Connect with us

ದಿನದ ಸುದ್ದಿ

ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್

Published

on

ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದರು.

ಗ್ಯಾರಂಟಿ ಅನುಷ್ಟಾನ ಕುರಿತು ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಯೋಜನೆಗಳು ಜಾರಿಗೆ ಬರಲಿವೆ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ ಎಂದರು. ಗೃಹಜ್ಯೋತಿ ಯೋಜನೆಯಡಿ – 200 ಯುನಿಟ್ ವರೆಗೆ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇಕಡ 10 ರಷ್ಟರವರೆಗಿನ ವಿದ್ಯುತ್ ಉಚಿತ.

ಜುಲೈ 1 ರಿಂದ ಆಗಸ್ಟ್ ವರೆಗಿನ ಖರ್ಚಿಗೆ ಇದು ಅನ್ವಯಿಸಲಿದೆ. ಜುಲೈನಿಂದ ವಿದ್ಯುತ್ ಬಿಲ್ ಆಗಸ್ಟ್‌ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ನೀಡುವುದಿಲ್ಲ ಎಂದರು.

ಗೃಹಲಕ್ಷ್ಮೀ ಯೋಜನೆಯಡಿ – ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್‌ವೇರ್ ತಂತ್ರಾಂಶ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮೆ ಆಗುವುದು. ಇದಕ್ಕಾಗಿ ಜೂನ್ 15 ರಿಂದ ಜುಲೈ 15 ರೊಳಗೆ ಆನ್‌ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.

18 ವರ್ಷ ತುಂಬಿದವರು. ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರಕ್ರಿಯೆ ನಡೆಸಿ, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಸೌಲಭ್ಯ ಇಲ್ಲ ಎಂದರು.

ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ,7 ಕೆ.ಜಿ. ಅಕ್ಕಿ ನೀಡುತ್ತಿದ್ದೆವು. ಅದನ್ನು ಬಿಜೆಪಿ ಸರ್ಕಾರ ಅದನ್ನು5 ಕೆ.ಜಿ.ಗೆ ಇಳಿಸಿದ್ದರು. ಇದೀಗ 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ಹೀಗಾಗಿ ಜುಲೈ 1 ರಿಂದ ಬಿಪಿಎಲ್ + ಅಂತ್ಯೋದಯ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ವಿವಿಧ ಮೂಲಗಳಿಂದ ತಂದು ವಿತರಿಸಲಾಗುತ್ತದೆ ಎಂದರು.

ಶಕ್ತಿ ಯೋಜನೆಡಿ ಸಮಾಜದಲ್ಲಿ ಶೇಕಡ ೫೦ ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು ಹೊರತುಪಡಿಸಿ ಉಳಿದೆಲ್ಲಾ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ. ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ಶೇಕಡ 50 ರಷ್ಟು ಆಸನವನ್ನು ಪುರುಷರಿಗೆ ಮೀಸಲಿರಿಸಲಾಗುವುದು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಯುವನಿಧಿ ಯೋಜನೆಯಡಿ – 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣವೂ ಸೇರಿ ಎಲ್ಲ ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಪದವೀಧರರಿಗೆ 1 ಸಾವಿರದ 500 ರೂಪಾಯಿ ನೀಡಲಾಗುವುದು. ಅಷ್ಟರೊಳಗೆ ಉದ್ಯೋಗ ಪಡೆದವರು ಅಂತವರು ಘೋಷಿಸಿಕೊಂಡರೆ ಅಂತವರಿಗೆ ಯುವ ನಿಧಿ ಭತ್ಯೆ ಕೊನೆಗೊಳ್ಳುತ್ತದೆ. ಈ ಯೋಜನೆಗೆ ಯುವಕ, ಯುವತಿ ಮತ್ತು ತೃತೀಯಲಿಂಗಿಗಳಿಗೂ ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending