ಲೈಫ್ ಸ್ಟೈಲ್
ವೀರ್ಯಾಣು ವೃದ್ಧಿಸೋ ‘ಮಾವಿನ ಹಣ್ಣಿನ’ ಉಪಯೋಗಗಳಿಷ್ಟು..!
ಸುದ್ದಿದಿನ ಡೆಸ್ಕ್ : ಮಾವಿನ ಹಣ್ಣು, ಮಾವಿನ ಕಾಯಿ ಎಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ. ನೋಡಿದರೆ ಅಥವಾ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುತ್ತದೆ. ಅದನ್ನು ಹಾಗೆ ತಿನ್ನುವುದರ ಜೋತೆಗೆ ಅದರ ಉಪಯೋಗಗಳನ್ನು ತಿಳಿದರೆ ಇನ್ನೂ ಸವಿಯಲು ರುಚಿಯಾಗಿರುತ್ತದೆ. ಮಾವಿನಿಂದ ಯಾವ ಯಾವ ರೀತಿ ಉಪಯೋಗವಿದೆ ಸ್ವಲ್ಪ ತಿಳಿಯೋಣ.
ಉಪಯೋಗಗಳು
- ಮಾವಿನ ಕಾಯಿಯನ್ನು ತಿನ್ನುವುದರಿಂದ ಕಾಲರಾ, ಆಮಶಂಕೆ ರೋಗಗಳು ನಿರೋಧಿಸಲ್ಪಡುವುವು.
- ಮಾವಿನ ಕಾಯಿಯಲ್ಲಿ ‘ಸಿ’ ಜೀವಸತ್ವ ಸಾಕಷ್ಟು ಇರುವುದು. ಅದನ್ನು ಪ್ರತಿದಿನ ತಿನ್ನುವುದರಿಂದ ರಕ್ತಸಂಚಾರ ಉತ್ತಮಗೊಳ್ಳುತ್ತದೆ. ಹೃದಯ ದೌರ್ಬಲ್ಯ ತಗ್ಗಿ ನರಗಳ ರ್ದುಬಲತೆ ದೂರವಾಗುವುದು.
- ಉಪ್ಪಿನೊಡನೆ ಮಾವಿನಕಾಯಿಯನ್ನು ನಂಚಿಕೊಂಡು ತಿಂದರೆ ಬಾಯಾರಿಕೆ ಬಳಲಿಕೆ ಪರಿಹಾರವಾಗುತ್ತದೆ.
- ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಹೀಚು ಮಾವಿನಕಾಯಿ ತಿಂದರೆ ಮಲಬದ್ಧತೆ, ಅಜೀರ್ಣ ರೋಗಗಳಲ್ಲಿ ಗುಣಕಂಡು ಬರುವುದು.
- ಜೇನುತುಪ್ಪ ಮತ್ತು ಕಾಳು ಮೆಣಸಿನೊಂದಿಗೆ ಮಾವಿನಕಾಯಿಯನ್ನು ತಿನ್ನುವುದರಿಂದ ಅರಿಶಿನ ಕಾಮಾಲೆ ಕಾಯಿಲೆ ಸಂಭವಿಸುವ ಸಾಧ್ಯತೆ ಇರುವುದಿಲ್ಲ.
- ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿ ಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುತ್ತದೆ.
- ಮಾವಿನಕಾಯಿಯ ಸಿಪ್ಪೆಯನ್ನು ಹುರಿದು ತಿನ್ನುವುದರಿಂದ ಋತುಸ್ರಾವದಲ್ಲಿ ಗಣನೀಯ ಪ್ರಮಾಣದಲ್ಲಿ ರಕ್ತ ಹೀನತೆ ಆಗುವುದನ್ನು ತಡೆಯಬಹುದು.
- ಮಾವಿನ ಹಣ್ಣನ್ನು ಸೇವಿಸುವುದರಿಂದ ವೀರ್ಯ ವೃದ್ಧಿಯಾಗುತ್ತದೆ.
- ಶರೀರದ ಬಣ್ಣ ಉತ್ತಮಗೊಳ್ಳತ್ತದೆ.
- ಮಾವಿನ ಹಣ್ಣು ಹಿತಮಿತವಾಗಿ ತಿಂದರೆ ವಾಯುವನ್ನು ಶಮನಗೊಳಿಸುತ್ತದೆ.
- ಮಾವಿನಕಾಯಿಯನ್ನು ತಿನ್ನುವುದರಿಂದ ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಅತ್ಯಂತ ಹಿತವನ್ನುಂಟು ಮಾಡುತ್ತದೆ.
- ಮಾವಿನಕಾಯಿಯ ಸಿಪ್ಪೆಯನ್ನು ಚೆನ್ನಾಗಿ ಅರೆದು ಮಜ್ಜಿಗೆಯಲ್ಲಿ ಕದಡಿ ದಿನಕ್ಕೆ ಎರಡು ಬಾರಿ ತೆಗೆದುಕೊಂಡರೆ ಅತಿಸಾರ ಮತ್ತು ಆಮಶಂಕೆ ರೋಗಿಗಳು ನಿವಾರಣೆಯಾಗುತ್ತದೆ.
- ಬಲಿತ ಮಾವಿನ ಕಾಯಿಗಳ ಉಪ್ಪಿನ ಕಾಯಿಯನ್ನು ಮಜ್ಜಿಗೆ ಅನ್ನದ ಜೊತೆಗೆ ನಂಚಿಕೊಂಡು ತಿನ್ನುವುದರಿಂದ ಚೆನ್ನಾಗಿ ಹಸಿವು ಆಗುವುದು.
- ಆಗ ತಾನೇ ಮಾವಿನಕಾಯಿಗಳನ್ನು ಕಿತ್ತಾಗ ಅದರ ತೊಟ್ಟು ಮುರಿದರೆ ಒಂದು ರೀತಿಯ ಬಿಳಿಯ ಅಂಟುದ್ರವ ಸುರಿಯುವುದು. ಅದನ್ನು ಹೆಚ್ಚಿದರೆ ಹುಳಕಡ್ಡಿ ಮತ್ತು ಇಸುಬು ರೋಗಗಳು ದೂರವಾಗುವುದು.
- ಮಾವಿನ ಹಣ್ಣುಗಳನ್ನು ತಿನ್ನುವುದರಿಂದ ಆಹಾರ ಚೆನ್ನಾಗಿ ಜೀರ್ಣಿಸುವುದು. ಜೊತೆಗೆ ಹೃದ್ರೋಗಕ್ಕೆ ಇದು ಅತ್ಯಂತ ದಿವ್ಯ ಔಷಧಿಯಂತೆ.
- ಮಾವಿನ ಹಣ್ಣಿನ ಸೀಕರಣೆ ಮಾಡಿಕೊಂಡ ಅದಕ್ಕೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ಶ್ರವಣಶಕ್ತಿ ಅಧಿಕವಾಗುವುದು.
- ಕಣ್ಣಿನ ಆರೋಗ್ಯ ರಕ್ಷಣೆಗೆ ಬಹು ಒಳ್ಳೆಯದು.
- ಒಣಗಿದ ಜಾತಿಯ ಮಾವಿನ ಹಣ್ಣುಗಳನ್ನು ಊಟವಾದ ನಂತರ ತಿಂದರೆ ಹಸಿವು ಹೆಚ್ಚುತ್ತದೆ. ದೈಹಿಕ ಚಟುವಟಿಕೆ ಅಧಿಕವಾಗುತ್ತದೆ.
- ಮಾವಿನ ಕಾಯಿ ಅಥವಾ ಹಣ್ಣಿನಲ್ಲಿರುವ ಗ್ಲೂಟಾಮೈನ್ ಆಸಿಡ್ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
- ಮಾವಿನ ಹಣ್ಣನ್ನು ಕತ್ತರಿಸಿ ಅದರ ಚಿಕ್ಕ ತುಂಡನ್ನು ತೆಗೆದುಕೊಂಡು ಮುಖಕ್ಕೆ ಹಚ್ಚಿ ನಂತರ ಸ್ನಾನ ಮಾಡುವುದರಿಂದ ಮೊಡವೆ ಕಡಿಮೆಯಾಗುವುದು.
ಇದನ್ನೂ ಓದಿ
https://suddidina.com/lifestyle/benefits-of-indian-gossberry/
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


