ದಿನದ ಸುದ್ದಿ
ಜೀರೋ ತ್ಯಾಜ್ಯದ ಹೀರೋ, ಬೆಂಗಳೂರಿನ ಜ್ಯೂಸ್ ರಾಜಾ ಅವರನ್ನು ಹಿಸ್ಟರಿ ಟಿವಿ18 ನ ‘ಒಎಂಜಿ! ಯೆ ಮೇರಾ ಇಂಡಿಯಾ’ದಲ್ಲಿ ಭೇಟಿ ಮಾಡಿ
ಈ ಸ್ಟೋರಿ ಹಾಗೂ ಇತರ ಅದ್ಭುತ, ಅಮೋಘ ಮತ್ತು ಸ್ಫೂರ್ತಿದಾಯಕ ಸ್ಟೋರಿಗಳನ್ನು ಸೋಮವಾರ, 5 ಏಪ್ರಿಲ್ ರಾತ್ರಿ 8 ಗಂಟೆಗೆ HistoryTV18 ನಲ್ಲಿ ವೀಕ್ಷಿಸಿ
ಸುದ್ದಿದಿನ, ಬೆಂಗಳೂರು : ಭಾರತೀಯರು ಅಂದಾಜು 40% ಆಹಾರವನ್ನು ಪ್ರತಿ ವರ್ಷ ಎಸೆಯುತ್ತಾರೆ. ಇದು ಒಂದು ವರ್ಷದಲ್ಲಿ 6.7 ಕೋಟಿ ಟನ್ ಕಸಕ್ಕೆ ಎಸೆದ ಹಾಗೆ ಎಂದು ಭಾವಿಸಬಹುದು. ಇದು ನಿಮಗೆ ಆಘಾತ ನೀಡಿದರೆ, ಚಿಂತೆ ಮಾಡಬೇಡಿ! ಯಾಕೆಂದರೆ ನಮ್ಮ ಬೆಂಗಳೂರಿನಲ್ಲಿ ಒಬ್ಬರು ಶೂನ್ಯ ತ್ಯಾಜ್ಯದ ಹೀರೋ ಇದ್ದಾರೆ. ಈ ಆನಂದ್ ರಾಜ್ ನಗರದಲ್ಲಿ ಜ್ಯೂಸ್ ರಾಜಾ ಎಂದೇ ಹೆಸರಾಗಿದ್ದಾರೆ.
ಈ ಸೋಮವಾರ ರಾತ್ರಿ 8 ಗಂಟೆಗೆ HistoryTV18 ಟ್ಯೂನ್ ಮಾಡಿ ಮತ್ತು ಆನಂದ್ ಅವರನ್ನು ‘OMG! Yeh Mera India’ ದಲ್ಲಿ ಭೇಟಿ ಮಾಡಿ. ಈ ಸಿರೀಸ್ನಲ್ಲಿ ಅತ್ಯಂತ ಸ್ಫೂರ್ತಿದಾಯಕ ಮತ್ತು ಅದ್ಭುತ ಸ್ಟೋರಿಗಳಿದ್ದು, ಭಾರತದ ವಿವಿಧ ಭಾಗದ ಅದ್ಭುತ ವ್ಯಕ್ತಿಗಳನ್ನು ನಾವು ಪರಿಚಯಿಸುತ್ತೇವೆ. ಈ ಮಾಜಿ ರೇಡಿಯೋ ಜಾಕಿ ತನ್ನ ಜನಪ್ರಿಯ ಜ್ಯೂಸ್ ಶಾಪ್ನಲ್ಲಿ ಹಣ್ಣಿನ ಜ್ಯೂಸ್ ಅನ್ನು ಅವುಗಳ ಚಿಪ್ಪಿನಲ್ಲೇ ಒದಗಿಸುವ ಅಪರೂಪದ ಕಲ್ಪನೆಯನ್ನು ಸಾಕಾರಗೊಳಿಸಿದ್ದು, ತ್ಯಾಜ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸ್ಫೂರ್ತಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹದಿಮೂರು ವರ್ಷಗಳವರೆಗೆ ಆರ್ಜೆ ಆಗಿ ಕೆಲಸ ಮಾಡಿದ್ದ ಆನಂದ್ ರಾಜ್, ತನ್ನ ತಂದೆ ನಡೆಸುತ್ತಿದ್ದ ಜ್ಯೂಸ್ ಶಾಪ್ ‘ಈಟ್ ರಾಜಾ’ ಅನ್ನು ವಹಿಸಿಕೊಂಡರು. ಅವರ ವಿಶಿಷ್ಟ ಕಾನ್ಸೆಪ್ಟ್ನಿಂದ ಶಾಪ್ ಹೆಸರಾಯಿತು. ಅತ್ಯಂತ ಜನಪ್ರಿಯ ಪರಿಸರ ಸ್ನೇಹಿ ಕೆಫೆಯಾಗಿ ಇದು ಮಾರ್ಪಟ್ಟಿತು. ರುಚಿಕರವಾದ ಜ್ಯೂಸ್ ಅನ್ನು ಹೀರಲು ನೂರಾರು ಜನರು ನಿತ್ಯವೂ ಇಲ್ಲಿಗೆ ಆಗಮಿಸುತ್ತಾರೆ. ಅಷ್ಟೇ ಅಲ್ಲ, ಇಲ್ಲಿ ಗ್ರಾಹಕರಿಗೆ ಆತ್ಮತೃಪ್ತಿಯೂ ಆಗುತ್ತದೆ.
ಇದನ್ನೂ ಓದಿ | ಕ್ರಿಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರಿಗೆ ಮತ್ತೊಮ್ಮೆ ಗೆಲುವಾಗಲಿ : ಸಾಹಿತಿ ಎನ್. ಟಿ. ಎರ್ರಿಸ್ವಾಮಿ
ಕ್ರಿಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರಿಗೆ ಮತ್ತೊಮ್ಮೆ ಗೆಲುವಾಗಲಿ : ಸಾಹಿತಿ ಎನ್. ಟಿ. ಎರ್ರಿಸ್ವಾಮಿ
ರುಚಿಕರವಾದ 99 ವಿಧದ ಜ್ಯೂಸ್ ಅನ್ನು ತಯಾರಿಸುವ ಇವರು ಬಾಳೆಹಣ್ಣು, ಕ್ಯಾಪ್ಸಿಕಂ, ಕಲ್ಲಂಗಡಿ, ಕಿತ್ತಳೆ ಮತ್ತು ಇತರ ಹಲವು ವಿಧದ ಹಣ್ಣಿನ ಚಿಪ್ಪಿನಲ್ಲೇ ಜ್ಯೂಸ್ ಅನ್ನು ಗ್ರಾಹಕರಿಗೆ ಒದಗಿಸುತ್ತಾರೆ. ಈ ಮೂಲಕ ಇವರು ತ್ಯಾಜ್ಯವನ್ನೂ ಕಡಿಮೆ ಮಾಡುತ್ತಾರೆ. ಜ್ಯೂಸ್ನ ತ್ಯಾಜ್ಯವನ್ನು ಬಳಸಿ ನಗರದಾದ್ಯಂತ ಜಾನುವಾರುಗಳಿಗೆ ಪೌಷ್ಠಿಕಾಂಶವನ್ನೂ ಒದಗಿಸುತ್ತಾರೆ.
ಉಳಿದ ಹಣ್ಣಿನ ಭಾಗಗಳನ್ನು ಬಳಸಿ ಜೈವಿಕ ಕಿಣ್ವಗಳ ಮೂಲಕ ನೈಸರ್ಗಿಕ ಸ್ವಚ್ಛತಾ ದ್ರಾವಣವನ್ನು ತಯಾರಿಸುತ್ತಾರೆ. ಜ್ಯೂಸ್ ಅನ್ನು ಗ್ರಾಹಕರಿಗೆ ಒದಗಿಸಲು ಗ್ಲಾಸ್ಗಳನ್ನು ಬಳಸದೇ, ಜ್ಯೂಸ್ ರಾಜಾ ಪ್ರತಿ ವರ್ಷ ಅಂದಾಜು 54,750 ಲೀಟರ್ ನೀರನ್ನು ಉಳಿತಾಯ ಮಾಡುತ್ತಾರೆ!
ಬೆಂಗಳೂರಿನ ಜ್ಯೂಸ್ ರಾಜಾ ಮತ್ತು ವಡೋದರಾ, ಜೈಪುರ ಮತ್ತು ಮುಂಬೈನ ಅಭೂತಪೂರ್ವ ಭಾರತೀಯರನ್ನು ಭೇಟಿ ಮಾಡಲು ಏಪ್ರಿಲ್ 5 ರಂದು ರಾತ್ರಿ 8 ಗಂಟೆಗೆ ‘OMG! Yeh Mera India’ ಅನ್ನು ಟ್ಯೂನ್ ಮಾಡಿ. ‘OMG! Yeh Mera India’ ಸೀಸನ್ 7 ಅನ್ನು ಪ್ರತಿ ಸೋಮವಾರ ರಾತ್ರಿ 8 ಗಂಟೆಗೆ HistoryTV18 ನಲ್ಲಿ ಮಾತ್ರ ವೀಕ್ಷಮಾಡಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

