ಲೈಫ್ ಸ್ಟೈಲ್
ಬೇಸಿಗೆಯಲ್ಲಿ ಉಂಟಾಗುವ ಆರೋಗ್ಯ ಪರಿಣಾಮಗಳು

ಬೇಸಿಗೆ ಬಂತೆಂದರೆ ಸಾಕು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮನೆಯ ಅಥವಾ ಆಫೀಸ್ ಹೊರಗೆ ಕಾಲಿಡಲು ಮನಸಾಗುವುದಿಲ್ಲ. ಕಾರಣ ಇಷ್ಟೆ, ದೇಹವು ತನ್ನನ್ನು ತಾನಾಗಿಯೇ ಹೊರಗಿನ ಯಾವುದೇ ದುಷ್ಪರಿಣಾಮಿ ಶಕ್ತಿಗಳಿಂದ ರಕ್ಷಿಸಿಕೊಳ್ಳಲು ಬಯಸುತ್ತದೆ. ಇದು ದೇಹದ ಸ್ವ ರಕ್ಷಣಾ ಪರಿಕರಗಳಲ್ಲಿ ಒಂದು.
ಕೆಲವೊಮ್ಮೆ ತುರ್ತು ಪರಿಸ್ಥಿತಿಗಳಲ್ಲಿ ಎಂಥಾ ಉರಿಬಿಸಿಲೂ ಎನ್ನದೇ ಆಗಬೇಕಿರುವ ಕೆಲಸಕ್ಕೆ ಒತ್ತು ನೀಡಿ ಹೊರ ಹೋಗುತ್ತೇವೆ. ಆದರೆ ನಮ್ಮ ನಾಡಿನ ಬೆನ್ನೆಲುಬು ಆಗಿರವ ರೈತರು ಅದರಲ್ಲೂ ನೀರಾವರಿ ಹೊಂದಿರುವವರು ಇದ್ಯಾವ ಬಿಸಿಲಿಗೂ ಲೆಕ್ಕಿಸದೇ ಹೊಲಗಳಲ್ಲಿ ನಿತ್ಯ ಕೆಲಸ ಮಾಡುತ್ತಾರೆ. ಅವರಿಗೆ ನಮಸ್ಕರಿಸೋಣ. ಆದರೆ, ಬಿಸಿಲಲ್ಲಿ ಹೋದರೂ ಹೋಗದಿದ್ದರೂ ದೇಹದಲ್ಲಿ ಈ ಅವಧಿಯಲ್ಲಿ ಕೆಲವೊಂದು ಆರೋಗ್ಯ ಸಮಸ್ಯೆಗಳು ಉಲ್ಬಣಿಸುತ್ತವೆ. ಅವುಗಳಿಗೆ ಸ್ವಲ್ಪ ಮುಂಜಾಗ್ರತೆ ವಹಿಸಿದರೆ ಬೇಸಿಗೆ ಮುಗಿಯುವವರೆಗೂ ಯಾವುದೇ ಸಮಸ್ಯೆಯಿಲ್ಲದೇ ಮುಂದೆ ಸಾಗಬಹುದು.
1.ನಿರ್ಜಲೀಕರಣ
ದೇಹದಲ್ಲಿನ ನೀರಿನಾಂಶ ನಮಗೆ ಗೊತ್ತಾಗುವಂತೆ ಮತ್ತು ಗೊತ್ತಾಗದೆಯೇ ಯಾವಾಗಲೂ ಹೊರಹೋಗುತ್ತಿರುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ನೀರಿನಾಂಶವನ್ನು ಬೆವರು ಮತ್ತು ಉಸಿರಾಟಗಳಲ್ಲಿ ಹೊರಹಾಕುತ್ತೇವೆ. ಕಾರಣ ಹೊರಗಿನ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹದೊಳಗಿನ ತಾಪಮಾನವೂ ಹೆಚ್ಚುತ್ತದೆ. ಆಗ ಉಂಟಾಗುವುದೇ ನಿರ್ಜಲೀಕರಣ.
- ನಿರ್ಜಲೀಕರಣದಿಂದ ಕಿಡ್ನಿಗಳಿಗೆ ಮುಖ್ಯವಾಗಿ ತೊಂದರೆಯಾಗಿ ದೇಹದೊಳಗಿನ ಕಲ್ಮಶಗಳನ್ನು ಹೊರಹಾಕಲಾಗುವುದಿಲ್ಲ.
- ಕರುಳುಗಳಲ್ಲಿ ನೀರಿನಾಂಶ ಕಡಿಮೆಯಾಗಿ ಮಲವಿಸರ್ಜನೆಗೆ ತೊಂದರೆಯಾಗುತ್ತದೆ
ತುಟಿ-ನಾಲಗೆ ಒಣಗಿ ಹೋಗುತ್ತವೆ - ಮಾಂಸಖಂಡಗಳ ಸೆಳೆತವುಂಟಾಗುತ್ತದೆ
- ಚರ್ಮ ಸುಕ್ಕುಗಟ್ಟಲು ಶುರುವಾಗಿ ಕಾಂತಿ ಕಳೆದುಕೊಳ್ಳುತ್ತದೆ
2. ಶಾಖದ ಸ್ಟ್ರೋಕ್
- ದೇಹದೊಳಗೆ ಶಾಖ ಹೆಚ್ಚಾಗಿ ಜೀವಕ್ಕೇ ಅಪಾಯ ತಂದೊಡ್ಡುವ ಪರಿಸ್ಥಿತಿಯೇ ಶಾಖದ ಸ್ಟ್ರೋಕ್.
- ಇದರ ಪರಿಣಾಮ ಗಾಬರಿಗೊಳ್ಳುವುದು, ಉಸಿರಾಟ ತೊಂದರೆ, ಕ್ಷೀಣವಾದ ನಾಡಿಮಿಡಿತದಿಂದ ಮಿದುಳಿಗೆ ರಕ್ತಸಂಚಾರ ಅಗತ್ಯವಾಗಿ ಪೂರೈಕೆಯಾಗದೇ ಪ್ರಜ್ಞಾಹೀನ ಸ್ಥಿತಿಗೆ ತಲುಪಬಹುದು.
3. ಜೀರ್ಣಾಂಗವ್ಯೂಹದ ತೊಂದರೆಗಳು
- ಪ್ರವಾಸಕ್ಕೆ ಹೋದಾಗ ಆಹಾರ ತುಂಬಾ ಹೊತ್ತು ಅತಿಯಾದ ಶಾಖಕ್ಕೆ ಒಳಗಾಗುವುದರಿಂದ ಆಹಾರ ಕೆಟ್ಟು ಹೋಗುತ್ತವೆ.
- ಹೊರಗೆ ಮಾರುಕಟ್ಟೆಗಳಲ್ಲಿ ಮಾರುವ ಆಹಾರ ಪದಾರ್ಥಗಳು ಅಥವಾ ಮನೆಯಲ್ಲೇ ತಯಾರಿಸಿಟ್ಟ ಆಹಾರ ಪದಾರ್ಥಗಳು ಹೊರಗಿನ ಬಿಸಿಲಿನ ತಾಪಮಾನಕ್ಕೆ ತಮ್ಮ ಪೌಷ್ಟಿಕತೆಯನ್ನು ಕಳೆದುಕೊಳ್ಳುತ್ತವೆ.
- ಅಂತಹ ಆಹಾರವನ್ನು ಸೇವಿಸುವುದರಿಂದ ಜೀರ್ಣಾಂಗವ್ಯೂಹದ ತೊಂದರೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ
4. ಕಣ್ಣುಗಳಿಗೆ ತೊಂದರೆ
ಸೂರ್ಯನ ಕಿರಣಗಳಲ್ಲಿ ಇರುವ ಅತಿನೇರಳೆ ಕಿರಣಗಳು ಕಣ್ಣೊಳಗಿನ ಕಾರ್ನಿಯಾ, ಲೆನ್ಸ್, ರೆಟಿನಾ, ಹೀಗೆ ಎಲ್ಲಾ ಭಾಗಗಳನ್ನೂ ಹಾನಿಯುಂಟು ಮಾಡುವ ಗುಣ ಹೊಂದಿದ್ದು, ಮುಂದೆ ಕಣ್ಣು ಕುರುಡು ಉಂಟಾಗಬಹುದು.
5. ಸನ್ ಬನ್ರ್ಸ್
ಅತಿ ಹೆಚ್ಚು ಕಾಲ ಬಿಸಿಲಲ್ಲಿ ಇರುವುದರಿಂದ ಕೆಲವೊಮ್ಮೆ ಚರ್ಮದ ಮೇಲೆ ಸೂರ್ಯನ ಕಿರಣಗಳಿಂದ ಹಾನಿಯುಂಟಾಗಬಹುದು. ಅದಕ್ಕೆ ಸನ್ ಬನ್ರ್ಸ್ ಎಂದು ಕರೆಯುತ್ತಾರೆ.
– ಹೆಚ್ಚಾಗಿ ಇದು ಸೂಕ್ಷ್ಮ ಚರ್ಮ ಮತ್ತು ಅತಿ ಬಿಳಿ ಚರ್ಮ ಹೊಂದಿರುವವರಿಗೆ ಉಂಟಾಗುತ್ತದೆ
6. ಚರ್ಮದ ಕ್ಯಾನ್ಸರ್
- ಸನ್ ಬನ್ರ್ಸ್ ಉಂಟಾಗುವುದರ ಜೊತೆಗೆ ಚರ್ಮದೊಳಗಿನ ಕಣಗಳಲ್ಲಿನ ಡಿ ಎನ್ ಎ ದಲ್ಲಿ ವ್ಯತ್ಯಾಸ ಉಂಟಾಗಿ ಚರ್ಮದ ಕ್ಯಾನ್ಸರ್ ಗೂ ಅದು ನಾಂದಿಯಾಗಬಹುದು.
ಇದು ಸಾಮಾನ್ಯವಾಗಿ 50 ವರ್ಷ ಗಳಿಗಿಂತ ಮೇಲ್ಪಟ್ಟವರಲ್ಲಿ ಕಾಣಿಸಿಕೊಳ್ಳುತ್ತದೆ.
7. ನೀರಿನಲ್ಲಿ ಮುಳುಗುವುದು
- ಸಾಮಾನ್ಯವಾಗಿ ಬೇಸಿಗೆಯಲ್ಲಿ ಬಿಸಿಲಿನ ಧಗೆಯನ್ನು ತಾಳಲಾರದೆ ಹಳ್ಳಿಗಳಲ್ಲಿ ಊರಲ್ಲಿರುವ ಕೆರೆ ಅಥವಾ ನದಿಗಳಲ್ಲಿ ಈಜುವುದಕ್ಕಾಗಲೀ ಅಥವಾ ಸ್ನಾನ ಮಾಡುವುದಕ್ಕಾಗಲೀ ಹದಿಹರೆಯದ ಮಕ್ಕಳು ಹೊಗುವುದುಂಟು. ಇನ್ನು ಪಟ್ಟಣಗಳಲ್ಲಿ ಬಂದರೆ ಈಜು ಕೊಳಗಳಿಗೆ ಹೋಗುವುದುಂಟು.
- ಆದರೆ ಆ ಸಂದರ್ಭಗಳಲ್ಲಿ ಹತೋಟಿ ನಮ್ಮ ಕೈಮೀರಿ ಹೋದರೆ ನೀರಿನ ಅವಘಡಗಳಿಂದ ಸಾವುಗಳು ಸಂಭವಿಸುವುದುಂಟು
8. ವೆಲ್ಡಿಂಗ್ನಿಂದ ಉಂಟಾಗುವ ಹಾನಿ
- ವೆಲ್ಡಿಂಗ್ ಅಥವಾ ಬೇರೆ ಯಾವುದೇ ಬೆಂಕಿಯನ್ನು ಬಳಸಿಕೊಂಡು ನಡೆಸುವ ವೃತ್ತಿಗಳನ್ನು ಮಾಡುವವರು ಕಣ್ಣು, ಚರ್ಮಕ್ಕೆ ಬೇಸಿಗೆಯ ಧಗೆಯಲ್ಲಿ ಹಾನಿ ಮಾಡಿಕೊಳ್ಳುವ ಸಾಧ್ಯತೆಗಳು ಹೆಚ್ಚಿರುತ್ತವೆ.
ಮುಂಜಾಗ್ರತಾ ಕ್ರಮಗಳು
- ಸಾಮಾನ್ಯವಾಗಿ ಯಾವ ಕಾಲಕ್ಕೂ ಅನ್ವಯವಾಗುವಂತೆ ದಿನಕ್ಕೆ 2.5 ರಿಂದ 3 ಲೀ ನೀರು ಕುಡಿಯಬೇಕಾಗಿರುತ್ತದೆ. ಆದರೆ ಬೇಸಿಗೆಯಲ್ಲಿ ನಿರ್ಜಲೀಕರಣದ ಪರಿಣಾಮ 3ಲೀ ಗೂ ಹೆಚ್ಚು ನೀರು ಕುಡಿಯುವುದು ಸೂಕ್ತ.
- ಬಿಸಿಲಲ್ಲಿ ಮಾಡಬಹುದಾದ ಕೆಲಸಗಳು ನೆರಳಲ್ಲೂ ಮಾಡಬಹುದಾದರೆ ನೆರಳಲ್ಲೇ ಮಾಡುವುದು ಸೂಕ್ತ.
- ಅತೀ ಶಾಖಕ್ಕೆ ತೆರೆದಿಟ್ಟ ಆಹಾರ ಪದಾರ್ಥಗಳನ್ನು ತಿನ್ನದಿರುವುದು ಸೂಕ್ತ.
- ಹೊರಗೆ ಹೋಗುವಾಗ ಕಣ್ಣುಗಳಿಗೆ ತಂಪು ಕನ್ನಡಕಗಳನ್ನು ಬಳಕೆ ಮಾಡುವುದು.ಅದರಲ್ಲೂ ಅತಿನೇರಳೆ ಕಿರಣಗಳು ಹಾಯದ ಕನ್ನಡಕಗಳನ್ನು ಬಳಸಿದರೆ ಉತ್ತಮ.
- ಚರ್ಮ ಹಾನಿಯನ್ನು ತಪ್ಪಿಸಲು ಸನ್ಸ್ಕ್ರೀನ್ಗಳನ್ನು ಬಳಸುವುದು.
- ದೇಹದ ತಾಪಮಾನ ಈಗಾಗಲೇ ಹೆಚ್ಚಿರುವ ಸಂದರ್ಭಗಳಲ್ಲಿ ( ಉದಾ; ಜ್ವರ, ಇತ್ಯಾದಿ) ಬಿಸಿಲಿಗೆ ಹೋಗದಿರುವುದು.
- ಪ್ರತಿದಿನ ಬೆಳಗ್ಗೆ ವ್ಯಾಯಾಮ ಅಥವಾ ಜಾಗಿಂಗ್ ಗೆ ಹೋಗುವವರು ಆದಷ್ಟು ಸೂರ್ಯ ಉದಯವಾಗುವ ಸಮಯದೊಳಗೆ P ಮನೆ ಸೇರುವುದು.
- ವೆಲ್ಡಿಂಗ್ ಕೆಲಸ ಮಾಡುವವರು ಕಣ್ಣುಗಳಿಗೆ ದೃಷ್ಟಿ ಪರದೆಗಳನ್ನು ಬಳಸುವುದು.
ವಿಡಿಯೋ ಸುದ್ದಿ ನೋಡಲು ಸುದ್ದಿದಿನ Youtube channel ಗೆ subscribe ಆಗಿ:

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ1 day ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ24 hours ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ1 day ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್