Connect with us

ದಿನದ ಸುದ್ದಿ

ಮಕ್ಕಳಿಗೆ ದೈನಂದಿನ ಆಹಾರದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಸಲಹೆ

Published

on

ಸುದ್ದಿದಿನ,ಕುಂದಾಪುರ: ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ತಾಯಂದಿರಿಗೆ ಡಾ. ಐ .ಪಿ ಗಡಾದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಉಡುಪಿ ಜಿಲ್ಲೆ ಇವರು ತಮ್ಮ ಉದ್ಘಾಟನಾ ನುಡಿಗಳಿಂದ ಮನವಿ ಮಾಡಿದರು.

ನಮ್ಮ ಪಿ.ಜಿ.ಡಿ.ಎಚ್.ಪಿ.ಇ 7ನೇ ತಂಡದ ಪ್ರಶಿಕ್ಷಣಾರ್ಥಿ ಶ್ರೀಮತಿ ವೃಂದಾ.ಬಿ.ತಾಮಸೆ ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಅಪೌಷ್ಟಿಕತೆಯ ಕುರಿತು ಸಂಶೋಧನಾತ್ಮಕ ಅಧ್ಯಯನವನ್ನು ಮಾಡಿ ಗ್ರಾಮದ ಎಲ್ಲಾ ಮಕ್ಕಳು ಮತ್ತು ತಾಯಂದಿರನ್ನು ಬೃಹತ್ ಮಹಾ ಮೇಳದ ಮೂಲಕ ಈ ಸಭಾಂಗಣದ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ರೋಟರಿ ಕ್ಲಬ್ ಸ್ಥಳೀಯ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಕ್ಷಣ ಇಲಾಖೆ ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಇವರೆಲ್ಲರಿಗೂ ತಮ್ಮ ಧನ್ಯವಾದಗಳನ್ನು ಡಾ. ಮಂಜುನಾಥ್ ಜೆ .ಎ .ಉಪನ್ಯಾಸಕರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶುಭ ಹಾರೈಸಿದರು.

ಮಳೆಗಾಲದಲ್ಲಿ ಮನೆಯ ಅಕ್ಕಪಕ್ಕದಲ್ಲಿ ನೀರು ನಿಲ್ಲುವುದು ಸಹಜ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಮಲೇರಿಯದಂತಹ ಕಾಯಿಲೆಗಳು ಬರುತ್ತವೆ ಹಾಗಾಗಿ ಮಳೆಯ ನೀರು ನಿಲ್ಲದಂತೆ ಹರಿದು ಹೋಗುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ತಿಳಿಸುತ್ತಾ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ನ ಉಪಾಧ್ಯಕ್ಷರು ಶುಭ ಕೋರಿದರು.

ಅಂಗನವಾಡಿಗಳ ಮೂಲಕ ಅಪೌಷ್ಟಿಕ ಮಕ್ಕಳ ದತ್ತು ಪಡೆಯುವ ಯೋಜನೆಯನ್ನು ಅಗತ್ಯತೆ ಇರುವ ಕುಟುಂಬಗಳು ಪಡೆದುಕೊಳ್ಳಬೇಕು ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಷ್ಟ್ರಧ್ವಜದ ತ್ರಿವರಣವುಳ್ಳ ಹಣ್ಣು ಹಂಪಲು ತರಕಾರಿ ಸೊಪ್ಪು ಬೇಳೆ ಕಾಳುಗಳು ಹಾಲು ಮೊಟ್ಟೆ ಮೀನು ಮಾಂಸ ಹೀಗೆ ಸಮತೋಲನ ಆಹಾರವನ್ನು ರೂಡಿಸಿಕೊಳ್ಳುವಂತೆ ಕುಂದಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಉಮೇಶ್ ಟಿ ಎಂ ಕರೆ ನೀಡಿದರು.

ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಡ್ರೈಡೇ ಕಾರ್ಯಕ್ರಮ ಪ್ರಾರಂಭವಾಗಿದ್ದು ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ತುಂಬಿಟ್ಟುಕೊಳ್ಳುವ ಪರಿಕರಗಳನ್ನು ಸಂಪೂರ್ಣ ಖಾಲಿ ಮಾಡಿ ಹೊಸದಾಗಿ ನೀರನ್ನು ತುಂಬಿಸಿಕೊಳ್ಳಬೇಕೆಂದು ಉಡುಪಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಶಶಿಧರ್ ಅವರು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸ್ಥಳೀಯ ಸರ್ಕಾರೇತರ ಸಂಸ್ಥೆ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀ ಸತೀಶ್ ಎಂ ನಾಯಕ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಆರೋಗ್ಯ ಇಲಾಖೆ ಆಯೋಜಿಸುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ದೇಶಾದ್ಯಂತ ಸಹಕಾರ ನೀಡುತ್ತಿದೆ ಇದೇ ರೀತಿಯಾಗಿ ನಾವು ಸಹ ಮಕ್ಕಳು ಮತ್ತು ತಾಯಂದಿರಿಗೆ ಲಘುಉಪಹಾರ ವ್ಯವಸ್ಥೆ ಮಾಡಿದ್ದೇವೆ ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮ ಸಹಕಾರ ನೀಡುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಕ್ಕಳ ದೈಹಿಕ ಬೆಳವಣಿಗೆಗಾಗಿ ಅಪೌಷ್ಟಿಕತೆ ಪ್ರಮಾಣ ತಿಳಿಯಲು ಮೌಲ್ಯಮಾಪನ ಮಾಡಬೇಕಾಗುತ್ತದೆ ತೋಳಿನ ಮಧ್ಯಭಾಗದ ಸುತ್ತಳತೆ 11.5 cm ಗಿಂತ ಕಡಿಮೆ ಇರುವ ಮಕ್ಕಳನ್ನು ಅಪೌಷ್ಟಿಕ ಮಕ್ಕಳೆಂದು ಗುರುತಿಸಿ ಅವರಿಗೆ ಹೆಚ್ಚಿನ ಪೌಷ್ಟಿಕ ಆಹಾರ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಅವಶ್ಯಕತೆ ಇದೆ. ಅಪೌಷ್ಟಿಕತೆಯು ದೇಹದ ಪ್ರಮುಖ ಅಂಗಗಳ ಕಾರ್ಯಕ್ಕೆ ಹಾನಿ ಉಂಟುಮಾಡುತ್ತದೆ ಹಾಗೂ ಪೌಷ್ಟಿಕಾಂಶದ ಕೊರತೆಯಿಂದ ಉಂಟಾಗುವ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಹಾಗಾಗಿ ಪೌಷ್ಟಿಕ ಸಮತೋಲಿತ ಆಹಾರವನ್ನು ಉಪಯೋಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳುತ್ತಾ ನಮ್ಮ ಜಿಲ್ಲೆಯ ತಾಯಂದಿರಿಗೆ ಆರೋಗ್ಯಕ್ಕೆ ಸಂಬAಧಪಟ್ಟ ಹಾಗೆ ಜ್ಞಾನ ಹೆಚ್ಚಿದ್ದು, ಆದರೆ ಕಾರ್ಯರೂಪಕ್ಕೆ ತರುವಲ್ಲಿ ದೊಡ್ಡ ಪ್ರಮಾಣದ ಯಶಸ್ಸು ಇನ್ನೂ ಆಗಿಲ್ಲ ಅದಕ್ಕಾಗಿ ನಾವೆಲ್ಲರೂ ಅಪೌಷ್ಟಿಕತೆ ವಿರುದ್ಧ ಹೋರಾಡಲು ಇಲ್ಲಿ ಪ್ರಾತ್ಯಕ್ಷಿತೆಯ ಮೂಲಕ ತೋರಿಸಲಾಗಿರುವ ಆಹಾರಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳುವುದರೊಂದಿಗೆ ಕಾರ್ಯರೂಪಕ್ಕೆ ತರೋಣ ಎಂದು ತಮ್ಮ ಅಮೂಲ್ಯವಾದ ಮಾಹಿತಿಯಲ್ಲಿ ತಿಳಿಸುತ್ತಾ 0-19 ವರ್ಷದ ಒಳಗಿನ ಮಕ್ಕಳಿಗಾಗಿ ಸರ್ಕಾರದಿಂದ ಜಾರಿ ಇರುವ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಡಾ. ಪ್ರೇಮಾನಂದ.ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಮಕ್ಕಳ ಪಡೆಯುವವರ ಸಂಖ್ಯೆ ಅಧಿಕವಾಗಿದ್ದು ಈ ಮಕ್ಕಳ ಪಾಲನೆ ಪೋಷಣೆಗೆ ಎಲ್ಲಾ ಇಲಾಖೆಯವರು ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಮಕ್ಕಳಿಗೆ ಮಾತ್ರ ಪೌಷ್ಟಿಕ ಆಹಾರವನ್ನು ನೀಡುವುದಲ್ಲದೆ ತಾಯಂದಿರು ಕೂಡ ಸಮತೋಲಿತ ಪೌಷ್ಟಿಕ ಆಹಾರವನ್ನು ಗರ್ಭಿಣಿ ಅವಧಿಯಲ್ಲಿಯೇ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ನಾಗರತ್ನ ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟೇಶ್ವರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಆರ್ ಶೇಟ್, ಜಿಲ್ಲಾ ಆರ್ ಸಿ.ಎಚ್ ಅಧಿಕಾರಿಗಳು ಡಾ.ಜೋತ್ನಾ ಸ್ಥಳೀಯ ಗ್ರಾಮ ಪಂಚಾಯತ್‌ನ ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯಕ್, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ತಾಯಂದಿರು, ಮಕ್ಕಳು ಉಪಸ್ಥಿತರಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆಭಾಕಾರ್ಡ್ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಮಾಡಲಾಯಿತು.

ಶ್ರೀಮತಿ ವೃಂದಾ.ಬಿ.ತಾಮಸೆ ಪ್ರಶಿಕ್ಷಣಾರ್ಥಿ ಪಿ.ಪಿ.ಜಿ.ಡಿ.ಎಚ್.ಪಿ.ಇ ವಿಭಾಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಸ್ವಾಗತಿಸಿದರು. ಶ್ರೀಮತಿ ಭಾಗ್ಯಲಕ್ಷ್ಮಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕುಂದಾಪುರ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದ ಅರ್ಪಿಸಿದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending