ದಿನದ ಸುದ್ದಿ
ಇಂದಿನ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ : ಹೃದಯಾಘಾತ ತಡೆಯಲು ಹೀಗೆ ಮಾಡಿ
- ಸಂಗಮೇಶ ಎನ್ ಜವಾದಿ, ಕೊಡಂಬಲ
ಭಾರತ ದೇಶದ ಇಂದಿನ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೀವ್ರ ಆತಂಕಕಾರಿ ಕಳವಳ ವಿಷಯವಾಗಿದೆ. ಹೃದಯಾಘಾತದ ಪ್ರಕರಣಗಳು ದಿನನಿತ್ಯ ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಯುವಕರು ಸೇರಿದಂತೆ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳು ಕಾಣುತ್ತಿದ್ದೇವೆ.
ಇದರ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಮುಖಾಂತರ ಸದೃಢ ಆರೋಗ್ಯ
ಭವಿಷ್ಯದ ಭಾರತ ನಿರ್ಮಾಣ ಮಾಡುವ ಅನಿವಾರ್ಯತೆ ಸಧ್ಯ ಎದುರಾಗಿದೆ ಎನ್ನುವುದು ಸುಳ್ಳಲ್ಲ. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ.
ಆದರೂ ಶೇ. 76ರಷ್ಟುಜನರು ಸಮಸ್ಯೆ ಅಂತಿಮ ಹಂತಕ್ಕೆ ಹೋಗುವ ತನಕ ವೈದ್ಯರ ತಪಾಸಣೆಗೆ ಒಳಗಾಗುತ್ತಿಲ್ಲ ಹಾಗೂ
18 ರಿಂದ 65 ವಯೋಮಾನದ ಶೇ.60ರಷ್ಟು ಭಾರತೀಯರಿಗೆಈ ಕುರಿತು ಸೂಕ್ತ ತಿಳುವಳಿಕೆಯೇ ಇಲ್ಲ. 18 ರಿಂದ 30ರ ಹರೆಯದ ಯುವ ಜನತೆ, ತಮಗೆ ಹೃದಯಸಂಬಂಧಿ ಸಮಸ್ಯೆ ಬರುವುದಿಲ್ಲ ಎಂಬ ದೃಢನಂಬಿಕೆಯಲ್ಲಿ ತಪಾಸಣೆಗೆ ಒಳಗಾಗುವುದಿಲ್ಲ ಎನ್ನುವುದಂತು ಸತ್ಯ.
ಇತ್ತೀಚಿನ ಸಾಮಾಜಿಕ ಜಾಲತಾಣ ಯುಗದಲ್ಲಿ ಆರೋಗ್ಯಕ್ಕೆ ಅಪಾಯಕಾರಿಯಾಗುವ ಜೀವನ ಶೈಲಿಯ ನಡುವಳಿಕೆಗಳಿಗಳನ್ನು ಅಳುವಡಿಸಿ ಕೊಳ್ಳುತ್ತಿದ್ದಾರೆ ಎಂದರೆ ತಪ್ಪಾಗಲಾರದು. ಇಂದಿನ ದಿನಗಳಲ್ಲಿ ಅಂದರೆ, ಶೇ. 20ರಷ್ಟು ಜನರಿಗೆ ಹೃದ್ರೋಗ ವಂಶವಾಹಿಯಾಗಿದೆ ಎಂದು ಆರೋಗ್ಯ ಸಮೀಕ್ಷೆ ತಿಳಿಸಿದ್ದು, ಆಧುನಿಕ ಜೀವನಶೈಲಿಯು ಯುವಜನತೆಯಲ್ಲಿ ಹೃದಯನಾಳ ತೊಂದರೆ, ಹೃದಯಾಘಾತ, ಪಾಶ್ರ್ವವಾಯು ಸಂಭವವನ್ನು ಮೂರುಪಟ್ಟು ಹೆಚ್ಚಿಸಿದೆ ಮತ್ತು ಹೆಚ್ಚಿಸುತ್ತಿದೆ.
ಸಧ್ಯ ಭಾರತದಲ್ಲಿ ಹೃದಯಾಘಾತ ಸಂಭವದ ವಯೋಮಿತಿಯು 40 ರಿಂದ 20 ವರ್ಷಕ್ಕೆ ಇಳಿದಿದೆ ಎನ್ನುವುದು ಆತಂಕದ ವಿಷಯ ಬಂಧುಗಳೆ.
ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ)ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು ಪ್ರಮುಖ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಪ್ರಪಂಚದ ನಂಬರ್ ಒನ್ ಕಿಲ್ಲರ್ ಹೃದಯಾಘಾತ.ಒತ್ತಡದ ಜೀವನ, ದೇಹದಲ್ಲಿ ಹೆಚ್ಚಿನ ಕೊಬ್ಬಿನಂಶ, ಧೂಮಪಾನ, ಮದ್ಯಪಾನ, ದೈಹಿಕ ಶ್ರಮ ರಹಿತ ಜೀವನ ಹೃದಯಾಘಾತ ಸಂಭವ ಹೆಚ್ಚಲು ಪ್ರಮುಖ ಕಾರಣಾಗಿದೆ ಎನ್ನುತ್ತಿದೆ.
ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ.ಇದಕ್ಕೆ ವಿರೋಧಾಭಾಸವಾಗಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲಿ ಹೃದಯಘಾತ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ. ಆ ದೇಶಗಳಲ್ಲಿನ ಜನ ಸಾಮಾನ್ಯರಲ್ಲಿ ಹೆಚ್ಚಿದ ಜಾಗೃತಿ ಹಾಗೂ ಆರಂಭದ ವರ್ಷಗಳಲ್ಲೇ ಕೈಗೊಂಡ ಮುನ್ನೆಚ್ಚರಿಕೆಗಳ ಫಲವಾಗಿ ಹಾರ್ಟ್ ಆಟ್ಯಾಕ್ ಹತೋಟಿಗೆ ಬಂದಿವೆ ಎನ್ನಬಹುದು.
ಹೃದಯಾಘಾತದ ಸಾಮಾನ್ಯ ಲಕ್ಷಣಗಳು
- ಎದೆನೋವು, ಹೃದಯ ಭಾರವಾಗುವಿಕೆ
- ಉಸಿರಾಟದಲ್ಲಿ ತೊಂದರೆ, ಕೆಮ್ಮು , ವ್ಹಿಜಿಂಗ್
- ಮಾನಸಿಕ ಕ್ಷೋಭೆ ಅಥವಾ ಒತ್ತಡದಂಥ ಲಕ್ಷಣಗಳು
- ಹೊಟ್ಟೆ ,ಹೆಗಲು, ಕುತ್ತಿಗೆ ,ಭುಜ ,ಕೈ ಅಥವಾ ದವಡೆ ನೋವು
- ಅಸ್ವಸ್ಥತೆ, ಸುಸ್ತು
- ಕಡಿಮೆ ನಾಡಿಮಿಡಿತ
- ಅತಿಯಾಗಿ ಬೆವರುವಿಕೆ
- ವಾಂತಿ, ಅಸಿಡಿಟಿ
- ತಲೆಸುತ್ತುವಿಕೆ/ಶಿರೋಭ್ರಮಣೆ/ ಜ್ಞಾನ
ತಪ್ಪುವುದು ಇವುಗಳೆಲ್ಲ ಹೃದಯಾಘಾತ ಕಾರಣವಾಗಬಹುದು ಅಲ್ಲದೆ
ಹೃದಯಾಘಾತದ ಚಿಹ್ನೆ ಮತ್ತು ಲಕ್ಷಣಗಳಲ್ಲಿ ಕೆಲವೊಮ್ಮೆ ವ್ಯತ್ಯಾಸಗಳಿರುತ್ತವೆ. ಒಮ್ಮೊಮ್ಮೆ ಈ ಲಕ್ಷಣ ಬಿರುಸಾಗಿದ್ದರೆ, ಕೆಲವೊಮ್ಮೆ ಲಘುವಾಗಿರುತ್ತದೆ. ಕೆಲವು ಸಂದರ್ಭದಲ್ಲಿ ಯಾವುದೇ ಲಕ್ಷಣವಿಲ್ಲದೇ ಅಥವಾ ಲಘು ಲಕ್ಷಣಗಳೊಂದಿಗೆ ಸಂಭವಿಸುವ ಹಾರ್ಟ್ ಅಟ್ಯಾಕ್ ತೀವ್ರ ಎದೆನೋವಿನಂಥ ಮರಣಾಂತಿಕ ಪರಿಣಾಮಗಳಷ್ಟೇ ಅಪಾಯ ತಂದೊಡ್ಡುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಹೃದಯಾಘಾತಕ್ಕೆ ಕಾರಣವಾಗುವ ಕೆಲವು ರಿಸ್ಕ್ ಫ್ಯಾಕ್ಟರ್ಗಳು
- ತಂಬಾಕು ಸೇವನೆ/ಧೂಮಪಾನ
- ಅಧಿಕ ಕೊಲೆಸ್ಟರಾಲ್
- ಅಧಿಕ ಎಲ್ಡಿಎಲ್ ಕೊಲೆಸ್ಟರಾಲ್
- ಕಡಿಮೆ ಎಚ್ಡಿಎಲ್ ಕೊಲೆಸ್ಟರಾಲ್
- ಅಧಿಕ ಬ್ಲಡ್ ಷುಗರ್/ಡಯಾಬಿಟಿಸ್
- ಅಧಿಕ ರಕ್ತದೊತ್ತಡ
- ಅಧಿಕ ತೂಕ
- ದೈಹಿಕ ಶ್ರಮವಿಲ್ಲದ ಜೀವನ
- ಐಷಾರಾಮಿ ಅಭ್ಯಾಸಗಳು/ಸೇಡೆಂಟರಿ ಲೈಫ್ ಸ್ಟೈಲ್
- ಉದ್ವೇಗ ಮಾನಸಿಕ, ಒತ್ತಡಗಳು ಮತ್ತು ಆಯಾಸ
- ಸಂಸ್ಕರಿಸಿದ ಆಹಾರ/ಜಂಕ್ ಫುಡ್ /ಅತಿಯಾದ ಜಿಡ್ಡು ಪದಾರ್ಥ ಸೇವನೆ
- ಪರಿಸರ / ಗಾಳಿ ಮಾಲಿನ್ಯ
- ಅನುವಂಶಿಯ ಅಂಶಗಳು
ಇವು ಹೃದಯಾಘಾತಕ್ಕೆ ಕಾರಣವಾಗುವ ಅಂಶಗಳು.
ಒತ್ತಡಕ್ಕೆ ಸಂಬಂಧಿಸಿದ ಹೃದ್ರೋಗ ತಡೆಗಟ್ಟಲು ಜೀವನಶೈಲಿ ಬದಲಾವಣೆಯೂ ಅಗತ್ಯವಾಗಿದೆ ಈ ಹಿನ್ನಲೆಯಲ್ಲಿ ಕೆಲ ಪ್ರಮುಖ ವಿಚಾರಗಳು ತಮ್ಮಲ್ಲಿ ಹಂಚುತ್ತಿರುವೆ.
ಧೂಮಪಾನ ತೇಜಿಸಿ
ಧೂಮಪಾನ ದುಶ್ಚಟದಿಂದ ದೂರವಿರಿ. ಧೂಮಪಾನ ತೇಜಿಸಲು ನಿರ್ಧರಿಸಿದ ತಕ್ಷಣ ಸಿಗರೇಟ್ಗಳು, ಆ್ಯಷ್ಟ್ರೇ ಮತ್ತು ಲೈಟರ್ನನ್ನು ಹೊರಗೆ ಎಸೆಯಿರಿ.ನಿಮ್ಮ ವೈದ್ಯರೊಂದಿಗೆ ಈ ಕುರಿತು ಮುಕ್ತ ವಾಗಿ ಚರ್ಚೆ ಮಾಡಿ. ಧೂಮಪಾನ ತೇಜಿಸಿದ ನಂತರ ನಿಮ್ಮ ದೇಹದಲ್ಲಿ ಕೆಲವು ಪ್ರತಿಕ್ರಿಯೆಗಳು ಕಂಡುಬಂದರೆ ಔಷಧಿ ನೀಡಬೇಕಾಗುತ್ತದೆ.
ನಿಮಗೆ ನಿಕೋಟಿನ್ ಪರ್ಯಾಯದ ಅಗತ್ಯವಿದಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇದು ಗಮ್, ಇನ್ಹೇಲರ್ ಮೊದಲಾದ ರೂಪದಲ್ಲಿ ಬರುತ್ತದೆ. ಯಾವುದೇ ರೀತಿಯ ತಂಬಾಕು ಸೇವನೆ ಗುಟ್ಕಾ , ಪಾನ್ ಬೀಡಾ , ನಸ್ಯ (snuff) ಚಟಗಳನ್ನು ಬೀಡಬೇಕು,ಬೀಡುವುದು ಅವಶ್ಯಕತೆ ಇದೆ.
ಆರೋಗ್ಯಕರ ಆಹಾರ
ಆರೋಗ್ಯ ರಕ್ಷಣೆ ಹಾಗೂ ದೈಹಿಕ-ಮಾನಸಿಕ ಆರೋಗ್ಯ ಹೆಚ್ಚಳದಲ್ಲಿ ಉತ್ತಮ ಆಹಾರ ಮಹತ್ವದ ಪಾತ್ರ ವಹಿಸುತ್ತದೆ. ಹಸಿರು ತಾಜಾ ತರಕಾರಿ , ಹಣ್ಣು ಹಂಪಲ , ಡ್ರೈ ಫ್ರುಟ್ಸ್ ,ಪೂರ್ತಿ ಕಾಳು ಆರೋಗ್ಯಕರವಾದ ಸಂತುಲಿತ ಮತ್ತು ಪ್ರೊಟೀನ್ ಯುಕ್ತ ಪೌಷ್ಟಿಕ ಆಹಾರ ದೇಹವನ್ನು ಸಮತೋಲನದಲ್ಲಿ ಇಡುತ್ತದೆ. ಆದರೆ ಸಕಾಲದಲ್ಲಿ ಸೇವನೆ ಮತ್ತು ಸೂಕ್ತ ಪ್ರಮಾಣದಲ್ಲಿ ಆಹಾರ ಸೇವನೆ ಮುಖ್ಯ. ಆದಷ್ಟು ಬಿಳಿ ಪೂರ್ಣ ಪಾಲಿಶ್ ಮಾಡಿದ ಅಕ್ಕಿ ಅನ್ನದ ಬದಲಾಗಿ ಕುಶಲಕ್ಕಿ , ಬಾಯಿಲ್ಡ್ ಅಕ್ಕ್ಕಿ , ಅನ್ ಪಾಲಿಶ್/ಕುಟ್ಟಿದ ಅಕ್ಕಿ ಬಳಸುವುದು ಒಳ್ಳೆಯದು .
ಉತ್ತಮ ನಿದ್ರೆ
ಮನುಷ್ಯನ ಆರೋಗ್ಯ ಸ್ಥಿತಿಗೆ ಸೂಕ್ತ ನಿದ್ರೆಯೂ ಅತ್ಯಗತ್ಯ. ಸಾಕಷ್ಟು ನಿದ್ರೆಯ ಮಹತ್ವದ ಬಗ್ಗೆ ಜನರಲ್ಲಿ ಅನೇಕ ತಪ್ಪು ತಿಳುವಳಿಕೆ ಇದೆ. ಸೂಕ್ತ ಸಮಯದಲ್ಲಿ ನಿದ್ರೆ ಮಾಡುವುದು ಒಳ್ಳೆಯದು. ಬೇಗನೆ ಮಲಗಿ ಬೇಗನೆ ಏಳುವುದು ಉತ್ತಮ ಅಭ್ಯಾಸ. ಆದಾಗ್ಯೂ ಸಾಕಷ್ಟು ನಿದ್ರೆ ಇಲ್ಲದಿದ್ದರೆ ಕೆಲವೊಂದು ತೊಂದರೆಗಳಿಗೆ ಕಾರಣವಾಗುತ್ತದೆ. ಅನಿದ್ರತೆ, ತಲೆನೋವು, ನಿರುತ್ಸಾಹ, ಮಂಕು ಇತ್ಯಾದಿ.
ಕೆಲವೊಮ್ಮೆ ಇದು ಬೊಜ್ಜು, ಅಜೀರ್ಣ, ಜ್ಞಾಪಕ ಶಕ್ತಿ ನಷ್ಟದಂಥ ಗಂಭೀರ ಸಮಸ್ಯೆಗಳಿಗೂ ಎಡೆ ಮಾಡಿಕೊಡಬಹುದು ಜೊತೆಗೆ
ನಿರಂತರ ನಿಯಮಿತ ವ್ಯಾಯಾಮ
ಕನಿಷ್ಠ ದಿನಕ್ಕೆ 60 ನಿಮಿಷ ಏರೋಬಿಕ್ ಎಕ್ಸರ್ಸೈಜ್ , ವಾರಕ್ಕೆ 3-4 ಸಾವಿರ ಕ್ಯಾಲೋರಿಸ್ ದೈಹಿಕ ಶ್ರಮದ ಮುಖಾಂತರ ವ್ಯಯಿಸಬೇಕು.
ಇದಲ್ಲದೆ ನಿಯಮಿತವಾಗಿ ದೇಹ ತೂಕದ ತಪಾಸಣೆ, ಕೊಬ್ಬು ರಹಿತ ಪದಾರ್ಥಗಳ ಸೇವನೆ ಹಾಗೂ ಪ್ರತಿದಿನಿತ್ಯ 45 ನಿಮಿಷಗಳ ಕಾಲ ವೇಗದ ನಡಿಗೆ ನಡೆಯುವ ಮೂಲಕ ಹೃದಯ ಸಂಬಂಧಿ ರೋಗಗಳನ್ನು ನಾವೆಲ್ಲರೂ ನಿಯಂತ್ರಿಸಬಹುದು.ಹಾಗೂ ವೈದ್ಯರು ತಿಳಿಸುವ ಸಲಹೆ – ಸೊಚನೆಗಳನ್ನು ತಪ್ಪದೇ ಪಾಲಿಸಬೇಕು.
ಕೊನೆಯ ಮಾತು
ಮುಂಜಾಗ್ರತೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಮೂಲಕ ಹೃದಯಾಘಾತವನ್ನು ದೊಡ್ಡ ಮಟ್ಟದಲ್ಲಿ ತಡೆಗಟ್ಟಬಹುದು ಅನ್ನುವುದು ನಾವೆಲ್ಲರೂ ಮರೆಯುವಂತಿಲ್ಲ.
ನಮ್ಮ ದೇಶದಲ್ಲಿ ತುರ್ತಾಗಿ ಈ ಕುರಿತು ಜನ ಜಾಗೃತಿ ಮತ್ತು ಅರಿವಿನ ಕಾರ್ಯಕ್ರಮಗಳು ಅಗತ್ಯವಿದೆ. ಯಾಕೆಂದರೆ ಹಣ ಸಂಪಾದನೆಯು ಗರಿಷ್ಠ ಮಟ್ಟದಲ್ಲಿದ್ದಾಗ ಬಹುತೇಕ ಮಂದಿ ಹೃದಯಘಾತಕ್ಕೆ ತುತ್ತಾಗುತ್ತಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಅದಕ್ಕಾಗಿ ನೆಮ್ಮದಿಯ ಜೀವನ,ಶ್ರಮಜೀವಿ ಜೀವನವನ್ನು ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.
ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.
ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.
ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


