ದಿನದ ಸುದ್ದಿ
ಮೋದಿ ಸರ್ಕಾರದ ಯೋಜನೆಗಳ ಹೈಲೆಟ್ಸ್
ಸುದ್ದಿದಿನ, ನವದೆಹಲಿ : ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರಿಗೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಸಭೆ ಬಳಿಕ ಕೇಂದ್ರ ಸಚಿವ ನರೇಂದ್ರ ಸಿಂಗ್ ಥೋಮರ್ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ, ಸಭೆಯಲ್ಲಿ ತಗೆದುಕೊಂಡ ಮಹತ್ವದ ನಿರ್ಧಾರಗಳ ಬಗ್ಗೆ ತಿಳಿಸಿದ್ರು.
ಸಭೆಯಲ್ಲಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ವಿಸ್ತರಣೆ, ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆ (60 ವರ್ಷ ಮೇಲ್ಪಟ್ಟ ರೈತರಿಗೆ), ಪಶುಗಳಿಗೆ ವ್ಯಾಕ್ಸಿನೆಶನ್ ಸೇರಿದಂತೆ ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಯೋಜನೆಯ ಮಹತ್ವದ ನಿರ್ಧಾರ ತಗೆದುಕೊಂಡಿರುವ ಬಗ್ಗೆ ತಿಳಿಸಿದ್ರು. ಇನ್ನುಳಿದಂತೆ ಜೂನ್ 17 ರಿಂದ ಸಂಸತ್ ಅಧಿವೇಶನ ಪ್ರಾರಂಭವಾಗಲಿದ್ದು, 19 ಸ್ಪೀಕರ್ ಎಲೆಕ್ಷನ್ ನಡೆಯಲಿದೆ. ಜುಲೈ 5 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ ಅಂತಾ ಜಂಟಿ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243