲೆ ಒಂದು ಲಕ್ಷ ರೂ. ಆನ್‍ಲೈನ್ ಮಾರಾಟ ತಾಣಗಳಲ್ಲಿ 256 ಜಿಬಿಯ ಐಫೋನ್ ಎಕ್ಸ್‍ನ ಬೆಲೆ 99,999 ರೂ ಎಂದು ನಿಗದಿಮಾಡಲಾಗಿದೆ.

ದಿನದ ಸುದ್ದಿ

ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

Published

on

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ.

ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ವಿಧಾನಪರಿಷತ್ತಿಗೆ ಸೋಮವಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending