Connect with us

ದಿನದ ಸುದ್ದಿ

ಸಂದರ್ಶನದ ವಿಡಿಯೋ ಪೂರ್ತಿ ನೋಡಿ, ತಪ್ಪಾಗಿ ಅರ್ಥೈಸ ಬೇಡಿ ; ನನ್ನ ಪರವಾಗಿ ನಿಂತವರಿಗೆ ಧನ್ಯವಾದ : ನಟಿ ಸಾಯಿ ಪಲ್ಲವಿ ಸ್ಪಷ್ಟನೆ

Published

on

ಸುದ್ದಿದಿನ ಡೆಸ್ಕ್ : ಲೇಡಿ ಪವರ್ ಸ್ಟಾರ್, ನಟಿ ಸಾಯಿ ಪಲ್ಲವಿ ‘ವಿರಾಟ ಪರ್ವಂ’ ಸಿನಿಮಾದ ಪ್ರಚಾರದ ವೇಳೆ ಸಂದರ್ಶನವೊಂದರಲ್ಲಿ ‌ಇತ್ತೀಚೆಗೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡ ಕೆಲವರು ನಟಿಯ ವಿರುದ್ಧ ದೂರು ದಾಖಲಿಸಿದ್ದರು.

ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ದನವೊಂದನ್ನು ಒಯ್ಯುತ್ತಿದ್ದವರನ್ನು ಕೊಂದು ಹಾಕಿದವರಿಗೂ,
ಕಾಶ್ಮೀರ್ ಪಂಡಿತರನ್ನು ಕೊಂದವರಿಗೂ ಯಾವುದೇ ವ್ಯತ್ಯಾಸವಿಲ್ಲ. ಧರ್ಮಕ್ಕಿಂತ ಮನುಷ್ಯತ್ವವೇ ಮುಖ್ಯ..! ಎಂದು ಹೇಳಿದ್ದ ಸಾಯಿ ಪಲ್ಲವಿ ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮತ್ತು ಮುಸ್ಲಿಂ ಡ್ರೈವರ್ ಮೇಲಿನ ಹಲ್ಲೆಯ ಘಟನೆಯನ್ನು ಹೋಲಿಸಿ ಮಾತನಾಡಿದ್ದರು.

ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಿವೆ. ಕೆಲವು ಮಂದಿ ಸಾಯಿ ಪಲ್ಲವಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಭಜರಂಗದಳವು ನಟಿಯ ವಿರುದ್ದ ದೂರನ್ನು ಕೂಡ ನಿನ್ನೆ ದಾಖಲಿಸಿತು. ಇದರ ಬೆನ್ನಲ್ಲೇ ಸಾಯಿ ಪಲ್ಲವಿ ತಮ್ಮ ಪೇಸ್ ಬುಕ್ ಖಾತೆ , ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಒಂದನ್ನು ಪೋಸ್ಟ್ ಮಾಡುವುದರ ಮೂಲಕ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ನನ್ನ ಪ್ರೀತಿಯ ವೀಕ್ಷಕರೆ, ಇದೇ ಮೊದಲ ಬಾರಿಗೆ ನಾನು ಸ್ಪಷ್ಟನೆ ನೀಡಲು ನಿಮ್ಮೆದುರು ಬಂದಿದ್ದೇನೆ. ಮಾತನಾಡುವಾಗ ನಾನು ಎರಡು ಬಾರಿ ಯೋಚಿಸುತ್ತೇನೆ. ಇತ್ತೀಚಿನ ಸಂದರ್ಶನವೊಂದರಲ್ಲಿ ನಾನು ಎಡವೋ ಅಥವಾ ಬಲವೋ ಎಂದು ನಿರೂಪಕರು ಪ್ರಶ್ನಿಸಿದರು. ಆಗ ನಾನು ಎಡವೂ ಅಲ್ಲ ಬಲವೂ ಅಲ್ಲ ನಾನು ತಟಸ್ಥ ಎನ್ನುವ ಉತ್ತರ ಕೊಟ್ಟೆ.
ಮೊದಲು ನಾನು ಮನುಷ್ಯರಾಗಬೇಕಿದೆ ಎಂದು ಹೇಳಿದೆ.

ನನಗೆ ಎರಡು ಘಟನೆಗಳು ವಿಚಲಿತಗೊಳಿಸಿದವು. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಿದ ನಂತರ ನಾನು ತುಂಬಾ ಡಿಸ್ಟರ್ಬ್ ಆದೆ. ಅಲ್ಲಿ ನಡೆದ ಹತ್ಯೆಗಳ ಬಗ್ಗೆ ನೊಂದು ಕೊಂಡೆ. ನಿರ್ದೇಶಕರಾದ ವಿವೇಕ್ ಅಗ್ನಿಹೋತ್ರಿ ಅವರ ಜೊತೆ ಇದರ ಬಗ್ಗೆ ಮಾತನಾಡಿದ್ದೆ. ಅದೇ ರೀತಿ ಕೊವಿಡ್ ಸಂದರ್ಭದಲ್ಲಿ ಆದ ಗುಂಪು ಹಲ್ಲೆ ವಿಡಿಯೋ ನೋಡಿ ಕೂಡ ನಾನು ವಿಚಲಿತಗೊಂಡು ನೊಂದೆ.

ಅದು ಯಾವುದೇ ಧರ್ಮವಾಗಿರಲಿ, ಆ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ತಪ್ಪು. ಕೋವಿಡ್ ಸಮಯದ ಗುಂಪು ಹಲ್ಲೆಯನ್ನು ಕೆಲವರು ಸಮರ್ಥಿಸಿಕೊಂಡಿದ್ದ ಕಂಡು ಙಗೆ ಬೇಸರವಾಯಿತು. ಬೇರೆಯವರ ಜೀವವನ್ನು ತೆಗೆಯುವ ಹಕ್ಕ ಯಾರಿಗೂ ಇಲ್ಲ . ನಾನೊಬ್ಬಳು ಎಂಬಿಬಿಎಸ್ ಪದವೀಧರೆ ಎಲ್ಲರ ಜೀವವೂ ಮುಖ್ಯ ಎಂದು ನಾನು ನಂಬಿದ್ದೇನೆ.

ಭಾರತೀಯರೆಲ್ಲಾ ನಾವು ಸಹೋದರ- ಸಹೋದರಿಯರು ಎಂದು ಹೇಳುತ್ತಾ ಬೆಳೆದಿದ್ದೇವೆ . ನನ್ನ ಮನಸ್ಸಲ್ಲಿ ಆ ಮಾತು ಆಳವಾಗಿ ಬೇರೂರಿದೆ. ಇತ್ತೀಚೆಗೆ ನಾನು ಮಾತಾಡಿದ್ದನ್ನು ಬೇರೆ ರೀತಿಯಲ್ಲಿ ಕೆಲವರು ಅರ್ಥೈಸಿದ್ದು ನಿಜಕ್ಕೂ ಬೇಸರದ ಸಂಗತಿ. ಪೂರ್ಣ ಸಂದರ್ಶನ ನೋಡದೆ ಕೆಲವರು ನನ್ನ ವಿರುದ್ಧ ಮಾತನಾಡಿದ್ದಾರೆ. ಹಾಗೇ ನನ್ನ ಮಾತನ್ನು ಅರ್ಥೈಸಿಕೊಂಡು ಪರವಾಗಿ ನಿಂತವರಿಗೆ ನನ್ನ ಧನ್ಯವಾದ’ ಎಂದಿದ್ದಾರೆ ಸಾಯಿ ಪಲ್ಲವಿ.

 

 

View this post on Instagram

 

A post shared by Sai Pallavi (@saipallavi.senthamarai)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending