Connect with us

ಲೈಫ್ ಸ್ಟೈಲ್

ಬೇಸಿಗೆಯಲ್ಲಿ ಉಂಟಾಗುವ ಆರೋಗ್ಯ ಪರಿಣಾಮಗಳು

Published

on

ಬೇಸಿಗೆ ಬಂತೆಂದರೆ ಸಾಕು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮನೆಯ ಅಥವಾ ಆಫೀಸ್ ಹೊರಗೆ ಕಾಲಿಡಲು ಮನಸಾಗುವುದಿಲ್ಲ. ಕಾರಣ ಇಷ್ಟೆ, ದೇಹವು ತನ್ನನ್ನು ತಾನಾಗಿಯೇ ಹೊರಗಿನ ಯಾವುದೇ ದುಷ್ಪರಿಣಾಮಿ ಶಕ್ತಿಗಳಿಂದ ರಕ್ಷಿಸಿಕೊಳ್ಳಲು ಬಯಸುತ್ತದೆ. ಇದು ದೇಹದ ಸ್ವ ರಕ್ಷಣಾ ಪರಿಕರಗಳಲ್ಲಿ ಒಂದು.

ಕೆಲವೊಮ್ಮೆ ತುರ್ತು ಪರಿಸ್ಥಿತಿಗಳಲ್ಲಿ ಎಂಥಾ ಉರಿಬಿಸಿಲೂ ಎನ್ನದೇ ಆಗಬೇಕಿರುವ ಕೆಲಸಕ್ಕೆ ಒತ್ತು ನೀಡಿ ಹೊರ ಹೋಗುತ್ತೇವೆ. ಆದರೆ ನಮ್ಮ ನಾಡಿನ ಬೆನ್ನೆಲುಬು ಆಗಿರವ ರೈತರು ಅದರಲ್ಲೂ ನೀರಾವರಿ ಹೊಂದಿರುವವರು ಇದ್ಯಾವ ಬಿಸಿಲಿಗೂ ಲೆಕ್ಕಿಸದೇ ಹೊಲಗಳಲ್ಲಿ ನಿತ್ಯ ಕೆಲಸ ಮಾಡುತ್ತಾರೆ. ಅವರಿಗೆ ನಮಸ್ಕರಿಸೋಣ. ಆದರೆ, ಬಿಸಿಲಲ್ಲಿ ಹೋದರೂ ಹೋಗದಿದ್ದರೂ ದೇಹದಲ್ಲಿ ಈ ಅವಧಿಯಲ್ಲಿ ಕೆಲವೊಂದು ಆರೋಗ್ಯ ಸಮಸ್ಯೆಗಳು ಉಲ್ಬಣಿಸುತ್ತವೆ. ಅವುಗಳಿಗೆ ಸ್ವಲ್ಪ ಮುಂಜಾಗ್ರತೆ ವಹಿಸಿದರೆ ಬೇಸಿಗೆ ಮುಗಿಯುವವರೆಗೂ ಯಾವುದೇ ಸಮಸ್ಯೆಯಿಲ್ಲದೇ ಮುಂದೆ ಸಾಗಬಹುದು.

1.ನಿರ್ಜಲೀಕರಣ 

ದೇಹದಲ್ಲಿನ ನೀರಿನಾಂಶ ನಮಗೆ ಗೊತ್ತಾಗುವಂತೆ ಮತ್ತು ಗೊತ್ತಾಗದೆಯೇ ಯಾವಾಗಲೂ ಹೊರಹೋಗುತ್ತಿರುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ನೀರಿನಾಂಶವನ್ನು ಬೆವರು ಮತ್ತು ಉಸಿರಾಟಗಳಲ್ಲಿ ಹೊರಹಾಕುತ್ತೇವೆ. ಕಾರಣ ಹೊರಗಿನ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹದೊಳಗಿನ ತಾಪಮಾನವೂ ಹೆಚ್ಚುತ್ತದೆ. ಆಗ ಉಂಟಾಗುವುದೇ ನಿರ್ಜಲೀಕರಣ.

  • ನಿರ್ಜಲೀಕರಣದಿಂದ ಕಿಡ್ನಿಗಳಿಗೆ ಮುಖ್ಯವಾಗಿ ತೊಂದರೆಯಾಗಿ ದೇಹದೊಳಗಿನ ಕಲ್ಮಶಗಳನ್ನು ಹೊರಹಾಕಲಾಗುವುದಿಲ್ಲ.
  • ಕರುಳುಗಳಲ್ಲಿ ನೀರಿನಾಂಶ ಕಡಿಮೆಯಾಗಿ ಮಲವಿಸರ್ಜನೆಗೆ ತೊಂದರೆಯಾಗುತ್ತದೆ
    ತುಟಿ-ನಾಲಗೆ ಒಣಗಿ ಹೋಗುತ್ತವೆ
  • ಮಾಂಸಖಂಡಗಳ ಸೆಳೆತವುಂಟಾಗುತ್ತದೆ
  • ಚರ್ಮ ಸುಕ್ಕುಗಟ್ಟಲು ಶುರುವಾಗಿ ಕಾಂತಿ ಕಳೆದುಕೊಳ್ಳುತ್ತದೆ

2. ಶಾಖದ ಸ್ಟ್ರೋಕ್

  • ದೇಹದೊಳಗೆ ಶಾಖ ಹೆಚ್ಚಾಗಿ ಜೀವಕ್ಕೇ ಅಪಾಯ ತಂದೊಡ್ಡುವ ಪರಿಸ್ಥಿತಿಯೇ ಶಾಖದ ಸ್ಟ್ರೋಕ್.
  • ಇದರ ಪರಿಣಾಮ ಗಾಬರಿಗೊಳ್ಳುವುದು, ಉಸಿರಾಟ ತೊಂದರೆ, ಕ್ಷೀಣವಾದ ನಾಡಿಮಿಡಿತದಿಂದ ಮಿದುಳಿಗೆ ರಕ್ತಸಂಚಾರ ಅಗತ್ಯವಾಗಿ ಪೂರೈಕೆಯಾಗದೇ ಪ್ರಜ್ಞಾಹೀನ ಸ್ಥಿತಿಗೆ ತಲುಪಬಹುದು.

3. ಜೀರ್ಣಾಂಗವ್ಯೂಹದ ತೊಂದರೆಗಳು

  • ಪ್ರವಾಸಕ್ಕೆ ಹೋದಾಗ ಆಹಾರ ತುಂಬಾ ಹೊತ್ತು ಅತಿಯಾದ ಶಾಖಕ್ಕೆ ಒಳಗಾಗುವುದರಿಂದ ಆಹಾರ ಕೆಟ್ಟು ಹೋಗುತ್ತವೆ.
  • ಹೊರಗೆ ಮಾರುಕಟ್ಟೆಗಳಲ್ಲಿ ಮಾರುವ ಆಹಾರ ಪದಾರ್ಥಗಳು ಅಥವಾ ಮನೆಯಲ್ಲೇ ತಯಾರಿಸಿಟ್ಟ ಆಹಾರ ಪದಾರ್ಥಗಳು ಹೊರಗಿನ ಬಿಸಿಲಿನ ತಾಪಮಾನಕ್ಕೆ ತಮ್ಮ ಪೌಷ್ಟಿಕತೆಯನ್ನು ಕಳೆದುಕೊಳ್ಳುತ್ತವೆ.
  • ಅಂತಹ ಆಹಾರವನ್ನು ಸೇವಿಸುವುದರಿಂದ ಜೀರ್ಣಾಂಗವ್ಯೂಹದ ತೊಂದರೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ

4. ಕಣ್ಣುಗಳಿಗೆ ತೊಂದರೆ

ಸೂರ್ಯನ ಕಿರಣಗಳಲ್ಲಿ ಇರುವ ಅತಿನೇರಳೆ ಕಿರಣಗಳು ಕಣ್ಣೊಳಗಿನ ಕಾರ್ನಿಯಾ, ಲೆನ್ಸ್, ರೆಟಿನಾ, ಹೀಗೆ ಎಲ್ಲಾ ಭಾಗಗಳನ್ನೂ ಹಾನಿಯುಂಟು ಮಾಡುವ ಗುಣ ಹೊಂದಿದ್ದು, ಮುಂದೆ ಕಣ್ಣು ಕುರುಡು ಉಂಟಾಗಬಹುದು.

5. ಸನ್ ಬನ್ರ್ಸ್

ಅತಿ ಹೆಚ್ಚು ಕಾಲ ಬಿಸಿಲಲ್ಲಿ ಇರುವುದರಿಂದ ಕೆಲವೊಮ್ಮೆ ಚರ್ಮದ ಮೇಲೆ ಸೂರ್ಯನ ಕಿರಣಗಳಿಂದ ಹಾನಿಯುಂಟಾಗಬಹುದು. ಅದಕ್ಕೆ ಸನ್ ಬನ್ರ್ಸ್ ಎಂದು ಕರೆಯುತ್ತಾರೆ.
– ಹೆಚ್ಚಾಗಿ ಇದು ಸೂಕ್ಷ್ಮ ಚರ್ಮ ಮತ್ತು ಅತಿ ಬಿಳಿ ಚರ್ಮ ಹೊಂದಿರುವವರಿಗೆ ಉಂಟಾಗುತ್ತದೆ

6. ಚರ್ಮದ ಕ್ಯಾನ್ಸರ್

  • ಸನ್ ಬನ್ರ್ಸ್ ಉಂಟಾಗುವುದರ ಜೊತೆಗೆ ಚರ್ಮದೊಳಗಿನ ಕಣಗಳಲ್ಲಿನ ಡಿ ಎನ್ ಎ ದಲ್ಲಿ ವ್ಯತ್ಯಾಸ ಉಂಟಾಗಿ ಚರ್ಮದ ಕ್ಯಾನ್ಸರ್ ಗೂ ಅದು ನಾಂದಿಯಾಗಬಹುದು.
    ಇದು ಸಾಮಾನ್ಯವಾಗಿ 50 ವರ್ಷ ಗಳಿಗಿಂತ ಮೇಲ್ಪಟ್ಟವರಲ್ಲಿ ಕಾಣಿಸಿಕೊಳ್ಳುತ್ತದೆ.

7. ನೀರಿನಲ್ಲಿ ಮುಳುಗುವುದು

  • ಸಾಮಾನ್ಯವಾಗಿ ಬೇಸಿಗೆಯಲ್ಲಿ ಬಿಸಿಲಿನ ಧಗೆಯನ್ನು ತಾಳಲಾರದೆ ಹಳ್ಳಿಗಳಲ್ಲಿ ಊರಲ್ಲಿರುವ ಕೆರೆ ಅಥವಾ ನದಿಗಳಲ್ಲಿ ಈಜುವುದಕ್ಕಾಗಲೀ ಅಥವಾ ಸ್ನಾನ ಮಾಡುವುದಕ್ಕಾಗಲೀ ಹದಿಹರೆಯದ ಮಕ್ಕಳು ಹೊಗುವುದುಂಟು. ಇನ್ನು ಪಟ್ಟಣಗಳಲ್ಲಿ ಬಂದರೆ ಈಜು ಕೊಳಗಳಿಗೆ ಹೋಗುವುದುಂಟು.
  • ಆದರೆ ಆ ಸಂದರ್ಭಗಳಲ್ಲಿ ಹತೋಟಿ ನಮ್ಮ ಕೈಮೀರಿ ಹೋದರೆ ನೀರಿನ ಅವಘಡಗಳಿಂದ ಸಾವುಗಳು ಸಂಭವಿಸುವುದುಂಟು

8. ವೆಲ್ಡಿಂಗ್‍ನಿಂದ ಉಂಟಾಗುವ ಹಾನಿ

  • ವೆಲ್ಡಿಂಗ್ ಅಥವಾ ಬೇರೆ ಯಾವುದೇ ಬೆಂಕಿಯನ್ನು ಬಳಸಿಕೊಂಡು ನಡೆಸುವ ವೃತ್ತಿಗಳನ್ನು ಮಾಡುವವರು ಕಣ್ಣು, ಚರ್ಮಕ್ಕೆ ಬೇಸಿಗೆಯ ಧಗೆಯಲ್ಲಿ ಹಾನಿ ಮಾಡಿಕೊಳ್ಳುವ ಸಾಧ್ಯತೆಗಳು ಹೆಚ್ಚಿರುತ್ತವೆ.

ಮುಂಜಾಗ್ರತಾ ಕ್ರಮಗಳು

  • ಸಾಮಾನ್ಯವಾಗಿ ಯಾವ ಕಾಲಕ್ಕೂ ಅನ್ವಯವಾಗುವಂತೆ ದಿನಕ್ಕೆ 2.5 ರಿಂದ 3 ಲೀ ನೀರು ಕುಡಿಯಬೇಕಾಗಿರುತ್ತದೆ. ಆದರೆ ಬೇಸಿಗೆಯಲ್ಲಿ ನಿರ್ಜಲೀಕರಣದ ಪರಿಣಾಮ 3ಲೀ ಗೂ ಹೆಚ್ಚು ನೀರು ಕುಡಿಯುವುದು ಸೂಕ್ತ.
  • ಬಿಸಿಲಲ್ಲಿ ಮಾಡಬಹುದಾದ ಕೆಲಸಗಳು ನೆರಳಲ್ಲೂ ಮಾಡಬಹುದಾದರೆ ನೆರಳಲ್ಲೇ ಮಾಡುವುದು ಸೂಕ್ತ.
  • ಅತೀ ಶಾಖಕ್ಕೆ ತೆರೆದಿಟ್ಟ ಆಹಾರ ಪದಾರ್ಥಗಳನ್ನು ತಿನ್ನದಿರುವುದು ಸೂಕ್ತ.
  • ಹೊರಗೆ ಹೋಗುವಾಗ ಕಣ್ಣುಗಳಿಗೆ ತಂಪು ಕನ್ನಡಕಗಳನ್ನು ಬಳಕೆ ಮಾಡುವುದು.ಅದರಲ್ಲೂ ಅತಿನೇರಳೆ ಕಿರಣಗಳು ಹಾಯದ ಕನ್ನಡಕಗಳನ್ನು ಬಳಸಿದರೆ ಉತ್ತಮ.
  • ಚರ್ಮ ಹಾನಿಯನ್ನು ತಪ್ಪಿಸಲು ಸನ್‍ಸ್ಕ್ರೀನ್‍ಗಳನ್ನು ಬಳಸುವುದು.
  • ದೇಹದ ತಾಪಮಾನ ಈಗಾಗಲೇ ಹೆಚ್ಚಿರುವ ಸಂದರ್ಭಗಳಲ್ಲಿ ( ಉದಾ; ಜ್ವರ, ಇತ್ಯಾದಿ) ಬಿಸಿಲಿಗೆ ಹೋಗದಿರುವುದು.
  • ಪ್ರತಿದಿನ ಬೆಳಗ್ಗೆ ವ್ಯಾಯಾಮ ಅಥವಾ ಜಾಗಿಂಗ್ ಗೆ ಹೋಗುವವರು ಆದಷ್ಟು ಸೂರ್ಯ ಉದಯವಾಗುವ ಸಮಯದೊಳಗೆ P ಮನೆ ಸೇರುವುದು.
  • ವೆಲ್ಡಿಂಗ್ ಕೆಲಸ ಮಾಡುವವರು ಕಣ್ಣುಗಳಿಗೆ ದೃಷ್ಟಿ ಪರದೆಗಳನ್ನು ಬಳಸುವುದು.

 

ವಿಡಿಯೋ ಸುದ್ದಿ ನೋಡಲು ಸುದ್ದಿದಿನ Youtube channel ಗೆ subscribe ಆಗಿ:

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!

Published

on

ರೋಗ್ಯಕರ ಆಹಾರ ಮತ್ತು ನೈಸರ್ಗಿಕ ಚಿಕಿತ್ಸೆಯಲ್ಲಿ ತೆಂಗಿನ ಎಣ್ಣೆಯು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆರೋಗ್ಯದ ದೃಷ್ಟಿಯಿಂದ ತೆಂಗಿನ ಎಣ್ಣೆಗಳಲ್ಲಿ ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ಅತಿ ಉತ್ತಮ. ಇದನ್ನು ಕೊಬ್ಬರಿ (ಒಣಗಿದ ತೆಂಗಿನಕಾಯಿ) ಯಿಂದ ಮಾಡಲಾಗುತ್ತದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ದೈನಂದಿನ ಜೀವನದಲ್ಲಿ ತೆಂಗಿನ ಎಣ್ಣೆ ಉಪಯೋಗಿಸಿ ಅದರ ಪ್ರಯೋಜನಗಳನ್ನು ಪಡೆಯಿರಿ :

ತೆಂಗಿನೆಣ್ಣೆಯಲ್ಲಿ ಲಾರಿಕ್ ಆಮ್ಲದಂಶವನ್ನು ಹೊಂದಿರುತ್ತದೆ. ತೆಂಗಿನೆಣ್ಣೆಯ ಬಳಕೆಯಿಂದ ಶಕ್ತಿ ದೊರಕುತ್ತದೆ ಮತ್ತು ತೂಕ ನಿರ್ವಹಣೆಯಲೂ ಸಹಾಯಮಾಡುತ್ತದೆ.

ಹೃದಯದ ಆರೋಗ್ಯ: ತೆಂಗಿನ ಎಣ್ಣೆಯನ್ನು ಸೇವಿಸುವುದರಿಂದ HDL (ಉತ್ತಮ) ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವ ಮೂಲಕ ಲಿಪಿಡ್ ಆರೋಗ್ಯವನ್ನು ಸುಧಾರಿಸಬಹುದು ಎಂದು ಕೆಲವು ಅಧ್ಯಯನಗಳು ಸಾಬೀತುಪಡಿಸಿದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀರ್ಣಕಾರಿ ಆರೋಗ್ಯ: ತೆಂಗಿನ ಎಣ್ಣೆಯು ಕೊಬ್ಬು-ಕರಗಬಲ್ಲ ಜೀವಸತ್ವಗಳು ಮತ್ತು ಖನಿಜಗಳ ಹೀರಿಕೊಳ್ಳುವಿಕೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಇರಿಟಬಲ್ ಬೋವೆಲ್ ಸಿಂಡ್ರೋಮ್ (IBS) ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉರಿಯೂತದ ಗುಣಲಕ್ಷಣಗಳು: ತೆಂಗಿನ ಎಣ್ಣೆಯು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮ ಮತ್ತು ಕೂದಲ ರಕ್ಷಣೆ: ತೆಂಗಿನೆಣ್ಣೆ ತಿನ್ನುವುದರಿಂದ ಆರೋಗ್ಯಕರ ಚರ್ಮ ಮತ್ತು ಕೂದಲನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಅಗತ್ಯವಾದ ಪೋಷಕಾಂಶಗಳು ಮತ್ತು ತೇವಾಂಶವನ್ನು ಒದಗಿಸುತ್ತದೆ. ತೆಂಗಿನ ಎಣ್ಣೆಯು ನಿಮ್ಮ ಕೂದಲಿಗೆ ಆಳವಾಗಿ ತೂರಿಕೊಂಡು, ಒಳಗಿನಿಂದ ಅವುಗಳನ್ನು ಪೋಷಿಸುತ್ತದೆ ಮತ್ತು ಆರೋಗ್ಯವನ್ನು ಹೊರಸೂಸುವ ನೈಸರ್ಗಿಕ ಹೊಳಪನ್ನು ನೀಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆಯ ಪೋಷಕಾಂಶಗಳು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಅದೇ ಸಮಯದಲ್ಲಿ ಕೂದಲು ಒಡೆಯುವಿಕೆ ಮತ್ತು ವಿಭಜಿತ ತುದಿಗಳನ್ನು ತಡೆಯುತ್ತದೆ.

ರೋಗನಿರೋಧಕ ಬೆಂಬಲ: ತೆಂಗಿನೆಣ್ಣೆಯು ಲಾರಿಕ್ ಆಮ್ಲ ಮತ್ತು ಕ್ಯಾಪ್ರಿಲಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ರೋಗನಿರೋಧಕ-ಉತ್ತೇಜಿಸುವ ಗುಣಲಕ್ಷಣಗಳನ್ನು ಹೊಂದಿದೆ ಮತ್ತು ದೇಹವು ಸೋಂಕುಗಳಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.

ತೂಕ ನಿರ್ವಹಣೆ: ತೆಂಗಿನ ಎಣ್ಣೆಯು ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಸಮತೋಲಿತ ಆಹಾರದಲ್ಲಿ ಬಳಸಿದಾಗ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.

ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು: ತೆಂಗಿನಕಾಯಿಯಲ್ಲಿ ಲಾರಿಕ್ ಆಮ್ಲವಿದೆ ಆದ್ದರಿಂದ ಇದು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು ಅದು ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಶಿಲೀಂಧ್ರಗಳಿಂದ ಉಂಟಾಗುವ ಸೋಂಕನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ನಿಮ್ಮ ಅಡಿಗೆ ಮನೆಯ ಸಂಗಾತಿಯಾಗಲಿ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು

Published

on

  • ರುದ್ರಪ್ಪ ಹನಗವಾಡಿ

ದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು.

ನಾನು ಎಂ.ಎ. ಓದುವಾಗ ನನಗೆ ಪ್ರಾಧ್ಯಾಪಕರಾಗಿದ್ದ ಡಾ. ಬಿ.ಎಸ್. ಶ್ರೀಕಂಠಾರಾಧ್ಯರು ಇಲಾಖೆಗೆ ಮುಖ್ಯಸ್ಥರಾಗಿ ಬಂದಿದ್ದರು. ನನ್ನ ಬಗ್ಗೆ ನಮ್ಮ ವಿಭಾಗದಲ್ಲಿ ಮತ್ತು ಮೈಸೂರಿನ ಗಂಗೋತ್ರಿ ವಿಭಾಗದಲ್ಲಿ ನಾನು ಮದುವೆಯಾಗಿರುವ ಬಗ್ಗೆ ಅಸಮಾಧಾನವಿತ್ತು. ಅದನ್ನೆಲ್ಲ ತಲೆಯಲ್ಲಿ ತುಂಬಿಕೊಂಡು ಬಂದಿದ್ದ ಬಿಎಸ್‌ಎಸ್ ಗುರುಗಳು ಕೂಡ ನನ್ನ ಬಗ್ಗೆ ಅಸಮಾಧಾನಗೊಂಡವರಂತೆ ತೋರುತ್ತಿದ್ದರು.

ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶ್ರೀಕಂಠಾರಾಧ್ಯರು ಅಧ್ಯಾಪಕರೆಲ್ಲರಿಗೂ ತೆಗೆದುಕೊಳ್ಳುವ ತರಗತಿಗಳ ವೇಳಾಪಟ್ಟಿ ತಯಾರಿಸಿಕೊಟ್ಟಿದ್ದರು. ನನಗೆ ಆಶ್ಚರ್ಯವಾಗುವಂತೆ ನನಗೆ ಯಾವುದೇ ಸಾಮಾನ್ಯ ತರಗತಿಗೆ ಪಾಠ ಮಾಡುವ ಅವಕಾಶವಿರದಂತೆ ತರಗತಿಗಳನ್ನು ಹಂಚಿಕೆ ಮಾಡಿದ್ದರು. ಐಚ್ಛಿಕವಾಗಿದ್ದ ಎರಡು ವಿಷಯಗಳಾದ ಪ್ರಾದೇಶಿಕ ಅರ್ಥಶಾಸ್ತ್ರ ಮತ್ತು ಕೃಷಿ ಅರ್ಥಶಾಸ್ತ್ರಗಳನ್ನು ಹಂಚಿಕೆ ಮಾಡಿ ಮುಗಿಸಿದ್ದರು. ನನಗೆ ವಿದ್ಯಾ ಗುರುಗಳು ಹೆಚ್ಚು ಸಲಿಗೆ ಇಲ್ಲದೆ ಇದ್ದ ಅವರೊಡನೆ ಇದು ಸರಿ ಇಲ್ಲ. ಇದನ್ನು ಸರಿಯಾಗಿ ಹಂಚಿಕೆಯಾಗಬೇಕೆಂದು ನನ್ನ ಅಸಮಾಧಾನ ತೋರಿ ಅವರ ಟೇಬಲ್ ಮೇಲೆ ತಾತ್ಸಾರದಿಂದಲೇ ಆದೇಶದ ಪ್ರತಿಯನ್ನು ಬಿಟ್ಟು ಬಂದಿದ್ದೆ. ಅತ್ಯಂತ ಮಿತಭಾಷಿ, ಸರಳ ಮತ್ತು ಆಳ ಅಧ್ಯಯನದಿಂದ ಗಳಿಸಿದ ಗಂಭೀರತೆಯಲ್ಲಿದ್ದ ಅವರಿಗೆೆ ನನ್ನ ಬಗ್ಗೆ, ನಾನು ಮದುವೆಯಾದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಕಟ್ಟಿ ಅವರಿಗೆ ಹೇಳಿ ನನಗೆ ಈ ರೀತಿಯ ಅನಾದರಣೆ ತೋರಿಸುವಂತೆ ನಮ್ಮವರೇ ಆಗಿದ್ದ ಕೆಲವು ಅಧ್ಯಾಪಕರು ಹೊಸಬರಾಗಿ ಬಂದಿದ್ದ ಇವರಿಗೆ ಹೇಳಿದ್ದರು.

ಆರಾಧ್ಯರೂ ಕೂಡ ಮೈಸೂರಿನ ಗಂಗೋತ್ರಿಯಲ್ಲಿ ಪಾಠ ಮಾಡುತ್ತಿದ್ದವರು, ಅಲ್ಲಿಯೇ ಪ್ರಾಧ್ಯಾಪಕರಾಗಬೇಕಾಗಿದ್ದವರನ್ನು ಬಿಆರ್‌ಪಿಗೆ ಒಬ್ಬ ಹಿರಿಯ ಪ್ರಾಧ್ಯಾಪಕರು ಬೇಕೆಂಬ ನೆಪವೊಡ್ಡಿ ಅವರನ್ನು ವರ್ಗಾವಣೆ ಮಾಡಿ ಇಲ್ಲಿಗೆ ಕಳಿಸಿದ್ದರು. ಇಲ್ಲಿಗೆ ಬರುವ ಬಗ್ಗೆ ಮನಸ್ಸಿಲ್ಲದ ಕಾರಣ ಅಸಮಾಧಾನವೂ ಅವರಲ್ಲಿ ಮನೆಮಾಡಿತ್ತು. ಬಂದಾಕ್ಷಣ ಇಲ್ಲಿನವರ ಚಾಡಿ ಮಾತು ಕೇಳಿ ನನ್ನ ಬಗ್ಗೆ ಈ ರೀತಿ ನಡೆದುಕೊಂಡಿದ್ದರು. ಆ ನಂತರ ಎಲ್ಲರೂ ಚರ್ಚಿಸಿ ಸಮಾನ ವಿಷಯಗಳ ಮತ್ತು ತರಗತಿಗಳನ್ನು ಹಂಚಿಕೆ ಮಾಡಿಕೊಂಡು ಎಂದಿನಂತೆ ತರಗತಿಗಳು ನಡೆಯಲಾರಂಭಿಸಿದವು. ಪ್ರಾರಂಭದಲ್ಲಿ ಆಗಿದ್ದ ನನ್ನ ಮತ್ತು ನನ್ನ ಗುರುಗಳಾಗಿದ್ದ ಶ್ರೀಕಂಠಾರಾಧ್ಯರ ನಡುವೆ ನಡೆದ ಸಣ್ಣ ಅಸಮಾಧಾನ ಕರಗಿ ಎಂದಿನ ಲವಲವಿಕೆಯಿಂದ ವಿಭಾಗದಲ್ಲಿ ಚಟುವಟಿಕೆಗಳು ಪ್ರಾರಂಭವಾದವು. ( ಸುದ್ದಿದಿನ.ಕಾಂ|ವಾಟ್ಸಾಪ್|9980346243)

Continue Reading

ದಿನದ ಸುದ್ದಿ

ಮಕ್ಕಳಿಗೆ ದೈನಂದಿನ ಆಹಾರದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಸಲಹೆ

Published

on

ಸುದ್ದಿದಿನ,ಕುಂದಾಪುರ: ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ತಾಯಂದಿರಿಗೆ ಡಾ. ಐ .ಪಿ ಗಡಾದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಉಡುಪಿ ಜಿಲ್ಲೆ ಇವರು ತಮ್ಮ ಉದ್ಘಾಟನಾ ನುಡಿಗಳಿಂದ ಮನವಿ ಮಾಡಿದರು.

ನಮ್ಮ ಪಿ.ಜಿ.ಡಿ.ಎಚ್.ಪಿ.ಇ 7ನೇ ತಂಡದ ಪ್ರಶಿಕ್ಷಣಾರ್ಥಿ ಶ್ರೀಮತಿ ವೃಂದಾ.ಬಿ.ತಾಮಸೆ ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಅಪೌಷ್ಟಿಕತೆಯ ಕುರಿತು ಸಂಶೋಧನಾತ್ಮಕ ಅಧ್ಯಯನವನ್ನು ಮಾಡಿ ಗ್ರಾಮದ ಎಲ್ಲಾ ಮಕ್ಕಳು ಮತ್ತು ತಾಯಂದಿರನ್ನು ಬೃಹತ್ ಮಹಾ ಮೇಳದ ಮೂಲಕ ಈ ಸಭಾಂಗಣದ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ರೋಟರಿ ಕ್ಲಬ್ ಸ್ಥಳೀಯ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಕ್ಷಣ ಇಲಾಖೆ ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಇವರೆಲ್ಲರಿಗೂ ತಮ್ಮ ಧನ್ಯವಾದಗಳನ್ನು ಡಾ. ಮಂಜುನಾಥ್ ಜೆ .ಎ .ಉಪನ್ಯಾಸಕರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶುಭ ಹಾರೈಸಿದರು.

ಮಳೆಗಾಲದಲ್ಲಿ ಮನೆಯ ಅಕ್ಕಪಕ್ಕದಲ್ಲಿ ನೀರು ನಿಲ್ಲುವುದು ಸಹಜ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಮಲೇರಿಯದಂತಹ ಕಾಯಿಲೆಗಳು ಬರುತ್ತವೆ ಹಾಗಾಗಿ ಮಳೆಯ ನೀರು ನಿಲ್ಲದಂತೆ ಹರಿದು ಹೋಗುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ತಿಳಿಸುತ್ತಾ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ನ ಉಪಾಧ್ಯಕ್ಷರು ಶುಭ ಕೋರಿದರು.

ಅಂಗನವಾಡಿಗಳ ಮೂಲಕ ಅಪೌಷ್ಟಿಕ ಮಕ್ಕಳ ದತ್ತು ಪಡೆಯುವ ಯೋಜನೆಯನ್ನು ಅಗತ್ಯತೆ ಇರುವ ಕುಟುಂಬಗಳು ಪಡೆದುಕೊಳ್ಳಬೇಕು ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಷ್ಟ್ರಧ್ವಜದ ತ್ರಿವರಣವುಳ್ಳ ಹಣ್ಣು ಹಂಪಲು ತರಕಾರಿ ಸೊಪ್ಪು ಬೇಳೆ ಕಾಳುಗಳು ಹಾಲು ಮೊಟ್ಟೆ ಮೀನು ಮಾಂಸ ಹೀಗೆ ಸಮತೋಲನ ಆಹಾರವನ್ನು ರೂಡಿಸಿಕೊಳ್ಳುವಂತೆ ಕುಂದಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಉಮೇಶ್ ಟಿ ಎಂ ಕರೆ ನೀಡಿದರು.

ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಡ್ರೈಡೇ ಕಾರ್ಯಕ್ರಮ ಪ್ರಾರಂಭವಾಗಿದ್ದು ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ತುಂಬಿಟ್ಟುಕೊಳ್ಳುವ ಪರಿಕರಗಳನ್ನು ಸಂಪೂರ್ಣ ಖಾಲಿ ಮಾಡಿ ಹೊಸದಾಗಿ ನೀರನ್ನು ತುಂಬಿಸಿಕೊಳ್ಳಬೇಕೆಂದು ಉಡುಪಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಶಶಿಧರ್ ಅವರು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸ್ಥಳೀಯ ಸರ್ಕಾರೇತರ ಸಂಸ್ಥೆ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀ ಸತೀಶ್ ಎಂ ನಾಯಕ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಆರೋಗ್ಯ ಇಲಾಖೆ ಆಯೋಜಿಸುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ದೇಶಾದ್ಯಂತ ಸಹಕಾರ ನೀಡುತ್ತಿದೆ ಇದೇ ರೀತಿಯಾಗಿ ನಾವು ಸಹ ಮಕ್ಕಳು ಮತ್ತು ತಾಯಂದಿರಿಗೆ ಲಘುಉಪಹಾರ ವ್ಯವಸ್ಥೆ ಮಾಡಿದ್ದೇವೆ ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮ ಸಹಕಾರ ನೀಡುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಕ್ಕಳ ದೈಹಿಕ ಬೆಳವಣಿಗೆಗಾಗಿ ಅಪೌಷ್ಟಿಕತೆ ಪ್ರಮಾಣ ತಿಳಿಯಲು ಮೌಲ್ಯಮಾಪನ ಮಾಡಬೇಕಾಗುತ್ತದೆ ತೋಳಿನ ಮಧ್ಯಭಾಗದ ಸುತ್ತಳತೆ 11.5 cm ಗಿಂತ ಕಡಿಮೆ ಇರುವ ಮಕ್ಕಳನ್ನು ಅಪೌಷ್ಟಿಕ ಮಕ್ಕಳೆಂದು ಗುರುತಿಸಿ ಅವರಿಗೆ ಹೆಚ್ಚಿನ ಪೌಷ್ಟಿಕ ಆಹಾರ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಅವಶ್ಯಕತೆ ಇದೆ. ಅಪೌಷ್ಟಿಕತೆಯು ದೇಹದ ಪ್ರಮುಖ ಅಂಗಗಳ ಕಾರ್ಯಕ್ಕೆ ಹಾನಿ ಉಂಟುಮಾಡುತ್ತದೆ ಹಾಗೂ ಪೌಷ್ಟಿಕಾಂಶದ ಕೊರತೆಯಿಂದ ಉಂಟಾಗುವ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಹಾಗಾಗಿ ಪೌಷ್ಟಿಕ ಸಮತೋಲಿತ ಆಹಾರವನ್ನು ಉಪಯೋಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳುತ್ತಾ ನಮ್ಮ ಜಿಲ್ಲೆಯ ತಾಯಂದಿರಿಗೆ ಆರೋಗ್ಯಕ್ಕೆ ಸಂಬAಧಪಟ್ಟ ಹಾಗೆ ಜ್ಞಾನ ಹೆಚ್ಚಿದ್ದು, ಆದರೆ ಕಾರ್ಯರೂಪಕ್ಕೆ ತರುವಲ್ಲಿ ದೊಡ್ಡ ಪ್ರಮಾಣದ ಯಶಸ್ಸು ಇನ್ನೂ ಆಗಿಲ್ಲ ಅದಕ್ಕಾಗಿ ನಾವೆಲ್ಲರೂ ಅಪೌಷ್ಟಿಕತೆ ವಿರುದ್ಧ ಹೋರಾಡಲು ಇಲ್ಲಿ ಪ್ರಾತ್ಯಕ್ಷಿತೆಯ ಮೂಲಕ ತೋರಿಸಲಾಗಿರುವ ಆಹಾರಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳುವುದರೊಂದಿಗೆ ಕಾರ್ಯರೂಪಕ್ಕೆ ತರೋಣ ಎಂದು ತಮ್ಮ ಅಮೂಲ್ಯವಾದ ಮಾಹಿತಿಯಲ್ಲಿ ತಿಳಿಸುತ್ತಾ 0-19 ವರ್ಷದ ಒಳಗಿನ ಮಕ್ಕಳಿಗಾಗಿ ಸರ್ಕಾರದಿಂದ ಜಾರಿ ಇರುವ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಡಾ. ಪ್ರೇಮಾನಂದ.ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಮಕ್ಕಳ ಪಡೆಯುವವರ ಸಂಖ್ಯೆ ಅಧಿಕವಾಗಿದ್ದು ಈ ಮಕ್ಕಳ ಪಾಲನೆ ಪೋಷಣೆಗೆ ಎಲ್ಲಾ ಇಲಾಖೆಯವರು ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಮಕ್ಕಳಿಗೆ ಮಾತ್ರ ಪೌಷ್ಟಿಕ ಆಹಾರವನ್ನು ನೀಡುವುದಲ್ಲದೆ ತಾಯಂದಿರು ಕೂಡ ಸಮತೋಲಿತ ಪೌಷ್ಟಿಕ ಆಹಾರವನ್ನು ಗರ್ಭಿಣಿ ಅವಧಿಯಲ್ಲಿಯೇ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ನಾಗರತ್ನ ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟೇಶ್ವರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಆರ್ ಶೇಟ್, ಜಿಲ್ಲಾ ಆರ್ ಸಿ.ಎಚ್ ಅಧಿಕಾರಿಗಳು ಡಾ.ಜೋತ್ನಾ ಸ್ಥಳೀಯ ಗ್ರಾಮ ಪಂಚಾಯತ್‌ನ ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯಕ್, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ತಾಯಂದಿರು, ಮಕ್ಕಳು ಉಪಸ್ಥಿತರಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆಭಾಕಾರ್ಡ್ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಮಾಡಲಾಯಿತು.

ಶ್ರೀಮತಿ ವೃಂದಾ.ಬಿ.ತಾಮಸೆ ಪ್ರಶಿಕ್ಷಣಾರ್ಥಿ ಪಿ.ಪಿ.ಜಿ.ಡಿ.ಎಚ್.ಪಿ.ಇ ವಿಭಾಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಸ್ವಾಗತಿಸಿದರು. ಶ್ರೀಮತಿ ಭಾಗ್ಯಲಕ್ಷ್ಮಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕುಂದಾಪುರ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದ ಅರ್ಪಿಸಿದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ8 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ9 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ9 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ9 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ9 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ11 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ11 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ24 hours ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ24 hours ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending