ದಿನದ ಸುದ್ದಿ

ಕರ್ನಾಟಕದಲ್ಲಿ ವ್ಯಾಪಕ ಮಳೆ; ತುರ್ತು ಪರಿಹಾರಕ್ಕೆ 200 ಕೋಟಿ ರೂಪಾಯಿ ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraja Bommai) ಶನಿವಾರ ರಾಜ್ಯದ ( Karnataka ) ವಿವಿಧ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ ಕುರಿತು ( Havy Rain ) ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ( Vedio Conferences ) ನಡೆಸಿದರು.

ಮಳೆ ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ 21 ಜಿಲ್ಲೆಗಳಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ.

ಬಳ್ಳಾರಿ, ಧಾರವಾಡ, ಚಿತ್ರದುರ್ಗ, ಗದಗ, ಚಾಮರಾಜನಗರ, ಕೋಲಾರ, ಹಾವೇರಿ, ವಿಜಯನಗರ ಹಾಗೂ ಕೋಲಾರ ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ, ಚಿಕ್ಕಮಗಳೂರು, ಕೊಪ್ಪಳ, ಚಿಕ್ಕಬಳ್ಳಾಪುರ, ಮಂಡ್ಯ, ರಾಯಚೂರು, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 10 ಕೋಟಿ ರೂಪಾಯಿ ಹಾಗೂ ದಾವಣಗೆರೆ, ಹಾಸನ, ಉಡುಪಿ, ಮೈಸೂರು ಜಿಲ್ಲೆಗಳಿಗೆ ತಲಾ 15 ಕೋಟಿ ರೂಪಾಯಿ, ದಕ್ಷಿಣ ಕನ್ನಡ ಜಿಲ್ಲೆಗೆ 20 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಹಣ ಬಳಕೆಯಲ್ಲಿ ಯಾವುದೇ ಲೋಪವಾದಲ್ಲಿ ಆಯಾ ಜಿಲ್ಲಾಧಿಕಾರಿಯನ್ನು ನೇರವಾಗಿ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೇರಳದ ವೈನಾಡು ಸೇರಿದಂತೆ ಕಬಿನಿ ನದಿ ಪಾತ್ರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಪಿಲಾ ನದಿ ತುಂಬಿ ಹರಿಯುತ್ತಿದೆ ಮಳೆಯಿಂದಾಗಿ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಸುಮಾರು 30 ರಿಂದ 35 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version