ದಿನದ ಸುದ್ದಿ
ಜೀರೋ ತ್ಯಾಜ್ಯದ ಹೀರೋ, ಬೆಂಗಳೂರಿನ ಜ್ಯೂಸ್ ರಾಜಾ ಅವರನ್ನು ಹಿಸ್ಟರಿ ಟಿವಿ18 ನ ‘ಒಎಂಜಿ! ಯೆ ಮೇರಾ ಇಂಡಿಯಾ’ದಲ್ಲಿ ಭೇಟಿ ಮಾಡಿ
ಈ ಸ್ಟೋರಿ ಹಾಗೂ ಇತರ ಅದ್ಭುತ, ಅಮೋಘ ಮತ್ತು ಸ್ಫೂರ್ತಿದಾಯಕ ಸ್ಟೋರಿಗಳನ್ನು ಸೋಮವಾರ, 5 ಏಪ್ರಿಲ್ ರಾತ್ರಿ 8 ಗಂಟೆಗೆ HistoryTV18 ನಲ್ಲಿ ವೀಕ್ಷಿಸಿ
ಸುದ್ದಿದಿನ, ಬೆಂಗಳೂರು : ಭಾರತೀಯರು ಅಂದಾಜು 40% ಆಹಾರವನ್ನು ಪ್ರತಿ ವರ್ಷ ಎಸೆಯುತ್ತಾರೆ. ಇದು ಒಂದು ವರ್ಷದಲ್ಲಿ 6.7 ಕೋಟಿ ಟನ್ ಕಸಕ್ಕೆ ಎಸೆದ ಹಾಗೆ ಎಂದು ಭಾವಿಸಬಹುದು. ಇದು ನಿಮಗೆ ಆಘಾತ ನೀಡಿದರೆ, ಚಿಂತೆ ಮಾಡಬೇಡಿ! ಯಾಕೆಂದರೆ ನಮ್ಮ ಬೆಂಗಳೂರಿನಲ್ಲಿ ಒಬ್ಬರು ಶೂನ್ಯ ತ್ಯಾಜ್ಯದ ಹೀರೋ ಇದ್ದಾರೆ. ಈ ಆನಂದ್ ರಾಜ್ ನಗರದಲ್ಲಿ ಜ್ಯೂಸ್ ರಾಜಾ ಎಂದೇ ಹೆಸರಾಗಿದ್ದಾರೆ.
ಈ ಸೋಮವಾರ ರಾತ್ರಿ 8 ಗಂಟೆಗೆ HistoryTV18 ಟ್ಯೂನ್ ಮಾಡಿ ಮತ್ತು ಆನಂದ್ ಅವರನ್ನು ‘OMG! Yeh Mera India’ ದಲ್ಲಿ ಭೇಟಿ ಮಾಡಿ. ಈ ಸಿರೀಸ್ನಲ್ಲಿ ಅತ್ಯಂತ ಸ್ಫೂರ್ತಿದಾಯಕ ಮತ್ತು ಅದ್ಭುತ ಸ್ಟೋರಿಗಳಿದ್ದು, ಭಾರತದ ವಿವಿಧ ಭಾಗದ ಅದ್ಭುತ ವ್ಯಕ್ತಿಗಳನ್ನು ನಾವು ಪರಿಚಯಿಸುತ್ತೇವೆ. ಈ ಮಾಜಿ ರೇಡಿಯೋ ಜಾಕಿ ತನ್ನ ಜನಪ್ರಿಯ ಜ್ಯೂಸ್ ಶಾಪ್ನಲ್ಲಿ ಹಣ್ಣಿನ ಜ್ಯೂಸ್ ಅನ್ನು ಅವುಗಳ ಚಿಪ್ಪಿನಲ್ಲೇ ಒದಗಿಸುವ ಅಪರೂಪದ ಕಲ್ಪನೆಯನ್ನು ಸಾಕಾರಗೊಳಿಸಿದ್ದು, ತ್ಯಾಜ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸ್ಫೂರ್ತಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹದಿಮೂರು ವರ್ಷಗಳವರೆಗೆ ಆರ್ಜೆ ಆಗಿ ಕೆಲಸ ಮಾಡಿದ್ದ ಆನಂದ್ ರಾಜ್, ತನ್ನ ತಂದೆ ನಡೆಸುತ್ತಿದ್ದ ಜ್ಯೂಸ್ ಶಾಪ್ ‘ಈಟ್ ರಾಜಾ’ ಅನ್ನು ವಹಿಸಿಕೊಂಡರು. ಅವರ ವಿಶಿಷ್ಟ ಕಾನ್ಸೆಪ್ಟ್ನಿಂದ ಶಾಪ್ ಹೆಸರಾಯಿತು. ಅತ್ಯಂತ ಜನಪ್ರಿಯ ಪರಿಸರ ಸ್ನೇಹಿ ಕೆಫೆಯಾಗಿ ಇದು ಮಾರ್ಪಟ್ಟಿತು. ರುಚಿಕರವಾದ ಜ್ಯೂಸ್ ಅನ್ನು ಹೀರಲು ನೂರಾರು ಜನರು ನಿತ್ಯವೂ ಇಲ್ಲಿಗೆ ಆಗಮಿಸುತ್ತಾರೆ. ಅಷ್ಟೇ ಅಲ್ಲ, ಇಲ್ಲಿ ಗ್ರಾಹಕರಿಗೆ ಆತ್ಮತೃಪ್ತಿಯೂ ಆಗುತ್ತದೆ.
ಇದನ್ನೂ ಓದಿ | ಕ್ರಿಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರಿಗೆ ಮತ್ತೊಮ್ಮೆ ಗೆಲುವಾಗಲಿ : ಸಾಹಿತಿ ಎನ್. ಟಿ. ಎರ್ರಿಸ್ವಾಮಿ
ಕ್ರಿಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರಿಗೆ ಮತ್ತೊಮ್ಮೆ ಗೆಲುವಾಗಲಿ : ಸಾಹಿತಿ ಎನ್. ಟಿ. ಎರ್ರಿಸ್ವಾಮಿ
ರುಚಿಕರವಾದ 99 ವಿಧದ ಜ್ಯೂಸ್ ಅನ್ನು ತಯಾರಿಸುವ ಇವರು ಬಾಳೆಹಣ್ಣು, ಕ್ಯಾಪ್ಸಿಕಂ, ಕಲ್ಲಂಗಡಿ, ಕಿತ್ತಳೆ ಮತ್ತು ಇತರ ಹಲವು ವಿಧದ ಹಣ್ಣಿನ ಚಿಪ್ಪಿನಲ್ಲೇ ಜ್ಯೂಸ್ ಅನ್ನು ಗ್ರಾಹಕರಿಗೆ ಒದಗಿಸುತ್ತಾರೆ. ಈ ಮೂಲಕ ಇವರು ತ್ಯಾಜ್ಯವನ್ನೂ ಕಡಿಮೆ ಮಾಡುತ್ತಾರೆ. ಜ್ಯೂಸ್ನ ತ್ಯಾಜ್ಯವನ್ನು ಬಳಸಿ ನಗರದಾದ್ಯಂತ ಜಾನುವಾರುಗಳಿಗೆ ಪೌಷ್ಠಿಕಾಂಶವನ್ನೂ ಒದಗಿಸುತ್ತಾರೆ.
ಉಳಿದ ಹಣ್ಣಿನ ಭಾಗಗಳನ್ನು ಬಳಸಿ ಜೈವಿಕ ಕಿಣ್ವಗಳ ಮೂಲಕ ನೈಸರ್ಗಿಕ ಸ್ವಚ್ಛತಾ ದ್ರಾವಣವನ್ನು ತಯಾರಿಸುತ್ತಾರೆ. ಜ್ಯೂಸ್ ಅನ್ನು ಗ್ರಾಹಕರಿಗೆ ಒದಗಿಸಲು ಗ್ಲಾಸ್ಗಳನ್ನು ಬಳಸದೇ, ಜ್ಯೂಸ್ ರಾಜಾ ಪ್ರತಿ ವರ್ಷ ಅಂದಾಜು 54,750 ಲೀಟರ್ ನೀರನ್ನು ಉಳಿತಾಯ ಮಾಡುತ್ತಾರೆ!
ಬೆಂಗಳೂರಿನ ಜ್ಯೂಸ್ ರಾಜಾ ಮತ್ತು ವಡೋದರಾ, ಜೈಪುರ ಮತ್ತು ಮುಂಬೈನ ಅಭೂತಪೂರ್ವ ಭಾರತೀಯರನ್ನು ಭೇಟಿ ಮಾಡಲು ಏಪ್ರಿಲ್ 5 ರಂದು ರಾತ್ರಿ 8 ಗಂಟೆಗೆ ‘OMG! Yeh Mera India’ ಅನ್ನು ಟ್ಯೂನ್ ಮಾಡಿ. ‘OMG! Yeh Mera India’ ಸೀಸನ್ 7 ಅನ್ನು ಪ್ರತಿ ಸೋಮವಾರ ರಾತ್ರಿ 8 ಗಂಟೆಗೆ HistoryTV18 ನಲ್ಲಿ ಮಾತ್ರ ವೀಕ್ಷಮಾಡಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.
ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.
ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.
ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


