ದಿನದ ಸುದ್ದಿ
ಹಾವೇರಿ | ಪರಿಹಾರ ಕಾರ್ಯಕ್ಕಾಗಿ ಜಿಲ್ಲೆಯ ವಿಪತ್ತು ನಿಧಿಯಲ್ಲಿ ರೂ.16 ಕೋಟಿ ಹಣವಿದೆ : ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
&description=ಹಾವೇರಿ | ಪರಿಹಾರ ಕಾರ್ಯಕ್ಕಾಗಿ ಜಿಲ್ಲೆಯ ವಿಪತ್ತು ನಿಧಿಯಲ್ಲಿ ರೂ.16 ಕೋಟಿ ಹಣವಿದೆ : ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
&description=ಹಾವೇರಿ | ಪರಿಹಾರ ಕಾರ್ಯಕ್ಕಾಗಿ ಜಿಲ್ಲೆಯ ವಿಪತ್ತು ನಿಧಿಯಲ್ಲಿ ರೂ.16 ಕೋಟಿ ಹಣವಿದೆ : ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಹಾವೇರಿ: ಜಿಲ್ಲಾ ವಿಪತ್ತು ನಿಧಿಯಲ್ಲಿ 16 ಕೋಟಿ ರೂ, ತಾಲೂಕಾ ಆಡಳಿತ ಬಳಿ 15 ರಿಂದ 20 ಲಕ್ಷ ರೂ. ಹಣವಿದ್ದು, ಸಂತ್ರಸ್ಥರ ನೆರವಿಗೆ ಜಿಲ್ಲಾಡಳಿತ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.
ಅತಿವೃಷ್ಠಿ ಹಾಗೂ ನೆರೆ ಪರಿಹಾರ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಸಂತ್ರಸ್ತರಿಗಾಗಿ ಜಿಲ್ಲೆಯಲ್ಲಿ 76 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ. ಮಳೆ ಹಾಗೂ ನೆರೆಯ ಸಂಕಷ್ಟದಲ್ಲಿರುವವರು ಪರಿಹಾರ ಕೇಂದ್ರಕ್ಕೆ ಆಗಮಿಸಿ ಆಶ್ರಯಪಡೆಯುವಂತೆ ತಿಳಿಸಿದರು.
ಆಗಸ್ಟ್ 8 ಮತ್ತು 9 ರಂದು 591.7 ಎಂ ಎಂ ಹಾಗೂ 9 ರಿಂದ 10 ರಂದು 224.3 ಎಂ.ಎಂ. ಮಳೆಯಾಗಿದೆ. ತುಂಗಭದ್ರಾ ನದಿಯಿಂದ 1.15 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ವರದಾ ನದಿಯಿಂದ 32 ಕ್ಯೂಸೆಕ್ ಮತ್ತು ಧರ್ಮಾ ನದಿಯಿಂದ ಐದುಸಾವಿರ ಕ್ಯೂಸೆಕ್ ನೀರು ಹರಿದುಬಂದಿರುವುದರಿಂದ ನದಿಪಾತ್ರದ ಗ್ರಾಮಗಳಿಗೆ ನೆರೆ ತುಂಬಲು ಕಾರಣವಾಗಿ ಹಾನಿ ಹೆಚ್ಚಾಗಿದೆ. ಹಾನಗಲ್ ತಾಲೂಕಿನ ನಾಲ್ಕು ಗ್ರಾಮಗಳು, ಸವಣೂರ ತಾಲೂಕಿನ ನಾಲ್ಕ ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದವು. ಉಳಿದಂತೆ ಗ್ರಾಮಗಳಲ್ಲಿ ಭಾಗಶಃ ನೀರು ತುಂಬಿಹಾನಿ ಸಂಭವಿಸಿದೆ. ಸಂತ್ರಸ್ಥ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪರಿಹಾರ ಕೇಂದ್ರ
76 ಗ್ರಾಮಗಳು ಬಾಧಿತವಾಗಿದ್ದು, 6493 ಜನರನ್ನು ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಹಾವೇರಿಯಲ್ಲಿ 53, ರಾಣೇಬೆನ್ನೂರಿನಲ್ಲಿ ಎರಡು, ಬ್ಯಾಡಗಿಯಲ್ಲಿ ಎರಡು, ಸವಣೂರಿನಲ್ಲಿ ನಾಲ್ಕು, ಶಿಗ್ಗಾವಿಯಲ್ಲಿ ನಾಲ್ಕು ಹಾಗೂ ಹಾನಗಲ್ನಲ್ಲಿ 11 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರಿಹಾರ ಕೇಂದ್ರದಲ್ಲಿ ಆಶ್ರಯಪಡೆದಿರುವ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಹೊದಿಕೆಗಳನ್ನು ನೀಡಲಾಗಿದೆ, ಅಗತ್ಯ ವೈದ್ಯೋಪಚಾರದ ವ್ಯವಸ್ಥೆ ಮಾಡಲಾಗಿದೆ. ಸಂತ್ರಸ್ಥರ ಬೇಡಿಕೆಗೆ ಅನುಸಾರ ಯಾವುದೇ ಕೊರತೆಯಾಗದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪ್ರವಾಹದಲ್ಲಿ ಓರ್ವ ವ್ಯಕ್ತಿ ಕೊಚ್ಚಿಹೋಗಿದ್ದು ಈವರೆಗೆ ಪತ್ತೆಯಾಗಿಲ್ಲ ಹಾಗೂ ಐದು ಜನ ಗಾಯಾಳುಗಳಾಗಿದ್ದಾರೆ ಎಂದು ತಿಳಿಸಿದರು.
ಹಿರೇಕೆರೂರಿನಲ್ಲಿ ಒಂದು ಜಾನುವಾರು ಕ್ಯಾಂಪ್ನ್ನು ಸ್ಥಾಪಿಸಿ ಪರಿಹಾರ ಕೇಂದ್ರದಲ್ಲಿ ಇರಿಸಲಾಗಿದೆ. ಏಳು ತಾಲೂಕಿನಲ್ಲಿ ಜಾನುವಾರುಗಳಿಗಾಗಿ ಮೇವಿನ ಬ್ಯಾಂಕುಗಳನ್ನು ಸ್ಥಾಪಿಸಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. 23 ಕುರಿಗಳು, 10 ಮೇಕೆ, ಎರಡು ಎಮ್ಮೆ, ಎರಡು ಹಸು ಸಾವನ್ನಪ್ಪಿವೆ ಎಂದು ಮಾಹಿತಿ ಲಭ್ಯವಿದೆ ಎಂದರು.
ಮನೆ ಹಾನಿ
ಜಿಲ್ಲೆಯಲ್ಲಿ 2822 ಮನೆಗಳಿಗೆ ಹಾನಿಯಾಗಿದ್ದು 271.25 ಲಕ್ಷ ರೂ. ನಷ್ಟ ಸಂಭವಿಸಿದೆ. ಈ ಪೈಕಿ 2817 ಮನೆಗಳು ಭಾಗಶಃ ಹಾಳಾಗಿವೆ. ಅಂದಾಜು 266.41 ಲಕ್ಷ ರೂ. ಹಾನಿಯಾಗಿದೆ. ಐದು ಮನೆಗಳು ಪೂರ್ಣಪ್ರಮಾಣದಲ್ಲಿ ಹಾಳಾಗಿದ್ದು, ರೂ.4.88 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ ಎಂದು ತಿಳಿಸಿದರು.
ರಸ್ತೆಹಾನಿ
ಗುಡೂರು, ಗುಯಿಲಗುಂದಿ, ಮಣ್ಣೂರು, ಚಿಕ್ಕನೆಲ್ಲರೂ, ಹರವಿ, ಚಪ್ಪರದಿನ್ನಿ, ಅಲ್ಲಾಪುರ, ಹರನಗಿರಿ ಗ್ರಾಮಗಳ ಎಂಟು ಪಂಚಾಯತ್ ರಾಜ್ ಇಂಜನೀಯರಿಂಗ್ ವಿಭಾಗದ ರಸ್ತೆಗಳಿಗೆ ಹಾನಿಯಾಗಿದೆ. ಏಳು ರಾಜ್ಯ ಹೆದ್ದಾರಿಗಳು, 32 ಎಂ.ಡಿ.ಆರ್., ಆರು ಸಿಡಿಗಳು , ಒಂದು ಹೆಡ್ವಾಲ್ಸ್ ಹಾನಿಯಾಗಿದ್ದು ರೂ. 273.1 ಲಕ್ಷ ಮೌಲ್ಯದ ಲೋಕೋಪಯೋಗಿ ರಸ್ತೆ ಸೇತುವೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.
ವಿದ್ಯುತ್ ಹಾನಿ
701 ವಿದ್ಯುತ್ ಕಂಬಗಳು ಮುಳುಗಿಹೋಗಿವೆ. 177 ಕಂಬಳಿಗೆ ಹಾನಿಯಾಗಿದೆ. 137 ಡಿಟಿಸಿ ಹಾಗೂ ಡಿಟಿಆರ್. ಮುಳುಗಿ ಹೋಗಿವೆ. ಏಳು ಡಿಟಿಸಿಗೆ ಹಾನಿಯಾಗಿವೆ ನಷ್ಟದ ಅಂದಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬೆಳೆಹಾನಿ
ಕೃಷಿ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಬೆಳೆಹಾನಿ ಸಮೀಕ್ಷೆಯನ್ನು ಡ್ರೋನ್ ಕ್ಯಾಮರಾ ಬಳಸಿ ಸಮೀಕ್ಷೆ ನಡೆಸಲಾಗುತ್ತದೆ. ಪ್ರಾಥಮಿಕ ವರದಿಯಂತೆ ಐದು ಕೋಟಿ ರೂ. ಬೆಳೆನಷ್ಟ ಸಂಭವಿಸಿದೆ. 7261.95 ಹೆಕ್ಟೇರ್ ಬೆಳೆಹಾನಿಯಾಗಿದೆ. ಹಾನಗಲ್, ಹಾವೇರಿ, ಶಿಗ್ಗಾಂವ ಹಾಗೂ ಸವಣೂರ ತಾಲೂಕಿನಲ್ಲಿ ಹೆಚ್ಚಿನ ಬೆಳೆಹಾನಿ ಸಂಭವಿಸಿರುವುದಾಗಿ ತಿಳಿಸಿದರು.
ಕುಡಿಯುವ ನೀರು
ಹದಿನೈದು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಹಾಗೂ ಹತ್ತು ಜಾಕ್ವೆಲ್ಗಳು ನೀರಿನಲ್ಲಿ ಮುಳುಗಿ ಹೋಗಿವೆ. ನದಿನೀರಲಗಿ ಗ್ರಾಮಕ್ಕೆ ಬೋಟ್ ಮುಖಾಂತರ ನೀರಿನ ಕ್ಯಾನ್ಗಳನ್ನು ಕುಡಿಯಲು ಜನರಿಗೆ ಪೂರೈಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಾಚರಣೆ ಬೋಟ್ ವ್ಯವಸ್ಥೆ
ಬಳ್ಳಾರಿ ಹಾಗೂ ಚಿತ್ರದುರ್ಗದಿಂದ ಅಗ್ನಿಶಾಮಕ ದಳದ 30ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ನಾಲ್ಕು ಯಾಂತ್ರಿಕೃತ ಬೋಟ್ಗಳು ಜಿಲ್ಲೆಗೆ ಆಗಮಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್, ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಇದ್ದರು.
ಕೃಪೆ : ಉದಯ ಕಾಲ ನ್ಯೂಸ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ14 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

