ದಿನದ ಸುದ್ದಿ
ಹಿಮೋಫಿಲಿಯಾ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದಕ್ಕೋಸ್ಕರ ಬಂದಿದ್ದೇನೆ : ನಟ ಚೇತನ್
ಸುದ್ದಿದಿನ,ದಾವಣಗೆರೆ: ಹಿಮೋಫಿಲಿಯಾಕ್ಕೆ ತುತ್ತಾಗಿರುವ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದಕ್ಕೋಸ್ಕರವೆಂದೇ ನಾನು ಇಲ್ಲಿಗೆ ಬಂದಿದ್ದೇನೆ ಎಂದು ನಟ ಚೇತನ್ ಹೇಳಿದರು.
ನಗರದ ನಿಜಲಿಂಗಪ್ಪ ಬಡಾವಣೆಯ ಹಿಮೋಫಿಲಿಯಾ ಸೊಸೈಟಿಯಲ್ಲಿ ವಿಶ್ವ ಹಿಮೋಫಿಲಿಯಾ ದಿನಾಚರಣೆ ಅಂಗವಾಗಿ ನಡೆದ ಸಮಾರಂಭವನ್ನು ಹಿಮೋಫಿಲಿಯಾ ಮಕ್ಕಳ ಜೊತೆ ಬಲೂನ್ ಹಾರಿ ಬಿಡುವುದರ ಮೂಲಕ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಸಿನಿಮಾ ರಂಗದೊಂದಿಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಾನು ಹಿಮೋಫಿಲಿಯಾ ಜತೆ ದೇವದಾಸಿ ಪದ್ದತಿ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರಲ್ಲಿಯೂ ಜಾಗೃತಿ ಮೂಡಿಸಲು ಶ್ರಮಿಸುತ್ತಿದ್ದೇನೆ. ಇನ್ನು ಸರಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಹಿಮೋಫಿಲಿಯಾದ ರೋಗಿಗಳ ಬಗ್ಗೆ ಗಮನ ಹರಿಸಿ ಸಹಾಯ ಮಾಡುವುದರ ಜತೆ ಈ ರೋಗಿಗಳ ಬಗ್ಗೆ ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.
ಔಷಧಿ ತೆಗೆದುಕೋಳ್ಳಲು ಜನಸಾಮಾನ್ಯರಿಗೆ ಬಲುಕಷ್ಟ
ವಿಜ್ಞಾನ ಮುಂದುವರೆದಿದ್ದು, ಈ ಕಾಯಿಲೆಗೆ ಔಷಧಿ ಕಂಡುಹಿಡಿಯಲಾಗಿದೆ. ಆದರೆ ಈ ಔಷಧಿಗಳ ಬೆಲೆ ತುಂಬಾ ದುಬಾರಿಯಾಗಿದೆ. ಆದ್ದರಿಂದ ಮಧ್ಯಮ ಮತ್ತು ಬಡಕುಟುಂಬದ ಜನರು ಇಷ್ಟು ಹಣ ಹೊಂದಿಸುವುದು ಕಷ್ಟವಾಗಿದೆ. ಮಾನವೀಯತೆ ನೆಲೆಯಲ್ಲಿ ನಿಂತು ನಾವು ರೋಗಿಗಳನ್ನು ನೋಡಬೇಕಿದೆ. ಕಷ್ಟದಲ್ಲಿರುವವರ ಪರವಾಗಿ ಎಲ್ಲರು ಸಹಾಯಹಸ್ತ ಚಾಚಬೇಕು. ಈ ನಿಟ್ಟಿನಲ್ಲಿ ಮಾಧ್ಯಮಗಳು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಸರಕಾರಗಳು ಕೂಡ ಇಂಥಹ ಸಾಮಾಜಿಕ ಸೇವಾ ಕಾರ್ಯವನ್ನು ಹೆಚ್ಚಾಗಿ ಮಾಡಬೇಕಾದ ಅಗತ್ಯವಿದೆ ಎಂದರು. ಇನ್ನು ಹಿಮೋಫಿಲಿಯಾ ಬಾಧಿತರೊಂದಿಗೆ ಕೆಲ ಸಮಯ ವಿನಿಯೋಗಿಸಿದ ನಟ ಚೇತನ್ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿದರು.
ಖ್ಯಾತ ವೈದ್ಯ ಸುರೇಶ್ ಹನಗವಾಡಿ ಮಾತನಾಡಿ, ಏ.17ಕ್ಕೆ ವಿಶ್ವ ಹಿಮೊಫಿಲಿಯಾ ದಿನಾಚರಣೆ ಇದ್ದು, ಇದರ ನಿಮಿತ್ತ ಸಾರ್ವಜನಿಕರ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶ್ವ ಹಿಮೊಫಿಲಿಯಾ ಫೆಡರೇಷನ್ನ್ನು 1963ರಲ್ಲಿ ಕೆನಡಾ ದೇಶದ ಮಾಂಟ್ರಿಯಲ್ನಲ್ಲಿ ವ್ಯಾಪಾರಿ ಫ್ರಾಂಕ್ ಶಾನ್ ಬೆಲ್ ಹುಟ್ಟು ಹಾಕಿದ್ದು, ಆ ನಿಮಿತ್ತ ಈ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಈ ಕಾಯಿಲೆ 10,000 ಜನರಲ್ಲಿ ಒಬ್ಬರಿಗೆ ಬರಲಿದ್ದು, ರಕ್ತದಲ್ಲಿ ಪ್ರೋಟಿನ್ಗಳು ಕಡಿಮೆಯಾದಾಗ ರಕ್ತಸ್ರಾವ ಆಗುತ್ತದೆ. ಈ ಕಾಯಿಲೆ ಜೀವನ ಪರ್ಯಂತ ಇರುತ್ತದೆ. ಇಂಜೆಕ್ಷನ್ ಮೂಲಕ ಪ್ರೋಟಿನ್ಗಳನ್ನು ಕೊಡುವ ಮುಖಾಂತರ ಮಾತ್ರ ಇದನ್ನು ನಿಯಂತ್ರಿಸಬಹುದಾಗಿದೆ. ಆದರೆ ಈ ಇಂಜೆಕ್ಷನ್ ಹೆಚ್ಚು ಬೆಲೆವುಳ್ಳದಾಗಿದ್ದು, ನಮ್ಮ ಸಂಸ್ಥೆಯಲ್ಲಿ ಉಚಿತವಾಗಿ ಸಿಗುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ 126 ರೋಗಿಗಳು
27ವರ್ಷದಿಂದ ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಈ ರೋಗಕ್ಕೆ ತುತ್ತಾಗಿದ್ದಾರೆ. ದಾವಣಗೆರೆಯಲ್ಲಿ 126 ಹಿಮೋಫಿಲಿಯಾ ರೋಗಿಗಳಿದ್ದು, ರಾಜ್ಯದಲ್ಲಿ 6,000 ರೋಗಿಗಳಿದ್ದಾರೆ. ಅದರಲ್ಲಿ 2,000 ರೋಗಿಗಳು ಮಾತ್ರ ನೋಂದಣಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶ, ಸ್ಲಂ ಸೇರಿದಂತೆ ಇತರೆಡೆ ಈ ಬಗ್ಗೆ ಜಾಗೃತಿ ಇಲ್ಲದ ಕಾರಣ ಇನ್ನೂ 4,000 ರೋಗಿಗಳು ನೋಂದಣಿಯಾಗಿಲ್ಲ.
ಲೋಕಸಭೆಯಲ್ಲಿ ಅಂಗೀಕಾರ: ಇನ್ನು ಶಾಶ್ವತ ವಿಕಲಚೇತನರ ಪಟ್ಟಿಗೆ ಇವರನ್ನು ಸೇರಿಸಲು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಹಿಂದೆ ಸರಕಾರ ಹಿಮೋಫಿಲಿಯಾ ಬಂದವರಿಗೆ ಕೀಲು, ಮೂಳೆ ನೋವು ಬಂದ ನಂತರ ಅವರನ್ನು ವಿಕಲಚೇತನರ ಸರ್ಟೀಫಿಕೇಟ್ ಕೊಡಲಾಗುತ್ತಿತ್ತು. ಆದರೆ ಈಗ ಆ್ಯಕ್ಟ್ನಲ್ಲಿ ಸೇರಿಸುವುದರಿಂದ ಅವರಿಗೆ ವಿಕಲಚೇತನರ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಸರಕಾರ, ನಾನಾ ವೈದ್ಯರ ತಂಡ ಈ ರೋಗಿಗಳಿಗೆ ಸಾಕಷ್ಟು ಸಹಾಯ ಮಾಡುತ್ತಿದೆ. ಇನ್ನೂ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯ ನಮ್ಮ ಸಂಸ್ಥೆಗೆ ಮಹಾಪೋಷಕರಾಗಿ, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಹಾಡುಗಳನ್ನು ಹೇಳುತ್ತಾರೆ. ಎಂದು ಅಭಿಪ್ರಾಯಿಸಿದರು. ಈ ಸಂದರ್ಭದಲ್ಲಿ ದಾನಿಗಳಾದ ಕಿರುವಾಡಿ ಗಿರಿಜಮ್ಮ, ಸೊಸೈಟಿ ಅಧ್ಯಕ್ಷ ಡಾ. ಸುರೇಶ್ ಹನಗವಾಡಿ, ಹೈಕೋರ್ಟ್ವಕೀಲ ಅನಂತ ನಾಯ್ಕ, ಮೀರಾ ಹನಗವಾಡಿ ಸೇರಿದಂತೆ ಇತರರು ಇದ್ದರು.
ರಷ್ಯಾ ದೊರೆಗೆ ಮತ್ತು ಕ್ಲಿಯೋಪಾತ್ರಗೂ ಇತ್ತು ಹಿಮೋಫಿಲಿಯಾ
ಹಿಮೋಫಿಲಿಯಾ ಬಗ್ಗೆ ನನಗೆ ಚಿಕ್ಕಂದಿನಿಂದಲೂ ಹೆಚ್ಚು ಆಸಕ್ತಿ ಇತ್ತು. ಈ ಕಾಯಿಲೆ ಬಗ್ಗೆ ಇತಿಹಾಸದಲ್ಲಿಯೇ ದಾಖಲೆಗಳಿವೆ. ರಷ್ಯಾ ದೊರೆ ನಿಕೋಸಲ್ನ ಎರಡನೇ ಮಗನಿಗೆ ಈ ಖಾಯಿಲೆ ಇತ್ತು. ಈ ಸಂದರ್ಭದಲ್ಲಿ ಆ ರಾಜಮನೆತನದಲ್ಲಿ ನಡೆದ ಬೆಳವಣಿಗೆಗಳು ಮತ್ತು ಅದರ ನಂತರ ನಡೆದ ಸಾಮಾಜಿಕ ಬೆವಳಣಿಗೆಗಳು ನನ್ನ ಕುತೂಹಲಕ್ಕೆ ಕಾರಣವಾಯಿತು ಎಂದು ನಟ ಚೇತನ ಹೇಳಿದರು.
ಸುದ್ದಿಗಾಗಿ ಸುದ್ದಿದಿನ.ಕಾಂ | 9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!