ಲೈಫ್ ಸ್ಟೈಲ್
ಎತ್ತುಗಳಲ್ಲಿ ಕೊಂಬಿನ ಕ್ಯಾನ್ಸರ್..!
- ಡಾ.ಎನ್.ಬಿ.ಶ್ರೀಧರ,ಶಿವಮೊಗ್ಗ
ಕ್ಯಾನ್ಸರ್ ಎಂದರೆ ಗುಣವಾಗದ ಕಾಯಿಲೆ ಎಂದು ಎಲ್ಲರಿಗೂ ದುಸ್ವಪ್ನ. ಅನೇಕ ರೈತರು ಜಾನುವಾರುಗಳಲ್ಲಿ ಕ್ಯಾನ್ರ್ರೇ? ಎಂದು ಉದ್ಘಾರ ತೆಗೆಯುತ್ತಾರೆ. ಹಲವಾರು ಬಗೆಯ ಕ್ಯಾನ್ಸರ್ಗಳು ಜಾನುವಾರುಗಳಲ್ಲಿ ಸಾಮಾನ್ಯ. ಅವುಗಳಲ್ಲಿ ಕೊಂಬಿನ ಕ್ಯಾನ್ಸರ್ ಒಂದು. ಎತ್ತುಗಳಲ್ಲಿ ಅಂದವಾದ ಕೊಂಬಿದ್ದರೆ ಅದಕ್ಕೆ ಒಂದು ತರಹದ ಶೋಭೆ. ಆದರೆ ಈ ಕೊಂಬುಗಳಿಗೇ ಕ್ಯಾನ್ಸರ್ ಬಂದು ಬಿಟ್ಟರೆ ? ರೈತರ ಗತಿ ಹರೋ ಹರ.
ಉಳುಮೆಗೆ ಉಪಯೋಗಿಸುವ ಎತ್ತುಗಳ ತಳಿಗಳಾದ ಹಳ್ಳಿಕಾರ್, ಕಿಲಾರ್, ಅಮೃತ್ ಮಹಲ್, ದೇವಣಿ ಇತ್ಯಾದಿ ಉತ್ತಮ ಹಾಗೂ ದುಬಾರಿ ಎತ್ತುಗಳನ್ನು ಭಾಧಿಸುವ ಈ ಕಾಯಿಲೆ ಅಂಕಿ ಅಂಶಗಳ ಪ್ರಕಾರ ಶೇ 1 ರಷ್ಟು ಜಾನುವಾರುಗಳಲ್ಲಿ ಅದರಲ್ಲೂ ಎತ್ತುಗಳಲ್ಲಿ ಬರುತ್ತದೆ ಎಂಬುದು ಅತಂಕಕಾರಿ ವಿಷಯ. ಕೊಂಬಿನ ಕ್ಯಾನ್ಸರ್ ಬಂದ ಎತ್ತುಗಳ ಚಿಕಿತ್ಸೆ ಕಷ್ಟಕರವಾದ ವಿಷಯವಾಗಿರುವುದರಿಂದ ರೈತರಿಗೆ ಈ ಕಾಯಿಲೆ ತುಂಬಾ ಆರ್ಥಿಕ ಸಂಕಷ್ಟ ತಂದೊಡ್ಡುತ್ತದೆ. ಅವರಿಗೆ ಮಾಹಿತಿ ನೀಡುವುದೇ ಈ ಲೇಖನದ ಉದ್ದೇಶ.
ಕಾರಣಗಳು
ಮುಖ್ಯವಾದ ವಿಷಯವೆಂದರೆ ಇಲ್ಲಿಯವರೆಗೂ ಸಹ ಕೊಂಬಿನ ಕ್ಯಾನ್ಸರ್ ಹೇಗೆ ಮತ್ತು ಯಾಕೆ ಬರುತ್ತದೆ ಎಂಬುದು ಪ್ರಶ್ನಾರ್ಹವಾಗಿಯೇ ಉಳಿದಿದೆ. ಇದು ಅನುವಂಶೀಯವಾಗಿ ಕೆಲವು ತಳಿಯ ಎತ್ತುಗಳಲ್ಲಿ ಬರುತ್ತದೆ. ಅದರಲ್ಲೂ ದೇಶೀ ತಳಿಗಳು ಇದಕ್ಕೆ ಜಾಸ್ತಿ ತುತ್ತಾಗುತ್ತವೆ. ದಪ್ಪ ಕೋಡು ಹೊಂದಿದ ಕಾಂಕ್ರೇಜ್, ದೇವಣಿ ಮತ್ತು ಗಿರ್ ತಳಿಯಲ್ಲಿ ಇದು ಬಹಳ ಸಾಮಾನ್ಯ.
ಉತ್ತರ ಕರ್ನಾಟಕದಲ್ಲಿ ಉಳುಮೆಗೆ ಉಪಯೋಗಿಸುವ ಎತ್ತುಗಳ ತಳಿಗಳಾದ ಹಳ್ಳಿಕಾರ್, ಕಿಲಾರ್, ಅಮೃತ್ ಮಹಲ್ ಇತ್ಯಾದಿಗಳಲ್ಲಿ ಇದರ ಸಂಭವ ಜಾಸ್ತಿ. ಕೋಣಗಳಲ್ಲೂ ಸಹ ಈ ಕಾಯಿಲೆ ಬರಬಹುದು. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಎತ್ತುಗಳಲ್ಲಿ ಇದು ಕಡಿಮೆ.
ಇದನ್ನೂ ಓದಿ | ಸಾಮಾಜಿಕ ಜಾಲತಾಣಗಳು ಮತ್ತು ಸುಳ್ಳು ಸುದ್ದಿಗಳು..!
ಮತ್ತೊಂದು ಮುಖ್ಯವಾದ ವಿಷಯವನ್ನು ರೈತರು ಗಮನಿಸಬೇಕಾದ್ದೆಂದರೆ, ಉಳುಮೆಗೆ ಉಪಯೋಗಿಸುವ ಎತ್ತುಗಳಲ್ಲಿ ಈ ಸಮಸ್ಯೆ ಜಾಸ್ತಿ. ಏಕೆಂದರೆ ಎತ್ತನ್ನು ಗಾಡಿಗೆ ಕಟ್ಟಿದಾಗ ಅಥವಾ ಉಳುಮೆಗೆ ಬಳಸುವಾಗ ನೊಗ ಪದೇ ಪದೆ ಕೊಂಬಿನ ಬುಡಕ್ಕೆ ಉಜ್ಜುತ್ತಿದ್ದಲ್ಲಿ ಅದರಿಂದ ಈ ಕಾಯಿಲೆಯ ಸಂಭವ ಹೆಚ್ಚು.
ಕೆಲವು ರೈತರು ಎತ್ತಿನ ಕೊಂಬು ಸುಂದರವಾಗಿ ಕಾಣಿಸಲೆಂದು, ಅದನ್ನು ಮೇಲಿಂದ ಮೇಲೆ ಕೆತ್ತುತ್ತಾರೆ. ಅಲ್ಲದೇ ವಿವಿಧ ಬಗೆಯ ಬಣ್ಣಗಳನ್ನೂ ಸಹ ಹಚ್ಚುತ್ತಾರೆ. ಇದರಿಂದ ಕೊಂಬಿನ ಕ್ಯಾನ್ಸರಿನ ಸಾಧ್ಯತೆ ಜಾಸ್ತಿ. ಇದಲ್ಲದೇ ಹಲವಾರು ಪತ್ತೆಯಾಗದ ಕಾರಣಗಳಿಂದಲೂ ಸಹ ಈ ಪಿಡುಗು ಎತ್ತುಗಳನ್ನು ಬಾಧಿಸಬಹುದು.
ಲಕ್ಷಣಗಳು
ಈ ಕಾಯಿಲೆ ಉದ್ದ ಕೊಂಬಿನ ಎತ್ತುಗಳಲ್ಲಿ ಸಾಮಾನ್ಯವಾಗಿ ಬರುತ್ತದೆ. ಪ್ರಾರಂಭಿಕ ಹಂತದಲ್ಲಿ ಕೋಡಿನ ಬುಡದಲ್ಲಿ ಮೇಣದಂತಹ ವಾಸನಾಯುಕ್ತ ಸ್ರಾವ ಶುರುವಾಗುತ್ತದೆ. ಕೆಲವೊಮ್ಮೆ ಮೂಗಿನಿಂದ ಸಣ್ಣದಾಗಿ ರಕ್ತ ಸ್ರಾವವೂ ಸಹ ಪ್ರಾರಂಭವಾಗಬಹುದು.
ಕೊಂಬಿನ ಬುಡದ ಒಳಗಿನಿಂದ ಗಡ್ಡೆಯು ಬೆಳೆಯಲು ಪ್ರಾರಂಭಿಸುತ್ತಿದ್ದ0ತೆ, ಎತ್ತು ನೋವಿನಿಂದ ಪದೇ ಪದೇ ಕೊಂಬುಗಳನ್ನು ಗೋಡೆಗೆ ಉಜ್ಜಲು ಪ್ರಾರಂಭಿಸುತ್ತದೆ. ತಲೆಯನ್ನು ಪದೇ ಪದೇ ಅಡ್ಡಡ್ಡ ಅಲುಗಾಡಿಸುತ್ತಾ ಗೋಡೆ ಇತ್ಯಾದಿಗಳಿಗೆ ಡಿಕ್ಕಿ ಹೊಡೆಯಲು ಪ್ರಾರಂಭಿಸುತ್ತದೆ. ಅಲ್ಲದೇ ಎತ್ತುಗಳು ತಲೇಯನ್ನು ಯಾವಾಗಲೂ ಕೆಳಗೆ ಹಾಕಿಕೊಂಡು ನಿಲ್ಲಬಹುದು.
ನಂತರ ಕ್ರಮೇಣವಾಗಿ ಕೊಂಬು ಬಾಗಲು ಪ್ರಾರಂಭಿಸುತ್ತದೆ. ಕೊಂಬಿನ ಬುಡ ಚರ್ಮಕ್ಕೆ ಅಂಟಿದ ಸ್ಥಳದಲ್ಲಿ ಸಣ್ಣದಾಗಿ ಪ್ರಾರಂಭವಾಗುವ ಗಾಯ, ಕ್ರಮೇಣ ದೊಡ್ಡದಾಗುತ್ತಾ ಹೋಗುತ್ತದೆ. ಸೂಕ್ತ ಸಮಯದಲ್ಲಿ ಉತ್ತಮವಾದ ಚಿಕಿತ್ಸೆ ದೊರೆಯದೇ ಹೋದಲ್ಲಿ, ಕೊಂಬಿನ ಸುತ್ತ ವೃತ್ತಾಕಾರವಾದ ಗಾಯವಾಗಿ, ವೃಣವಾಗಿ, ಕೊಂಬು ಬಿದ್ದು ಹೋಗಬಹುದು. ಅಲ್ಲದೇ ತೀವೃವಾದ ರಕ್ತ ಸ್ರಾವವಾಗುವುದರಿಂದ ಜಾನುವಾರು ರಕ್ತ ಹೀನತೆಯಿಂದ ಬಳಲುತ್ತದೆ. ನಂತರ ಎತ್ತು ನಿಶ್ಯಕ್ತಗೊಂಡು ಮರಣವನ್ನಪ್ಪಬಹುದು.
ಪತ್ತೆ ಹಚ್ಚುವಿಕೆ ವಿಧಾನ
ಈ ಕಾಯಿಲೆಯನ್ನು ಪತ್ತೆಹಚ್ಚುವುದು ಪ್ರಾರಂಭಿಕ ಹಂತದಲ್ಲಿ ಕಷ್ಟಕರ. ಕ್ಯಾನ್ಸರ್ ಗಡ್ಡೆಯು ಬೆಳೆಯುತ್ತಿದ್ದಂತೆ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸಬಹುದು. ರೋಗ ಲಕ್ಷಣವನ್ನು ಅವಲಂಬಿಸಿ ಕಾಯಿಲೆಯನ್ನು ಪತ್ತೆ ಹಚ್ಚುವ ವಿಧಾನವೊಂದೇ ಸಧ್ಯಕ್ಕೆ ಸುಲಭಕ್ಕೆ ಲಭ್ಯವಿರುವ ವಿಧಾನ. ಕ್ಷಕಿರಣ ವಿಧಾನದಿಂದಲೂ ಸಹ ಪತ್ತೆ ಹಚ್ಚಬಹುದಾದರೂ ಸಹ ಎಲ್ಲ ಕಡೆ ಈ ಸೌಲಭ್ಯ ಲಭ್ಯವಿಲ್ಲ. ಬಾಧೆಗೊಳಗಾಗಿರುವ ಕೊಂಬಿನ ಬುಡದ ಅಂಗಾAಶದ ಬಯಾಪ್ಸಿಯನ್ನು ಪರೀಶೀಲಿಸಿದರೂ ಸಹ ರೋಗ ಪತ್ತೆಯಾದೀತು.
ಚಿಕಿತ್ಸೆ
ಕ್ಯಾನ್ಸರ್ ಎಂದರೆ ಮನುಷ್ಯರಲ್ಲಿಯೇ ಉತ್ತಮವಾದ ಚಿಕಿತ್ಸೆ ಇಲ್ಲ. ಅದರಲ್ಲೂ ಪತ್ತೆ ಹಚ್ಚಲು ಕಷ್ಟಕರವಾದ ಈ ಪಿಡುಗಿನ ಚಿಕಿತ್ಸೆ ಕಷ್ಟಕರವೇ ನಿಜ. ಆದರೆ ರೋಗದ ಪ್ರಾರಂಭಿಕ ಹಂತದಲ್ಲಿ ಇಡೀ ಕೋಡನ್ನು ಬುಡ ಸಮೇತ ತಜ್ಞ ನುರಿತ ಶಸ್ತಚಿಕಿತ್ಸಾ ತಜ್ಞ ಪಶುವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ತೆಗೆದು ಹಾಕಿದಲ್ಲಿ ಎತ್ತಿನ ಜೀವವನ್ನು ಕಾಪಾಡಬಹುದು.
ಇದಕ್ಕೆ ರೈತರ ಇದಕ್ಕೆ ರೈತರ ಸಹಕಾರ ಬಹಳ ಮುಖ್ಯ ಬಹಳಷ್ಟು ರೈತರು ಎತ್ತಿನ ಕೊಂಬನ್ನು ತೆಗೆದರೆ ಅದರ ಅಂದಗೆಟ್ಟು ಅದರ ಬೆಲೆ ಹೊರಟು ಹೋಗುತ್ತದೆಂದು ಶಸ್ತ್ರ ಚಿಕಿತ್ಸೆಗೆ ಹಿಂಜರಿಯುತ್ತಾರೆ. ಎತ್ತಿನ ಜೀವಕ್ಕಿಂತ ಅದರ ಅಂದ ಮುಖ್ಯವಲ್ಲ ಎಂಬುದು ತಿಳಿದಿರಲಿ. ಇದು ಔಷಧಗಳಿಂದ ಗುಣಪಡಿಸಲು ಅಸಾಧ್ಯವೆಂದು ಹೇಳಬಹುದಾದ ಒಂದು ಕಾಯಿಲೆ.
ತಡೆಗಟ್ಟುವಿಕೆ
ರೈತರು ಅವರ ಎತ್ತುಗಳ ಕೊಂಬನ್ನು ನಿಯಮಿತವಾಗಿ ಗಮನಿಸುತ್ತಾ ಇರಬೇಕು. ಯಾವುದೇ ಕಾರಣಕ್ಕೂ ಅಂದ ಅಥವಾ ಬೆಲೆ ಹೆಚ್ಚಿಸಲು ಕೊಂಬನ್ನು ಕೆತ್ತುವುದು, ಬಣ್ಣ ಹಚ್ಚುವುದು ಇತ್ಯಾದಿ ಕಾರ್ಯಗಳನ್ನು ಮಾಡಬಾರದು. ಎತ್ತುಗಳನ್ನು ಉಳುಮೆಗೆ ಅಥವಾ ಗಾಡಿಗೆ ಕಟ್ಟುವಾಗ ನೊಗ ಕೊಂಬಿನ ಬುಡಕ್ಕೆ ಉಜ್ಜದಂತೆ ಎಚ್ಚರ ವಹಿಸುವುದು ಒಳಿತು.
ಪ್ರಾರಂಭಿಕ ಹಂತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದರೆ ಉತ್ತಮ ಪರಿಣಾಮ ಸಿಗಬಹುದು. ಚಿಕಿತ್ಸೆ ತಡವಾದಷ್ಟೂ ಗುಣವಾಗುವ ಸಾಧ್ಯತೆ ಕ್ಷೀಣಿಸುವುದು. ಕೊಂಬಿನ ಬುಡದಿಂದ ಸ್ರಾವವಾಗುತ್ತಿದ್ದಲ್ಲಿ ಮನೆಮದ್ದಿನ ಸಹವಾಸಕ್ಕೆ ಮತ್ತು ನಾಟಿ ವೈದ್ಯರ ಸಹವಾಸಕ್ಕೆ ಹೋಗದೇ ತಜ್ಞ ಪಶುವೈದ್ಯರನ್ನು ಶೀಘ್ರವೇ ಸಂಪರ್ಕಿಸಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.
ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಹೇಳಿಕೆ
- ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.
| ಸಚಿವ ದಿನೇಶ್ ಗುಂಡೂರಾವ್
ಟ್ವೀಟ್
In consideration of public health, we are banning the use of artificial colours in Gobi Manchurian and cotton candy. Violation of this ban may result in imprisonment for up to 7 years and a fine of up to 10 lakhs.
Following reports of substandard quality and the presence of… pic.twitter.com/z2KWHi8Jbd
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 11, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಲೈಫ್ ಸ್ಟೈಲ್
ನೀಲಿ ಪರ್ವತಗಳ ನಾಡಿನಲ್ಲಿ ಕೀಚಕರ ಹಾವಳಿ
- ಡಾ. ಸಿದ್ದಯ್ಯ ರೆಡ್ಡಿಹಳ್ಳಿ
ಜಗತ್ತಿನ ಪ್ರತಿ ಜನಾಂಗವು ತನ್ನ ಪೂರ್ವಜರ ಪ್ರತಿಭೆ ಹಾಗೂ ಹಿರಿಮೆಯನ್ನು ಹೇಳಿಕೊಳ್ಳಲು ಕಾತರಿಸುತ್ತದೆ. ಅದರಂತೆಯೇ ನಮ್ಮ ಭರತ ಖಂಡದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ವಾಸಿಸುವ ಮಣಿಪುರಿ ಜನರು ಕ್ರಿಸ್ತಪೂರ್ವದಲ್ಲಿಯೇ ಅತ್ಯಾಧುನಿಕ ಸಾಮ್ರಾಜ್ಯವನ್ನು ಕಟ್ಟಿದ್ದರಂತೆ ಎಂದು ಹೇಳಿಕೊಳ್ಳುತ್ತಾರೆ.
ನಿಜ ಮಣಿಪುರಿಗಳು ಬೆಟ್ಟಗಳ ನಡುವೆ ಬೆಚ್ಚನೆಯ ಜೀವನವನ್ನು ಸಾಗಿಸಿದವರು. ಆದರೆ ಅಲ್ಲಿ ಕೊಳ್ಳಿ ಇಡುವ ಕೆಲಸಗಳು ಬಹಳ ಹಿಂದಿನಿಂದಲೇ ಪ್ರಾರಂಭವಾಗಿರುವುದು ತಿಳಿದುಬರುತ್ತದೆ. ವಾಸ್ತವದಲ್ಲಿ ಹಲವು ಬುಡಕಟ್ಟುಗಳ ಸಂಮಿಶ್ರಣವೇ ಮಣಿಪುರವಾಗಿದೆ. ಆದರೆ ಮಣಿಪುರಿಗಳು ಮಾತ್ರ ಈ ನೆಲದ ಮೂಲ ನಿವಾಸಿಗಳು, ಅವರಿಗೆ ಮಾತ್ರ ಸಕಲ ಸೌಕರ್ಯಗಳು ಸಿಗಬೇಕು, ಉಳಿದವರು ರಾಜ್ಯ ಬಿಡಬೇಕು ಎಂದು ಉಯಿಲ್ಲೆಬ್ಬಿಸುತ್ತಿರುವವರು ಯಾರು? ಪ್ರತಿಯೊಂದು ಬುಡಕಟ್ಟು ಜನಾಂಗಕ್ಕೆ ಇರುವಂತೆ ಹೇರಳವಾದ ಜಾನಪದ ಕಥೆ, ಪುರಾಣ ಮತ್ತು ದಂತಕಥೆಗಳ ಸಂಪತ್ತು ಇಲ್ಲಿನ ಬುಡಕಟ್ಟು ಜನಾಂಗಗಳಿಗೂ ಇದೆ.
ಮಣಿಪುರದ ರಾಜಧಾನಿ ಇಂಫಾಲ್ನಲ್ಲಿ ವಾಸಿಸುತ್ತಿದ್ದ ಜನರನ್ನು ಮಿತೇಯಿ ಅಥವಾ ಮೈತೇಯಿ ಎಂದು ಕರೆಯಲಾಗುತ್ತಿತ್ತು. ಸ್ವಾತಂತ್ರ್ಯಪೂರ್ವದಲ್ಲಿ ಮಣಿಪುರವು ಬಾಂಗ್ಲಾದ ಗುಡ್ಡುಗಾಡು ಜಿಲ್ಲೆಗಳಲ್ಲಿ ಒಂದಾಗಿತ್ತು. ಭಾರತ ಸ್ವಾತಂತ್ರ್ಯಗೊಂಡು ಎರಡು ವರ್ಷ ಎರಡು ತಿಂಗಳು ಕಳೆದ ನಂತರ ಅಂದರೆ ಅಕ್ಟೋಬರ್ 15, 1949ರಂದು ಭಾರತದೊಂದಿಗೆ ಏಕೀಕೃತವಾಯಿತು.
ಮಣಿಪುರದಲ್ಲಿ ಅಂತರ-ಜನಾಂಗೀಯ ಹಿಂಸಾಚಾರವು ಇದೇ ಮೊದಲೇನಲ್ಲ, ಇದಕ್ಕೆ ಸುದೀರ್ಘವಾದ ಇತಿಹಾಸವಿದೆ. ಮಣಿಪುರಿಗಳ ಅತಿರೇಕ ಎಲ್ಲಿಯವರೆಗೆ ಹೋಗಿತ್ತು ಎಂದರೆ 1964ರಲ್ಲಿ ಭಾರತದಿಂದ ಬಿಡುಗಡೆ ಹೊಂದಿ, ಹೊಸ ದೇಶವನ್ನು ಸೃಷ್ಟಿಸಿಕೊಳ್ಳಬೇಕು ಎಂದು ದಂಗೆಯನ್ನು ಎಬ್ಬಿಸಲಾಗಿತ್ತು. ಇದರಲ್ಲಿ ಹಲವಾರು ಗುಂಪುಗಳು ಕೂಡಿಕೊಂಡಿದ್ದವು. ಅವರಿಗೆ ಅವರದೇ ಆದ ಗುರಿಗಳು ಇದ್ದುದರಿಂದ ಈ ದಂಗೆ ವಿಫಲವಾಯಿತು.
ಚೀನಾ ದೇಶದ ಕುಮ್ಮಕ್ಕಿನಿಂದಾಗಿ ‘ರೆವಲ್ಯೂಷನರಿ ಪಾರ್ಟಿ ಆಫ್ ಕಾಂಗ್ಲೀಪಾಕ್’ ಮತ್ತು ‘ಪೀಪಲ್ಸ್ ಲಿಬರೇಶನ್ ಆರ್ಮಿಗಳು’ ಹುಟ್ಟಿಕೊಂಡವು. ಇವರು ಶಸ್ತ್ರಾಸ್ತ್ರ ತರಬೇತಿಯನ್ನು ಹೊಂದಿ, ಬ್ಯಾಂಕ್ ದರೋಡೆಗಳನ್ನು ಮಾಡುವುದು, ಪೊಲೀಸ್ ಅಧಿಕಾರಿಗಳ ಮೇಲೆ ಮತ್ತು ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ಮಾಡುವುದು ಇಂತಹ ಕೃತ್ಯಗಳನ್ನು ಮಾಡತೊಡಗಿದರು. 1980 ರಿಂದ 2004ರವರೆಗೂ ಭಾರತ ಸರ್ಕಾರ ಮಣಿಪುರವನ್ನು ಪ್ರಕ್ಷÄಬ್ದ ಪ್ರದೇಶ ಎಂದು ಉಲ್ಲೇಖಿಸಿತ್ತು.
ಈ ಸಂದರ್ಭದಲ್ಲಿ ‘ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆ’ಯನ್ನು ಜಾರಿಗೆ ತರಲಾಯಿತು. ಈ ಕಾಯಿದೆಯ ಪ್ರಕಾರ ಖಾಸಗಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕೆಟ್ಟವರ್ತನೆಗಳನ್ನು ಮಾಡುತ್ತಿದ್ದರೆ, ಯಾವುದೇ ವಾರಂಟ್ಗಳಿಲ್ಲದೆ ಬಂಧಿಸಬಹುದಾಗಿತ್ತು. ಕಾನೂನುಗಳನ್ನು ಉಲ್ಲಂಘಿಸುವ, ಶಸ್ತ್ರಾಸ್ತ್ರಗಳನ್ನು ಹೊಂದಿರುವವರನ್ನು ಅಥವಾ ದೊಡ್ಡ ದೊಡ್ಡ ಗುಂಪುಗಳಲ್ಲಿ ಸೇರಿದ್ದವರನ್ನು ಗುಂಡಿಕ್ಕಿ ಕೊಲ್ಲುವ ಅವಕಾಶವನ್ನು ಮಿಲಿಟರಿಗೆ ಕೊಡಲಾಗಿತ್ತು. ಮಿಲಿಟರಿಯ ಪರವಾಗಿರುವ ಈ ಕಾನೂನು ಅನಿಯಂತ್ರಿತ ಹತ್ಯೆಗಳು, ಚಿತ್ರಹಿಂಸೆ, ಕ್ರೂರ ಅಮಾನವೀಯತೆ, ಅಪಹರಣದಂತಹ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಯಿತು.
ಈ ಮಾನವ ವಿರೋದಿ ಮಿಲಿಟರಿ ಕಾನೂನಿನ ವಿರುದ್ಧ ಹಲವಾರು ಪ್ರತಿಭಟನೆಗಳು, ಹೋರಾಟಗಳು ಜರುಗಿದವು. ಇರೋಮ್ ಶರ್ಮಿಳಾ ಚಾನು ಎಂಬ ದಿಟ್ಟ ಮಹಿಳೆ ದೀರ್ಘಾವಧಿಯ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದಳು. ಆದರೂ 2004ರಲ್ಲಿ ಸ್ಥಳೀಯ ಮಹಿಳೆಯರ ಮೇಲೆ ಹಿಂಸಾತ್ಮಕ ದಾಳಿಯನ್ನು ನಡೆಸಲಾಯಿತು. ಇದಕ್ಕೆ ಪ್ರತಿರೋಧವಾಗಿ ಪ್ರತಿಭಟನೆಗಳು ತೀವ್ರಮಟ್ಟಕ್ಕೆ ತಲುಪಿದಾಗ ಸರ್ಕಾರವು ಮಣಿಪುರದಲ್ಲಿದ್ದ ಗೊಂದಲದ ಸ್ಥಿತಿಯನ್ನು ತೆಗೆದುಹಾಕಿತು.
ಮಣಿಪುರವು ನೀಲಿ ಪರ್ವತಗಳಿಂದ ಸುತ್ತುವರೆದಿರುವ ನಾಡಾಗಿದೆ. ಈ ಪರ್ವತ ಶ್ರೇಣಿಗಳು ತಣ್ಣನೆಯ ಗಾಳಿಯನ್ನು ಮಣಿಪುರಿಗಳಿಗೆ ತಲುಪದಂತೆ ತಡೆಯುತ್ತವೆ. ಆದರೆ ಮಣಿಪುರಿಗಳಲ್ಲಿಯೇ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಅವುಗಳಿಗೆ ಸಾಧ್ಯವೇ!? ಅವುಗಳು ಚಂಡಮಾರುತದ ಬಿರುಗಾಳಿಗಳನ್ನು ತಡೆಯಬಹುದು, ಆದರೆ ಅವರಲ್ಲಿರುವ ಮೌಢ್ಯವನ್ನು ತೊಡೆದುಹಾಕಲು ಸಾಧ್ಯವೇ?!
ಮಣಿಪುರ ರಾಜ್ಯವು ಉತ್ತರಕ್ಕೆ ನಾಗಾಲ್ಯಾಂಡ್, ದಕ್ಷಿಣಕ್ಕೆ ಮಿಜೋರಾಂ, ಪಶ್ಚಿಮಕ್ಕೆ ಅಸ್ಸಾಂ ಮತ್ತು ಪೂರ್ವಕ್ಕೆ ಮಯನ್ಮಾರ್ ದೇಶದ ಗಡಿಯನ್ನು ಹೊಂದಿದೆ.
ಮಣಿಪುರದಲ್ಲಿ ಮಳೆಗೆ, ನೀರಿಗೆ ಕೊರತೆಯಿಲ್ಲ. ಇದರ ಪಶ್ಚಿಮಕ್ಕೆ ಬರಾಕ್ ನದಿಯ ಜಲಾನಯನ ಪ್ರದೇಶ, ಪೂರ್ವದಲ್ಲಿ ಯು ನದಿಯ ಜಲಾನಯನ ಪ್ರದೇಶ, ಉತ್ತರದಲ್ಲಿ ಲಾನ್ಯೆ ನದಿಯ ಜಲಾನಯನ ಪ್ರದೇಶ, ಮಧ್ಯದಲ್ಲಿ ಮಣಿಪುರ ನದಿಯ ಜಲಾನಯನ ಪ್ರದೇಶವನ್ನು ಹೊಂದಿ ಸಮೃದ್ಧವಾಗಿರುವಂತೆ, ಅಲ್ಲಿನ ಮಹಿಳೆಯರು ಧಾರಾಕಾರವಾಗಿ ಕಣ್ಣೀರನ್ನು ಸುರಿಸುತ್ತಿದ್ದಾರೆ. ಇಲ್ಲಿನ ಮಹಿಳೆಯರ ಕಣ್ಣೀರಿಗೆ ಮೊದಲನ್ನು ಗುರುತಿಸುವುದಕ್ಕೆ, ಕೊನೆಯನ್ನು ಗ್ರಹಿಸುವುದಕ್ಕೆ ಸಾಧ್ಯವಾಗುತ್ತಿಲ್ಲ.
ಮಣಿಪುರದ ಅತಿದೊಡ್ಡ ನದಿ ಬರಾಕ್. ಇದು ಇರಾಂಗ್, ಮಕು ಮತ್ತು ತುವೈ ಉಪನದಿಗಳನ್ನು ಹೊಂದಿ ಅಸ್ಸಾಂ ರಾಜ್ಯವನ್ನು ಪ್ರವೇಶಿಸುತ್ತದೆ. ಮಣಿಪುರ ನದಿಯ ಜಲಾನಯನ ಪ್ರದೇಶವು ಮಣಿಪುರ, ಇಂಫಾಲ್, ಇರಿಲ್, ನಂಬುಲ್, ಸೆಕ್ಮೆಂ, ಚಕ್ಪಿ, ತೌಬಲ್ ಮತ್ತು ಖುಗಾ ಎಂಬಂತಹ ಎಂಟು ನದಿಗಳನ್ನು ಹೊಂದಿದೆ. ಈ ಎಲ್ಲಾ ನದಿಗಳು ಸುತ್ತಮುತ್ತಲಿನ ಬೆಟ್ಟಗಳಿಂದಲೇ ಹುಟ್ಟಿಕೊಂಡಿವೆ. ಈ ನದಿಗಳ ಒಳಹರಿವಿನ ಮರ್ಮ ನಮ್ಮ ರಾಜಕಾರಣಿಗಳ ಮರ್ಮದಂತೆ ಯಾರಿಗೂ ತಿಳಿಯದಂತಹ ಕಗ್ಗಂಟಾಗಿದೆ. ನದಿಯು ತಣ್ಣಗಿದ್ದು, ಒಂದೇ ಭಾರಿ ಬೋರ್ಗರೆದು ತಣ್ಣಗಾಗುವಂತೆ ನಮ್ಮ ಪ್ರಧಾನಮಂತ್ರಿಗಳು ಮೂರು ತಿಂಗಳ ಕಾಲ ದಿವ್ಯ ಮೌನವಾಗಿದ್ದು, ಜನರ ನಿತ್ಯ ಜೀವನವು ಅಲ್ಲೋಲ-ಕಲ್ಲೋಲ ಆದಮೇಲೆ ತಣ್ಣಗೆ ಮಾತನಾಡಿದ್ದಾರೆ.
ಆದರೆ ಅಲ್ಲಿಗೆ ಹೋಗುವ ಧೈರ್ಯವನ್ನು ಮಾಡಿಲ್ಲ. ಚುನಾವಣೆ ಇದ್ದರೆ ಹತ್ತು-ಹದಿನೈದು ಬಾರಿ ರೋಡ್-ಶೋ ಮಾಡುವ ಇವರು ಕಷ್ಟದ ಕಾಲದಲ್ಲಿ ಆ ಕಡೆ ತಿರುಗಿಯು ನೋಡದೇ ಇರುವುದು ಭಾರತೀಯರು ಪಶ್ಚಾತ್ತಾಪಪಡುವಂತೆ ಮಾಡಿದೆ.
ಮಣಿಪುರವನ್ನು ಭೌತಿಕ ಲಕ್ಷಣಗಳಲ್ಲಿ ವಿಭಿನ್ನವಾಗಿರುವ ಎರಡು ವಿಭಿನ್ನ ಭೌತಿಕ ಪ್ರದೇಶಗಳಾಗಿ ನಿರೂಪಿಸಬಹುದು. ಒಂದು ಒರಟಾದ ಬೆಟ್ಟಗಳು, ಕಿರಿದಾದ ಕಣಿವೆಗಳ ಹೊರ ಪ್ರದೇಶ ಮತ್ತೊಂದು ಸಮತಟ್ಟಾದ ಬಯಲಿನ ಒಳ ಪ್ರದೇಶ. ಇಲ್ಲಿನ ಕಣಿವೆ ಪ್ರದೇಶವು ಸಮತಟ್ಟಾದ ಮೇಲ್ಮೈ ಮೇಲೆ ಏರುತ್ತಿರುವ ಬೆಟ್ಟಗಳು ಮತ್ತು ದಿಬ್ಬಗಳಿಂದ ಕೂಡಿದೆ.
ಇಲ್ಲಿನ ಲೋಕ್ಟಾಕ್ ಸರೋವರವು ಕೇಂದ್ರ ಬಯಲಿನಿಂದ ನಾಗಾಲ್ಯಾಂಡ್ನ ಗಡಿಯವರೆಗೂ ತನ್ನ ವಿಸ್ತಾರವನ್ನು ಹರಡಿಕೊಂಡಿದೆ. ಇಲ್ಲಿನ ಮಣ್ಣಿನ ಹೊದಿಕೆಗೂ ಗಂಡು-ಹೆಣ್ಣಿನ ಸಂಬಂಧಕ್ಕೂ ನಿಕಟವಾದ ಹೋಲಿಕೆ ಇರುವಂತೆ ಕಂಡುಬರುತ್ತದೆ. ಬೆಟ್ಟದ ಪ್ರದೇಶದಲ್ಲಿ ಕೆಂಪು ಫೆರುಜಿನಸ್ ಮಣ್ಣು ಮತ್ತು ಕಣಿವೆಯಲ್ಲಿ ಮೆಕ್ಕಲು ಮಣ್ಣು ಇದೆ. ಕಣಿವೆಯ ಮಣ್ಣು ಇಲ್ಲಿನ ಗಂಡಿನ ರೀತಿಯಲ್ಲಿ ಕಠಿಣವಾಗಿದ್ದರೆ, ಕಡಿದಾದ ಇಳಿಜಾರುಗಳಲ್ಲಿರುವ ಮಣ್ಣು ಹೆಣ್ಣಿನಂತೆ ಹೆಚ್ಚಿನ ಸವೆತಕ್ಕೆ ಒಳಗಾಗಿದೆ, ಒಳಗಾಗುತ್ತಿದೆ. ಇದರ ಪರಿಣಾಮವಾಗಿ ಬಂಜರು ಬಂಡೆಗಳ ಇಳಿಜಾರುಗಳು ಸೃಷ್ಟಿಯಾಗುವಂತೆ ಅಲ್ಲಿನ ಪುರುಷರ ಮನಸ್ಸುಗಳು ಬಂಡೆಯಂತೆ ಆಗುತ್ತಿರುವುದು ಖೇದಕರವಾದ ಸಂಗತಿಯಾಗಿದೆ.
ಬೆಟ್ಟದ ತಪ್ಪಲಿನಲ್ಲಿ ರತ್ನಗಂಬಳಿಯನ್ನು ಹಾಸಿಹೊದಿಸಿರುವಂತೆ ಕಾಣುವ ಫ್ಲೋರಾ ಹೂವುಗಳು ಅಲ್ಲಿನ ಬುಡಕಟ್ಟು ಮಹಿಳೆಯರ ಸೌಂದರ್ಯವನ್ನು ಬಿತ್ತರಿಸಿದರೆ, ಬೆಟ್ಟಗಳು ಪುರುಷಾಂಕಾರದಂತೆ ಕಾಣುತ್ತವೆ. ಇಲ್ಲಿ ಏನಿಲ್ಲ ಹೇಳಿ, ನೈಸರ್ಗಿಕವಾದ ಸಸ್ಯವರ್ಗವಿದೆ. ನಾಲ್ಕು ರೀತಿಯ ವಿಶಾಲವಾಗಿ ಹರಡಿರುವ ಉಷ್ಣವಲಯದ ಅರೆ-ನಿತ್ಯಹರಿದ್ವರ್ಣ, ಒಣ ಸಮಶೀತೋಷ್ಣ ಅರಣ್ಯ, ಉಪ-ಉಷ್ಣವಲಯದ ಪೈನ್ ಕಾಡುಗಳು ಮತ್ತು ಉಷ್ಣವಲಯದ ತೇವಾಂಶವುಳ್ಳ ಅರಣ್ಯಗಳಿವೆ. ತೇಗ, ಪೈನ್, ಓಕ್, ಯುನಿಂಗ್ದೌ, ಲಿಹಾವೊ, ಬಿದಿರಿನ ಮರಗಳಿವೆ. ತಮ್ಮ ಕಷ್ಟಗಳ ನಡುವೆಯೂ ರಬ್ಬರ್, ಟೀ, ಕಾಫಿ, ಕಿತ್ತಳೆ, ಏಲಕ್ಕಿ ಬೆಳೆಯುತ್ತಾರೆ. ಆದರೆ ಅವರು ಹೆಚ್ಚು ಬೆಳೆಯುವ ಮತ್ತು ಇಷ್ಟಪಡುವ ಅಕ್ಕಿಯಂತೆ ಅಲ್ಲಿನ ಪುರುಷರ ಮನಸ್ಸುಗಳು ಬೇಗನೇ ಹಾಳಾಗುತ್ತಿರುವುದು ಜಾತಿ, ಧರ್ಮಗಳೆಂಬ ಕೀಟಗಳಿಂದ ಎಂಬುದನ್ನು ಅವರು ತಿಳಿಯದಿರುವುದು ದುರದೃಷ್ಟಕರ.
ಮಣಿಪುರ ಮತ್ತು ನಾಗಾಲ್ಯಾಂಡ್ಗಳ ಗಡಿಗಳ ನಡುವೆ ಇರುವ ಝುಕೊ ಎಂಬ ಕಣಿವೆಯು ಸಮಶೀತೋಷ್ಣ ಹವಾಮಾನವನ್ನು ಹೊಂದಿರುವಂತೆ, ಅಲ್ಲಿನ ಜನರಿಗೆ ಸಮಚಿತ್ತತೆಯನ್ನು ನೀಡಿದ್ದರೆ ಚೆನ್ನಾಗಿರುತ್ತಿತ್ತು. ಭಾರತದ ಈಶಾನ್ಯ ಮೂಲೆಯು ಸಾಮಾನ್ಯವಾಗಿ ಸೌಹಾರ್ದಯುತವಾದ ಹವಾಮಾನವನ್ನು ಹೊಂದಿದೆ. ಆದರೆ ಅಲ್ಲಿನ ಜನರು ಸೌಹಾರ್ದಯುತವಾದ ಮನೋಭಾವನೆಯನ್ನು ಹೊಂದಿಲ್ಲ. ಅಲ್ಲಿನ ವಾತಾವರಣದಂತೆ ಚಳಿಗಾಲದಲ್ಲಿ ಚಳಿ ಹೆಚ್ಚಾಗಿರುವಂತೆ, ಬೇಸಿಗೆಯಲ್ಲಿ ಬಿಸಿಲು ಗರಿಷ್ಠ ಮಟ್ಟಕ್ಕೆ ಹೋಗುವಂತೆ ಅಲ್ಲಿನ ಜನರು ಆವೇಶಕ್ಕೊಳಗಾಗುತ್ತಾರೆ.
ಇಂಫಾಲದ ಮೈತೇಯಿ ಜನರು ವಾರ್ಷಿಕ ಸರಾಸರಿ 933 ಮಿಲಿಮೀಟರ್ ಮಳೆಯನ್ನು ಪಡೆಯುತ್ತಾರೆ. ಆದರೂ ಕೂಡ ತಮ್ಮದೇ ನೆಲದಲ್ಲಿರುವ ಕುಕಿ ಜನಾಂಗದ ಮಹಿಳೆಯರು ಕಣ್ಣೀರು ಸುರಿಸುವಂತೆ ನಡೆದುಕೊಳ್ಳುತ್ತಾರೆ.
ನೈರುತ್ಯ ಮಾನ್ಸೂನ್ ಮಾರುತಗಳು ಬಂಗಾಳಕೊಲ್ಲಿಯಿAದ ತೇವಾಂಶವನ್ನು ಎತ್ತಿಕೊಂಡು ಪೂರ್ವ ಹಿಮಾಲಯ ಶ್ರೇಣಿಗಳ ಕಡೆಗೆ ಹೋಗುವಾಗ ಈ ಪ್ರದೇಶದಲ್ಲಿ ಮಳೆಯಾಗುವಂತೆ ಪ್ರಕೃತಿಯೇ ನೋಡಿಕೊಂಡರೂ ಮಹಿಳೆಯರ ಕಣ್ಣೀರು ಮಾತ್ರ ಧಾರಾಕಾರವಾಗಿ ಹರಿಯುವಂತೆ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣಿಗಳು ನೋಡಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ಮಣಿಪುರದಲ್ಲಿ ಹವಾಮಾನದಲ್ಲಿ ಬದಲಾವಣೆ ಹೆಚ್ಚಾಗುತ್ತಿದೆ. ಉದಾಹರಣೆಗೆ ಮಳೆ ಮತ್ತು ತಾಪಮಾನದಲ್ಲಿ ತೀವ್ರ ಬದಲಾವಣೆಗಳು ಹೆಚ್ಚಾಗುತ್ತಿವೆ. ಆದರೆ ಅಲ್ಲಿನ ಜನಾಂಗಗಳ ನಡುವಿನ ಬಾಂಧವ್ಯದ ಬದ್ಧತೆಗಳು ಏರುಪೇರಾಗುತ್ತಿರುವುದು ಸಾಕಷ್ಟು ಹಿಂದಿನಿAದಲೇ ನಡೆಯುತ್ತಿರುವುದು ಮನುಷ್ಯ ಸಂಬಂಧಗಳ ನಡುವೆ ಬಿರುಕು ಮೂಡಿರುವುದರ ದ್ಯೋತಕವಾಗಿದೆ. ಕಣಿವೆ ಅಥವಾ ಬಯಲು ಪ್ರದೇಶಗಳಲ್ಲಿ ಮೈತೇಯಿ ಮಾತನಾಡುವ ಅಂದರೆ ಮಣಿಪುರಿ ಭಾಷಿಕರು ನೆಲೆಸಿದ್ದಾರೆ. ಬೆಟ್ಟಗಳಲ್ಲಿ ನಾಗಾಗಳು, ಕುಕಿಗಳು ಮೊದಲಾದ ಸಣ್ಣ ಬುಡಕಟ್ಟು ಜನರು ವಾಸಿಸುತ್ತಿದ್ದಾರೆ. ಇವರು ಬೆಟ್ಟಗಳ ಮೇಲ್ಮೈ ಮಣ್ಣಿನಂತೆ ಮೈತೇಯಿ ಜನರ ಹಾವಳಿಗೆ ಕೊಚ್ಚಿ ಹೋಗುತ್ತಿದ್ದಾರೆ. ಅಲ್ಲಿ ಮೈತೇಯಿ ಭಾಷೆಯು ಮಣಿಪುರಿ ಭಾಷೆಗೆ ಸಮಾನಾರ್ಥಕವಾಗಿ ಬಳಕೆಯಾಗುತ್ತಿರುವುದರಿಂದ ಇಲ್ಲಿನ ಬಹುಪಾಲು ಜನಸಂಖ್ಯೆ ಮೈತೇಯಿಯರೇ ಎಂದು ಕರೆಸಿಕೊಂಡಿದ್ದಾರೆ.
ಇವರು ಮಣಿಪುರದ ಮುಖ್ಯ ಜನಾಂಗ ಎಂಬುದೇನೋ ಸರಿ. ಆದರೆ ನಾಗಾ ಮತ್ತು ಕುಕಿ ಬುಡಕಟ್ಟು ಜನಾಂಗಗಳನ್ನು ಹಲವಾರು ಬುಡಕಟ್ಟು ಜನಾಂಗಗಳಾಗಿ ವಿಂಗಡಿಸಲಾಗಿದೆ. ಇವರೆಲ್ಲರೂ ಒಗ್ಗಟ್ಟಾಗಿದ್ದರೆ ನಮ್ಮ ಬೇಳೆ ಬೇಯ್ಯುವುದಿಲ್ಲ ಎಂಬ ಸಾಂಸ್ಕೃತಿಕ ರಾಜಕಾರಣವು ವ್ಯವಸ್ಥಿತವಾಗಿ ಬಹಳ ಹಿಂದಿನಿAದಲೇ ಇವರನ್ನು ಹೊಡೆದು ಹೊಡೆದು ಹಾಳುತ್ತಿದೆ.
ಮಣಿಪುರದಲ್ಲಿ ಮೇ 4ರಂದು ಜರುಗಿದ ಇಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆಯು ಜುಲೈ 20ರಂದು ಹೊರ ಜಗತ್ತಿಗೆ ತಿಳಿಯಿತು. ಈ ಘಟನೆಯು ಪ್ರಪಂಚದ ಜನರನ್ನು ತಲ್ಲಣಗೊಳಿಸಿತು.
ಇಡೀ ಜಗತ್ತೇ ಈ ಕೃತ್ಯವನ್ನು ವಿರೋಧಿಸಿದರೂ ಕೂಡ, ಒಟ್ಟು ದೇಶವನ್ನೇ ತನ್ನ ಕುಟುಂಬ ಎಂದು ಕರೆದುಕೊಳ್ಳುವ ನಮ್ಮ ಪ್ರಧಾನಿಗಳು ಬೆಂಕಿ ಹೊತ್ತಿಕೊಂಡ ಮೂರು ತಿಂಗಳು ದಿವ್ಯ ಮೌನದಿಂದ ಇದ್ದರು ಎಂಬುದನ್ನು ಜಗತ್ತು ಮರೆಯುತ್ತದೆಯೇ? 140 ಕೋಟಿ ಜನರು ನನ್ನ ಕುಟುಂಬಸ್ಥರೇ ಎಂದು ಹೇಳಿಕೊಳ್ಳುವ ಪ್ರಧಾನಿಗಳು ಅದರಲ್ಲಿ ಮಹಿಳೆಯರೂ ಇದ್ದಾರೆ ಎಂಬುದನ್ನು ಮರೆತಿದ್ದಾರೆಯೇ!? ಒಟ್ಟಾರೆ ನಮ್ಮ ಪ್ರಧಾನಿಗಳ ಮೌನ, ಮೈತೇಯಿ ಮತಾಂಧರ ಆರ್ಭಟ ಕುಕಿ ಜನಾಂಗದ ಮಹಿಳೆಯರ ಬದುಕನ್ನು ಮೂರಾಬಟ್ಟೆ ಮಾಡಿರುವುದಂತೂ ಖಚಿತ.
(ಡಾ. ಸಿದ್ದಯ್ಯ ರೆಡ್ಡಿಹಳ್ಳಿ, 9449899520)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮದ್ರಾಸ್ ಐ ವೈರಾಣುವಿಗೆ ಭಯ ಪಡಬೇಕಾಗಿಲ್ಲ : ಡಾ. ನಾಗರಾಜ
ಸುದ್ದಿದಿನ,ದಾವಣಗೆರೆ : ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮದ್ರಾಸ್ ಐ ವೈರಾಣು ಅತೀ ವೇಗವಾಗಿ ಹರಡುತ್ತಿದ್ದು ಇದಕ್ಕೆ ಭಯ ಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ತಿಳಿಸಿದ್ದಾರೆ.
ಮದ್ರಾಸ್ ಐ ಈ ಬಾರಿ ಮಳೆಗಾಲದಲ್ಲಿ ಆರಂಭವಾಗಿದ್ದು ರಾಜ್ಯದ ಜನರಕಣ್ಣು ಕೆಂಪಾಗಿಸುತ್ತಿದೆ, ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟಲ್ ವಿದ್ಯಾರ್ಥಿಗಳಲ್ಲಿ “ಮದ್ರಾಸ್ ಐ” ವೇಗಾಗಿ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ, ಕಂಜಕ್ವಿಟಿಸ್ ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ ಕಣ್ಣು ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿಕಣ್ಣಿ ಮೇಲೆ ಪರಿಣಾಮಉಂಟು ಮಾಡುತ್ತವೆ, ರಾಜ್ಯದಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಿಸಿಲು ಇಲ್ಲದಂತಾಗಿದೆ ಇದರ ಪರಿಣಾಮತೇವಾಂಶ ಹೆಚ್ಚಾಗಿ ಅವಧಿಗೂ ಮೊದಲೇ ಈ ವೈರಾಣು ದಾಂಗುಡಿ ಇರಿಸಿದೆ.
ರೋಗದ ಲಕ್ಷಣಗಳು
ಕಸ ಬಿದ್ದದಂತೆಆಗುವ ರೀತಿಯಾಗಿಕಣ್ಣುಚುಚ್ಚುವುದು, ಬೆಳಗ್ಗೆ ಎದ್ದಾಗ ಹೆಚ್ಚು ಪಿಸುರು (ಪಿಚ್ಚು) ಬರುತ್ತದೆ, ಕಣ್ಣುಗಳು ಕೆಂಪಾಗಿ, ಕಿರಿಕಿರಿ ಹೆಚ್ಚುವುದು, ಕಣ್ಣಲ್ಲಿ ನೀರು ಬರುವುದು, ರೆಪ್ಪೆ ಕಣ್ಣು ದಪ್ಪ ಆಗುವುದು ಕಂಡು ಬರುತ್ತದೆ.
ಮುಂಜಾಗೃತಾ ಕ್ರಮಗಳು
ಸಮಸ್ಯೆ ಇರುವವರು ಕೆಲದಿನ ಪ್ರತ್ಯೇಕ ವಾಸ ಮಾಡಿ, ಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ, ಕಣ್ಣಿಗೆಔಷಧ ಹಾಕಿಸಿಕೊಳ್ಳಬೇಡಿ, ದಿನಕ್ಕೆ 8-10 ಬಾರಿ ಸ್ಯಾನಿಟೈಸರ್, ಸೋಪು ಬಳಸಿ ಕೈ ತೊಳೆದುಕೊಳ್ಳಿ, ವೈರಸ್ ಕಾಣಿಸಿಕೊಂಡಾಗ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಲಹೆ ಪಡೆಯಬೇಕು, ವೈದ್ಯರ ತಪಾಸಣೆ ಮಾಡಿಸದೇ, ಔಷಧಿ ಅಂಗಡಿಗಳಲ್ಲಿ ಸಿಗುವ ಡ್ರಾಪ್ಸ್ಗಳನ್ನು ಬಳಸಬಾರದು, ಕಣ್ಣು ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು.
ಪರಿಹಾರ
ಸಮಸ್ಯೆ ಉಳ್ಳವರು ಇತರರಿಂದದೂರಇರಬೇಕು, ವೈದ್ಯರ ಬಳಿ ತೋರಿಸಿ, ಐ ಡ್ರಾಪ್ಸ್ ಮಾತ್ರ ಹಾಕಬೇಕು, ಸಮಸ್ಯೆ ಕಡಿಮೆ ಆಗುವವರೆಗೆ ಗಾಳಿಗೆ ಹೋಗಬಾರದು, ದ್ವಿಚಕ್ರ ವಾಹನ ಓಡಿಸಬಾರದು, ಟಿ.ವಿ,ಮೊಬೈಲ್, ಕಂಪ್ಯೂಟರ್ಗಳನ್ನು ನೋಡುವುದನ್ನ ಕಡಿಮೆ ಮಾಡಿ ಕಣ್ಣಿಗೆ ವಿಶ್ರಾಂತಿಕೊಡಬೇಕು.
ರೋಗದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಸಮೀಪದ ನಗರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾಆಸ್ಪತ್ರೆಗೆ ಭೇಟಿ, ವೈದ್ಯರ ಹತ್ತಿರತಪಾಸಣೆ ಮಾಡಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ವೈರಾಣುವಿನ ಸಮಸ್ಯೆ ಆಗಿರುವ ಕಾರಣ ನಿರ್ದಿಷ್ಟ ಚಿಕಿತ್ಸೆ ಇಲ್ಲ ಮುನ್ನೆಚ್ಚರಿಕೆಯೇ ಮದ್ದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?