ದಿನದ ಸುದ್ದಿ
ಹಿಮೋಫಿಲಿಯಾ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದಕ್ಕೋಸ್ಕರ ಬಂದಿದ್ದೇನೆ : ನಟ ಚೇತನ್
ಸುದ್ದಿದಿನ,ದಾವಣಗೆರೆ: ಹಿಮೋಫಿಲಿಯಾಕ್ಕೆ ತುತ್ತಾಗಿರುವ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದಕ್ಕೋಸ್ಕರವೆಂದೇ ನಾನು ಇಲ್ಲಿಗೆ ಬಂದಿದ್ದೇನೆ ಎಂದು ನಟ ಚೇತನ್ ಹೇಳಿದರು.
ನಗರದ ನಿಜಲಿಂಗಪ್ಪ ಬಡಾವಣೆಯ ಹಿಮೋಫಿಲಿಯಾ ಸೊಸೈಟಿಯಲ್ಲಿ ವಿಶ್ವ ಹಿಮೋಫಿಲಿಯಾ ದಿನಾಚರಣೆ ಅಂಗವಾಗಿ ನಡೆದ ಸಮಾರಂಭವನ್ನು ಹಿಮೋಫಿಲಿಯಾ ಮಕ್ಕಳ ಜೊತೆ ಬಲೂನ್ ಹಾರಿ ಬಿಡುವುದರ ಮೂಲಕ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಸಿನಿಮಾ ರಂಗದೊಂದಿಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಾನು ಹಿಮೋಫಿಲಿಯಾ ಜತೆ ದೇವದಾಸಿ ಪದ್ದತಿ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರಲ್ಲಿಯೂ ಜಾಗೃತಿ ಮೂಡಿಸಲು ಶ್ರಮಿಸುತ್ತಿದ್ದೇನೆ. ಇನ್ನು ಸರಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಹಿಮೋಫಿಲಿಯಾದ ರೋಗಿಗಳ ಬಗ್ಗೆ ಗಮನ ಹರಿಸಿ ಸಹಾಯ ಮಾಡುವುದರ ಜತೆ ಈ ರೋಗಿಗಳ ಬಗ್ಗೆ ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.
ಔಷಧಿ ತೆಗೆದುಕೋಳ್ಳಲು ಜನಸಾಮಾನ್ಯರಿಗೆ ಬಲುಕಷ್ಟ
ವಿಜ್ಞಾನ ಮುಂದುವರೆದಿದ್ದು, ಈ ಕಾಯಿಲೆಗೆ ಔಷಧಿ ಕಂಡುಹಿಡಿಯಲಾಗಿದೆ. ಆದರೆ ಈ ಔಷಧಿಗಳ ಬೆಲೆ ತುಂಬಾ ದುಬಾರಿಯಾಗಿದೆ. ಆದ್ದರಿಂದ ಮಧ್ಯಮ ಮತ್ತು ಬಡಕುಟುಂಬದ ಜನರು ಇಷ್ಟು ಹಣ ಹೊಂದಿಸುವುದು ಕಷ್ಟವಾಗಿದೆ. ಮಾನವೀಯತೆ ನೆಲೆಯಲ್ಲಿ ನಿಂತು ನಾವು ರೋಗಿಗಳನ್ನು ನೋಡಬೇಕಿದೆ. ಕಷ್ಟದಲ್ಲಿರುವವರ ಪರವಾಗಿ ಎಲ್ಲರು ಸಹಾಯಹಸ್ತ ಚಾಚಬೇಕು. ಈ ನಿಟ್ಟಿನಲ್ಲಿ ಮಾಧ್ಯಮಗಳು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಸರಕಾರಗಳು ಕೂಡ ಇಂಥಹ ಸಾಮಾಜಿಕ ಸೇವಾ ಕಾರ್ಯವನ್ನು ಹೆಚ್ಚಾಗಿ ಮಾಡಬೇಕಾದ ಅಗತ್ಯವಿದೆ ಎಂದರು. ಇನ್ನು ಹಿಮೋಫಿಲಿಯಾ ಬಾಧಿತರೊಂದಿಗೆ ಕೆಲ ಸಮಯ ವಿನಿಯೋಗಿಸಿದ ನಟ ಚೇತನ್ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿದರು.
ಖ್ಯಾತ ವೈದ್ಯ ಸುರೇಶ್ ಹನಗವಾಡಿ ಮಾತನಾಡಿ, ಏ.17ಕ್ಕೆ ವಿಶ್ವ ಹಿಮೊಫಿಲಿಯಾ ದಿನಾಚರಣೆ ಇದ್ದು, ಇದರ ನಿಮಿತ್ತ ಸಾರ್ವಜನಿಕರ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶ್ವ ಹಿಮೊಫಿಲಿಯಾ ಫೆಡರೇಷನ್ನ್ನು 1963ರಲ್ಲಿ ಕೆನಡಾ ದೇಶದ ಮಾಂಟ್ರಿಯಲ್ನಲ್ಲಿ ವ್ಯಾಪಾರಿ ಫ್ರಾಂಕ್ ಶಾನ್ ಬೆಲ್ ಹುಟ್ಟು ಹಾಕಿದ್ದು, ಆ ನಿಮಿತ್ತ ಈ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಈ ಕಾಯಿಲೆ 10,000 ಜನರಲ್ಲಿ ಒಬ್ಬರಿಗೆ ಬರಲಿದ್ದು, ರಕ್ತದಲ್ಲಿ ಪ್ರೋಟಿನ್ಗಳು ಕಡಿಮೆಯಾದಾಗ ರಕ್ತಸ್ರಾವ ಆಗುತ್ತದೆ. ಈ ಕಾಯಿಲೆ ಜೀವನ ಪರ್ಯಂತ ಇರುತ್ತದೆ. ಇಂಜೆಕ್ಷನ್ ಮೂಲಕ ಪ್ರೋಟಿನ್ಗಳನ್ನು ಕೊಡುವ ಮುಖಾಂತರ ಮಾತ್ರ ಇದನ್ನು ನಿಯಂತ್ರಿಸಬಹುದಾಗಿದೆ. ಆದರೆ ಈ ಇಂಜೆಕ್ಷನ್ ಹೆಚ್ಚು ಬೆಲೆವುಳ್ಳದಾಗಿದ್ದು, ನಮ್ಮ ಸಂಸ್ಥೆಯಲ್ಲಿ ಉಚಿತವಾಗಿ ಸಿಗುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ 126 ರೋಗಿಗಳು
27ವರ್ಷದಿಂದ ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಈ ರೋಗಕ್ಕೆ ತುತ್ತಾಗಿದ್ದಾರೆ. ದಾವಣಗೆರೆಯಲ್ಲಿ 126 ಹಿಮೋಫಿಲಿಯಾ ರೋಗಿಗಳಿದ್ದು, ರಾಜ್ಯದಲ್ಲಿ 6,000 ರೋಗಿಗಳಿದ್ದಾರೆ. ಅದರಲ್ಲಿ 2,000 ರೋಗಿಗಳು ಮಾತ್ರ ನೋಂದಣಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶ, ಸ್ಲಂ ಸೇರಿದಂತೆ ಇತರೆಡೆ ಈ ಬಗ್ಗೆ ಜಾಗೃತಿ ಇಲ್ಲದ ಕಾರಣ ಇನ್ನೂ 4,000 ರೋಗಿಗಳು ನೋಂದಣಿಯಾಗಿಲ್ಲ.
ಲೋಕಸಭೆಯಲ್ಲಿ ಅಂಗೀಕಾರ: ಇನ್ನು ಶಾಶ್ವತ ವಿಕಲಚೇತನರ ಪಟ್ಟಿಗೆ ಇವರನ್ನು ಸೇರಿಸಲು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಹಿಂದೆ ಸರಕಾರ ಹಿಮೋಫಿಲಿಯಾ ಬಂದವರಿಗೆ ಕೀಲು, ಮೂಳೆ ನೋವು ಬಂದ ನಂತರ ಅವರನ್ನು ವಿಕಲಚೇತನರ ಸರ್ಟೀಫಿಕೇಟ್ ಕೊಡಲಾಗುತ್ತಿತ್ತು. ಆದರೆ ಈಗ ಆ್ಯಕ್ಟ್ನಲ್ಲಿ ಸೇರಿಸುವುದರಿಂದ ಅವರಿಗೆ ವಿಕಲಚೇತನರ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಸರಕಾರ, ನಾನಾ ವೈದ್ಯರ ತಂಡ ಈ ರೋಗಿಗಳಿಗೆ ಸಾಕಷ್ಟು ಸಹಾಯ ಮಾಡುತ್ತಿದೆ. ಇನ್ನೂ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯ ನಮ್ಮ ಸಂಸ್ಥೆಗೆ ಮಹಾಪೋಷಕರಾಗಿ, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಹಾಡುಗಳನ್ನು ಹೇಳುತ್ತಾರೆ. ಎಂದು ಅಭಿಪ್ರಾಯಿಸಿದರು. ಈ ಸಂದರ್ಭದಲ್ಲಿ ದಾನಿಗಳಾದ ಕಿರುವಾಡಿ ಗಿರಿಜಮ್ಮ, ಸೊಸೈಟಿ ಅಧ್ಯಕ್ಷ ಡಾ. ಸುರೇಶ್ ಹನಗವಾಡಿ, ಹೈಕೋರ್ಟ್ವಕೀಲ ಅನಂತ ನಾಯ್ಕ, ಮೀರಾ ಹನಗವಾಡಿ ಸೇರಿದಂತೆ ಇತರರು ಇದ್ದರು.
ರಷ್ಯಾ ದೊರೆಗೆ ಮತ್ತು ಕ್ಲಿಯೋಪಾತ್ರಗೂ ಇತ್ತು ಹಿಮೋಫಿಲಿಯಾ
ಹಿಮೋಫಿಲಿಯಾ ಬಗ್ಗೆ ನನಗೆ ಚಿಕ್ಕಂದಿನಿಂದಲೂ ಹೆಚ್ಚು ಆಸಕ್ತಿ ಇತ್ತು. ಈ ಕಾಯಿಲೆ ಬಗ್ಗೆ ಇತಿಹಾಸದಲ್ಲಿಯೇ ದಾಖಲೆಗಳಿವೆ. ರಷ್ಯಾ ದೊರೆ ನಿಕೋಸಲ್ನ ಎರಡನೇ ಮಗನಿಗೆ ಈ ಖಾಯಿಲೆ ಇತ್ತು. ಈ ಸಂದರ್ಭದಲ್ಲಿ ಆ ರಾಜಮನೆತನದಲ್ಲಿ ನಡೆದ ಬೆಳವಣಿಗೆಗಳು ಮತ್ತು ಅದರ ನಂತರ ನಡೆದ ಸಾಮಾಜಿಕ ಬೆವಳಣಿಗೆಗಳು ನನ್ನ ಕುತೂಹಲಕ್ಕೆ ಕಾರಣವಾಯಿತು ಎಂದು ನಟ ಚೇತನ ಹೇಳಿದರು.
ಸುದ್ದಿಗಾಗಿ ಸುದ್ದಿದಿನ.ಕಾಂ | 9986715401

ದಿನದ ಸುದ್ದಿ
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿಯು 51 ಸಾವಿರ ರೂಪಾಯಿ ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಮಿತಿ ಅನುಮೋದಿಸಿದೆ.
ಸಾಮಾನ್ಯ ದರ್ಜೆ ಭತ್ತಕ್ಕೆ ಕ್ವಿಂಟಲ್ಗೆ 2 ಸಾವಿರದ 40 ರೂಪಾಯಿಯಿಂದ 2ಸಾವಿರದ 183 ರೂಪಾಯಿಗೆ ಹಾಗೂ ’ಎ’ ದರ್ಜೆ ಭತ್ತಕ್ಕೆ 2 ಸಾವಿರದ 60 ರಿಂದ 2 ಸಾವಿರದ 203 ರೂಪಾಯಿಗೆ ಹೆಚ್ಚಿಸಲಾಗಿದೆ.
ರಾಗಿಗೆ ಪ್ರತಿ ಕ್ವಿಂಟಲ್ಗೆ 3 ಸಾವಿರದ 578 ರೂಪಾಯಿಯಿಂದ 3 ಸಾವಿರದ 846 ರೂಪಾಯಿಗೆ ಹೆಚ್ಚಿಸಲಾಗಿದೆ. ತೊಗರಿಗೆ ಪ್ರತಿ ಕ್ವಿಂಟಲ್ಗೆ 6 ಸಾವಿರದ 600 ರಿಂದ 7 ಸಾವಿರ ರೂಪಾಯಿಗೆ, ಹೆಸರು ಕಾಳಿಗೆ ಪ್ರತಿ ಕ್ವಿಂಟಲ್ಗೆ 7 ಸಾವಿರದ 755 ರಿಂದ 8 ಸಾವಿರದ 558 ರೂಪಾಯಿಗೆ, ಪ್ರತಿ ಕ್ವಿಂಟಲ್ ಉದ್ದಿಗೆ 6 ಸಾವಿರದ 600 ರಿಂದ 6 ಸಾವಿರದ 950 ರೂಪಾಯಿಗೆ ಹೆಚ್ಚಿಸಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ 2022-23ನೇ ಸಾಲಿಗೆ 330.5 ದಶಲಕ್ಷ ಟನ್ನಷ್ಟು ಆಹಾರ ಧಾನ್ಯ ಉತ್ಪಾದನೆ ಅಂದಾಜಿಸಲಾಗದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ6 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ಲೈಫ್ ಸ್ಟೈಲ್4 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ6 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ6 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ