Connect with us

ಲೈಫ್ ಸ್ಟೈಲ್

ಎತ್ತುಗಳಲ್ಲಿ ಕೊಂಬಿನ ಕ್ಯಾನ್ಸರ್..!

Published

on

  • ಡಾ.ಎನ್.ಬಿ.ಶ್ರೀಧರ,ಶಿವಮೊಗ್ಗ

ಕ್ಯಾನ್ಸರ್ ಎಂದರೆ ಗುಣವಾಗದ ಕಾಯಿಲೆ ಎಂದು ಎಲ್ಲರಿಗೂ ದುಸ್ವಪ್ನ. ಅನೇಕ ರೈತರು ಜಾನುವಾರುಗಳಲ್ಲಿ ಕ್ಯಾನ್ರ‍್ರೇ? ಎಂದು ಉದ್ಘಾರ ತೆಗೆಯುತ್ತಾರೆ. ಹಲವಾರು ಬಗೆಯ ಕ್ಯಾನ್ಸರ್‌ಗಳು ಜಾನುವಾರುಗಳಲ್ಲಿ ಸಾಮಾನ್ಯ. ಅವುಗಳಲ್ಲಿ ಕೊಂಬಿನ ಕ್ಯಾನ್ಸರ್ ಒಂದು. ಎತ್ತುಗಳಲ್ಲಿ ಅಂದವಾದ ಕೊಂಬಿದ್ದರೆ ಅದಕ್ಕೆ ಒಂದು ತರಹದ ಶೋಭೆ. ಆದರೆ ಈ ಕೊಂಬುಗಳಿಗೇ ಕ್ಯಾನ್ಸರ್ ಬಂದು ಬಿಟ್ಟರೆ ? ರೈತರ ಗತಿ ಹರೋ ಹರ.

ಉಳುಮೆಗೆ ಉಪಯೋಗಿಸುವ ಎತ್ತುಗಳ ತಳಿಗಳಾದ ಹಳ್ಳಿಕಾರ್, ಕಿಲಾರ್, ಅಮೃತ್ ಮಹಲ್, ದೇವಣಿ ಇತ್ಯಾದಿ ಉತ್ತಮ ಹಾಗೂ ದುಬಾರಿ ಎತ್ತುಗಳನ್ನು ಭಾಧಿಸುವ ಈ ಕಾಯಿಲೆ ಅಂಕಿ ಅಂಶಗಳ ಪ್ರಕಾರ ಶೇ 1 ರಷ್ಟು ಜಾನುವಾರುಗಳಲ್ಲಿ ಅದರಲ್ಲೂ ಎತ್ತುಗಳಲ್ಲಿ ಬರುತ್ತದೆ ಎಂಬುದು ಅತಂಕಕಾರಿ ವಿಷಯ. ಕೊಂಬಿನ ಕ್ಯಾನ್ಸರ್ ಬಂದ ಎತ್ತುಗಳ ಚಿಕಿತ್ಸೆ ಕಷ್ಟಕರವಾದ ವಿಷಯವಾಗಿರುವುದರಿಂದ ರೈತರಿಗೆ ಈ ಕಾಯಿಲೆ ತುಂಬಾ ಆರ್ಥಿಕ ಸಂಕಷ್ಟ ತಂದೊಡ್ಡುತ್ತದೆ. ಅವರಿಗೆ ಮಾಹಿತಿ ನೀಡುವುದೇ ಈ ಲೇಖನದ ಉದ್ದೇಶ.

ಕಾರಣಗಳು

ಮುಖ್ಯವಾದ ವಿಷಯವೆಂದರೆ ಇಲ್ಲಿಯವರೆಗೂ ಸಹ ಕೊಂಬಿನ ಕ್ಯಾನ್ಸರ್ ಹೇಗೆ ಮತ್ತು ಯಾಕೆ ಬರುತ್ತದೆ ಎಂಬುದು ಪ್ರಶ್ನಾರ್ಹವಾಗಿಯೇ ಉಳಿದಿದೆ. ಇದು ಅನುವಂಶೀಯವಾಗಿ ಕೆಲವು ತಳಿಯ ಎತ್ತುಗಳಲ್ಲಿ ಬರುತ್ತದೆ. ಅದರಲ್ಲೂ ದೇಶೀ ತಳಿಗಳು ಇದಕ್ಕೆ ಜಾಸ್ತಿ ತುತ್ತಾಗುತ್ತವೆ. ದಪ್ಪ ಕೋಡು ಹೊಂದಿದ ಕಾಂಕ್ರೇಜ್, ದೇವಣಿ ಮತ್ತು ಗಿರ್ ತಳಿಯಲ್ಲಿ ಇದು ಬಹಳ ಸಾಮಾನ್ಯ.

ಉತ್ತರ ಕರ್ನಾಟಕದಲ್ಲಿ ಉಳುಮೆಗೆ ಉಪಯೋಗಿಸುವ ಎತ್ತುಗಳ ತಳಿಗಳಾದ ಹಳ್ಳಿಕಾರ್, ಕಿಲಾರ್, ಅಮೃತ್ ಮಹಲ್ ಇತ್ಯಾದಿಗಳಲ್ಲಿ ಇದರ ಸಂಭವ ಜಾಸ್ತಿ. ಕೋಣಗಳಲ್ಲೂ ಸಹ ಈ ಕಾಯಿಲೆ ಬರಬಹುದು. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಎತ್ತುಗಳಲ್ಲಿ ಇದು ಕಡಿಮೆ.

ಇದನ್ನೂ ಓದಿ | ಸಾಮಾಜಿಕ ಜಾಲತಾಣಗಳು ಮತ್ತು ಸುಳ್ಳು ಸುದ್ದಿಗಳು..!

ಮತ್ತೊಂದು ಮುಖ್ಯವಾದ ವಿಷಯವನ್ನು ರೈತರು ಗಮನಿಸಬೇಕಾದ್ದೆಂದರೆ, ಉಳುಮೆಗೆ ಉಪಯೋಗಿಸುವ ಎತ್ತುಗಳಲ್ಲಿ ಈ ಸಮಸ್ಯೆ ಜಾಸ್ತಿ. ಏಕೆಂದರೆ ಎತ್ತನ್ನು ಗಾಡಿಗೆ ಕಟ್ಟಿದಾಗ ಅಥವಾ ಉಳುಮೆಗೆ ಬಳಸುವಾಗ ನೊಗ ಪದೇ ಪದೆ ಕೊಂಬಿನ ಬುಡಕ್ಕೆ ಉಜ್ಜುತ್ತಿದ್ದಲ್ಲಿ ಅದರಿಂದ ಈ ಕಾಯಿಲೆಯ ಸಂಭವ ಹೆಚ್ಚು.

ಕೆಲವು ರೈತರು ಎತ್ತಿನ ಕೊಂಬು ಸುಂದರವಾಗಿ ಕಾಣಿಸಲೆಂದು, ಅದನ್ನು ಮೇಲಿಂದ ಮೇಲೆ ಕೆತ್ತುತ್ತಾರೆ. ಅಲ್ಲದೇ ವಿವಿಧ ಬಗೆಯ ಬಣ್ಣಗಳನ್ನೂ ಸಹ ಹಚ್ಚುತ್ತಾರೆ. ಇದರಿಂದ ಕೊಂಬಿನ ಕ್ಯಾನ್ಸರಿನ ಸಾಧ್ಯತೆ ಜಾಸ್ತಿ. ಇದಲ್ಲದೇ ಹಲವಾರು ಪತ್ತೆಯಾಗದ ಕಾರಣಗಳಿಂದಲೂ ಸಹ ಈ ಪಿಡುಗು ಎತ್ತುಗಳನ್ನು ಬಾಧಿಸಬಹುದು.

ಲಕ್ಷಣಗಳು

ಈ ಕಾಯಿಲೆ ಉದ್ದ ಕೊಂಬಿನ ಎತ್ತುಗಳಲ್ಲಿ ಸಾಮಾನ್ಯವಾಗಿ ಬರುತ್ತದೆ. ಪ್ರಾರಂಭಿಕ ಹಂತದಲ್ಲಿ ಕೋಡಿನ ಬುಡದಲ್ಲಿ ಮೇಣದಂತಹ ವಾಸನಾಯುಕ್ತ ಸ್ರಾವ ಶುರುವಾಗುತ್ತದೆ. ಕೆಲವೊಮ್ಮೆ ಮೂಗಿನಿಂದ ಸಣ್ಣದಾಗಿ ರಕ್ತ ಸ್ರಾವವೂ ಸಹ ಪ್ರಾರಂಭವಾಗಬಹುದು.

ಕೊಂಬಿನ ಬುಡದ ಒಳಗಿನಿಂದ ಗಡ್ಡೆಯು ಬೆಳೆಯಲು ಪ್ರಾರಂಭಿಸುತ್ತಿದ್ದ0ತೆ, ಎತ್ತು ನೋವಿನಿಂದ ಪದೇ ಪದೇ ಕೊಂಬುಗಳನ್ನು ಗೋಡೆಗೆ ಉಜ್ಜಲು ಪ್ರಾರಂಭಿಸುತ್ತದೆ. ತಲೆಯನ್ನು ಪದೇ ಪದೇ ಅಡ್ಡಡ್ಡ ಅಲುಗಾಡಿಸುತ್ತಾ ಗೋಡೆ ಇತ್ಯಾದಿಗಳಿಗೆ ಡಿಕ್ಕಿ ಹೊಡೆಯಲು ಪ್ರಾರಂಭಿಸುತ್ತದೆ. ಅಲ್ಲದೇ ಎತ್ತುಗಳು ತಲೇಯನ್ನು ಯಾವಾಗಲೂ ಕೆಳಗೆ ಹಾಕಿಕೊಂಡು ನಿಲ್ಲಬಹುದು.

ನಂತರ ಕ್ರಮೇಣವಾಗಿ ಕೊಂಬು ಬಾಗಲು ಪ್ರಾರಂಭಿಸುತ್ತದೆ. ಕೊಂಬಿನ ಬುಡ ಚರ್ಮಕ್ಕೆ ಅಂಟಿದ ಸ್ಥಳದಲ್ಲಿ ಸಣ್ಣದಾಗಿ ಪ್ರಾರಂಭವಾಗುವ ಗಾಯ, ಕ್ರಮೇಣ ದೊಡ್ಡದಾಗುತ್ತಾ ಹೋಗುತ್ತದೆ. ಸೂಕ್ತ ಸಮಯದಲ್ಲಿ ಉತ್ತಮವಾದ ಚಿಕಿತ್ಸೆ ದೊರೆಯದೇ ಹೋದಲ್ಲಿ, ಕೊಂಬಿನ ಸುತ್ತ ವೃತ್ತಾಕಾರವಾದ ಗಾಯವಾಗಿ, ವೃಣವಾಗಿ, ಕೊಂಬು ಬಿದ್ದು ಹೋಗಬಹುದು. ಅಲ್ಲದೇ ತೀವೃವಾದ ರಕ್ತ ಸ್ರಾವವಾಗುವುದರಿಂದ ಜಾನುವಾರು ರಕ್ತ ಹೀನತೆಯಿಂದ ಬಳಲುತ್ತದೆ. ನಂತರ ಎತ್ತು ನಿಶ್ಯಕ್ತಗೊಂಡು ಮರಣವನ್ನಪ್ಪಬಹುದು.

ಪತ್ತೆ ಹಚ್ಚುವಿಕೆ ವಿಧಾನ

ಈ ಕಾಯಿಲೆಯನ್ನು ಪತ್ತೆಹಚ್ಚುವುದು ಪ್ರಾರಂಭಿಕ ಹಂತದಲ್ಲಿ ಕಷ್ಟಕರ. ಕ್ಯಾನ್ಸರ್ ಗಡ್ಡೆಯು ಬೆಳೆಯುತ್ತಿದ್ದಂತೆ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸಬಹುದು. ರೋಗ ಲಕ್ಷಣವನ್ನು ಅವಲಂಬಿಸಿ ಕಾಯಿಲೆಯನ್ನು ಪತ್ತೆ ಹಚ್ಚುವ ವಿಧಾನವೊಂದೇ ಸಧ್ಯಕ್ಕೆ ಸುಲಭಕ್ಕೆ ಲಭ್ಯವಿರುವ ವಿಧಾನ. ಕ್ಷಕಿರಣ ವಿಧಾನದಿಂದಲೂ ಸಹ ಪತ್ತೆ ಹಚ್ಚಬಹುದಾದರೂ ಸಹ ಎಲ್ಲ ಕಡೆ ಈ ಸೌಲಭ್ಯ ಲಭ್ಯವಿಲ್ಲ. ಬಾಧೆಗೊಳಗಾಗಿರುವ ಕೊಂಬಿನ ಬುಡದ ಅಂಗಾAಶದ ಬಯಾಪ್ಸಿಯನ್ನು ಪರೀಶೀಲಿಸಿದರೂ ಸಹ ರೋಗ ಪತ್ತೆಯಾದೀತು.

ಚಿಕಿತ್ಸೆ

ಕ್ಯಾನ್ಸರ್ ಎಂದರೆ ಮನುಷ್ಯರಲ್ಲಿಯೇ ಉತ್ತಮವಾದ ಚಿಕಿತ್ಸೆ ಇಲ್ಲ. ಅದರಲ್ಲೂ ಪತ್ತೆ ಹಚ್ಚಲು ಕಷ್ಟಕರವಾದ ಈ ಪಿಡುಗಿನ ಚಿಕಿತ್ಸೆ ಕಷ್ಟಕರವೇ ನಿಜ. ಆದರೆ ರೋಗದ ಪ್ರಾರಂಭಿಕ ಹಂತದಲ್ಲಿ ಇಡೀ ಕೋಡನ್ನು ಬುಡ ಸಮೇತ ತಜ್ಞ ನುರಿತ ಶಸ್ತಚಿಕಿತ್ಸಾ ತಜ್ಞ ಪಶುವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ತೆಗೆದು ಹಾಕಿದಲ್ಲಿ ಎತ್ತಿನ ಜೀವವನ್ನು ಕಾಪಾಡಬಹುದು.

ಇದಕ್ಕೆ ರೈತರ ಇದಕ್ಕೆ ರೈತರ ಸಹಕಾರ ಬಹಳ ಮುಖ್ಯ ಬಹಳಷ್ಟು ರೈತರು ಎತ್ತಿನ ಕೊಂಬನ್ನು ತೆಗೆದರೆ ಅದರ ಅಂದಗೆಟ್ಟು ಅದರ ಬೆಲೆ ಹೊರಟು ಹೋಗುತ್ತದೆಂದು ಶಸ್ತ್ರ ಚಿಕಿತ್ಸೆಗೆ ಹಿಂಜರಿಯುತ್ತಾರೆ. ಎತ್ತಿನ ಜೀವಕ್ಕಿಂತ ಅದರ ಅಂದ ಮುಖ್ಯವಲ್ಲ ಎಂಬುದು ತಿಳಿದಿರಲಿ. ಇದು ಔಷಧಗಳಿಂದ ಗುಣಪಡಿಸಲು ಅಸಾಧ್ಯವೆಂದು ಹೇಳಬಹುದಾದ ಒಂದು ಕಾಯಿಲೆ.

ತಡೆಗಟ್ಟುವಿಕೆ

ರೈತರು ಅವರ ಎತ್ತುಗಳ ಕೊಂಬನ್ನು ನಿಯಮಿತವಾಗಿ ಗಮನಿಸುತ್ತಾ ಇರಬೇಕು. ಯಾವುದೇ ಕಾರಣಕ್ಕೂ ಅಂದ ಅಥವಾ ಬೆಲೆ ಹೆಚ್ಚಿಸಲು ಕೊಂಬನ್ನು ಕೆತ್ತುವುದು, ಬಣ್ಣ ಹಚ್ಚುವುದು ಇತ್ಯಾದಿ ಕಾರ್ಯಗಳನ್ನು ಮಾಡಬಾರದು. ಎತ್ತುಗಳನ್ನು ಉಳುಮೆಗೆ ಅಥವಾ ಗಾಡಿಗೆ ಕಟ್ಟುವಾಗ ನೊಗ ಕೊಂಬಿನ ಬುಡಕ್ಕೆ ಉಜ್ಜದಂತೆ ಎಚ್ಚರ ವಹಿಸುವುದು ಒಳಿತು.

ಪ್ರಾರಂಭಿಕ ಹಂತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದರೆ ಉತ್ತಮ ಪರಿಣಾಮ ಸಿಗಬಹುದು. ಚಿಕಿತ್ಸೆ ತಡವಾದಷ್ಟೂ ಗುಣವಾಗುವ ಸಾಧ್ಯತೆ ಕ್ಷೀಣಿಸುವುದು. ಕೊಂಬಿನ ಬುಡದಿಂದ ಸ್ರಾವವಾಗುತ್ತಿದ್ದಲ್ಲಿ ಮನೆಮದ್ದಿನ ಸಹವಾಸಕ್ಕೆ ಮತ್ತು ನಾಟಿ ವೈದ್ಯರ ಸಹವಾಸಕ್ಕೆ ಹೋಗದೇ ತಜ್ಞ ಪಶುವೈದ್ಯರನ್ನು ಶೀಘ್ರವೇ ಸಂಪರ್ಕಿಸಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending