Connect with us

ದಿನದ ಸುದ್ದಿ

ಬಡವರ ಮನೆ ಮಕ್ಕಳ ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ : ಹೆಚ್.ಡಿ.ಕುಮಾರಸ್ವಾಮಿ

Published

on

ಸುದ್ದಿದಿನ,ಮೈಸೂರು: ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ನೆಟ್ಟಾರು ಅವರಂಥ ಬಡವರ ಮನೆ ಮಕ್ಕಳ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವದ ಕಾರ್ಡ್ ಮೇಲೆ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹವಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು,‌ಈ ಎರಡು ಬಾರಿ ಆಪರೇಷನ್ ಕಮಲವೆಂಬ ಅನೈತಿಕ ಮಾರ್ಗದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮುಂದೆ, ನಡುರಸ್ತೆಗಳಲ್ಲಿ ಅಮಾಯಕರ ನೆತ್ತರು ಹರಿಸಿ ಪಾಪದ ಮಾರ್ಗದಲ್ಲಿ ಅಧಿಕಾರಕ್ಕೆ ಬರಲು ಹೊಂಚು ಹಾಕಿದೆ ಎಂದರು.

ಹಿಂದೂ ಯುವಕರ ಸಾವುಗಳಾದರೆ ರಾಜಕೀಯ ಫಸಲು ಚೆನ್ನಾಗಿ ಬರುತ್ತದೆ ಎಂದು ಬಿಜೆಪಿ ನಂಬಿದೆ. ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ರೀತಿಯ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವವೇ ಅದಕ್ಕೆ ಮತ ಗಳಿಸುವವ ಮಾರ್ಗ. ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳಲು ಬಿಜೆಪಿಗೆ ಯೋಗ್ಯತೆ ಇಲ್ಲ. ಹೆಚ್ಚೆಚ್ಚು ಯುವಕರ ಕೊಲೆಗಳು ನಡೆದಷ್ಟೂ ಅವರಿಗೆ ಅನುಕೂಲ. ಆದ್ದರಿಂದಲೇ ಕೊಲೆಯಾದಾಗ ಬಿಜೆಪಿ ನಾಯಕರು ʼಕೃತಕ ಸಂತಾಪʼ ಸೂಚಿಸುತ್ತಾರೆ. ಸಾವಿನ ಮನೆಗಳ ಮುಂದೆ ಪರೇಡ್ ಮಾಡುತ್ತಾರೆ. ಆ ಯುವಕನ ತಾಯಿ ರೋದನೆ ನೋಡಿ ನೋವಾಗಿದೆ ಎಂದು ಸಿಎಂ ಹೇಳಿದ್ದಾರೆ. ವಾರದ ಹಿಂದೆಯೇ ಎಚ್ಚೆತ್ತುಕೊಂಡಿದ್ದಿದ್ದರೆ ಅವರಿಗೆ ಆ ತಾಯಿಯ ರೋದನೆ ತಪ್ಪಿಸಲು ಸಾಧ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಉತ್ತರ ಪ್ರದೇಶದಲ್ಲಿಯೂ ಇದೇ ರೀತಿ ನರಮೇಧ ನಡೆಸಿ ಬಿಜೆಪಿ ಅಧಿಕಾರಕ್ಕೆ ಬಂತು. ಮುಜಾಫರ್ ನಗರದಲ್ಲಿ ದೊಡ್ಡ ಹಿಂಸಾಕಾಂಡವೇ ನಡೆಯಿತು. ನೂರಾರು ಕುಟುಂಬಗಳು ಬೀದಿಗೆ ಬಿದ್ದವು. ಹೋಗಲಿ, ಆ ಹಿಂಸಾಚಾಋ ಯಾಕೆ ನಡೆಯಿತು ಎಂಬ ಬಗ್ಗೆ ತನಿಖೆಯಾದರೂ ನಡೆಯಿತಾ? ಅದರ ಹಿಂದೆ ಯಾರಿದ್ದರು? ಸತ್ಯ ಹೊರಗೆ ಬಂತಾ? ಇಲ್ಲ. ಆದರೆ, ಬಣ್ಣ ಬಣ್ಣದ ಜಾಹೀರಾತುಗಳಿಂದ ಜನರಿಗೆ ಮಂಕುಬೂದಿ ಎರಚುತ್ತಿದೆ ಎಂದು ಅವರು ಹೇಳಿದರು.

ನಾನು ಕೂಡ ಎರಡು ಸಲ ರಾಜ್ಯದ ಮುಖ್ಯಮಂತ್ರಿ ಆಗಿದ್ದೆ. ಒಮ್ಮೆಯೇ ಇಂಥ ಕೊಲೆ ಆಯಿತಾ? ಯಾವುದೇ ಪಕ್ಷದ ಕಾರ್ಯಕರ್ತನ ಪ್ರಾಣ ಹೋಯಿತಾ? ಸಾವಿನ ಮನೆಯಲ್ಲಿ ಸಂಭ್ರಮ ಮಾಡುವ ಕೆಲಸ ನಾನು ಮಾಡಲಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಈ ಹಿಂಸಾಕಾಂಡವನ್ನು ಹತ್ತಿಕ್ಕಲು ಕೂಡಲೇ ಸರಕಾರ ಮುಂದಾಗಬೇಕು. ಸರ್ವಧರ್ಮ ಗುರುಗಳ ಸಭೆಯನ್ನು ಕರೆದು ಅವರ ಮಾರ್ಗದರ್ಶನದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ನಾಲ್ಕೈದು ತಿಂಗಳ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಸರಕಾರಕ್ಕೆ ಶಾಂತಿ ನೆಲೆಸುವುದು ಬೇಕಿಲ್ಲ ಎಂದು ಅವರು ಕಿಡಿಕಾರಿದರು.

ತೇಜಸ್ವಿ ಸೂರ್ಯ ಕೊಡುಗೆ ಏನು?

ಪ್ರತಿಯೊಬ್ಬರಿಗೂ ಗನ್‌ ಮ್ಯಾನ್ ನೀಡಲು ಸಾಧ್ಯವೇ ಎಂದು ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ ಅವರು, ಬೆಂಗಳೂರು ನಗರಕ್ಕೆ ಹಾಗೂ ರಾಜ್ಯಕ್ಕೆ ತೇಜಸ್ವಿ ಸೂರ್ಯ ಅವರ ಕೊಡುಗೆ ಏನು ಎಂಬುದು ಗೊತ್ತಿಲ್ಲ. ಜನರು ಅಂಥವರಿಗೆ ಮತ ಕೊಟ್ಟು ಗೆಲ್ಲಿಸಿ ಅಂಥವರಿಂದ ಇಂಥ ಮಾತುಗಳನ್ನು ಕೇಳಬೇಕಾಗಿ ಬಂದಿದೆ. ಜನರಿಗೆ ಇದೆಲ್ಲವನ್ನು ಸಹಿಸಿಕೊಳ್ಳದೇ ಬೇರೆ ವಿಧಿ ಇಲ್ಲ. ಇಲ್ಲಿ ಯಾರಿಗೂ ಗನ್ʼಮ್ಯಾನ್ ಬೇಕಿಲ್ಲ. ಆದರೆ ನೆಮ್ಮದಿಯಾಗಿ ಬದುಕಲು ನೆಮ್ಮದಿಯ ವಾತಾವರಣ ಬೇಕಷ್ಟೇ. ಸರಕಾರ ಅಷ್ಟು ಮಾಡಿದರೆ ಸಾಕು ಎಂದರು.

ವರ್ಗಾವಣೆಗೂ ಪೇಮೆಂಟ್ ಕೋಟಾ:

ಅಧಿಕಾರಿಗಳ ವರ್ಗಾವರ್ಗಿಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ ಎಂದು ದೂರಿದ ಮಾಜಿ ಮುಖ್ಯಮಂತ್ರಿಗಳು; ಒಬ್ಬ ಸರ್ಕಲ್ ಇನ್ಸ್ಪೆಕ್ಟರ್ 75 ಲಕ್ಷದಿಂದ 1 ಕೋಟಿ ರೂ.ವರೆಗೂ ಲಂಚ ನೀಡಿ ಹುದ್ದೆಗೆ ಬರುತ್ತಾರೆ. ಹಾಗೆ ಬರುವ ಅಧಿಕಾರಿಯಿಂದ ಉತ್ತಮ ಕರ್ತವ್ಯ ನಿರ್ವಹಣೆ ನಿರೀಕ್ಷಿಸಲು ಸಾಧ್ಯವೇ? ನೀವು ಸರಿಯಾಗಿ ಆಡಳಿತ ಮಾಡಿದ್ದರೆ ಯಾಕೆ ಸಾವುಗಳು ಸಂಭವಿಸುತ್ತಿದ್ದವು? ಎಂದು ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ʼಹಣಕ್ಕಾಗಿ ಹುದ್ದೆʼ ಎನ್ನುವುದು ಇರಲಿಲ್ಲ. ನನ್ನ ಸರಕಾರ ತೆಗೆದು ಬಿಜೆಪಿ ಸರಕಾರ ಬಂದ ಕೂಡಲೇ ಆ ಪರಿಕಲ್ಪನೆ ಹುಟ್ಟಿಕೊಂಡಿತು. ಯಲಹಂಕದ ತಹಸೀಲ್ದಾರ್ ಹುದ್ದೆ ಪೋಸ್ಟಿಂಗ್ ಕೇಳಿಕೊಂಡು ಒಬ್ಬ ಅಧಿಕಾರಿ 1.5 ಕೋಟಿ ರೂ. ಆಫರ್ ಕೊಟ್ಟಿದ್ದ. ಆಮೇಲೆ ಬಿಡಿಎ ಆಯುಕ್ತರಾಗಲು ಅಧಿಕಾರಿ ಮಹಾಶಯನೊಬ್ಬ 15 ಕೋಟಿ ರೂ. ಆಮಿಷ ಒಡ್ಡಿದ್ದರು. ಅವರೆಲ್ಲರಿಗೂ ಚಳಿ ಬಿಡಿಸಿ ಕಳಿಸಿದ್ದೆ. ಆಮೇಲೆ ಯಡಿಯೂರಪ್ಪ ಮುಖ್ಯಮಂತ್ರಿ ಬಂದ ಕೂಡಲೇ ಅಧಿಕಾರಿಗಳಿಬ್ಬರು ಅದೇ ಜಾಗಳಲ್ಲಿ ಬಂದು ಕೂತಿದ್ದರು ಎಂದು ಮಾಹಿತಿ ಬಿಚ್ಚಿಟ್ಟರು ಕುಮಾರಸ್ವಾಮಿ ಅವರು.

ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಅಶ್ವಿನ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending