ದಿನದ ಸುದ್ದಿ
ಹಿಮೋಫಿಲಿಯಾ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದಕ್ಕೋಸ್ಕರ ಬಂದಿದ್ದೇನೆ : ನಟ ಚೇತನ್
ಸುದ್ದಿದಿನ,ದಾವಣಗೆರೆ: ಹಿಮೋಫಿಲಿಯಾಕ್ಕೆ ತುತ್ತಾಗಿರುವ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದಕ್ಕೋಸ್ಕರವೆಂದೇ ನಾನು ಇಲ್ಲಿಗೆ ಬಂದಿದ್ದೇನೆ ಎಂದು ನಟ ಚೇತನ್ ಹೇಳಿದರು.
ನಗರದ ನಿಜಲಿಂಗಪ್ಪ ಬಡಾವಣೆಯ ಹಿಮೋಫಿಲಿಯಾ ಸೊಸೈಟಿಯಲ್ಲಿ ವಿಶ್ವ ಹಿಮೋಫಿಲಿಯಾ ದಿನಾಚರಣೆ ಅಂಗವಾಗಿ ನಡೆದ ಸಮಾರಂಭವನ್ನು ಹಿಮೋಫಿಲಿಯಾ ಮಕ್ಕಳ ಜೊತೆ ಬಲೂನ್ ಹಾರಿ ಬಿಡುವುದರ ಮೂಲಕ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಸಿನಿಮಾ ರಂಗದೊಂದಿಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಾನು ಹಿಮೋಫಿಲಿಯಾ ಜತೆ ದೇವದಾಸಿ ಪದ್ದತಿ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರಲ್ಲಿಯೂ ಜಾಗೃತಿ ಮೂಡಿಸಲು ಶ್ರಮಿಸುತ್ತಿದ್ದೇನೆ. ಇನ್ನು ಸರಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಹಿಮೋಫಿಲಿಯಾದ ರೋಗಿಗಳ ಬಗ್ಗೆ ಗಮನ ಹರಿಸಿ ಸಹಾಯ ಮಾಡುವುದರ ಜತೆ ಈ ರೋಗಿಗಳ ಬಗ್ಗೆ ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.
ಔಷಧಿ ತೆಗೆದುಕೋಳ್ಳಲು ಜನಸಾಮಾನ್ಯರಿಗೆ ಬಲುಕಷ್ಟ
ವಿಜ್ಞಾನ ಮುಂದುವರೆದಿದ್ದು, ಈ ಕಾಯಿಲೆಗೆ ಔಷಧಿ ಕಂಡುಹಿಡಿಯಲಾಗಿದೆ. ಆದರೆ ಈ ಔಷಧಿಗಳ ಬೆಲೆ ತುಂಬಾ ದುಬಾರಿಯಾಗಿದೆ. ಆದ್ದರಿಂದ ಮಧ್ಯಮ ಮತ್ತು ಬಡಕುಟುಂಬದ ಜನರು ಇಷ್ಟು ಹಣ ಹೊಂದಿಸುವುದು ಕಷ್ಟವಾಗಿದೆ. ಮಾನವೀಯತೆ ನೆಲೆಯಲ್ಲಿ ನಿಂತು ನಾವು ರೋಗಿಗಳನ್ನು ನೋಡಬೇಕಿದೆ. ಕಷ್ಟದಲ್ಲಿರುವವರ ಪರವಾಗಿ ಎಲ್ಲರು ಸಹಾಯಹಸ್ತ ಚಾಚಬೇಕು. ಈ ನಿಟ್ಟಿನಲ್ಲಿ ಮಾಧ್ಯಮಗಳು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಸರಕಾರಗಳು ಕೂಡ ಇಂಥಹ ಸಾಮಾಜಿಕ ಸೇವಾ ಕಾರ್ಯವನ್ನು ಹೆಚ್ಚಾಗಿ ಮಾಡಬೇಕಾದ ಅಗತ್ಯವಿದೆ ಎಂದರು. ಇನ್ನು ಹಿಮೋಫಿಲಿಯಾ ಬಾಧಿತರೊಂದಿಗೆ ಕೆಲ ಸಮಯ ವಿನಿಯೋಗಿಸಿದ ನಟ ಚೇತನ್ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿದರು.
ಖ್ಯಾತ ವೈದ್ಯ ಸುರೇಶ್ ಹನಗವಾಡಿ ಮಾತನಾಡಿ, ಏ.17ಕ್ಕೆ ವಿಶ್ವ ಹಿಮೊಫಿಲಿಯಾ ದಿನಾಚರಣೆ ಇದ್ದು, ಇದರ ನಿಮಿತ್ತ ಸಾರ್ವಜನಿಕರ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶ್ವ ಹಿಮೊಫಿಲಿಯಾ ಫೆಡರೇಷನ್ನ್ನು 1963ರಲ್ಲಿ ಕೆನಡಾ ದೇಶದ ಮಾಂಟ್ರಿಯಲ್ನಲ್ಲಿ ವ್ಯಾಪಾರಿ ಫ್ರಾಂಕ್ ಶಾನ್ ಬೆಲ್ ಹುಟ್ಟು ಹಾಕಿದ್ದು, ಆ ನಿಮಿತ್ತ ಈ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಈ ಕಾಯಿಲೆ 10,000 ಜನರಲ್ಲಿ ಒಬ್ಬರಿಗೆ ಬರಲಿದ್ದು, ರಕ್ತದಲ್ಲಿ ಪ್ರೋಟಿನ್ಗಳು ಕಡಿಮೆಯಾದಾಗ ರಕ್ತಸ್ರಾವ ಆಗುತ್ತದೆ. ಈ ಕಾಯಿಲೆ ಜೀವನ ಪರ್ಯಂತ ಇರುತ್ತದೆ. ಇಂಜೆಕ್ಷನ್ ಮೂಲಕ ಪ್ರೋಟಿನ್ಗಳನ್ನು ಕೊಡುವ ಮುಖಾಂತರ ಮಾತ್ರ ಇದನ್ನು ನಿಯಂತ್ರಿಸಬಹುದಾಗಿದೆ. ಆದರೆ ಈ ಇಂಜೆಕ್ಷನ್ ಹೆಚ್ಚು ಬೆಲೆವುಳ್ಳದಾಗಿದ್ದು, ನಮ್ಮ ಸಂಸ್ಥೆಯಲ್ಲಿ ಉಚಿತವಾಗಿ ಸಿಗುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ 126 ರೋಗಿಗಳು
27ವರ್ಷದಿಂದ ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಈ ರೋಗಕ್ಕೆ ತುತ್ತಾಗಿದ್ದಾರೆ. ದಾವಣಗೆರೆಯಲ್ಲಿ 126 ಹಿಮೋಫಿಲಿಯಾ ರೋಗಿಗಳಿದ್ದು, ರಾಜ್ಯದಲ್ಲಿ 6,000 ರೋಗಿಗಳಿದ್ದಾರೆ. ಅದರಲ್ಲಿ 2,000 ರೋಗಿಗಳು ಮಾತ್ರ ನೋಂದಣಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶ, ಸ್ಲಂ ಸೇರಿದಂತೆ ಇತರೆಡೆ ಈ ಬಗ್ಗೆ ಜಾಗೃತಿ ಇಲ್ಲದ ಕಾರಣ ಇನ್ನೂ 4,000 ರೋಗಿಗಳು ನೋಂದಣಿಯಾಗಿಲ್ಲ.
ಲೋಕಸಭೆಯಲ್ಲಿ ಅಂಗೀಕಾರ: ಇನ್ನು ಶಾಶ್ವತ ವಿಕಲಚೇತನರ ಪಟ್ಟಿಗೆ ಇವರನ್ನು ಸೇರಿಸಲು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಹಿಂದೆ ಸರಕಾರ ಹಿಮೋಫಿಲಿಯಾ ಬಂದವರಿಗೆ ಕೀಲು, ಮೂಳೆ ನೋವು ಬಂದ ನಂತರ ಅವರನ್ನು ವಿಕಲಚೇತನರ ಸರ್ಟೀಫಿಕೇಟ್ ಕೊಡಲಾಗುತ್ತಿತ್ತು. ಆದರೆ ಈಗ ಆ್ಯಕ್ಟ್ನಲ್ಲಿ ಸೇರಿಸುವುದರಿಂದ ಅವರಿಗೆ ವಿಕಲಚೇತನರ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಸರಕಾರ, ನಾನಾ ವೈದ್ಯರ ತಂಡ ಈ ರೋಗಿಗಳಿಗೆ ಸಾಕಷ್ಟು ಸಹಾಯ ಮಾಡುತ್ತಿದೆ. ಇನ್ನೂ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯ ನಮ್ಮ ಸಂಸ್ಥೆಗೆ ಮಹಾಪೋಷಕರಾಗಿ, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಹಾಡುಗಳನ್ನು ಹೇಳುತ್ತಾರೆ. ಎಂದು ಅಭಿಪ್ರಾಯಿಸಿದರು. ಈ ಸಂದರ್ಭದಲ್ಲಿ ದಾನಿಗಳಾದ ಕಿರುವಾಡಿ ಗಿರಿಜಮ್ಮ, ಸೊಸೈಟಿ ಅಧ್ಯಕ್ಷ ಡಾ. ಸುರೇಶ್ ಹನಗವಾಡಿ, ಹೈಕೋರ್ಟ್ವಕೀಲ ಅನಂತ ನಾಯ್ಕ, ಮೀರಾ ಹನಗವಾಡಿ ಸೇರಿದಂತೆ ಇತರರು ಇದ್ದರು.
ರಷ್ಯಾ ದೊರೆಗೆ ಮತ್ತು ಕ್ಲಿಯೋಪಾತ್ರಗೂ ಇತ್ತು ಹಿಮೋಫಿಲಿಯಾ
ಹಿಮೋಫಿಲಿಯಾ ಬಗ್ಗೆ ನನಗೆ ಚಿಕ್ಕಂದಿನಿಂದಲೂ ಹೆಚ್ಚು ಆಸಕ್ತಿ ಇತ್ತು. ಈ ಕಾಯಿಲೆ ಬಗ್ಗೆ ಇತಿಹಾಸದಲ್ಲಿಯೇ ದಾಖಲೆಗಳಿವೆ. ರಷ್ಯಾ ದೊರೆ ನಿಕೋಸಲ್ನ ಎರಡನೇ ಮಗನಿಗೆ ಈ ಖಾಯಿಲೆ ಇತ್ತು. ಈ ಸಂದರ್ಭದಲ್ಲಿ ಆ ರಾಜಮನೆತನದಲ್ಲಿ ನಡೆದ ಬೆಳವಣಿಗೆಗಳು ಮತ್ತು ಅದರ ನಂತರ ನಡೆದ ಸಾಮಾಜಿಕ ಬೆವಳಣಿಗೆಗಳು ನನ್ನ ಕುತೂಹಲಕ್ಕೆ ಕಾರಣವಾಯಿತು ಎಂದು ನಟ ಚೇತನ ಹೇಳಿದರು.
ಸುದ್ದಿಗಾಗಿ ಸುದ್ದಿದಿನ.ಕಾಂ | 9986715401

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

