ದಿನದ ಸುದ್ದಿ
ಭಾರೀ ಮಳೆ ; 17 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ
![](https://suddidina.com/wp-content/uploads/2022/12/bangala_kolli_rain_cyclone_suddidina.jpg)
ಸುದ್ದಿದಿನ ಡೆಸ್ಕ್ : ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ವರುಣನ ಅಬ್ಬರ ಜೋರಾಗಿದೆ. ಈ ನಡುವೆ ಮುಂದಿನ ನಾಲ್ಕೈದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ. ಜೊತೆಗೆ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಇಬ್ಬರು ಶಿಕ್ಷಕರ ಬಂಧನ
![](https://suddidina.com/wp-content/uploads/2024/06/arrested_neet_exam_suddidina.jpg)
ಸುದ್ದಿದಿನಡೆಸ್ಕ್:ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯ ಮೇರೆಗೆ ಸಂಜಯ್ ತುಕಾರಾಂ ಜಾಧವ್ ಮತ್ತು ಜಲೀಲ್ ಉಮರ್ ಖಾನ್ ಪಠಾಣ್ ಅವರನ್ನು ಮಹಾರಾಷ್ಟ್ರದ ನಾಂದೇಡ್ ಭಯೋತ್ಪಾದನಾ ನಿಗ್ರಹ ದಳ-ಎಟಿಎಸ್ ಬಂಧಿಸಿದೆ.
ಬಂಧಿತರಿಬ್ಬರೂ ಜಿಲ್ಲಾ ಪರಿಷತ್ ಶಾಲೆಗಳಲ್ಲಿ ಶಿಕ್ಷಕರಾಗಿದ್ದು, ಲಾತೂರ್ನಲ್ಲಿ ಖಾಸಗಿ ಕೋಚಿಂಗ್ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಮೂಲಗಳು ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಯುವ ನಿಧಿ ಯೋಜನೆ ; ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
![](https://suddidina.com/wp-content/uploads/2024/06/yuvanidhi_suddidina.jpg)
ಸುದ್ದಿದಿನಡೆಸ್ಕ್:ಯುವ ನಿಧಿ ಯೋಜನೆ ಅಡಿ, ನಿರುದ್ಯೋಗ ಭತ್ಯೆ ಪಡೆಯುತ್ತಿರುವ, ಉದ್ಯೋಗಾಕಾಂಕ್ಷಿ ಯುವಜನತೆ, ಪ್ರತಿ ತಿಂಗಳು 25 ನೇ ತಾರೀಖಿನೊಳಗೆ, ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ಘೋಷಿತ ಪ್ರಮಾಣ ಪತ್ರ ಸಲ್ಲಿಸಲು, ಆಯಾ ಜಿಲ್ಲೆಗಳ ಉದ್ಯೋಗಾಧಿಕಾರಿಗಳು ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
ಮಹಿಳಾ ಏಕದಿನ ಕ್ರಿಕೆಟ್ : ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು
![](https://suddidina.com/wp-content/uploads/2024/06/news_spotrs_suddidina.jpg)
ಸುದ್ದಿದಿನಡೆಸ್ಕ್:ದಕ್ಷಿಣ ಆಫ್ರಿಕಾ ಮಹಿಳೆಯರ ವಿರುದ್ಧ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಕ್ರಿಕೆಟ್ ಪಂದ್ಯವನ್ನು 6 ವಿಕೆಟ್ಗಳಿಂದ ಗೆಲ್ಲುವ ಮೂಲಕ ಭಾರತದ ಮಹಿಳೆಯರು ಸರಣಿಯನ್ನು 3-0 ಅಂತರದಿಂದ ತಮ್ಮದಾಗಿಸಿಕೊಂಡಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಮಹಿಳೆಯರು ತಮ್ಮ ಶಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದರು. ಸತತ ಮೂರು ಪಂದ್ಯಗಳಲ್ಲಿ ಪಾರಮ್ಯ ಮೆರೆಯುವ ಮೂಲಕ ತಾಯ್ನಾಡಿನಲ್ಲಿ ತಾವು ಎಷ್ಟು ಬಲವಂತರು ಎಂಬುದನ್ನು ಸಾಬೀತು ಮಾಡಿದರು.
ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವನಿತೆಯರಿಗೆ ಇನ್ನಿಲ್ಲದಂತೆ ಕಾಡಿದ್ದು, ಭಾರತ ತಂಡದ ಹಿರಿಯ ಬ್ಯಾಟರ್ ಸ್ಮೃತಿ ಮಂಧಾನ. ಮೊದಲೆರಡು ಪಂದ್ಯಗಳಲ್ಲಿ ಸತತ ಶತಕ ಬಾರಿಸಿದರು. ಮೂರನೇ ಪಂದ್ಯದಲ್ಲಿ ಶತಕದ ಅಂಚಿಗೆ ಬಂದು ಮೂರನೇ ಶತಕದಿಂದ ತಪ್ಪಿಸಿಕೊಂಡರು. ಮೊದಲ ಪಂದ್ಯದಲ್ಲಿ 117, ಎರಡನೇ ಪಂದ್ಯದಲ್ಲಿ 136 ರನ್ ಗಳಿಸಿದ್ದರು. ಮೂರನೇ ಪಂದ್ಯದಲ್ಲಿ ಭಾರತ ವನಿತೆಯರು ಪ್ರಯಾಸವಿಲ್ಲದೇ ಗೆಲುವು ಸಾಧಿಸಿದರು.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ವನಿತೆಯರು 50 ಓವರ್ಗಳಲ್ಲಿ 8 ವಿಕೆಟ್ಗೆ 215 ರನ್ ಗುರಿ ನೀಡಿದರು. ಭಾರತ 40.4 ಓವರ್ಗಳಲ್ಲಿ ನಾಲ್ಕು ವಿಕೆಟ್ಗಳಿಗೆ 220 ರನ್ ಗಳಿಸಿತು. ಕೊನೆಯ ಪಂದ್ಯದಲ್ಲಿ ಸ್ಮೃತಿ ಮಂಧಾನ 83 ಎಸೆತಗಳಲ್ಲಿ 11 ಬೌಂಡರಿಗಳ ಸಮೇತ 90 ರನ್ ಗಳಿಸಿದರು. ಶೆಫಾಲಿ ವರ್ಮಾ 25, ಪ್ರಿಯಾ ಪೂನಿಯಾ 28, ನಾಯಕಿ ಹರ್ಮನ್ಪ್ರೀತ್ ಕೌರ್ 42 ಗಳಿಸಿದರು. ಕೊನೆಯಲ್ಲಿ ಜೆಮಿಮಾ ರೋಡ್ರಿಗಸ್ 19, ರಿಚಾ ಘೋಷ್ 6 ರನ್ ಗಳಿಸಿ ಗೆಲುವಿನ ಶಾಸ್ತ್ರ ಮುಗಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಕೊಲೆಕೇಸ್ | ನಟ ಚಿಕ್ಕಣ್ಣ ಆಯ್ತು ; ಈಗ ಮತ್ತೊಬ್ಬ ನಟ..!
-
ದಿನದ ಸುದ್ದಿ5 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ಕ್ರೀಡೆ4 days ago
ಈ ಕ್ಷಣದ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ5 days ago
ಕಲಾವಿದರಿಗೆ ಗುರುತಿನ ಚೀಟಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ5 days ago
ಡಾಕ್ಟರ್ ಓದಿದವರು ಕೂಡ ಮೌಡ್ಯಾಚರಣೆ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ
-
ದಿನದ ಸುದ್ದಿ7 days ago
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ | ರೈತರ ಖಾತೆಗೆ ನಾಳೆ ಪ್ರಧಾನಿ ಹಣ ವರ್ಗಾವಣೆ ; ಎಷ್ಟು ಕೋಟಿ..?
-
ದಿನದ ಸುದ್ದಿ6 days ago
ವಯನಾಡ್ ಸಂಸದ ಸ್ಥಾನ ತ್ಯಜಿಸಲು ನಿರ್ಧರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ; ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ