ದಿನದ ಸುದ್ದಿ
ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೇರ್ ಸೆಂಟರ್ ದಾಖಲು ಕಡ್ಡಾಯ : ಸಚಿವ ಡಾ. ಕೆ. ಸುಧಾಕರ್
ಸುದ್ದಿದಿನ,ದಾವಣಗೆರೆ : ಹೋಂ ಐಸೋಲೇಷನ್ಗೆ ಒಳಗಾಗುವ ಕೋವಿಡ್ ಸೋಂಕಿತರಿಂದಲೇ ಇತರರಿಗೆ ಸೋಂಕು ಹೆಚ್ಚು ಹರಡುತ್ತಿರುವುದು ಕಂಡುಬಂದಿದ್ದು, ಹೀಗಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸದ್ಯ 4789 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 3259 ಜನ ಹೋಂ ಐಸೋಲೇಷನ್ನಲ್ಲಿದ್ದಾರೆ, ಉಳಿದಂತೆ 1530 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ತಾಲ್ಲೂಕು ಒಂದರಲ್ಲಿಯೇ 1986 ಜನ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಸೂಕ್ತ ಸೌಲಭ್ಯಗಳಿಲ್ಲದೇ ಹೋಂ ಐಸೋಲೇಷನ್ನಲ್ಲಿ ಇರುವವರಿಂದ, ಹಾಗೂ ಮಾರ್ಗಸೂಚಿ ಪಾಲನೆ ಮಾಡದಿರುವ ಕಾರಣಗಳಿಂದ, ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ.
ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್ ಕೇರ್ ಸೆಂಟರ್ಗಳು (ಸಿಸಿಸಿ) ಕಾರ್ಯನಿರ್ವಹಿಸುತ್ತಿದ್ದು, 760 ಜನ ಸದ್ಯ ಸಿಸಿಸಿ ನಲ್ಲಿ ಇದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಸಾವು ಹಾಗೂ ಸೋಂಕಿನ ಪ್ರಮಾಣ ಕಡಿಮೆಯಾಗಬೇಕು, ಜಿಲ್ಲೆಯಲ್ಲಿ ಉತ್ತಮ ಸೌಲಭ್ಯಗಳಿರುವ ವಸತಿ ನಿಲಯಗಳು, ಸರ್ಕಾರಿ ಹಾಗೂ ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್ ಕೇರ್ ಸೆಂಟರ್ಗಳನ್ನಾಗಿ ಪರಿವರ್ತಿಸಬೇಕು.
ಸೋಂಕಿತರು ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್ನಲ್ಲಿ ಇರುವುದು ಬೇಡ. ಕಡ್ಡಾಯವಾಗಿ ಅವರನ್ನು ಸಿಸಿಸಿ ನಲ್ಲಿಯೇ ದಾಖಲಿಸಬೇಕು. ದಾಖಲಿಸಿದ 5 ಗಂಟೆಯ ಒಳಗಾಗಿ ಅವರಿಗೆ ನಿಗದಿತ ಎಲ್ಲ ಔಷಧಿ, ಸಾಮಗ್ರಿಗಳುಳ್ಳ ಮೆಡಿಕಲ್ ಕಿಟ್ ಕೊಡಬೇಕು, ಅಲ್ಲದೆ ಅವರಿಗೆ ವೈದ್ಯರಿಂದ ಚಿಕಿತ್ಸೆ ಪ್ರಾರಂಭವಾಗಬೇಕು. ಸಿಸಿಸಿ ಗಳಲ್ಲಿ ಉತ್ತಮ ರೀತಿಯಲ್ಲಿ ವಸತಿ, ಊಟೋಪಹಾರ ಗುಣಮಟ್ಟದ್ದಾಗಿರಬೇಕು.
ಇದನ್ನೂ ಓದಿ | ಸೋಂಕು ದೃಢಪಟ್ಟ 5 ತಾಸಿನೊಳಗಾಗಿ ಕೋವಿಡ್ ಕಿಟ್ ಒದಗಿಸಿ : ಸಚಿವ ಡಾ.ಕೆ.ಸುಧಾಕರ್
ಉತ್ತಮ ಪೌಷ್ಠಿಕ ಆಹಾರ ನೀಡಲು ಈಗಾಗಲೆ ಆದೇಶಿಸಲಾಗಿದೆ ಎಂದು ಸಚಿವರು ಹೇಳಿದರು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಿಸುವ ದಿಸೆಯಲ್ಲಿ ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸ್ಥಳೀಯ ಮಟ್ಟದ ಸಮಿತಿಯ ನಿರ್ಲಕ್ಷ್ಯ ಕಾರಣ ಗ್ರಾಮಗಳಲ್ಲಿ ಸೋಂಕು ಹೆಚ್ಚು ಹರಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿಗದಿತ ಬೆಡ್ಗಳನ್ನು ಕೊಡಲೇಬೇಕು
ರಾಜ್ಯದಲ್ಲಿ ಸದ್ಯ ಕೋವಿಡ್ ತುರ್ತು ಸ್ಥಿತಿ ಇದೆ. ಎಲ್ಲ ಖಾಸಗಿ ಮೆಡಿಕಲ್ ಕಾಲೇಜುಗಳು ಶೇ. 75 ಹಾಗೂ ಖಾಸಗಿ ಆಸ್ಪತ್ರೆಗಳು ಶೇ. 50 ರಷ್ಟು ಬೆಡ್ಗಳನ್ನು ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಮಾಡಲಾದ ರೋಗಿಗಳಿಗಾಗಿ ಒದಗಿಸಲೇಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಜನರ ಪ್ರಾಣ ರಕ್ಷಿಸುವುದು ನನ್ನ ಕರ್ತವ್ಯ.
ಆದರೆ ದಾವಣಗೆರೆಯಲ್ಲಿ 850 ಬೆಡ್ ಸಾಮಥ್ರ್ಯ ಹೊಂದಿರುವ ಎಸ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಕೇವಲ 54 ಹಾಗೂ 850 ಬೆಡ್ ಸಾಮಥ್ರ್ಯದ ಬಾಪೂಜಿ ಜೆಜೆಎಂಸಿ ಕಾಲೇಜಿನಲ್ಲಿ ಕೇವಲ 37 ಬೆಡ್ಗಳನ್ನು ಮಾತ್ರ ನೀಡಿದ್ದು, ಸರ್ಕಾರದ ಸೂಚನೆ ಪಾಲಿಸುತ್ತಿಲ್ಲ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯ ಮಟ್ಟದಲ್ಲಿ ಸರ್ಕಾರ ಕೈಗೊಂಡ ನಿರ್ಧಾರವನ್ನು ಇಲ್ಲಿನ ಖಾಸಗಿ ಮೆಡಿಕಲ್ ಕಾಲೇಜುಗಳು ಪಾಲಿಸದಿರುವುದು ನಿಜಕ್ಕೂ ಅಚ್ಚರಿ ಹಾಗೂ ನೋವು ತಂದಿದೆ. ಸರ್ಕಾರ ಖಾಸಗಿ ಆಡಳಿತ ಮಂಡಳಿಯೊಂದಿಗೆ ಘರ್ಷಣೆಯನ್ನು ಬಯಸುವುದಿಲ್ಲ. ರಾಜ್ಯದಲ್ಲಿ ಎಲ್ಲ ಖಾಸಗಿ ಮೆಡಿಕಲ್ ಕಾಲೇಜಗಳೂ ಕೂಡ ನಿಗದಿತ ಪ್ರಮಾಣದಲ್ಲಿ ಬೆಡ್ ನೀಡುವ ಮೂಲಕ ಸ್ಪಂದಿಸಿದ್ದಾರೆ. ಎಲ್ಲಿಯೂ ಕೂಡ ಈ ರೀತಿಯ ಅಸಹಾಕಾರ ಕಂಡುಬಂದಿಲ್ಲ.
ರಾಜ್ಯದ ಜನರ ಆರೋಗ್ಯ ಹಾಗೂ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸ್ಸು ಮಾಡುವ ರೋಗಿಗಳಿಗೆ ನಿಗದಿತ ಸಂಖ್ಯೆಯಷ್ಟು ಬೆಡ್ ನೀಡಲೇಬೇಕು. ನಾವೇನು ಉಚಿತವಾಗಿ ಚಿಕಿತ್ಸೆ ನೀಡಿ ಎಂದು ಹೇಳುತ್ತಿಲ್ಲ. ಪ್ರತಿ ರೋಗಿಗೂ ಸರ್ಕಾರದಿಂದ ಹಣ ಪಾವತಿಸುತ್ತೇವೆ. ಇದು ಹೆಲ್ತ್ ಎಮರ್ಜೆನ್ಸಿ ಕಾಲವಾಗಿದ್ದು ಅತ್ಯಂತ ತುರ್ತು ನಾನ್ ಕೋವಿಡ್ ರೋಗಿಗಳಿಗೆ ಮಾತ್ರ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳು ಚಿಕಿತ್ಸೆ ನೀಡಬೇಕು.
ಇತರೆ ಚಿಕಿತ್ಸೆಗಳನ್ನು 2-3 ತಿಂಗಳು ಮುಂದೂಡಬೇಕು. ಕೋವಿಡ್ ರೋಗಿಗಳಿಗೇ ಬೆಡ್ಗಳನ್ನು ಒದಗಿಸಬೇಕು. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳು ನಿಗದಿಯಂತೆ ಕ್ರಮವಾಗಿ ಶೇ. 75 ಹಾಗೂ ಶೇ. 50 ರಷ್ಟು ಬೆಡ್ಗಳನ್ನು ನೀಡಲೇಬೇಕು ಹಾಗೂ ಬೆಡ್ ಲಭ್ಯತೆಯ ಸ್ಥಿತಿಗತಿಯ ಬೋರ್ಡ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಕಾನೂನು ಪ್ರಕಾರ ನಾವು ತೆಗೆದುಕೊಳ್ಳಬೇಕಾಗುತ್ತದೆ.
ನಿಗದಿಯಂತೆ ಬೆಡ್ಗಳನ್ನು ಪಡೆಯದಿದ್ದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಸಹಕಾರ ನೀಡದವರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಡಿಹೆಚ್ಒ ಅವರು ಸಾಂಕ್ರಾಮಿಕ ರೋಗ ನಿರ್ವಹಣೆ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವರು ಸೂಚನೆ ನೀಡಿದರು.
2150 ವೈದ್ಯರ ನೇಮಕ
ಜಿಲ್ಲೆಯಲ್ಲಿನ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್ಗಳನ್ನು ಒದಗಿಸಲಾಗಿದ್ದು, ಕೆಲವೆಡೆ ತಜ್ಞ ವೈದ್ಯರು ಹಾಗೂ ನುರಿತ ಸಿಬ್ಬಂದಿ ಕೊರತೆ ಕಾರಣ ಬಳಕೆಗೆ ತೊಂದರೆಯಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯದಲ್ಲಿ 2150 ವೈದ್ಯರು, 780 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅವರಿಗೆ ಸ್ಥಳ ನಿಯುಕ್ತಿ ಆದೇಶ ಆಗಲಿದೆ.
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನೀಗಲಿದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್ ಬಳಕೆಗೆ ಸಂಬಂಧಿಸಿದಂತೆ ಲಭ್ಯವಿರುವ ಸಿಬ್ಬಂದಿಗಳಿಗೆ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಸೂಕ್ತ ತರಬೇತಿಯನ್ನು ಕೊಡಿಸಬೇಕು, ಜಿಲ್ಲೆಯಲ್ಲಿ ಕೂಡಲೆ ಈ ಕಾರ್ಯ ಆಗಬೇಕು ಎಂದು ಸಚಿವರು ತಾಕೀತು ಮಾಡಿದರು.
ಆಂಬುಲೆನ್ಸ್ಗೆ ದರ ನಿಗದಿ
ರಾಜ್ಯದಲ್ಲಿ ಕೋವಿಡ್ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿರುವ ಸಂದರ್ಭದ ಪರಿಸ್ಥಿತಿಯ ದುರ್ಲಾಭ ಪಡೆದು, ಖಾಸಗಿ ಆಂಬುಲೆನ್ಸ್ಗಳು ರೋಗಿಗಳಿಂದ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ, ಮೊದಲೇ ನೊಂದಿರುವವರಿಗೆ ಇನ್ನಷ್ಟು ಹಿಂಸೆ ನೀಡುವಂತಹ ಅಮಾನವೀಯ ವರ್ತನೆ ತೋರುವುದು ಸಮಂಜಸವಲ್ಲ.
ಈ ಕುರಿತು ಬಹಳಷ್ಟು ದೂರುಗಳು ಕೇಳಿಬಂದಿದ್ದು, ಈಗಾಗಲೆ ಈ ದಿಸೆಯಲ್ಲಿ ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಖಾಸಗಿ ಆಂಬುಲೆನ್ಸ್ಗಳಿಗೆ ದರವನ್ನು ನಿಗದಿಪಡಿಸಲಾಗುವುದು. ನಿಗದಿಗಿಂತ ಹೆಚ್ಚಿನ ದರ ಪಡೆಯುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಎಲ್ಲ ತಾಲ್ಲೂಕುಗಳಿಗೆ ಆಕ್ಸಿಜನ್ ಘಟಕ : ಕೋವಿಡ್ ರೋಗಿಗಳಿಗಾಗಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿಯೂ ಆಕ್ಸಿಜನ್ ಘಟಕವನ್ನು ಸ್ಥಾಪಿಸುವ ಆಲೋಚನೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಸಂಸದರಾದ ಜಿ.ಎಂ. ಸಿದ್ದೇಶ್ವರ್ ಅವರು ತಮ್ಮ ಟ್ರಸ್ಟ್ ವತಿಯಿಂದ 1.5 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಘಟಕ ನೀಡಲು ಕ್ರಮ ವಹಿಸಿದ್ದಕ್ಕಾಗಿ ಹಾಗೂ ಚನ್ನಗಿರಿ ಶಾಸಕರು ಹಾಗೂ ಕೆಸ್ಎಸ್ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರುಪಾಕ್ಷಪ್ಪ ಅವರು ಕೂಡ ಚನ್ನಗಿರಿಯಲ್ಲಿ ನಿಗಮದ ವತಿಯಿಂದ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಕ್ಕಾಗಿ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.
ದಾವಣಗೆರೆ ಜಿಲ್ಲೆಗೆ ಒಟ್ಟು 115 ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ವಿವಿಧ ಮೂಲಗಳಿಂದ ಒದಗಿಸಲಾಗಿದೆ. ರಾಜ್ಯದಲ್ಲಿ 18-44 ವರ್ಷದವರಿಗೆ ಲಸಿಕೆಯನ್ನು ನೀಡುವ ಕಾರ್ಯಕ್ಕೆ ಮರು ಚಾಲನೆ ನೀಡಲಾಗುತ್ತಿದ್ದು, ಡಿಸೆಂಬರ್ ಒಳಗಾಗಿ ಎಲ್ಲರಿಗೂ ಲಸಿಕೆ ಕೊಡಿಸುವ ಪ್ರಯತ್ನ ಮಾಡಲಾಗುವುದು. ಜಿಲ್ಲೆಗೆ ಕೋವಿಡ್ಗೆ ನೀಡಲಾಗುವ ಯಾವುದೇ ಔಷಧಿಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಸಚಿವ ಸುಧಾಕರ್ ಹೇಳಿದರು.
ಬ್ಲ್ಯಾಕ್ ಫಂಗಸ್ ಆತಂಕದ ಅಗತ್ಯವಿಲ್ಲ
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಜಿಲ್ಲೆಯಲ್ಲಿಯೂ ಈವರೆಗೆ 15 ರಿಂದ 20 ಜನರಿಗೆ ಸೋಂಕು ಕಂಡುಬಂದಿದೆ. ಈ ಸೋಂಕಿಗೆ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು, ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ.
ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಕೋವಿಡ್ ಚಿಕಿತ್ಸೆಯಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹ ಮುಂತಾದ ಕಾರಣಗಳಿಂದ ಈ ಸೋಂಕು ಉಂಟಾಗುತ್ತಿದೆ. ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರ ಆರೋಗ್ಯ ತಪಾಸಣೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಬಿಡುಗಡೆಯಾದ ದಿನದಿಂದ 03, 07, 15 ದಿನಗಳ ಅವಧಿಯಲ್ಲಿ ಅವರಿಗೆ ಯಾವ ಬಗೆಯ ಪರೀಕ್ಷೆ ಮಾಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆ ಮಾಧ್ಯಮಗಳು ದಯವಿಟ್ಟು ವೈಭವೀಕರಿಸುವ ಮೂಲಕ, ಈಗಾಗಲೆ ಕೋವಿಡ್ನಿಂದ ಮಾನಸಿಕವಾಗಿ ಆತಂಕದಲ್ಲಿರುವ ಸಮಾಜದಲ್ಲಿ ಇನ್ನಷ್ಟು ಭಯದ ವಾತಾವರಣ ಕಲ್ಪಿಸಬೇಡಿ ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರು ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಸೋಂಕಿತರಿಗೆ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ, ಯಾರು ಯಾವುದೇ ಮಟ್ಟದ ಪ್ರಭಾವ ಬಳಸಿದರೂ, ಬೆಡ್ ದೊರೆಯುತ್ತಿಲ್ಲ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದಲ್ಲಿ ಬೆಡ್ ಪಡೆಯದಿರುವುದನ್ನು ಪ್ರಸ್ತಾಪಿಸಿ, ಈ ನಿಟ್ಟಿನಲ್ಲಿ ಸಚಿವರು ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಸರ್ಕಾರ ಪರಿಗಣಿಸಿದ್ದು, ಎಲ್ಲ ಶಿಕ್ಷಕರಿಗೂ ಲಸಿಕಾಕರಣ ಆಗಬೇಕು. ಜಿಲ್ಲೆಯಲ್ಲಿ ಇನ್ನೂ 700 ಕ್ಕೂ ಹೆಚ್ಚು ಶಿಕ್ಷಕರಿಗೆ ಲಸಿಕೆ ನೀಡಿಲ್ಲ. ಸೋಂಕಿತರ ಪ್ರಾಥಮಿಕ 10 ಹಾಗೂ ದ್ವಿತೀಯ ಹಂತದ 20 ಸಂಪರ್ಕಿತರಿಗೆ ಕೋವಿಡ್ ಟೆಸ್ಟ್ ಮಾಡಬೇಕು, ಆದರೆ ಜಿಲ್ಲೆಯಲ್ಲಿ ಇದು ಆಗುತ್ತಿಲ್ಲ. ಹೀಗಾಗಿ ಸೋಂಕು ಏರಿಕೆಯಾಗುತ್ತಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಈಗಾಗಲೆ ಕೋವಿಡ್ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಮಾಧ್ಯಮದವರು, ಬ್ಯಾಂಕ್ ಹಾಗೂ ರೈಲ್ವೆ ಸಿಬ್ಬಂದಿಗಳಿಗೆ ಲಸಿಕೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದ ಬೆಡ್ ಗಳನ್ನು ಸರ್ಕಾರದ ಆದೇಶಕ್ಕೆ ಅನುಗುಣವಾಗಿ ತಪ್ಪದೆ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಮಾಡಾಳ್ ವಿರುಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ರಾಮಪ್ಪ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಸಿಇಒ ಡಾ. ವಿಜಯ ಮಹಾಂತೇಶ್, ಜೆಜೆಎಂಸಿ ಹಾಗೂ ಎಸ್ಎಸ್ ವೈದ್ಯಕೀಯ ಕಾಲೇಜುಗಳ ನಿರ್ದೇಶಕರು, ಪ್ರಾಂಶುಪಾಲರು, ಡಿಹೆಚ್ಒ ಡಾ. ನಾಗರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
~ವಿದ್ಯಾನಾಯ್ಕ್ ಅರೇಹಳ್ಳಿ
ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ ಕಲಿಕೆ ಎನ್ನುವುದು ಶಿಕ್ಷಣ ಕ್ಷೇತ್ರದಲ್ಲಿ ಬಳಸಲಾಗುವ ಒಂದು ವ್ಯವಸ್ಥಿತ ಮತ್ತು ಪ್ರಭಾವಶಾಲಿ ಬೋಧನಾ ವಿಧಾನವಾಗಿದ್ದು, ವಿಶೇಷವಾಗಿ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – NEP ಯಲ್ಲೂ ಇದರ ಪ್ರಸ್ತಾಪವಿದೆ ಎನ್ನಲಾಗಿದೆ.
ಪಂಚಪಾಡಿ ಎಂದರೇನು?
ಪಂಚಪಾಡಿ ಎಂದರೆ ಮಗುವಿನ ಸಮಗ್ರ ವಿಕಾಸಕ್ಕಾಗಿ ಐದು ಹಂತಗಳ ಕಲಿಕಾ ಪ್ರಕ್ರಿಯೆಯನ್ನು ಬಳಸಲಾಗುತ್ತದೆ.
ಅಂದರೆ ಜ್ಞಾನರ್ಜನೆಗೆ ಐದು ಹೆಜ್ಜೆಗಳು ಅಥವಾ ಐದು ಹಂತಗಳು ಎಂದರ್ಥ.
ಜ್ಞಾನವನ್ನು ಕೇವಲ ನೆನಪಿನಲ್ಲಿಟ್ಟುಕೊಳ್ಳುವುದರ ಬದಲಾಗಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಈ ವಿಧಾನ ಸಹಾಯ ಮಾಡುತ್ತದೆ.
ಪಂಚಪಾಡಿ ಕಲಿಕೆಯ 5 ಹಂತಗಳು
ಅದಿತಿ ( ಪರಿಚಯ / ಗ್ರಹಿಕೆ): ಈ ಪದ್ಧತಿಯ ಮೊದಲ ಹಂತವೇ ಅದಿತಿ. ಇಲ್ಲಿ ವಿದ್ಯಾರ್ಥಿಗೆ ಹೊಸ ವಿಷಯವನ್ನು ಪರಿಚಯಿಸಲಾಗುತ್ತದೆ. ಶಿಕ್ಷಕರು ಕಥೆ,ಚಿತ್ರ ಉದಾಹರಣೆ ಅಥವಾ ಚಟುವಟಿಕೆಗಳ ಮೂಲಕ ಹೊಸ ವಿಷಯವನ್ನು ಮಗುವಿನ ಮುಂದೆ ಪ್ರಸ್ತುತಪಡಿಸುತ್ತಾರೆ. ಮಗು ವಿಷಯವನ್ನು ಕೇಳಿ, ನೋಡಿ ಗ್ರಹಿಸಲು ಆರಂಭಿಸುತ್ತದೆ.
ಬೋಧ : (ತಿಳುವಳಿಕೆ / ಅರ್ಥೈಸಿಕೊಳ್ಳುವಿಕೆ): ಪರಿಚಯಿಸಿಕೊಂಡ ವಿಷಯವನ್ನು ಆಳವಾಗಿ ಅರ್ಥಮಾಡಿಕೊಳ್ಳುವ ಹಂತವಿದು. ಮಗು ವಿಷಯದ ಹಿಂದಿರುವ ಪರಿಕಲ್ಪನೆ ಮತ್ತು ಕಾರಣಗಳನ್ನು ಅರ್ಥಮಾಡಿಕೊಳ್ಳುತ್ತದೆ. ಪ್ರಶ್ನೆಗಳನ್ನು ಕೇಳುವ ಮೂಲಕ ಮತ್ತು ಚರ್ಚೆಗಳಲ್ಲಿ ಭಾಗವಹಿಸುವ ಮೂಲಕ ತನ್ನ ಗೊಂದಲಗಳನ್ನು ನಿವಾರಿಸಿಕೊಳ್ಳುತ್ತದೆ.
ಅಭ್ಯಾಸ : (ರೂಢಿಸಿಕೊಳ್ಳುವುದು / ತರಬೇತಿ): ಕಲಿತ ವಿಷಯ ಮನಸ್ಸಿನಲ್ಲಿ ಗಟ್ಟಿಯಾಗಲು ನಿರಂತರ ಸ್ಮರಣೆ ಅಥವಾ ಅಭ್ಯಾಸದ ಅಗತ್ಯವಿದೆ. ಮಕ್ಕಳು ಕಲಿತ ವಿಷಯವನ್ನು ಬರವಣಿಗೆ, ಗಣಿತದ ಲೆಕ್ಕಗಳು, ಪ್ರಯೋಗಗಳು ಅಥವಾ ಪುನರಾವರ್ತನೆ (Revision) ಮೂಲಕ ಅಭ್ಯಾಸ ಮಾಡುತ್ತಾರೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ಪುಸ್ತಕದಲ್ಲಿ ಕಲಿತದ್ದನ್ನು ನಿಜ ಜೀವನದಲ್ಲಿ ಅಥವಾ ಹೊಸ ಸಂದರ್ಭಗಳಲ್ಲಿ ಬಳಸಿ ನೋಡುವುದೇ ಪ್ರಯೋಗ.
ಉದಾಹರಣೆಗೆ, ಗಣಿತದಲ್ಲಿ ‘ಲಾಭ-ನಷ್ಟ’ ಕಲಿತ ನಂತರ ಮಗು ಮಾರುಕಟ್ಟೆಗೆ ಹೋಗಿ ವ್ಯವಹಾರ ಮಾಡುವುದು, ಅಥವಾ ವಿಜ್ಞಾನದ ತತ್ವವನ್ನು ಪ್ರಾಜೆಕ್ಟ್ ಮೂಲಕ ಮಾಡಿ ನೋಡುವುದು.
ಪ್ರಸಾರ : (ಹಂಚಿಕೊಳ್ಳುವುದು) ಕಲಿಕೆಯ ಅತ್ಯುನ್ನತ ಹಂತವೆಂದರೆ ತಾನು ಕಲಿತ ಜ್ಞಾನವನ್ನು ಇತರರಿಗೆ ಮನವರಿಕೆ ಮಾಡಿಕೊಡುವುದು. ವಿದ್ಯಾರ್ಥಿ ತನಗೆ ತಿಳಿದ ವಿಷಯವನ್ನು ತನ್ನ ಸಹಪಾಠಿಗಳಿಗೆ ವಿವರಿಸುವುದು, ಭಾಷಣ ಮಾಡುವುದು ಅಥವಾ ಗುಂಪು ಚರ್ಚೆಯಲ್ಲಿ ಹಂಚಿಕೊಳ್ಳುವುದು. “ಕಲಿಸುವುದರಿಂದ ಕಲಿಕೆ ಪೂರ್ಣವಾಗುತ್ತದೆ” ಎಂಬ ತತ್ವ ಇದರ ಹಿಂದಿದೆ.
ಪಂಚಪಾಡಿ ಕಲಿಕೆಯ ಮಹತ್ವ
”ಶುಷ್ಕ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನವೇ ಮೇಲು.”
ಇದು ಮಕ್ಕಳಲ್ಲಿ ಸ್ವಯಂ ಕಲಿಕೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ.
ಕಂಠಪಾಠ ಮಾಡುವ ಪದ್ಧತಿಯನ್ನು ತಪ್ಪಿಸಿ, ವಿಷಯದ ಆಳವಾದ ತಿಳುವಳಿಕೆಗೆ ನೆರವಾಗುತ್ತದೆ.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುತ್ತದೆ.
ಶಾಲೆಯ ವೈಶಿಷ್ಟ
ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.
ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.
ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.
ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..
ಜೂನ್ 2ಕ್ಕೆ ಶಾಲಾ ಪ್ರವೇಶಕ್ಕೆ ಕೊನೆದಿನ
2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ.
ಶಾಲೆಯ ವೈಶಿಷ್ಟ
ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.
ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.
ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.
ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..
“2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ. ಕೇವಲ ಪುಸ್ತಕ ಆಧಾರಿತ ಆಧುನಿಕ ಪದ್ಧತಿಯ ಕಲಿಕೆ ಮಾತ್ರವಲ್ಲದೆ ಹಿಂದಿನ ಗುರುಕುಲ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡಿ ಮಕ್ಕಳಿಗೆ ಉತ್ತಮ ರೀತಿಯ ವಿದ್ಯಾಭ್ಯಾಸ ನೀಡುವ ಮಹಾದಾಸೆ ಇದೆ.”
| ವೀಣಾ ಮಂಜುನಾಥ್ ಮುಖ್ಯಸ್ಥರು
ಪ್ರವೇಶ ಪ್ರಾರಂಭ : ಸದರಿ ಶಾಲೆಯಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಮೇ 17ರಿಂದ ಆರಂಭವಾದ ಪ್ರವೇಶ ಪ್ರಕ್ರಿಯೆ ಜೂನ್ 2ಕ್ಕೆ ಕೊನೆಗೂಳ್ಳುತ್ತದೆ. ಸಂಪರ್ಕಿಸಿ : Mandara School Tyavanige 919148141665
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ6 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ



