ದಿನದ ಸುದ್ದಿ
ಕೃಷ್ಣ ನದಿಯಲ್ಲಿ ಹೆಚ್ಚಿದ ನೀರು : ಬೆಳಗಾವಿ ಜನರ ಆತಂಕ
ಸುದ್ದಿದಿನ ಡೆಸ್ಕ್: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ತುಂಬಿದೆ. ಇದರಿಂದ ನದಿ ಅಚ್ಚುಕಟ್ಟು ಪ್ರದೇಶದ ಜನ ಆತಂಕದಲ್ಲಿದ್ದಾರೆ.
ಚಿಕ್ಕೋಡಿ ತಾಲೂಕಿನ ಯಡುರ ಗ್ರಾಮ ಹಾಗೂ ಕಲ್ಲೋಳ ಗ್ರಾಮದ ನಡುವಿನ ಸಂಪರ್ಕ ಸೇತುವೆ ನೀರಿನಲ್ಲಿ ಮುಳುಗಿದೆ ಎಂದು ವರದಿಯಾಗಿದೆ. ಇದರಿಂದಾಗಿ ಜನ ಸಂಚಾರ ಸಮಸ್ಯೆ ಎದುರಿಸುತ್ತಿದ್ದಾರೆ.
ಇನ್ನೂ ಕರಾವಳಿ ಪ್ರದೇಶದಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.