ದಿನದ ಸುದ್ದಿ
ಹಿಂದಿ ದಿವಸಕ್ಕೆ ಕ.ರ.ವೇ ಸಂಘದಿಂದ ತೀವ್ರ ಆಕ್ಷೇಪ
- ದಿವ್ಯಶ್ರೀ. ವಿ,ಬೆಂಗಳೂರು
1949ಸೆಪ್ಟೆಂಬರ್ 14 ರಂದು ಭಾರತದ ಕೇಂದ್ರ ಸರ್ಕಾರವು ನಮ್ಮ ದೇಶದ 22 ಭಾಷೆಗಳಲ್ಲಿ ಹಿಂದಿ ಭಾಷೆಯನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಪ್ರಸ್ತಾಪಿಸಿತು.
ಬೆಹಾರ್ ರಾಜೇಂದ್ರ ಸಿಂಹ,ಹಜಾರಿ ಪ್ರಸಾದ್ ದ್ವಿವೇದಿ, ಮೈಥಿಲಿ ಶರಣ್ ಗುಪ್ತ್, ಸೇಠ್ ಗೋವಿಂದ್ ದಾಸ್ ಮತ್ತು ಕಾಕಾ ಕಾಲೇಲ್ಕರ್ ಅವರು ಮಾಡಿದ ಪ್ರಯತ್ನದಿಂದ ದೇಶದಲ್ಲಿ
ವಿವಿಧ ರಾಜ್ಯಗಳಲ್ಲಿ ಹಿಂದಿ ಬಳಕೆಯನ್ನು ಪರಿಗಣಿಸಿ ಹಾಗೂ ಹಿಂದಿ ಭಾಷೆಯಿಂದ ದೇವನಾಗರಿ ಲಿಪಿಯನ್ನು ಸಂರಚಿಸಿದ್ದಕ್ಕಾಗಿ ಮತ್ತು ಸೆಪ್ಟೆಂಬರ್ 14 ರಾಜೇಂದ್ರ ಸಿಂಹ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ನೆನಪಿಗಾಗಿ1950 ಸೆಪ್ಟೆಂಬರ್ 14 ರಿಂದ ಪ್ರತಿ ವರ್ಷವೂ ರಾಷ್ಟೀಯ ಹಿಂದಿ ದಿವಸ್ ಎಂದು ಆಚರಿಸುತ್ತ ಬಂದಿದ್ದಾರೆ.
ಹಿಂದಿ ಭಾಷೆಯನ್ನು ರಾಷ್ಟ್ರೀಯ ಮಾತೃಭಾಷೆಯಾಗಿ ಪರಿಗಣಿಸಿದೆ ಆದರೆ ಅದನ್ನೇ ಎಲ್ಲಾ ರಾಜ್ಯಗಳಿಗೆ ಸೀಮಿತವಾಗಿಡುವುದು ಸರಿಯಲ್ಲ
ಏಕೆಂದರೆ ಪ್ರತಿಯೊಂದು ರಾಜ್ಯಕ್ಕೂ ಅದರದ್ದೇ ಆದ ಪ್ರಾದೇಶಿಕ ಭಾಷೆಯಿದೆ ಮತ್ತು ಪ್ರತಿ ರಾಜ್ಯದ ಜನರು ಮಾತೃಭಾಷೆಯಾಗಿ, ಆಡಳಿತ ಭಾಷೆಯಾಗಿ ತಮ್ಮ ಭಾಷೆಯನ್ನು ಅಳವಡಿಸಿಕೊಂಡಿರುತ್ತಾರೆ.
ಭಾರತೀಯ ಸಂವಿಧಾನದ ಹದಿನಾಲ್ಕನೇ ಪರಿಚ್ಚೇದವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ ಆದರೆ 22 ಭಾಷೆಗಳಲ್ಲಿ ಕೇವಲ ಹಿಂದಿ ಭಾಷೆಯನ್ನು ಮಾತ್ರ ರಾಷ್ಟ್ರೀಯ ಭಾಷೆಯನ್ನಾಗಿಸಿ ಉಳಿದ ಭಾಷೆಗಳಿಗೆ ಅನ್ಯಾಯವಾಗುತ್ತಿರುವುದನ್ನು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಘದವರು ಕಳೆದ 20 ವರ್ಷಗಳಿಂದ ವಿರೋಧ ವ್ಯಕ್ತಪಡಿಸುತ್ತ ಬಂದಿದ್ದಾರೆ.
ಕಾರಣ ಹಿಂದಿ ಭಾಷೆಗೆ ನೀಡುವ ಪ್ರಾಮುಖ್ಯತೆಯಿಂದ ಹಲವು ರಾಜ್ಯಗಳ ಪ್ರಾದೇಶಿಕ ಭಾಷಿಕರಿಗೆ ಕೇಂದ್ರ ಸರ್ಕಾರ ನಡೆಸುವ ಉದ್ಯೋಗ ಪರೀಕ್ಷೆಗಳಲ್ಲಿ ಅನುತ್ತೀರ್ಣತೆ ಪಡೆದುಕ್ಕೊಳ್ಳುತ್ತಿರುವುದರಿಂದ ಅನ್ಯಾಯವಾಗುತ್ತಿದೆ ಇದರಿಂದ ದಕ್ಷಿಣ ಭಾರತೀಯರಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗುತ್ತಿದೆ ಆದ್ದರಿಂದ ಕ.ರ.ವೇ ಸಂಘದವರು ಕನ್ನಡಿಗರ ಪರವಾಗಿ ದೇಶದಲ್ಲಿ ಹಿಂದಿ ಹೇರಿಕೆಯ ವಿರುದ್ಧ ರಾಷ್ಟ್ರೀಕೃತ ಹಾಗೂ ಗ್ರಾಮೀಣ ಬ್ಯಾಂಕಗಳ ಎದುರು ರಾಜ್ಯಾದ್ಯಂತ ವಿವಿಧ ಪ್ರತಿಭಟನೆಗಳನ್ನು ಸೆಪ್ಟೆಂಬರ್ 14- 2021ಮಂಗಳವಾರ ಹಮ್ಮಿಕೊಂಡಿದ್ದಾರೆ.
ಉತ್ತರ ಭಾರತೀಯರ ವಲಸೆ ದಕ್ಷಿಣ ಭಾರತದಲ್ಲಿ ಹೆಚ್ಚಿರುವುದರಿಂದ ನಮ್ಮ ಕರ್ನಾಟಕದಲ್ಲಿ ಕನ್ನಡಿಗರ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಿದೆ ಹಿಂದಿ ಭಾಷಿಕರು ಕನ್ನಡದವರನ್ನು ತಮ್ಮ ಭಾಷೆಗೆ ಅವಲೋಕಿಸಿಕ್ಕೊಳ್ಳುತ್ತಿದ್ದಾರೆ ಇದರಿಂದ ನಮ್ಮವರೇ ನಮ್ಮ ಭಾಷೆ,ಸಂಸ್ಕೃತಿಯನ್ನು ಮರೆತು ಪರಭಾಷೆಗಳಿಗೆ ಅವಲಂಬಿತರಾಗುತ್ತಿದ್ದಾರೆ.
ಇದರಿಂದ ನಮ್ಮ ಮಾತೃಭಾಷೆಗೆ ಅವಮಾನವಾಗುತ್ತಿದೆ ಆದ್ದರಿಂದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಘದವರು ಭಾಷಾ ಅಭಿಮಾನ ಹಾಗೂ ಕೇಂದ್ರ ಪ್ರಾದೇಶಿಕ ಉದ್ಯೋಗಳಿಗಾಗಿ ಹಲವು ಹೋರಾಟ ಪ್ರತಿಭಟನೆಗಳನ್ನು ಹಮ್ಮಿಕೊಂಡು ಹಿಂದಿ ಭಾಷೆ ಹೇರಿಕೆಯನ್ನು ತಡೆಯುವ ಪ್ರಯತ್ನ ನಡೆಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243