ಲೈಫ್ ಸ್ಟೈಲ್
7000 ವರ್ಷಗಳಿಂದ ಬಳಸುತ್ತಿರುವ ಬೆಳ್ಳುಳ್ಳಿಯ ಆರೋಗ್ಯದ ಗುಣಗಳ ಬಗ್ಗೆ ನಿಮಗೆಷ್ಟು ಗೊತ್ತು..?
ಸುದ್ದಿದಿನ ಡೆಸ್ಕ್ : 7000 ವರ್ಷಗಳಿಂದ ನಾವು ಬೆಳ್ಳುಳ್ಳಿಯನ್ನು ಉಪಯೋಗಿಸುತ್ತಿದ್ದೇವೆ. ಆರೋಗ್ಯದ ಹಾಗೂ ರುಚಿಯ ದೃಷ್ಟಿಯಿಂದ ಇದನ್ನು ಬಳಸಲಾಗುತ್ತಿದೆ.ಇದರ ಬಗ್ಗೆ ಇನ್ನೂ ಕೆಲವು ಉಪಯೋಗಗಳನ್ನು ತಿಳಿಯೋಣ.
ಉಪಯೋಗಗಳು
- ದೇಹವನ್ನು ಹೆಚ್ಚು ಶಾಕವಾಗಿಡಲು ಮತ್ತು ನರಗಳನ್ನು ಹೆಚ್ಚು ಚೈತನ್ಯ ತುಂಬಿಸಿಕೊಳ್ಳಲು ಬೆಳ್ಳುಳ್ಳಿಯನ್ನು ಪ್ರತಿದಿನವೂ ಸೇವಿಸಬೇಕು.
- ರೋಗ ಯುಕ್ತರಾದ ಕ್ಷಯರೋಗಿಗಳು ದೀರ್ಘಕಾಲ ಪ್ರತಿದಿನವೂ ಬೆಳ್ಳುಳ್ಳಿಯನ್ನು ಬಳಸುತ್ತಿದ್ದರೆ ರೋಗ ಮರುಕಳಿಸುವ ಭಯವಿರುವುದಿಲ್ಲ.
- ರಕ್ತದ ಒತ್ತಡ ಹೆಚ್ಚಾಗಿರುವ ರೋಗಿಗಳು ಬೆಳ್ಳುಳ್ಳಿಯನ್ನು ಖಂಡಿತವಾಗಿ ಬಳಸಲೇಬೇಕು.
- ಬೆಳ್ಳುಳ್ಳಿ, ಹಿಪ್ಪೇ ಅಥವಾ ಹೊಂಗೆ ಬೀಜ ಮತ್ತು ಅಡಿಗೆ ಉಪ್ಪನ್ನು ಅರೆದು ಗಾಯಗಳಿಗೆ ಹೆಚ್ಚುವುದರಿಂದ ಗಾಯ ಬಹುಬೇಗ ಗುಣವಾಗುವುದು.
- ಚೇಳು ಕುಟುಕಿದ ಜಾಗಕ್ಕೆ ಬೆಳ್ಳುಳ್ಳಿ ಎಸಳನ್ನು ಅರೆದು ಹಚ್ಚದರೆ ಯಾತನೆ ದೂರವಾಗುವುದು.
- ಜೇನುತುಪ್ಪದೊಂದಿಗೆ ಬೆಳ್ಳುಳ್ಳಿ ರಸವನ್ನು ಒಂದು ಟೀ ಚಮಚದಷ್ಟು ಸೇವಿಸುವುದರಿಂದ ಜಂತುಹುಳುಗಳು ಮಲದೊಂದಿಗೆ ಹೊರಬೀಳುವುವು.
- ಕಿವಿ ನೋವಿದ್ದರೆ ಬೆಳ್ಳುಳ್ಳಿಯ ಎಸಳನ್ನು ಹರಳೆಣ್ಣೆಯಲ್ಲಿ ಕರಿದು ನಂತರ ಆರಿದ ಮೇಲೆ ಕಿವಿಗೆ ಒಂದೆರಡು ತೊಟ್ಟು ಆ ಎಣ್ಣೆಯನ್ನು ಬಿಟ್ಟುಕೊಂದರೆ ನೋವು ಪರಿಹಾರವಗುವುದು.
- ಬೆಳ್ಳುಳ್ಳಿ ಸೇವನೆಯಿಂದ ವಾತನಾಶವಾಗುತ್ತದೆ. ಕ್ಷಯರೋಗವನ್ನು ನಿವಾರಿಸುತ್ತದೆ. ಕಾಲರಾಕ್ಕೆ ಇದರ ಸೇವನೆಯಿಂದ ಹೆಚ್ಚು ಉಪಯೋಗವಾಗುತ್ತದೆ.
- ಹಾಲಿನಲ್ಲಿ ಬೆಳ್ಳುಳ್ಳಿ ಎಸಳನ್ನು ಬೇಯಿಸಿ ಪ್ರತಿದಿನ ತಿನ್ನುವುದರಿಂದ ಉಬ್ಬಸ ರೋಗ ಗುಣವಾಗುತ್ತದೆ.
- ಬಾಣಂತಿಯರು ಬೆಳ್ಳುಳ್ಳಿಯ ಚೂರುಗಳನ್ನು ಹತ್ತಿಯಲ್ಲಿ ಸುತ್ತಿ ಇಟ್ಟುಕೊಂಡರೆ ಶೀತದಿಂದ ಕಿವಿ ಕಿವುಡಾಗುಗ ಸಾಧ್ಯತೆ ಇರುವುದಿಲ್ಲ.
- ಬೆಳ್ಳುಳ್ಳಿಯನ್ನು ಬೇಯಿಸಿ ಅದರ ನೀರನ್ನು ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ಗರ್ಭಾಶಯದ ನೋವು ಪರಿಹಾರವಾಗುವುದು.
- ಪ್ರತಿನಿತ್ಯ ಬೆಳ್ಳುಳ್ಳಿಯನ್ನು ಬಳಸುತ್ತಿದ್ದರೆ ಜಠರದಲ್ಲಿ ವಾಯು ಸೇರುವುದಿಲ್ಲ ಜೊತೆಗೆ ರಕ್ತದ ವೃದ್ಧಿಯಾಗುತ್ತದೆ.
- ಬೆಳ್ಳುಳ್ಳಿ ಹೊಟ್ಟಿನ ಹೊಗೆಯನ್ನು ಮನೆಯಲ್ಲಿ ಕೆಲವು ಗಂಟೆಗಳು ಹಾಕುವುದರಿಂದ ಮನೆಯಲ್ಲಿ ಒಂದು ವೇಳೆ ವಿಷಜಂತುಗಳು ಸೇರಿಕೊಂಡಿದ್ದರೆ ಅವು ಅದರ ವಾಸನೆಯನ್ನು ತಡೆಯಲಾರದೆ ಹೊರಗೆ ಹೊರಟು ಹೋಗುವುವು.
- ದೀರ್ಘಕಾಲದ ಕೆಮ್ಮು ಮತ್ತು ನೆಗಡಡಯಿಂದ ಬಳಲುತ್ತಿರುವವರು ಬೆಳ್ಳುಳ್ಳಿಯನ್ನು ಪ್ರತಿದಿನ ಬಳಸಿದರೆ ಖಾಯಿಲೆ ದೂರವಾಗುವುದು.
- ಬಿಸಿ ಮಾಡಿದ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಅಜೀರ್ಣ ಮತ್ತು ಹೊಟ್ಟೆ ಉಬ್ಬರ ದೂರವಾಗುವುದು.
- ಬೆಳ್ಳುಳ್ಳಿಯನ್ನು ಪ್ರತಿನಿತ್ಯವೂ ಬಳಸುವುದರಿಂದ ಪಚನಶಕ್ತಿ ಹೆಚ್ಚಿಸಿ ವೀರ್ಯವನ್ನು ವೃದ್ಧಿಸುತ್ತದೆ. ಇದರಿಂದ ದಮ್ಮು, ಕೆಮ್ಮು ಉಬ್ಬಸದ ವಿಕಾರಗಳಿಗೆ ಅತ್ಯುತ್ತಮ ಔಷಧವಾಗಿದೆ.
- ಬೆಳ್ಳುಳ್ಳಿಯನ್ನು ಬಳಸುವುದರಿಂದ ಜ್ವರ ಬಂದಾಗ ಪ್ಲೇಟ್ ಲೇಟ್ ಗಳು ಕಡಿಮೆ ಇರುವುದನ್ನು ಹೆಚ್ಚು ಮಾಡುತ್ತದೆ.
- ಬೆಳ್ಳುಳ್ಳಿಯು ಇನ್ಸುಲಿನ್ ಬಿಡುಗಡೆ ಹೆಚ್ಚಿಸಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿ ಇರುತ್ತದೆ.
- ಹಲ್ಲು ನೋವು ಇದಲ್ಲಿ ಬೆಳ್ಳುಳ್ಳಿಯ ಸಣ್ಣ ಚೂರು ಇಡುವುದರಿಂದ ನೋವು ಕಡಿಮೆಯಾಗುತ್ತದೆ.
- ಬೆನ್ನು ನೋವಿದ್ದರೆ ಬೆಳ್ಳುಳ್ಳಿ ರಸ ಹೆಚ್ಚುವುದರಿಂದ ನೋವು ಕಡಿಮೆ ಆಗುತ್ತದೆ.
ಇದನ್ನೂ ಓದಿ
https://suddidina.com/lifestyle/bananas-health-benifits/
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
-
ದಿನದ ಸುದ್ದಿ4 days agoಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
-
ದಿನದ ಸುದ್ದಿ4 days agoವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
-
ದಿನದ ಸುದ್ದಿ2 days agoದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

