ದಿನದ ಸುದ್ದಿ
ಹಿಂದಿ ದಿವಸಕ್ಕೆ ಕ.ರ.ವೇ ಸಂಘದಿಂದ ತೀವ್ರ ಆಕ್ಷೇಪ

- ದಿವ್ಯಶ್ರೀ. ವಿ,ಬೆಂಗಳೂರು
1949ಸೆಪ್ಟೆಂಬರ್ 14 ರಂದು ಭಾರತದ ಕೇಂದ್ರ ಸರ್ಕಾರವು ನಮ್ಮ ದೇಶದ 22 ಭಾಷೆಗಳಲ್ಲಿ ಹಿಂದಿ ಭಾಷೆಯನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಪ್ರಸ್ತಾಪಿಸಿತು.
ಬೆಹಾರ್ ರಾಜೇಂದ್ರ ಸಿಂಹ,ಹಜಾರಿ ಪ್ರಸಾದ್ ದ್ವಿವೇದಿ, ಮೈಥಿಲಿ ಶರಣ್ ಗುಪ್ತ್, ಸೇಠ್ ಗೋವಿಂದ್ ದಾಸ್ ಮತ್ತು ಕಾಕಾ ಕಾಲೇಲ್ಕರ್ ಅವರು ಮಾಡಿದ ಪ್ರಯತ್ನದಿಂದ ದೇಶದಲ್ಲಿ
ವಿವಿಧ ರಾಜ್ಯಗಳಲ್ಲಿ ಹಿಂದಿ ಬಳಕೆಯನ್ನು ಪರಿಗಣಿಸಿ ಹಾಗೂ ಹಿಂದಿ ಭಾಷೆಯಿಂದ ದೇವನಾಗರಿ ಲಿಪಿಯನ್ನು ಸಂರಚಿಸಿದ್ದಕ್ಕಾಗಿ ಮತ್ತು ಸೆಪ್ಟೆಂಬರ್ 14 ರಾಜೇಂದ್ರ ಸಿಂಹ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ನೆನಪಿಗಾಗಿ1950 ಸೆಪ್ಟೆಂಬರ್ 14 ರಿಂದ ಪ್ರತಿ ವರ್ಷವೂ ರಾಷ್ಟೀಯ ಹಿಂದಿ ದಿವಸ್ ಎಂದು ಆಚರಿಸುತ್ತ ಬಂದಿದ್ದಾರೆ.
ಹಿಂದಿ ಭಾಷೆಯನ್ನು ರಾಷ್ಟ್ರೀಯ ಮಾತೃಭಾಷೆಯಾಗಿ ಪರಿಗಣಿಸಿದೆ ಆದರೆ ಅದನ್ನೇ ಎಲ್ಲಾ ರಾಜ್ಯಗಳಿಗೆ ಸೀಮಿತವಾಗಿಡುವುದು ಸರಿಯಲ್ಲ
ಏಕೆಂದರೆ ಪ್ರತಿಯೊಂದು ರಾಜ್ಯಕ್ಕೂ ಅದರದ್ದೇ ಆದ ಪ್ರಾದೇಶಿಕ ಭಾಷೆಯಿದೆ ಮತ್ತು ಪ್ರತಿ ರಾಜ್ಯದ ಜನರು ಮಾತೃಭಾಷೆಯಾಗಿ, ಆಡಳಿತ ಭಾಷೆಯಾಗಿ ತಮ್ಮ ಭಾಷೆಯನ್ನು ಅಳವಡಿಸಿಕೊಂಡಿರುತ್ತಾರೆ.
ಭಾರತೀಯ ಸಂವಿಧಾನದ ಹದಿನಾಲ್ಕನೇ ಪರಿಚ್ಚೇದವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ ಆದರೆ 22 ಭಾಷೆಗಳಲ್ಲಿ ಕೇವಲ ಹಿಂದಿ ಭಾಷೆಯನ್ನು ಮಾತ್ರ ರಾಷ್ಟ್ರೀಯ ಭಾಷೆಯನ್ನಾಗಿಸಿ ಉಳಿದ ಭಾಷೆಗಳಿಗೆ ಅನ್ಯಾಯವಾಗುತ್ತಿರುವುದನ್ನು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಘದವರು ಕಳೆದ 20 ವರ್ಷಗಳಿಂದ ವಿರೋಧ ವ್ಯಕ್ತಪಡಿಸುತ್ತ ಬಂದಿದ್ದಾರೆ.
ಕಾರಣ ಹಿಂದಿ ಭಾಷೆಗೆ ನೀಡುವ ಪ್ರಾಮುಖ್ಯತೆಯಿಂದ ಹಲವು ರಾಜ್ಯಗಳ ಪ್ರಾದೇಶಿಕ ಭಾಷಿಕರಿಗೆ ಕೇಂದ್ರ ಸರ್ಕಾರ ನಡೆಸುವ ಉದ್ಯೋಗ ಪರೀಕ್ಷೆಗಳಲ್ಲಿ ಅನುತ್ತೀರ್ಣತೆ ಪಡೆದುಕ್ಕೊಳ್ಳುತ್ತಿರುವುದರಿಂದ ಅನ್ಯಾಯವಾಗುತ್ತಿದೆ ಇದರಿಂದ ದಕ್ಷಿಣ ಭಾರತೀಯರಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗುತ್ತಿದೆ ಆದ್ದರಿಂದ ಕ.ರ.ವೇ ಸಂಘದವರು ಕನ್ನಡಿಗರ ಪರವಾಗಿ ದೇಶದಲ್ಲಿ ಹಿಂದಿ ಹೇರಿಕೆಯ ವಿರುದ್ಧ ರಾಷ್ಟ್ರೀಕೃತ ಹಾಗೂ ಗ್ರಾಮೀಣ ಬ್ಯಾಂಕಗಳ ಎದುರು ರಾಜ್ಯಾದ್ಯಂತ ವಿವಿಧ ಪ್ರತಿಭಟನೆಗಳನ್ನು ಸೆಪ್ಟೆಂಬರ್ 14- 2021ಮಂಗಳವಾರ ಹಮ್ಮಿಕೊಂಡಿದ್ದಾರೆ.
ಉತ್ತರ ಭಾರತೀಯರ ವಲಸೆ ದಕ್ಷಿಣ ಭಾರತದಲ್ಲಿ ಹೆಚ್ಚಿರುವುದರಿಂದ ನಮ್ಮ ಕರ್ನಾಟಕದಲ್ಲಿ ಕನ್ನಡಿಗರ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಿದೆ ಹಿಂದಿ ಭಾಷಿಕರು ಕನ್ನಡದವರನ್ನು ತಮ್ಮ ಭಾಷೆಗೆ ಅವಲೋಕಿಸಿಕ್ಕೊಳ್ಳುತ್ತಿದ್ದಾರೆ ಇದರಿಂದ ನಮ್ಮವರೇ ನಮ್ಮ ಭಾಷೆ,ಸಂಸ್ಕೃತಿಯನ್ನು ಮರೆತು ಪರಭಾಷೆಗಳಿಗೆ ಅವಲಂಬಿತರಾಗುತ್ತಿದ್ದಾರೆ.
ಇದರಿಂದ ನಮ್ಮ ಮಾತೃಭಾಷೆಗೆ ಅವಮಾನವಾಗುತ್ತಿದೆ ಆದ್ದರಿಂದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಘದವರು ಭಾಷಾ ಅಭಿಮಾನ ಹಾಗೂ ಕೇಂದ್ರ ಪ್ರಾದೇಶಿಕ ಉದ್ಯೋಗಳಿಗಾಗಿ ಹಲವು ಹೋರಾಟ ಪ್ರತಿಭಟನೆಗಳನ್ನು ಹಮ್ಮಿಕೊಂಡು ಹಿಂದಿ ಭಾಷೆ ಹೇರಿಕೆಯನ್ನು ತಡೆಯುವ ಪ್ರಯತ್ನ ನಡೆಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ