Connect with us

ದಿನದ ಸುದ್ದಿ

ಜಾಗೃತಿಯಿಂದ ಮಾತ್ರ ಎಚ್.ಐ.ವಿ ಹಾಗೂ ಏಡ್ಸ್ ನಿಯಂತ್ರಣ ಸಾಧ್ಯ: ಡಾ.ಕೆ.ಎಚ್.ಗಂಗಾಧರ್

Published

on

ಸುದ್ದಿದಿನ, ದಾವಣಗೆರೆ : ಯುವಜನತೆ ಎಚ್.ಐ.ವಿ ( HIV ) ಹಾಗೂ ಏಡ್ಸ್ ( AIDS ) ರೋಗಕ್ಕೆ ಬಲಿಯಾಗುತ್ತಿದ್ದು, ಜಾಗೃತಿಯಿಂದ ಮಾತ್ರ ಈ ಮಾರಕ ಖಾಯಿಲೆಯನ್ನು ನಿಯಂತ್ರಿಸಬಹುಸು ಎಂದು ದಾವಣಗೆರೆ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಡಾ||ಕೆ.ಎಚ್.ಗಂಗಾಧರ್ ಅವರು ತಿಳಿಸಿದರು.

ನಗರದ ಎ.ವಿ.ಕಮಲಮ್ಮ ಪದವಿಪೂರ್ವ ಕಾಲೇಜಿನಲ್ಲಿ ವಿ.ಬಿ.ಪಿ.ಫೌಂಡೇಶನ್, ಏಕಾಂತಗಿರಿ ಟ್ರಸ್ಟ್ ಹಾಗೂ ಮಹಿಳಾ ಮತ್ತು‌ ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಏಡ್ಸ್ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ||ಕೆ.ಎಚ್.ಗಂಗಾಧರ್ ಅವರು ಏಡ್ಸ್ ಹರಡುವ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಪ್ರಸ್ತಾವಿಕ ಮಾತುಗಳನ್ನಾಡಿದ ಏಕಾಂತಗಿರಿ ಟ್ರಸ್ಟ್ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ಕಾಲೇಜು ಹಂತದ ವಿದ್ಯಾರ್ಥಿಗಳಿಗೆ ಎಚ್.ಐ.ವಿ ಬಗ್ಗೆ ಅರಿವಿನ ಕೊರತೆಯ ಕಾರಣದಿಂದ ಹೆಚ್ಚು ಯುವಜನತೆ ಏಡ್ಸ್ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಆದ ಕಾರಣ ವಿ.ಬಿ.ಪಿ ಫೌಂಡೇಶನ್ ಹಾಗೂ ಏಕಾಂತಗಿರಿ ಟ್ರಸ್ಟ್ ಸಹಯೋಗದಲ್ಲಿ ಹಲವಾರು ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರಾಮನಾಯ್ಕ್ ಅವರು ಮಾತನಾಡಿ, ಬಾಲ್ಯ ವಿವಾಹದಿಂದ ಹೆಣ್ಣುಮಕ್ಕಳು ಎದುರಿಸುತ್ತಿರುವ ಬಿಕ್ಕಟ್ಟುಗಳು ಹಾಗೂ ಕಾನೂನು ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಶ್ರೀಮತಿ ಪ್ರಿಯದರ್ಶಿನಿ ಇವರು ಮಾತನಾಡಿ, ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ಸಂವಿಧಾನಿಕ ಅವಕಾಶಗಳ ಬಗ್ಗೆ ಮಾಹಿತಿಯನ್ನು ವ್ಯಕ್ತಪಡಿಸಿದರು.
ವಿ.ಬಿ.ಪಿ.ಫೌಂಡೇಶನ್ ಸಂಸ್ಥಾಪಕರಾದ ಶಿವಕುಮಾರ್ ಮೇಗಳಮನೆಯವರು ಮಾತನಾಡಿ ಸಾಮಾಜಿಕವಾಗಿ ಎಚ್.ಐ.ವಿ‌ ಹಾಗೂ ಏಡ್ಸ್ ಪೀಡಿತರು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಶಂಭು ಹೊಸಮನಿಯವರು ವಿಶ್ವ ಏಡ್ಸ್ ದಿನದ ಭಾಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ‌ ಪ್ರಾಂಶುಪಾಲರಾದ ಶ್ರೀ ಎ.ಬಿ.ಶಿವನಗೌಡ ಅವರು ಮಾತನಾಡಿ ಎಚ್.ಐ.ವಿ ಅತ್ಯಂತ ಮಾರಕ ಖಾಯಿಲೆಯಾಗಿದ್ದು, ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಇಂತಹ ಜಾಗೃತಿ ಕಾರ್ಯಕ್ರಮಗಳು ಶಾಲಾ ಕಾಲೇಜುಗಳಿಗೆ ಮಾತ್ರ ಸೀಮಿತವಾಗದೆ ಸಮಾಜದ ಪ್ರತಿಯೊಬ್ಬ ಪ್ರಜೆಗಳಿಗೂ ತಲುಪುವಂತೆ ಕಾರ್ಯಪ್ರವೃತ್ತವಾಗಲಿ ಎಂಬುದಾಗಿ ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕರಾದ ಡಾ.ಗೀತಾ ಎಂ.ಸಿ, ಮಂಜುಳಾ ಟಿ, ರವಿ ಬಣಕಾರ್ ಭಾಗಿಯಾಗಿದ್ದರು. ಕಾಲೇಜಿನ ವಿದ್ಯಾರ್ಥಿನಿಯರಾದ ಚಂಪಕ ಕೆ.ವಿ ಸ್ವಾಗತಿಸಿದರು, ಪೂಜಾ ಕೆ.ಎನ್ ವಂದಿಸಿದರು, ಆರತಿ ಕೆ.ಎಸ್. ಹಾಗೂ ಮಾಲಾ ಎಂ. ಎಸ್. ನಿರೂಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending