Connect with us

ದಿನದ ಸುದ್ದಿ

ಮಕ್ಕಳಿಗೆ ದೈನಂದಿನ ಆಹಾರದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಸಲಹೆ

Published

on

ಸುದ್ದಿದಿನ,ಕುಂದಾಪುರ: ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ತಾಯಂದಿರಿಗೆ ಡಾ. ಐ .ಪಿ ಗಡಾದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಉಡುಪಿ ಜಿಲ್ಲೆ ಇವರು ತಮ್ಮ ಉದ್ಘಾಟನಾ ನುಡಿಗಳಿಂದ ಮನವಿ ಮಾಡಿದರು.

ನಮ್ಮ ಪಿ.ಜಿ.ಡಿ.ಎಚ್.ಪಿ.ಇ 7ನೇ ತಂಡದ ಪ್ರಶಿಕ್ಷಣಾರ್ಥಿ ಶ್ರೀಮತಿ ವೃಂದಾ.ಬಿ.ತಾಮಸೆ ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಅಪೌಷ್ಟಿಕತೆಯ ಕುರಿತು ಸಂಶೋಧನಾತ್ಮಕ ಅಧ್ಯಯನವನ್ನು ಮಾಡಿ ಗ್ರಾಮದ ಎಲ್ಲಾ ಮಕ್ಕಳು ಮತ್ತು ತಾಯಂದಿರನ್ನು ಬೃಹತ್ ಮಹಾ ಮೇಳದ ಮೂಲಕ ಈ ಸಭಾಂಗಣದ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ರೋಟರಿ ಕ್ಲಬ್ ಸ್ಥಳೀಯ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಕ್ಷಣ ಇಲಾಖೆ ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಇವರೆಲ್ಲರಿಗೂ ತಮ್ಮ ಧನ್ಯವಾದಗಳನ್ನು ಡಾ. ಮಂಜುನಾಥ್ ಜೆ .ಎ .ಉಪನ್ಯಾಸಕರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶುಭ ಹಾರೈಸಿದರು.

ಮಳೆಗಾಲದಲ್ಲಿ ಮನೆಯ ಅಕ್ಕಪಕ್ಕದಲ್ಲಿ ನೀರು ನಿಲ್ಲುವುದು ಸಹಜ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಮಲೇರಿಯದಂತಹ ಕಾಯಿಲೆಗಳು ಬರುತ್ತವೆ ಹಾಗಾಗಿ ಮಳೆಯ ನೀರು ನಿಲ್ಲದಂತೆ ಹರಿದು ಹೋಗುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ತಿಳಿಸುತ್ತಾ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ನ ಉಪಾಧ್ಯಕ್ಷರು ಶುಭ ಕೋರಿದರು.

ಅಂಗನವಾಡಿಗಳ ಮೂಲಕ ಅಪೌಷ್ಟಿಕ ಮಕ್ಕಳ ದತ್ತು ಪಡೆಯುವ ಯೋಜನೆಯನ್ನು ಅಗತ್ಯತೆ ಇರುವ ಕುಟುಂಬಗಳು ಪಡೆದುಕೊಳ್ಳಬೇಕು ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಷ್ಟ್ರಧ್ವಜದ ತ್ರಿವರಣವುಳ್ಳ ಹಣ್ಣು ಹಂಪಲು ತರಕಾರಿ ಸೊಪ್ಪು ಬೇಳೆ ಕಾಳುಗಳು ಹಾಲು ಮೊಟ್ಟೆ ಮೀನು ಮಾಂಸ ಹೀಗೆ ಸಮತೋಲನ ಆಹಾರವನ್ನು ರೂಡಿಸಿಕೊಳ್ಳುವಂತೆ ಕುಂದಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಉಮೇಶ್ ಟಿ ಎಂ ಕರೆ ನೀಡಿದರು.

ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಡ್ರೈಡೇ ಕಾರ್ಯಕ್ರಮ ಪ್ರಾರಂಭವಾಗಿದ್ದು ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ತುಂಬಿಟ್ಟುಕೊಳ್ಳುವ ಪರಿಕರಗಳನ್ನು ಸಂಪೂರ್ಣ ಖಾಲಿ ಮಾಡಿ ಹೊಸದಾಗಿ ನೀರನ್ನು ತುಂಬಿಸಿಕೊಳ್ಳಬೇಕೆಂದು ಉಡುಪಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಶಶಿಧರ್ ಅವರು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸ್ಥಳೀಯ ಸರ್ಕಾರೇತರ ಸಂಸ್ಥೆ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀ ಸತೀಶ್ ಎಂ ನಾಯಕ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಆರೋಗ್ಯ ಇಲಾಖೆ ಆಯೋಜಿಸುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ದೇಶಾದ್ಯಂತ ಸಹಕಾರ ನೀಡುತ್ತಿದೆ ಇದೇ ರೀತಿಯಾಗಿ ನಾವು ಸಹ ಮಕ್ಕಳು ಮತ್ತು ತಾಯಂದಿರಿಗೆ ಲಘುಉಪಹಾರ ವ್ಯವಸ್ಥೆ ಮಾಡಿದ್ದೇವೆ ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮ ಸಹಕಾರ ನೀಡುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಕ್ಕಳ ದೈಹಿಕ ಬೆಳವಣಿಗೆಗಾಗಿ ಅಪೌಷ್ಟಿಕತೆ ಪ್ರಮಾಣ ತಿಳಿಯಲು ಮೌಲ್ಯಮಾಪನ ಮಾಡಬೇಕಾಗುತ್ತದೆ ತೋಳಿನ ಮಧ್ಯಭಾಗದ ಸುತ್ತಳತೆ 11.5 cm ಗಿಂತ ಕಡಿಮೆ ಇರುವ ಮಕ್ಕಳನ್ನು ಅಪೌಷ್ಟಿಕ ಮಕ್ಕಳೆಂದು ಗುರುತಿಸಿ ಅವರಿಗೆ ಹೆಚ್ಚಿನ ಪೌಷ್ಟಿಕ ಆಹಾರ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಅವಶ್ಯಕತೆ ಇದೆ. ಅಪೌಷ್ಟಿಕತೆಯು ದೇಹದ ಪ್ರಮುಖ ಅಂಗಗಳ ಕಾರ್ಯಕ್ಕೆ ಹಾನಿ ಉಂಟುಮಾಡುತ್ತದೆ ಹಾಗೂ ಪೌಷ್ಟಿಕಾಂಶದ ಕೊರತೆಯಿಂದ ಉಂಟಾಗುವ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಹಾಗಾಗಿ ಪೌಷ್ಟಿಕ ಸಮತೋಲಿತ ಆಹಾರವನ್ನು ಉಪಯೋಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳುತ್ತಾ ನಮ್ಮ ಜಿಲ್ಲೆಯ ತಾಯಂದಿರಿಗೆ ಆರೋಗ್ಯಕ್ಕೆ ಸಂಬAಧಪಟ್ಟ ಹಾಗೆ ಜ್ಞಾನ ಹೆಚ್ಚಿದ್ದು, ಆದರೆ ಕಾರ್ಯರೂಪಕ್ಕೆ ತರುವಲ್ಲಿ ದೊಡ್ಡ ಪ್ರಮಾಣದ ಯಶಸ್ಸು ಇನ್ನೂ ಆಗಿಲ್ಲ ಅದಕ್ಕಾಗಿ ನಾವೆಲ್ಲರೂ ಅಪೌಷ್ಟಿಕತೆ ವಿರುದ್ಧ ಹೋರಾಡಲು ಇಲ್ಲಿ ಪ್ರಾತ್ಯಕ್ಷಿತೆಯ ಮೂಲಕ ತೋರಿಸಲಾಗಿರುವ ಆಹಾರಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳುವುದರೊಂದಿಗೆ ಕಾರ್ಯರೂಪಕ್ಕೆ ತರೋಣ ಎಂದು ತಮ್ಮ ಅಮೂಲ್ಯವಾದ ಮಾಹಿತಿಯಲ್ಲಿ ತಿಳಿಸುತ್ತಾ 0-19 ವರ್ಷದ ಒಳಗಿನ ಮಕ್ಕಳಿಗಾಗಿ ಸರ್ಕಾರದಿಂದ ಜಾರಿ ಇರುವ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಡಾ. ಪ್ರೇಮಾನಂದ.ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಮಕ್ಕಳ ಪಡೆಯುವವರ ಸಂಖ್ಯೆ ಅಧಿಕವಾಗಿದ್ದು ಈ ಮಕ್ಕಳ ಪಾಲನೆ ಪೋಷಣೆಗೆ ಎಲ್ಲಾ ಇಲಾಖೆಯವರು ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಮಕ್ಕಳಿಗೆ ಮಾತ್ರ ಪೌಷ್ಟಿಕ ಆಹಾರವನ್ನು ನೀಡುವುದಲ್ಲದೆ ತಾಯಂದಿರು ಕೂಡ ಸಮತೋಲಿತ ಪೌಷ್ಟಿಕ ಆಹಾರವನ್ನು ಗರ್ಭಿಣಿ ಅವಧಿಯಲ್ಲಿಯೇ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ನಾಗರತ್ನ ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟೇಶ್ವರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಆರ್ ಶೇಟ್, ಜಿಲ್ಲಾ ಆರ್ ಸಿ.ಎಚ್ ಅಧಿಕಾರಿಗಳು ಡಾ.ಜೋತ್ನಾ ಸ್ಥಳೀಯ ಗ್ರಾಮ ಪಂಚಾಯತ್‌ನ ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯಕ್, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ತಾಯಂದಿರು, ಮಕ್ಕಳು ಉಪಸ್ಥಿತರಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆಭಾಕಾರ್ಡ್ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಮಾಡಲಾಯಿತು.

ಶ್ರೀಮತಿ ವೃಂದಾ.ಬಿ.ತಾಮಸೆ ಪ್ರಶಿಕ್ಷಣಾರ್ಥಿ ಪಿ.ಪಿ.ಜಿ.ಡಿ.ಎಚ್.ಪಿ.ಇ ವಿಭಾಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಸ್ವಾಗತಿಸಿದರು. ಶ್ರೀಮತಿ ಭಾಗ್ಯಲಕ್ಷ್ಮಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕುಂದಾಪುರ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದ ಅರ್ಪಿಸಿದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮೇ 22 | ಇಂದಿನ ಅಡಿಕೆ ದರ

Published

on

ಇಂದು, ಮೇ 22, 2025 ರಂದು ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ದರಗಳು ಹೀಗಿವೆ (ಪ್ರತಿ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ):

ಶಿವಮೊಗ್ಗ ಮಾರುಕಟ್ಟೆ:

ರಾಶಿ: ₹48,169 (ಕನಿಷ್ಠ) – ₹58,099 (ಗರಿಷ್ಠ), ಮೋಡಲ್ ಬೆಲೆ: ₹55,869
ಸರಕು: ₹60,399 (ಕನಿಷ್ಠ) – ₹92,510 (ಗರಿಷ್ಠ), ಮೋಡಲ್ ಬೆಲೆ: ₹77,009
ಬೆಟ್ಟೆ: ₹51,319 (ಕನಿಷ್ಠ) – ₹58,219 (ಗರಿಷ್ಠ), ಮೋಡಲ್ ಬೆಲೆ: ₹57,989
ಗೊರಬಲು: ₹15,499 (ಕನಿಷ್ಠ) – ₹30,699 (ಗರಿಷ್ಠ), ಮೋಡಲ್ ಬೆಲೆ: ₹28,429

ಚನ್ನಗಿರಿ ಮಾರುಕಟ್ಟೆ (ದಾವಣಗೆರೆ):

ರಾಶಿ: ₹41,199 (ಕನಿಷ್ಠ) – ₹59,312 (ಗರಿಷ್ಠ), ಮೋಡಲ್ ಬೆಲೆ: ₹57,767

ಸಾಗರ ಮಾರುಕಟ್ಟೆ (ಶಿವಮೊಗ್ಗ):

ಚಾಲಿ: ₹35,699 (ಕನಿಷ್ಠ) – ₹37,141 (ಗರಿಷ್ಠ), ಮೋಡಲ್ ಬೆಲೆ: ₹36,699
ಬಿಳೆಗೋಟು: ₹21,611 (ಕನಿಷ್ಠ) – ₹25,587 (ಗರಿಷ್ಠ), ಮೋಡಲ್ ಬೆಲೆ: ₹24,111
ಕೆಂಪುಗೋಟು: ₹17,599 (ಕನಿಷ್ಠ) – ₹27,499 (ಗರಿಷ್ಠ), ಮೋಡಲ್ ಬೆಲೆ: ₹24,919
ರಾಶಿ: ₹22,899 (ಕನಿಷ್ಠ) – ₹57,470 (ಗರಿಷ್ಠ), ಮೋಡಲ್ ಬೆಲೆ: ₹56,621

ಕುಮಟಾ ಮಾರುಕಟ್ಟೆ (ಉತ್ತರ ಕನ್ನಡ):

ಚಿಪ್ಪು: ₹11,199 (ಕನಿಷ್ಠ) – ₹26,919 (ಗರಿಷ್ಠ), ಮೋಡಲ್ ಬೆಲೆ: ₹24,549
ಕೋಕಾ: ₹6,899 (ಕನಿಷ್ಠ) – ₹22,189 (ಗರಿಷ್ಠ), ಮೋಡಲ್ ಬೆಲೆ: ₹20,429
ಹಣ್ಣು: ₹32,589 (ಕನಿಷ್ಠ) – ₹42,500 (ಗರಿಷ್ಠ), ಮೋಡಲ್ ಬೆಲೆ: ₹39,729

ಚಿತ್ರದುರ್ಗ ಮಾರುಕಟ್ಟೆ:

ರಾಶಿ: ₹52,449 (ಕನಿಷ್ಠ) – ₹52,899 (ಗರಿಷ್ಠ), ಮೋಡಲ್ ಬೆಲೆ: ₹52,679

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ

Published

on

ಸುದ್ದಿದಿನ,ದಾವಣಗೆರೆ:ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್‌ಶುಗರ್, ಕೋಕೆನ್, ನಿಕೋಟಿನ್‌ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ ವ್ಯಕ್ತಿಗಳು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಇವರ ಸಂಯುಕ್ತಶ್ರಯದಲ್ಲಿ ಗುರುವಾರ ನಗರದ ಭಾಷಾ ನಗರದಲ್ಲಿನ ನಗರ ಆರೋಗ್ಯ ಕೇಂದ್ರ (ಪ್ರಸೂತಿ ಆರೋಗ್ಯ ಕೇಂದ್ರ) ದಲ್ಲಿ ಆಯೋಜಿಸಲಾಗಿದ್ದ “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ” ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕವಾಗಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಣೆ ಇಂತಹ ಪ್ರಕರಣಗಳು ಕಂಡುಬAದಲ್ಲಿ ಆಲಸ್ಯ ಮಾಡದೇ ಸಂಬAಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಅಲ್ಲದೇ ಪುರುಷತ್ವ ಮತ್ತು ಲೈಂಗಿಕತೆಯನ್ನು ಕುಂದಿಸುತ್ತದೆ. ಮಾದಕ ವ್ಯಸನಗಳಿಂದ ವಿವಿ ರೀತಿಯ ಕೃತ್ಯಗಳ್ಲಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗುವುದಲ್ಲದೇ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ವ್ಯಸನಮುಕ್ತರಾಗಿ ಸಮಾಜದಲ್ಲಿ ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉನ್ನತ ಮಟ್ಟದ ವ್ಯಕತಿಗಳಾಗಿ ಬಾಳಬೇಕು. ಈ ನಿಟ್ಟಿನಲ್ಲಿ ತಮ್ಮಗಳ ಸಹಕಾರ ಅತ್ಯಗತ್ಯ ಎಂದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ರಲ್ಲಿ ಜಾರಿ ಮಾಡಿದ್ದು, ಕೇವಲ ದೈಹಿಕ ಹಿಂಸೆಗೆ ಸೀಮಿತಗೊಳಿಸದೆ, ಲೈಂಗಿಕ, ಮೌಖಿಕ, ಭಾವನಾತ್ಮಕ, ಆರ್ಥಿಕ, ಮತ್ತು ಮಾನಸಿಕ ಹಿಂಸೆಯನ್ನು ಸಹ ಒಳಗೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುವುದು, ಮನೆಯಿಂದ ಹೊರಹಾಕುವುದು ಇವೆಲ್ಲವೂ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಕಾಯ್ದೆಯ ಮೂಲಕ ಮಹಿಳೆಯರಿಗೆ ಅರ್ಥಿಕ, ಸಾಮಾಜಿಕ, ಭದ್ರತೆಯನ್ನು ಒದಗಿಸಲಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯಗಳಂತಹ ದೈಹಕ ಮತ್ತು ಮಾನಸಿಕ ಹಿಂಸೆ, ಕಿರುಕುಳ ನೀಡಿದಲ್ಲಿ ಹತ್ತಿರದ ಸಖಿ ಒನ್ ಸ್ಟಾಪ್ ಸೆಂಟರ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಿ ಸಲಹೆ ಸೂಚನೆಗಳನ್ನು ಪಡೆಯಬಹುದು. ಇದಕ್ಕೆ ಸಂಬAಧಿಸಿದAತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರದ ವತಿಯಿಂದ ಉಚಿತ ಕಾನೂನು ನರೆವು ನೀಡಲು 40 ವಕೀಲರಿದ್ದಾರೆ. ಇದನ್ನು ಪ್ರತಿಯೊಬ್ಬರು ಸದುಪಯೋಗಪಡೆದುಕೊಳ್ಳಬೇಕು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಲು 15100 ಸಹಾಯವಾಣಿ ಸಂಖ್ಯೆ ಸ್ಥಾಪಿಸಿದ್ದು, ಕರೆ ಮಾಡಿ ಸೂಕ್ತ ಕಾನೂನು ಸಲಹೆ ಪಡೆಯಬಹುದು. ಸಮಾಜದಲ್ಲಿ ಹಿಂದುಳಿದ ಪ್ರತಿಯೊಬ್ಬರನ್ನು ಮುಖ್ಯವಾಹಿನಿಗೆ ತರಲು ಕಂಕಣಬದ್ದರಾಗಿ ಕಾರ್ಯನಿರ್ವಹಿಸಬೇಕು. ಈ ಎರಡೂ ಕಾಯ್ದೆಗಳು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಇದೇ ವೇಳೆ ನೆರಳು ಬೀಡಿ ಕಾರ್ಮಿಕ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನ ಪೀಠಿಕೆ ವಾಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ರೇಖಾ, ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಸದಸ್ಯೆ ಸಬ್ರಿನ್ ತಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಮೆಟ್ರಿಕ್ ನಂತರದ ಬಾಲಕ, ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ. ಐ.ಟಿ.ಐ. ಮತ್ತು ಡಿಪ್ಲೊಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಆನ್‍ಲೈನ್‍ನಲ್ಲಿ ಜೂನ್ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 8050770004 ಮತ್ತು 8050770005.ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending