ಕ್ರೀಡೆ
ಓಟದ ರಾಣಿ ಹಿಮಾದಾಸ್ | ಅಪ್ಪನ ಗದ್ದೆಯ ಕಡೆಯ ಹಾದಿಗಳೇ ಈಕೆಯ ‘ಓಟದ ಟ್ರಾಕ್’ಗಳಾದವು

•ಹಿಮಾದಾಸ್ ಸಾಧನೆಗೆ 10 ಲಕ್ಷ ಬಹುಮಾನ ಘೋಷಿಸಿದ ಪರಂ
ಆ ರೈತನ ಮಗಳು ಓದುತ್ತಿದ್ದ ಶಾಲೆಯ ದೈಹಿಕ ಶಿಕ್ಷಕಿಯು ಒಮ್ಮೆ ಆತನನ್ನು ಭೇಟಿ ಮಾಡಿ ‘ನಿಮ್ಮ ಮಗಳು ವಾಲಿಬಾಲ್ ಆಟದಲ್ಲಿಯೂ ಬಹಳ ಮುಂದಿದ್ದಾಳೆ ಹಾಗೆಯೇ ಓಟದಲ್ಲಿಯೂ ಕೂಡ, ಹೀಗಿದ್ದಾಗ ನೀವೇಕೆ ಈಕೆಗೆ ಅತ್ಯುತ್ತಮ ತರಬೇತಿ ಕೊಡಿಸಬಾರದು’ ಎಂಬ ಹೊಸ ಹುಳವನ್ನು ಬಿಟ್ಟಿದ್ದರು.
ಆದರೆ ಆ ಪ್ರತಿಭಾವಂತ ಮಗಳ ತಂದೆ ರೈತನಾಗಿ ಕಸುಬು ನಿರ್ವಹಿಸುತ್ತಿದ್ದ ರಂಜಿತ್ ದಾಸ್ ಎಂಬ ವ್ಯಕ್ತಿಗೆ ರೈತರಿಗೆ ಕಾಡುವ ಹಣಕಾಸಿನ ಸಮಸ್ಯೆಗಳು ಸಾಕಾಗುವಷ್ಟು ಇದ್ದವು ಜೊತೆಗೆ ಮನೆಯಲ್ಲಿದ್ದ ಆರು ಜನರನ್ನು ಸಾಕುವ ಜವಾಬ್ಧಾರಿ ಇತ್ತಾದರೂ,ಐದು ಜನ ಮಕ್ಕಳಲ್ಲಿ ಕೊನೆಯ ಪುಟಾಣಿಯಾದ ಪ್ರತಿಭಾವಂತ ಹುಡುಗಿಗೆ ತರಬೇತಿ ಕೊಡಿಸುವ ಕಡೆ ಯೋಚಿಸಿದನು ಆ ಪುಟಾಣಿ ಹುಡುಗಿಯ ಹೆಸರು ‘ಹಿಮ ದಾಸ್’.
ಮನೆಯಲ್ಲಿನ ಹಣಕಾಸಿನ ಸಮಸ್ಯೆಯಿಂದಾಗಿ ನೇರವಾಗಿ ಕೋಚ್ ಬಳಿ ಸೇರಲಾಗದೆ ಮೊದಲಿಗೆ ಅಪ್ಪನ ಗದ್ದೆಯ ಕಡೆಯ ಹಾದಿಗಳೇ ಈಕೆಯ ‘ಓಟದ ಟ್ರಾಕ್’ಗಳಾದವು,ಅವಳ ಮಿಂಚಿನ ಓಟದ ಛಾತಿಯನ್ನು ಗದ್ದೆಯ ಹಾದಿಗಳಲ್ಲಿ ನೋಡಿದ ರಂಜಿತ್ ದಾಸ್ ಗೆ ತನ್ನ ಮಗಳು ಹಿಮದಾಸ್ ಓಟದಲ್ಲಿ ಏನೋ ಒಂದನ್ನು ಸಾಧಿಸಿಯೇ ತೀರುತ್ತಾಳೆ ಎಂದೆನಿಸಿತು.
ಆ ದಿನಗಳಲ್ಲಿಯೇ ಈ ಹಿಮಾಸಿಂಗ್ ಗೌಹಾತಿಯ ಸ್ಟೇಟ್ ಚಾಂಪಿಯನ್ ಶಿಪ್ಪಿನಲ್ಲಿ ಭಾಗವಹಿಸಿ ಕಂಚಿನ ಪದಕ ಗೆದ್ದಳು.
‘ಅಯ್ಯಯ್ಯಪ್ಪಾ….ಯಾವುದೇ ಅಂತರಾಷ್ಟ್ರೀಯ ಗುಣಮಟ್ಟದ ಬೇಸಿಕ್ ತರಬೇತಿ ಇಲ್ಲದ ಅಸ್ಸಾಮಿನ ಹಳ್ಳಿ ಹುಡುಗಿ ನೋಡ್ರೀ’ ಎಂದು ತನ್ನ ಮಗಳ ಕುರಿತು ಅಲ್ಲಿದ್ದ ಹಲವರು ಮಾತನಾಡಿದ್ದು ಕೇಳಿದ ಹಿಮಾ ಸಿಂಗಳ ಅಪ್ಪನಿಗೆ ‘ಅದೆಷ್ಟೇ ಕಷ್ಟವಾದರೂ ಸರಿ ತನ್ನ ಮಗಳಿಗೆ ಉತ್ತಮ ತರಬೇತಿ ಕೊಡಿಸಲೇಬೇಕು…”ಎಂದು ನಿರ್ಧರಿಸಿಬಿಟ್ಟನು ಆ ನಂತರ ಕಷ್ಟಪಟ್ಟು ಅಲ್ಲಿ ಇಲ್ಲಿ ಹಣ ಕೂಡಿಸಿ ರೆಜಿನಾ ಸ್ಟೇಡಿಯಂ ಗ್ರೂಪ್ ಸೇರಿಸಿದನು, ಅಲ್ಲಿ ಆಕೆ ಗುಣಮಟ್ಟದ ತರಬೇತಿ ಹೊಂದಿದಳು.
ಅಲ್ಲಿ ದೊರೆತ ಅತ್ಯುತ್ತಮ ತರಬೇತಿ ಆಕೆಯನ್ನು ಮತ್ತೂ ಅತ್ಯುತ್ತಮಗೊಳಿಸುತ್ತಾ ಹಾಗೆಯೇ ಆಗಾಗ ನಡೆಯುವ ಚಾಂಪಿಯನ್ ಶಿಪ್ಪುಗಳಲ್ಲಿ ಭಾಗವಹಿಸುತ್ತಾ ಪ್ರಶಸ್ತಿ ಗೆಲ್ಲುತ್ತಾ ಸಾಗಿದಳು.
ಅಂತೂ ಇಂತೂ ಅಪ್ಪ ಬಿದ್ದ ಪಡಿಪಾಟಲಿಗೆ ತಕ್ಕುನಾದ ಮೌಲ್ಯ ದೊರಕುವ ಸಂದರ್ಭ ಬಂದೇಬಿಟ್ಟಿತು,ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ಟ್ರಾಕಿನ ನಾಲ್ಕನೇ ಸಾಲಿನಲ್ಲಿ ಓಡುತ್ತಿದ್ದಾಗ ಐದನೇ ಸಾಲಿನಲ್ಲಿ ರೊಮಾನಿಯಾದ ಆಂಡ್ರಿಯಾ ಮಿಕ್ಲೋಸ್ ಅವಳ ಪಕ್ಕದಲ್ಲಿ ಅಮೇರಿಕದ ಟೇಲರ್ ಮ್ಯಾಸನ್ ಓಡುತ್ತಿದ್ದಳು.
ಅಲ್ಲಿ ಹಾಜರಿದ್ದ ಓಟದ ಪಂಡಿತರೆಲ್ಲರೂ ಅಮೇರಿಕದ ಟೇಲರ್ ಮ್ಯಾಸನ್ನಳೇ ಚಿನ್ನ ಗೆಲ್ಲುತ್ತಾಳೆ ಎಂದಿದ್ದರು ಅವರ ಕವಡೆ ಭವಿಷ್ಯಕ್ಕೆ ತಕ್ಕಂತೆ ಏರ್ ಗನ್ ಢಂಮ್ಮೆಂದೊಡನೆ ಶುರುವಾದ ಓಟದಲ್ಲಿ ಅಮೇರಿಕದ ಟೇಲರ್ ಮ್ಯಾಸನ್ನಳೇ ಮುನ್ನೂರು ಮೀಟರುಗಳವರೆಗೆ ಚಿಮ್ಮೆಗರುತ್ತಾ ಮುಂದಿದ್ದಳು ಆದರೆ ಹಿಮಾಸಿಂಗ್ ಅಂದಿನ ಓಟದ ಜವಾಬ್ಧಾರಿ ನೆನೆದು ಹಠಕ್ಕೆ ಬಿದ್ದವಳಂತೆ ಮುನ್ನೂರು ಮೀಟರಿನ ನಂತರ ಕೊನೆಯಲ್ಲಂತೂ ಎಲ್ಲರನ್ನೂ ಹಿಂದಿಕ್ಕುತ್ತಾ ಟಾಪ್ ಗೇಯರಿನಲ್ಲಿ ಅತೀ ವೇಗದಿಂದ ಓಡಿಬಿಟ್ಟಳು ಅಂತೂ ಅಪ್ಪನಿಗಾಗಿ ಚಿನ್ನದ ಪದಕ ಗೆದ್ದುಬಿಟ್ಟಳು.
ಇಂದು ಬಂದ ಖ್ಯಾತಿ,ಹಣ,ಅಂತಸ್ತು ಎಲ್ಲಾ ಪಕ್ಕಕ್ಕಿಡಿ ! ಸಾಂಸಾರಿಕ ರಣಸಮಸ್ಯೆಗಳ ಹೋರಾಟದ ನಡುವೆಯೇ ಅಂತಹಾ ಹಠ ತೊಟ್ಟು ಮಗಳಿಗೆ ತರಬೇತಿ ಕೊಡಿಸಿ ಆಕೆಯನ್ನು ಈ ಮಟ್ಟಕ್ಕೇರಿಸಿದ ಖ್ಯಾತಿ,ಪ್ರೀತಿ,ಒಲುಮೆ ಇವೆಲ್ಲವೂ ಆ ಅಪ್ಪನಿಗೆ ಸೇರಬೇಕು .ಒಟ್ಟಿನಲ್ಲಿ ಅಪ್ಪನ ಕಂಗಳಲ್ಲಿ ಚಿನ್ನದ ಆನಂದಬಾಷ್ಪ ಮೂಡಿಸುವಲ್ಲಿ ಮಗಳು ಹಿಮದಾಸ್ ಯಶಸ್ವಿಯಾದಳು.
ಜಿ. ಪರಮೇಶ್ವರ್ ಬಹುಮಾನ ಘೋಷಿಸಿ ಟ್ವೀಟ್
The Grit and Perseverance displayed by @HimaDas8 is inspirational for thousands of aspiring sportspersons across India.
As a token of our appreciation, it is my pleasure to award you with a cash prize money of ₹10 lakh on behalf of Sri Siddhartha Academy of Higher Education.
— Dr. G Parameshwara (@DrParameshwara) July 14, 2018
ವಿಶ್ವ ಅಂಡರ್ 20 ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಹಿಮಾದಾಸ್ ಗೆ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿರುವುದಾಗಿ ಟ್ಟೀಟ್ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ

ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ3 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ2 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ3 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ17 hours ago
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ
-
ದಿನದ ಸುದ್ದಿ3 days ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ2 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ