Connect with us

ಲೈಫ್ ಸ್ಟೈಲ್

ಕಣ್ಣುಗಳ ಸುತ್ತ ಸುಂದರ ತ್ವಚೆಗಾಗಿ ಮನೆ ಮದ್ದು

Published

on

 

  • ಡಾ.ದೀಪಾ ಕೆ., ಡಿ.ಡಿ.ವಿ.ಎಲ್. ಡಾ. ದೀಪಾ ಕೆ, ಡಿಡಿವಿಎಲ್, ಡಿಎನ್‌ಬಿ (ಕಾಸ್ಮೆಟಾಲಜಿ), ಅಪೊಲೊ ಕ್ಲೀನಿಕ್ಸ್. ಬೆಂಗಳೂರು

ಕಣ್ಣುಗಳು ದೇಹಕ್ಕೆ ದೀಪ”

ಸುಂದರ ಕಣ್ಣುಗಳನ್ನು, ಕಣ್ಣುಗಳ ಸುತ್ತ ಆರೋಗ್ಯಕರ ವಾದ ಚರ್ಮವನ್ನು ಹೊಂದಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಅಂಡರ್ ಐ ಡಾರ್ಕ್ ಸರ್ಕಲ್ ಗಳು ಮತ್ತು ಕಣ್ಣುಗಳ ಸುತ್ತ ಸುಂದರ ತ್ವಚೆಗಾಗಿ ಹದಿಹರೆಯದವರು ಬುದ್ಧಿವಂತರಿಗೆ ಕಾಡುವ ಸಮಸ್ಯೆ ಆಗಿದೆ.

ಡಾರ್ಕ್ ಸರ್ಕಲ್ ಗಳಿಗೆ ಅತ್ಯಂತ ಸಾಮಾನ್ಯ ಕಾರಣಗಳು

  • ಅನುವಂಶೀಯತೆ
  • ನಿದ್ರೆ ಯ ಕೊರತೆ
  • ಕಣ್ಣಿನ ಒತ್ತಡ
  • ಅಲರ್ಜಿಗಳು
  • ಅತಿಯಾದ ಸೂರ್ಯನ ಕಿರಣಗಳು
  • ವಯಸ್ಸು

ಪರಿಹಾರಗಳು

1. ಜೀವನಶೈಲಿ

ಉತ್ತಮ ನಿದ್ರೆ – ಕನಿಷ್ಠ 8 ಗಂಟೆ ನಿದ್ದೆ ಯ ಅಗತ್ಯವಿರುತ್ತದೆ. ಸಾಕಷ್ಟು ನಿದ್ದೆ ಯಿಂದ ಕಣ್ಣುಗಳ ಮೇಲೆ ಒತ್ತಡ ಕಡಿಮೆಯಾಗುತ್ತದೆ ಮತ್ತು ಡಾರ್ಕ್ ಸರ್ಕಲ್ ಗಳು ಕೂಡ ಕಡಿಮೆ ಯಾಗಿ ಕಾಣುವಂತೆ ಮಾಡುತ್ತದೆ.

ನಿದ್ರೆ/ಮಲಗುವ ವಿಧಾನ ಬದಲಿಸುವುದು: ನಿಮ್ಮ ಕಣ್ಣುಗಳ ಕೆಳಗೆ ದ್ರವ ಶೇಖರಣೆಯಾಗದಂತೆ ತಡೆಯಲು ಕೆಲವು ದಿಂಬುಗಳನ್ನು ತಲೆದಿಂಬುಗಳಿಂದ ಮೇಲೆತ್ತಬೇಕು, ಇದು ಅವು ಉಬ್ಬಿದ ಮತ್ತು ಊದಿದಂತೆ ಕಾಣುವಂತೆ ಮಾಡಬಹುದು.

ಸ್ಕ್ರೀನ್ ಟೈಮ್ ಕಡಿಮೆ ಮಾಡಿ ಮತ್ತು ಕಣ್ಣುಗಳಿಗೆ ತೊಂದರೆಆಗುವುದನ್ನು ತಪ್ಪಿಸಲು ಆಗಾಗ್ಗೆ ಬ್ರೇಕ್ ಗಳನ್ನು ತೆಗೆದುಕೊಳ್ಳಿ. ಆಗಾಗ ಕಣ್ಣು ಮಿಟುಕಿಸಿ.

ಉಪ್ಪು ಆಹಾರಗಳ ಮೇಲೆ ಕಡಿವಾಣ ಹಾಕಿ ಉಪ್ಪು ದ್ರವವನ್ನು ಧಾರಣೆ ಮಾಡಿ ಉಪ್ಪು ಆಹಾರಗಳು ಮುಖ ಮತ್ತು ಕಣ್ಣುಗಳಿಗೆ ಉಬ್ಬರ ಉಂಟು ಮಾಡುತ್ತದೆ.

ಆಲ್ಕೋಹಾಲ್ ನಿಂದ ದೂರವಿರಿ – ಆಲ್ಕೋಹಾಲ್ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ, ಇದು ಡಾರ್ಕ್ ಸರ್ಕಲ್ ಗಳಿಗೆ ಮತ್ತು ಕಣ್ಣಿನ ಚೀಲಗಳಿಗೆ ಕಾರಣವಾಗುತ್ತದೆ.

ಧೂಮಪಾನ ದಿಂದ ದೂರವಿರಿ – ಧೂಮಪಾನವು ನಿಮ್ಮ ದೇಹದ ಆಂಟಿ ಆಕ್ಸಿಡೆಂಟ್ ಸ್ಟೋರ್ ಗಳನ್ನು ಕಡಿಮೆ ಮಾಡುತ್ತದೆ, ಇದು ಕೊಲಾಜೆನ್ ಅನ್ನು ನಿರ್ಮಿಸಲು ಸಹಾಯ ಮಾಡುತ್ತದೆ.

ನಿಮ್ಮನ್ನು ನೀವು ಚೆನ್ನಾಗಿ ಹೈಡ್ರೇಟ್ ಮಾಡಿ ಕೊಳ್ಳಿ.

ರಾತ್ರಿ ವೇಳೆ ಮಲಗುವ ಮುನ್ನ ಮೇಕಪ್ ಅನ್ನು ಸ್ವಚ್ಛಗೊಳಿಸಿ ರಾತ್ರಿ ಮಲಗುವ ಮುನ್ನ ಮುಖ ತೊಳೆಯಿರಿ. ಮೇಕಪ್ ಉತ್ಪನ್ನಗಳು ಅಲರ್ಜಿ ಮತ್ತು ಕಣ್ಣಿನ ಕೆಳಭಾಗದ ಉಬ್ಬಸ ಉಂಟುಮಾದುತ್ತದೆ. ಆದ್ದರಿಂದ ಮಲಗುವ ಮುನ್ನ ಮುಖವನ್ನು ಚೆನ್ನಾಗಿ ತೊಳಿಯಿರಿ.

2.ಕೋಲ್ಡ್ ಕಂಪ್ರೆಸ್ಗಳು

ಐಸ್ ಕ್ಯೂಬ್ ಗಳನ್ನು ಒಂದು ಬಟ್ಟೆಯಲ್ಲಿ ಮುಚ್ಚಿ ಕಣ್ಣಿನ ಸುತ್ತ ಮಸಾಜ್ ಮಾಡಿ.

ಕಣ್ಣಿನ ಸುತ್ತ ರಕ್ತಪರಿಚಲನೆ ಯನ್ನು ಸುಧಾರಿಸಲು ಮತ್ತು ರಕ್ತನಾಳಗಳನ್ನು ಕುಗ್ಗಿಸುವಲ್ಲಿ ಸಹಾಯ ಮಾಡುತ್ತದೆ, ಇದರಿಂದ ಕಣ್ಣುಗಳ ಉಬ್ಬರಕಡಿಮೆಯಾಗುತ್ತದೆ.

3.ಗ್ರೀನ್ ಟೀ ಬ್ಯಾಗ್ ಗಳು

ಚಹಾದಲ್ಲಿರುವ ಕೆಫೀನ್ ಪ್ರಬಲ ಆಂಟಿ ಆಕ್ಸಿಡೆಂಟುಗಳನ್ನು ಒಳಗೊಂಡಿದೆ ಮತ್ತು ನಿಮ್ಮ ಚರ್ಮಕ್ಕೆ ರಕ್ತಸಂಚಾರವನ್ನು ಹೆಚ್ಚಿಸುತ್ತದೆ. UV rays ಯುವಿ ಕಿರಣಗಳಿಂದ ರಕ್ಷಣೆ ಮತ್ತು ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುದನ್ನೂ ಸಹ ಇದು ಹೊಂದಿದೆ ಎಂದು ಹೇಳಲಾಗುತ್ತದೆ.

ಡಾ.ದೀಪಾ ಕೆ

ಬಳಸಿದ ಗ್ರೀನ್ ಟೀ ಬ್ಯಾಗ್ ಗಳನ್ನು ತೆಗೆದುಕೊಳ್ಳಿ. ಟೀ ಬ್ಯಾಗ್ ಗಳು 20 ನಿಮಿಷಗಳ ಕಾಲ ಫ್ರಿಡ್ಜ್ ನಲ್ಲಿಟ್ಟು ತಣ್ಣಗಾಗಲು ಬಿಡಿ. ನಂತರ ನಿಮ್ಮ ಅಂಡರ್ ಐ ಏರಿಯಾಕ್ಕೆ ಹಚ್ಚಿಕೊಳ್ಳಿ. ಟೀ ಬ್ಯಾಗ್ ಗಳನ್ನು 15 ರಿಂದ 30 ನಿಮಿಷ ಹಾಗೆಯೇ ಬಿಡಿ.

4.ಹಣ್ಣುಗಳು ಮತ್ತು ತರಕಾರಿಗಳು

ಸೌತೆಕಾಯಿ, ಆಲೂಗಡ್ಡೆ ಮತ್ತು ಟೊಮೆಟೊ ಮತ್ತು ಕಿತ್ತಳೆ ರಸವನ್ನು ಕಣ್ಣಿನ ಸುತ್ತ ಮುತ್ತ ಮಸಾಜ್ ಮಾಡುವುದರಿಂದ ಕಪ್ಪು ವರ್ತುಲಗಳು ಕಡಿಮೆಮಾಡಲು ಮತ್ತು ಕಣ್ಣಿನ ಕೆಳಭಾಗದಲ್ಲಿ ಉಬ್ಬರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

5. ಸನ್ ಸ್ಕ್ರೀನ್

ಕಣ್ಣುಗಳ ಸುತ್ತ ಸನ್ ಸ್ಕ್ರೀನ್ ಹಚ್ಚುವುದನ್ನು ಮರೆಯಬೇಡಿ.
ಫೋಟೋಪಿಗ್ಮೆಂಟೇಶನ್ಅನ್ನು ತಡೆಗಟ್ಟಲು. ಸನ್ ಸ್ಕ್ರೀನ್ ಗಳು ಯುವಿಎ ಮತ್ತು ಯುವಿಬಿ ಯಿಂದ ರಕ್ಷಣೆ ಯನ್ನು ನೀಡುವ ಒಂದು ವಿಶಾಲ ವಾದ ಸ್ಪೆಕ್ಟ್ರಮ್ ಆಗಿರಬೇಕು.

6. ಆಹಾರ ಕ್ರಮ

ನಿಮ್ಮ ಆಹಾರದಲ್ಲಿ ಆಂಟಿ ಆಕ್ಸಿಡೆಂಟುಗಳು ಮತ್ತು ವಿಟಮಿನ್ ಸಿ ಸಮೃದ್ಧ ಆಹಾರವನ್ನು ಹೆಚ್ಚಿಸಿ.

ತರಕಾರಿಗಳಾದ ಪಪ್ಪಾಯಿ, ಕ್ಯಾರೆಟ್, ದಾಳಿಂಬೆ, ಕಿತ್ತಳೆ ಮುಂತಾದ ಹಣ್ಣುಗಳಲ್ಲಿ ಹೆಚ್ಚಿನ ಆಂಟಿ ಆಕ್ಸಿಡೆಂಟುಗಳಿದ್ದು, ಇದು ಆರೋಗ್ಯಕರ ಮತ್ತು ಕಾಂತಿಯುತ ಚರ್ಮಕ್ಕೆ ಅಗತ್ಯವಾಗಿದೆ. ಆದ್ದರಿಂದ ಅವುಗಳನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಿ.

ನಾವು ನಮ್ಮ ಸುಂದರ ತ್ವಚೆಯ ಪ್ರಯಾಣವನ್ನು ಪ್ರಾರಂಭಿಸುವ ಮೊದಲು, ಆರೋಗ್ಯಕರ ಚರ್ಮವು ಒಂದು ಪವಾಡವಲ್ಲ ಎಂಬುದನ್ನು ಅರಿತುಕೊಳ್ಳಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.

54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

Published

on

ಸುದ್ದಿದಿನ,ಬೆಂಗಳೂರು:ಆರ್‌ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್‌ ರೆಸ್ಟೋರೆಂಟ್‌ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.

ಬೆಂಗಳೂರಿನ #NativeCooks ಫುಡ್‌ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್‌ಸಿಬಿ ಅಭಿಮಾನಿಗಳ ಮನ ಗೆದ್ದಿದೆ.

ಹೌದು, ಹೆಬ್ಬಾಳ, ಆರ್‌ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್‌ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್‌ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್‌ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್‌ಬಾಕ್ಸ್‌ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.

ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್‌ ಕುಕ್ಸ್‌ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್‌ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್.‌ ವೆಜ್‌ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್‌ವೆಜ್‌ ಊಟವನ್ನು 135 ರೂಪಾಯಿಗೆ ಹಾಗೂ ಎಕ್‌ ಮೀಲ್‌ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.

ಸದ್ಯಕ್ಕೆ ಹೆಬ್ಬಾಳ, ಆರ್‌ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending