Connect with us

ಕ್ರೀಡೆ

ನೀವು ನಿದ್ರಿಸುವಾಗ ನಾನು ಜಗತ್ತನ್ನೇ ಗೆದ್ದೆ: ಅಪ್ಪನಿಗೆ ಹಿಮದಾಸ್ ಮಾತು

Published

on

ಸುದ್ದಿದಿನ ಡೆಸ್ಕ್: ನೀವೆಲ್ಲಾ ನಿದ್ರಿಸುತ್ತಿದ್ದೀರಾ? ನಾನು ಜಗತ್ತನ್ನೇ ಗೆದ್ದಿದ್ದೇನೆ ಅಪ್ಪಾ….
ಫಿನ್ ಲ್ಯಾಂಡ್‍ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡ ಅಥ್ಲೀಟ್ ಹಿಮದಾಸ್ ತನ್ನ ತಂದೆಗೆ ಹೇಳಿದ ಮಾತಿದು.
ಕ್ರೀಡೆಯ ಬಗ್ಗೆ ಅಷ್ಟೇನೂ ಗೊತ್ತಿಲ್ಲದ ತನ್ನ ಕುಟುಂಬ ತನ್ನ ಸ್ಪರ್ಧೆ ನೋಡದೆ ಮಲಗಿರಬಹುದು ಎಂದು ಕೊಂಡು ಅಪ್ಪನಿಗೆ ಕರೆ ಮಾಡಿದ ಹಿಮದಾಸ್‍ಗೆ ಒಂದು ಅಚ್ಚರಿ ಕಾದಿತ್ತು. ಇಲ್ಲಮ್ಮ ನಾವು ಮಲಗಿಲ್ಲ ನೀನು ಹೇಗೆ ಓಡುತ್ತೀಯಾ ಎಂಬುದನ್ನು ನೋಡಲು ನಾವೆಲ್ಲ ಟಿವಿ ಮಂದೆ ಕುಳಿತಿದ್ದೇವೆ ಎಂದು ಹಿಮದಾಸ್ ತಂದೆ ಹೇಳಿದಾಗ ಅವರ ಕಣ್ಣಲ್ಲಿ ಆನಂದ ಭಾಷ್ಪ ಚಿಮ್ಮಿ ಭಾವುಕರಾದರು.
ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟ ಹಿಮದಾಸ್ ಈಗ ಚರ್ಚೆಯ ವಿಷಯ.
ಹಿಮದಾಸ್‍ಗೆ ತಾನು ಒಬ್ಬ ಫುಟ್‍ಬಾಲ್ ಆಟಗಾರ್ತಿಯಾಬೇಕೆಂಬ ದೊಡ್ಡ ಕನಸಿತ್ತು ಆದರೆ, ಆಕೆಯ ಆಟದ ವೇಗವನ್ನು ಗಮನಿಸಿದ ಕೋಚ್, ಅಥ್ಲೀಟ್ ಆಗುವಂತೆ ಸಲಹೆ ನೀಡಿದ್ದರು. ಇದನ್ನು ಅನುಸರಿಸಿದ ಅವರೀಗೆ ಉತ್ತುಂಗದಲ್ಲಿ ನಿಂತಿದ್ದಾರೆ.

ಕಂಟ್ರಿ ಸರಾಯಿ ವಿರುದ್ಧ ಧನಿ ಎತ್ತಿದ್ದವರು

ಹಿಮದಾಸ್ ಅವರು ಕೇವಲ ಕ್ರೀಡೆಗಾಗಿ ಬದುಕಿದ ಹುಡುಗಿಯಲ್ಲ. ಆಕೆಗೆ ಸಾಮಾಜಿಕ ಕಳಕಳಿಯೂ ಇದೆ. ಅಸ್ಸಾಂನ ಧಿಂಗಿ ಗ್ರಾಮದವರಾದ ಹಿಮದಾಸ್ ಅವರು ತಮ್ಮೂರಿನಲ್ಲಿ ನಡೆಯುತ್ತಿದ್ದ ಬಟ್ಟಿ ಸಾರಾಯಿ ಅಂಗಡಿಗಳ ಧ್ವಂಸ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಗ್ರಾಮದಲ್ಲಿ ಭಟ್ಟಿ ಸಾರಾಯಿ ದಂಧೆ ನಿಲ್ಲಲು ಹಿಮದಾಸ್ ಅವರೂ ಕೂಡ ಕಾರಣ.
ಏಜೆನ್ಸಿಗಳಿಗೆ ಪಾಠ
ಕೇವಲ 40 ಸೆಂಟ್ ಜಾಗ ಅಪ್ಪ ಅಮ್ಮನಿಗಿದ್ದ ಐವರು ಮಕ್ಕಳಲ್ಲಿ ಒಬ್ಬರಾಗಿದ್ದ ಹಿಮದಾಸ್ ಜೀವನದಲ್ಲಿ ಕಷ್ಟವನ್ನೇ ಉಂಡಿದ್ದು ಹೆಚ್ಚು. ಯಾವುದೇ ಏಜೆನ್ಸಿಗಳ ಮೂಲಕ ತರಬೇತಿ ಪಡೆಯಲು ಹಣವಿಲ್ಲದೆ ಸ್ವಂತ ಪ್ರಯತ್ನದಿಂದ ಇಲ್ಲಿಯವರಿಗೆ ಮುಟ್ಟಿರುವ ಹಿಮದಾಸ್ ಅವರು ಎಲ್ಲರಿಗೂ ಒಂದು ಪಾಠ.

ಕ್ರೀಡೆ

ವಿಶ್ವಕಪ್ ಶೂಟಿಂಗ್ ಪಂದ್ಯಾವಳಿ; ಭಾರತದ ರೈತಮ್ ಸಂಗ್ವಾನ್‌ಗೆ ಕಂಚಿನ ಪದಕ

Published

on

ಸುದ್ದಿದಿನ ಡೆಸ್ಕ್ : ಅಜರ್ ಬೈಜಾನ್‌ನ ಬಾಕುವಿನಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್ ಪಂದ್ಯಾವಳಿಯ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ರೈತಮ್ ಸಂಗ್ವಾನ್ ಕಂಚಿನ ಪದಕ ಗೆದ್ದಿದ್ದಾರೆ.

ಅಂತಿಮ ಸುತ್ತಿನಲ್ಲಿ ಅವರು,219.1 ಅಂಕ ಗಳಿಸುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು, ಕಂಚಿನ ಪದಕ ತಮ್ಮದಾಗಿಸಿಕೊಂಡರು. ವಿಶ್ವಕಪ್ ಶೂಟಿಂಗ್ ಪಂದ್ಯಾವಳಿಯಲ್ಲಿ ಇದು ಸಂಗ್ವಾನ್ ಅವರ ಪ್ರಥಮ ವೈಯಕ್ತಿಕ ಪದಕವಾಗಿದೆ.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್: ಭಾರತದ ಚಿರಾಗ್ ಮತ್ತು ಸಾತ್ವಿಕ್ ಜೋಡಿಗೆ ಸ್ವರ್ಣ ಪದಕ

Published

on

ಸುದ್ದಿದಿನ, ದುಬೈ : ದುಬೈನಲ್ಲಿ ನಡೆದ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ 8ನೇ ಶ್ರೇಯಾಂಕಿತ ಮಲೇಷ್ಯಾದ ಟಿಯೊ ಇ ಯಿ ಮತ್ತು ಒಂಗ್ ಯೆವ್ ಸಿನ್ ವಿರುದ್ಧ 16-21,21-17ಮತ್ತು 21-19 ಗೇಮ್ ಗಳ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿದೆ.1965ರಲ್ಲಿ ದಿನೇಶ್ ಖನ್ನಾ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ನಂತರ ಭಾರತಕ್ಕೆ ಒಲಿದ ಮೊದಲ ಸ್ವರ್ಣ ಪದಕ ಇದಾಗಿದೆ.

ಭಾರತ ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿರುವ ಚಿರಾಗ್ ಮತ್ತು ಸಾತ್ವಿಕ್ ಜೋಡಿಗೆ ಪ್ರಧಾನಿ ನರೇಂದ್ರ ಮೋದಿ, ಕ್ರೀಡಾ ಸಚಿವ ಹಾಗೂ ಭಾರತ ಬ್ಯಾಡ್ಮಿಂಟನ್ ಸಂಸ್ಥೆ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ನಲ್ಲಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಪುರುಷರ ಡಬಲ್ಸ್ ಜೋಡಿಯಾಗಿರುವ ಸಾತ್ವಿಕ್‌ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿಗೆ ಅಭಿನಂದನೆಗಳು ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಐಪಿಎಲ್ ಕ್ರಿಕೆಟ್ : ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿ

Published

on

ಸುದ್ದಿದಿನ ಡೆಸ್ಕ್ : ಐಪಿಎಲ್ ಟೂರ್ನಿಯ ಇಂದಿನ ಬಹು ನಿರೀಕ್ಷಿತ ಪಂದ್ಯದಲ್ಲಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ನೇ ಸ್ಥಾನದಲ್ಲಿರುವ ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಟೂರ್ನಿಯೂದ್ದಕ್ಕೂ ಅತ್ಯೂತ್ತಮ ಪ್ರದರ್ಶನ ನೀಡುತ್ತಿರುವ ಎರಡೂ ತಂಡಗಳು ಜಯ ಗಳಿಸಲಿಕ್ಕೆ ತಮ್ಮದೇ ಆದ ಕಾರ್ಯತಂತ್ರ ರೂಪಿಸುತ್ತಿವೆ. ಆಡಿರುವ 7 ಪಂದ್ಯಗಳಲ್ಲಿ ತಮ್ಮ ಅಮೋಘ ನಾಯಕತ್ವದ ಪ್ರದರ್ಶನದಿಂದಾಗಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ತಂಡ ಐದು ಪಂದ್ಯ ಜಯಿಸಿ ಅಪಾರ ಆತ್ಮ ವಿಶ್ವಾಸದಿಂದ ಬೀಗುತ್ತಿದೆ.

ಇತ್ತ ಆರ್ ಆರ್ ತಂಡ ಸಹ ಸಂಜು ಸ್ಯಾಮ್ಸನ್ ನಾಯಕತ್ವದ ಗರಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಇಂದಿನ ಪಂದ್ಯ ತೀವೃ ಪೈಪೋಟಿಯಿಂದ ಕೂಡಿರಲಿದೆ. ಇನ್ನೊಂದೆಡೆ ಕಳೆದ ರಾತ್ರಿ ಐಪಿಎಲ್ ಪಂದ್ಯಾವಳಿಯ ಬಹು ನೀರಿಕ್ಷಿತ ರಾಯಲ್ ಚಾಲೆಂಜರ್‍ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್‍ಸ್ ತಂಡದ ಮಧ್ಯೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 36ನೇ ಪಂದ್ಯದಲ್ಲಿ, ಕೆಕೆಆರ್ ತಂಡ ಆತಿಥೇಯ ರಾಯಲ್ಸ್ ಚಾಲೆಂಜರ್‍ಸ್ ತಂಡವನ್ನು 21ರನ್‌ಗಳಿಂದ ಮಣಿಸಿತು.

ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಕೋಹ್ಲಿ ಮೊದಲು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಅಹ್ವಾನಿಸಿದರು. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಕೋಲ್ಕತ್ತಾ ತಂಡ, ಜೆಸನ್ ರಾಯ್, ನಾಯಕ ನಿತಿಶ್ ರಾಣಾ ಮತ್ತು ವೆಂಕಟೇಶ್ ಐಯ್ಯರ್ ಅವರ ಅತ್ಯೂತ್ತಮ ಬ್ಯಾಟಿಂಗ್‌ನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಪ್ರತ್ಯೂತ್ತರವಾಗಿ ಬ್ಯಾಟ್ ಬೀಸಿದ ಆತೀಥೇಯ ರಾಯಲ್ ಚಾಲೇಂಜರ್‍ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 179 ರನ್ ಗಳಿಸಿ ಎದುರಾಳಿ ತಂಡಕ್ಕೆ 21 ರನ್‌ಗಳಿಂದ ಶರಣಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ14 mins ago

ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಹೆಚ್ಚು ಅರ್ಜಿಗಳ ನಿರೀಕ್ಷೆ : ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನ, ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ 1 ಕೋಟಿ 30 ಲಕ್ಷ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ದಿನದ ಸುದ್ದಿ13 hours ago

ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...

ದಿನದ ಸುದ್ದಿ1 day ago

ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ...

ದಿನದ ಸುದ್ದಿ2 days ago

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ದಿನದ ಸುದ್ದಿ2 days ago

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...

ದಿನದ ಸುದ್ದಿ2 days ago

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ...

ದಿನದ ಸುದ್ದಿ2 days ago

ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡಲು ಒತ್ತಾಯ

ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ...

ದಿನದ ಸುದ್ದಿ2 days ago

ಗೃಹಜ್ಯೋತಿ ಯೋಜನೆ | ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯ : ಸಚಿವ ಕೆ.ಜೆ. ಜಾರ್ಜ್

ಸುದ್ದಿದಿನ, ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯಿಸಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ....

ದಿನದ ಸುದ್ದಿ2 days ago

ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಸುದ್ದಿದಿನ,ದಾವಣಗೆರೆ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75 ನೇ ವಾರ್ಷಿಕೋತ್ಸದ ಅಂಗವಾಗಿ...

ದಿನದ ಸುದ್ದಿ3 days ago

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ...

Trending