ರಾಜಕೀಯ

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿಲ್ಲ : ಬಿ.ಎಸ್.ವೈಗೆ ಎಚ್.ಡಿ.ಕೆ‌ ತಿರುಗೇಟು

Published

on

ಸುದ್ದಿದಿನ,ಉಡುಪಿ : ಕರಾವಳಿ ಜನ ಹಿಂದುತ್ವ ಕ್ಕೆ ಬಲಿಯಾಗುತ್ತಿದ್ದು ಹಿಂದೂ- ಮುಸಲ್ಮಾನರು ಸಂಘರ್ಷಕ್ಕೆ ಒಳಗಾಗಬೇಡಿ. ನಾವು ಬಿಜೆಪಿಗಿಂತ ಒಳ್ಳೆಯ ಹಿಂದುತ್ವ ಪಾಲಿಸುತ್ತೇವೆ. ಹಿಂದುತ್ವದಲ್ಲಿ ನಾವು ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ನಾವಿದ್ದೇವೆ. ಬಿಜೆಪಿ ಭಾವನಾತ್ಮಕ ವಿಚಾರ ಜನರ ಮುಂದಿಡುತ್ತ ಚುನಾವಣೆ ನಡೆಸುತ್ತದೆ. ಬಿಜೆಪಿ ನಾಯಕರು ಸರಕಾರ ಬೀಳುವ ಕನಸಲ್ಲಿದ್ದಾರೆ, ನಮಗೆ ದೈವ ಪ್ರೇರೇಪಣೆ ಇದೆ ಎಂದು ಉಡುಪಿಯ ತ್ರಾಸಿಯಲ್ಲಿ ಕು ಸಿಎಂ ಕುಮಾರಸ್ವಾಮಿ ಹೇಳಿದರು.

ನಾನು ಎಷ್ಟು ದಿನ ಅಧಿಕಾರದಲ್ಲಿರಬೇಕಂತ ದೇವರು ತೀರ್ಮಾನಿಸ್ತಾರೆ. ಉಪಚುನಾವಣೆ ನಂತರ ನಾನು ಮನೆಗೆ ಹೋಗಲ್ಲ. ಯಡಿಯೂರಪ್ಪ ಹೇಳಿದಂತೆ ಯಾವುದೂ ಆಗಲ್ಲ. ಬಡವರ ಮನೆಗೆ ನಾನು ಬರ್ತೇನೆ.
ಬಡವರ ಮನೆಯಲ್ಲಿ ಕುಳಿತು ಚರ್ಚೆ ಮಾಡ್ತೇನೆ.
ಸರ್ಕಾರದ ಖಜಾನೆಯಲ್ಲಿ ಸಾಕಷ್ಟು ದುಡ್ಡು ಇದೆ
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿಲ್ಲ. ಉಪಚುನಾವಣೆವಲ್ಲಿ ಅಪ್ಪ ಮಕ್ಕಳನ್ನು ಸೋಲಿಸಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version