Connect with us

ದಿನದ ಸುದ್ದಿ

ಬಡವರ ಮನೆ ಮಕ್ಕಳ ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ : ಹೆಚ್.ಡಿ.ಕುಮಾರಸ್ವಾಮಿ

Published

on

ಸುದ್ದಿದಿನ,ಮೈಸೂರು: ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ನೆಟ್ಟಾರು ಅವರಂಥ ಬಡವರ ಮನೆ ಮಕ್ಕಳ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವದ ಕಾರ್ಡ್ ಮೇಲೆ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹವಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು,‌ಈ ಎರಡು ಬಾರಿ ಆಪರೇಷನ್ ಕಮಲವೆಂಬ ಅನೈತಿಕ ಮಾರ್ಗದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮುಂದೆ, ನಡುರಸ್ತೆಗಳಲ್ಲಿ ಅಮಾಯಕರ ನೆತ್ತರು ಹರಿಸಿ ಪಾಪದ ಮಾರ್ಗದಲ್ಲಿ ಅಧಿಕಾರಕ್ಕೆ ಬರಲು ಹೊಂಚು ಹಾಕಿದೆ ಎಂದರು.

ಹಿಂದೂ ಯುವಕರ ಸಾವುಗಳಾದರೆ ರಾಜಕೀಯ ಫಸಲು ಚೆನ್ನಾಗಿ ಬರುತ್ತದೆ ಎಂದು ಬಿಜೆಪಿ ನಂಬಿದೆ. ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ರೀತಿಯ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವವೇ ಅದಕ್ಕೆ ಮತ ಗಳಿಸುವವ ಮಾರ್ಗ. ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳಲು ಬಿಜೆಪಿಗೆ ಯೋಗ್ಯತೆ ಇಲ್ಲ. ಹೆಚ್ಚೆಚ್ಚು ಯುವಕರ ಕೊಲೆಗಳು ನಡೆದಷ್ಟೂ ಅವರಿಗೆ ಅನುಕೂಲ. ಆದ್ದರಿಂದಲೇ ಕೊಲೆಯಾದಾಗ ಬಿಜೆಪಿ ನಾಯಕರು ʼಕೃತಕ ಸಂತಾಪʼ ಸೂಚಿಸುತ್ತಾರೆ. ಸಾವಿನ ಮನೆಗಳ ಮುಂದೆ ಪರೇಡ್ ಮಾಡುತ್ತಾರೆ. ಆ ಯುವಕನ ತಾಯಿ ರೋದನೆ ನೋಡಿ ನೋವಾಗಿದೆ ಎಂದು ಸಿಎಂ ಹೇಳಿದ್ದಾರೆ. ವಾರದ ಹಿಂದೆಯೇ ಎಚ್ಚೆತ್ತುಕೊಂಡಿದ್ದಿದ್ದರೆ ಅವರಿಗೆ ಆ ತಾಯಿಯ ರೋದನೆ ತಪ್ಪಿಸಲು ಸಾಧ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಉತ್ತರ ಪ್ರದೇಶದಲ್ಲಿಯೂ ಇದೇ ರೀತಿ ನರಮೇಧ ನಡೆಸಿ ಬಿಜೆಪಿ ಅಧಿಕಾರಕ್ಕೆ ಬಂತು. ಮುಜಾಫರ್ ನಗರದಲ್ಲಿ ದೊಡ್ಡ ಹಿಂಸಾಕಾಂಡವೇ ನಡೆಯಿತು. ನೂರಾರು ಕುಟುಂಬಗಳು ಬೀದಿಗೆ ಬಿದ್ದವು. ಹೋಗಲಿ, ಆ ಹಿಂಸಾಚಾಋ ಯಾಕೆ ನಡೆಯಿತು ಎಂಬ ಬಗ್ಗೆ ತನಿಖೆಯಾದರೂ ನಡೆಯಿತಾ? ಅದರ ಹಿಂದೆ ಯಾರಿದ್ದರು? ಸತ್ಯ ಹೊರಗೆ ಬಂತಾ? ಇಲ್ಲ. ಆದರೆ, ಬಣ್ಣ ಬಣ್ಣದ ಜಾಹೀರಾತುಗಳಿಂದ ಜನರಿಗೆ ಮಂಕುಬೂದಿ ಎರಚುತ್ತಿದೆ ಎಂದು ಅವರು ಹೇಳಿದರು.

ನಾನು ಕೂಡ ಎರಡು ಸಲ ರಾಜ್ಯದ ಮುಖ್ಯಮಂತ್ರಿ ಆಗಿದ್ದೆ. ಒಮ್ಮೆಯೇ ಇಂಥ ಕೊಲೆ ಆಯಿತಾ? ಯಾವುದೇ ಪಕ್ಷದ ಕಾರ್ಯಕರ್ತನ ಪ್ರಾಣ ಹೋಯಿತಾ? ಸಾವಿನ ಮನೆಯಲ್ಲಿ ಸಂಭ್ರಮ ಮಾಡುವ ಕೆಲಸ ನಾನು ಮಾಡಲಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಈ ಹಿಂಸಾಕಾಂಡವನ್ನು ಹತ್ತಿಕ್ಕಲು ಕೂಡಲೇ ಸರಕಾರ ಮುಂದಾಗಬೇಕು. ಸರ್ವಧರ್ಮ ಗುರುಗಳ ಸಭೆಯನ್ನು ಕರೆದು ಅವರ ಮಾರ್ಗದರ್ಶನದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ನಾಲ್ಕೈದು ತಿಂಗಳ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಸರಕಾರಕ್ಕೆ ಶಾಂತಿ ನೆಲೆಸುವುದು ಬೇಕಿಲ್ಲ ಎಂದು ಅವರು ಕಿಡಿಕಾರಿದರು.

ತೇಜಸ್ವಿ ಸೂರ್ಯ ಕೊಡುಗೆ ಏನು?

ಪ್ರತಿಯೊಬ್ಬರಿಗೂ ಗನ್‌ ಮ್ಯಾನ್ ನೀಡಲು ಸಾಧ್ಯವೇ ಎಂದು ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ ಅವರು, ಬೆಂಗಳೂರು ನಗರಕ್ಕೆ ಹಾಗೂ ರಾಜ್ಯಕ್ಕೆ ತೇಜಸ್ವಿ ಸೂರ್ಯ ಅವರ ಕೊಡುಗೆ ಏನು ಎಂಬುದು ಗೊತ್ತಿಲ್ಲ. ಜನರು ಅಂಥವರಿಗೆ ಮತ ಕೊಟ್ಟು ಗೆಲ್ಲಿಸಿ ಅಂಥವರಿಂದ ಇಂಥ ಮಾತುಗಳನ್ನು ಕೇಳಬೇಕಾಗಿ ಬಂದಿದೆ. ಜನರಿಗೆ ಇದೆಲ್ಲವನ್ನು ಸಹಿಸಿಕೊಳ್ಳದೇ ಬೇರೆ ವಿಧಿ ಇಲ್ಲ. ಇಲ್ಲಿ ಯಾರಿಗೂ ಗನ್ʼಮ್ಯಾನ್ ಬೇಕಿಲ್ಲ. ಆದರೆ ನೆಮ್ಮದಿಯಾಗಿ ಬದುಕಲು ನೆಮ್ಮದಿಯ ವಾತಾವರಣ ಬೇಕಷ್ಟೇ. ಸರಕಾರ ಅಷ್ಟು ಮಾಡಿದರೆ ಸಾಕು ಎಂದರು.

ವರ್ಗಾವಣೆಗೂ ಪೇಮೆಂಟ್ ಕೋಟಾ:

ಅಧಿಕಾರಿಗಳ ವರ್ಗಾವರ್ಗಿಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ ಎಂದು ದೂರಿದ ಮಾಜಿ ಮುಖ್ಯಮಂತ್ರಿಗಳು; ಒಬ್ಬ ಸರ್ಕಲ್ ಇನ್ಸ್ಪೆಕ್ಟರ್ 75 ಲಕ್ಷದಿಂದ 1 ಕೋಟಿ ರೂ.ವರೆಗೂ ಲಂಚ ನೀಡಿ ಹುದ್ದೆಗೆ ಬರುತ್ತಾರೆ. ಹಾಗೆ ಬರುವ ಅಧಿಕಾರಿಯಿಂದ ಉತ್ತಮ ಕರ್ತವ್ಯ ನಿರ್ವಹಣೆ ನಿರೀಕ್ಷಿಸಲು ಸಾಧ್ಯವೇ? ನೀವು ಸರಿಯಾಗಿ ಆಡಳಿತ ಮಾಡಿದ್ದರೆ ಯಾಕೆ ಸಾವುಗಳು ಸಂಭವಿಸುತ್ತಿದ್ದವು? ಎಂದು ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ʼಹಣಕ್ಕಾಗಿ ಹುದ್ದೆʼ ಎನ್ನುವುದು ಇರಲಿಲ್ಲ. ನನ್ನ ಸರಕಾರ ತೆಗೆದು ಬಿಜೆಪಿ ಸರಕಾರ ಬಂದ ಕೂಡಲೇ ಆ ಪರಿಕಲ್ಪನೆ ಹುಟ್ಟಿಕೊಂಡಿತು. ಯಲಹಂಕದ ತಹಸೀಲ್ದಾರ್ ಹುದ್ದೆ ಪೋಸ್ಟಿಂಗ್ ಕೇಳಿಕೊಂಡು ಒಬ್ಬ ಅಧಿಕಾರಿ 1.5 ಕೋಟಿ ರೂ. ಆಫರ್ ಕೊಟ್ಟಿದ್ದ. ಆಮೇಲೆ ಬಿಡಿಎ ಆಯುಕ್ತರಾಗಲು ಅಧಿಕಾರಿ ಮಹಾಶಯನೊಬ್ಬ 15 ಕೋಟಿ ರೂ. ಆಮಿಷ ಒಡ್ಡಿದ್ದರು. ಅವರೆಲ್ಲರಿಗೂ ಚಳಿ ಬಿಡಿಸಿ ಕಳಿಸಿದ್ದೆ. ಆಮೇಲೆ ಯಡಿಯೂರಪ್ಪ ಮುಖ್ಯಮಂತ್ರಿ ಬಂದ ಕೂಡಲೇ ಅಧಿಕಾರಿಗಳಿಬ್ಬರು ಅದೇ ಜಾಗಳಲ್ಲಿ ಬಂದು ಕೂತಿದ್ದರು ಎಂದು ಮಾಹಿತಿ ಬಿಚ್ಚಿಟ್ಟರು ಕುಮಾರಸ್ವಾಮಿ ಅವರು.

ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಅಶ್ವಿನ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending