ಸುದ್ದಿದಿನ, ಮಂಡ್ಯ: ಜೇನು ದಾಳಿ ಮಾಡಿದ ಪರಿಣಾಮ ಮರದಿಂದ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ, ಹಾಲತಿ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್ (40) ಮೃತ ದುರ್ದೈವಿಯಾಗಿದ್ದು, ಜಮೀನಿನಲ್ಲಿ ತೆಂಗಿನಕಾಯಿ ಕೆಡವಲು ಹೋಗಿದ್ದಾಗ ಘಟನೆ ಸಂಭವಿಸಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.