ಲೈಫ್ ಸ್ಟೈಲ್
ಎತ್ತುಗಳಲ್ಲಿ ಕೊಂಬಿನ ಕ್ಯಾನ್ಸರ್..!
- ಡಾ.ಎನ್.ಬಿ.ಶ್ರೀಧರ,ಶಿವಮೊಗ್ಗ
ಕ್ಯಾನ್ಸರ್ ಎಂದರೆ ಗುಣವಾಗದ ಕಾಯಿಲೆ ಎಂದು ಎಲ್ಲರಿಗೂ ದುಸ್ವಪ್ನ. ಅನೇಕ ರೈತರು ಜಾನುವಾರುಗಳಲ್ಲಿ ಕ್ಯಾನ್ರ್ರೇ? ಎಂದು ಉದ್ಘಾರ ತೆಗೆಯುತ್ತಾರೆ. ಹಲವಾರು ಬಗೆಯ ಕ್ಯಾನ್ಸರ್ಗಳು ಜಾನುವಾರುಗಳಲ್ಲಿ ಸಾಮಾನ್ಯ. ಅವುಗಳಲ್ಲಿ ಕೊಂಬಿನ ಕ್ಯಾನ್ಸರ್ ಒಂದು. ಎತ್ತುಗಳಲ್ಲಿ ಅಂದವಾದ ಕೊಂಬಿದ್ದರೆ ಅದಕ್ಕೆ ಒಂದು ತರಹದ ಶೋಭೆ. ಆದರೆ ಈ ಕೊಂಬುಗಳಿಗೇ ಕ್ಯಾನ್ಸರ್ ಬಂದು ಬಿಟ್ಟರೆ ? ರೈತರ ಗತಿ ಹರೋ ಹರ.
ಉಳುಮೆಗೆ ಉಪಯೋಗಿಸುವ ಎತ್ತುಗಳ ತಳಿಗಳಾದ ಹಳ್ಳಿಕಾರ್, ಕಿಲಾರ್, ಅಮೃತ್ ಮಹಲ್, ದೇವಣಿ ಇತ್ಯಾದಿ ಉತ್ತಮ ಹಾಗೂ ದುಬಾರಿ ಎತ್ತುಗಳನ್ನು ಭಾಧಿಸುವ ಈ ಕಾಯಿಲೆ ಅಂಕಿ ಅಂಶಗಳ ಪ್ರಕಾರ ಶೇ 1 ರಷ್ಟು ಜಾನುವಾರುಗಳಲ್ಲಿ ಅದರಲ್ಲೂ ಎತ್ತುಗಳಲ್ಲಿ ಬರುತ್ತದೆ ಎಂಬುದು ಅತಂಕಕಾರಿ ವಿಷಯ. ಕೊಂಬಿನ ಕ್ಯಾನ್ಸರ್ ಬಂದ ಎತ್ತುಗಳ ಚಿಕಿತ್ಸೆ ಕಷ್ಟಕರವಾದ ವಿಷಯವಾಗಿರುವುದರಿಂದ ರೈತರಿಗೆ ಈ ಕಾಯಿಲೆ ತುಂಬಾ ಆರ್ಥಿಕ ಸಂಕಷ್ಟ ತಂದೊಡ್ಡುತ್ತದೆ. ಅವರಿಗೆ ಮಾಹಿತಿ ನೀಡುವುದೇ ಈ ಲೇಖನದ ಉದ್ದೇಶ.
ಕಾರಣಗಳು
ಮುಖ್ಯವಾದ ವಿಷಯವೆಂದರೆ ಇಲ್ಲಿಯವರೆಗೂ ಸಹ ಕೊಂಬಿನ ಕ್ಯಾನ್ಸರ್ ಹೇಗೆ ಮತ್ತು ಯಾಕೆ ಬರುತ್ತದೆ ಎಂಬುದು ಪ್ರಶ್ನಾರ್ಹವಾಗಿಯೇ ಉಳಿದಿದೆ. ಇದು ಅನುವಂಶೀಯವಾಗಿ ಕೆಲವು ತಳಿಯ ಎತ್ತುಗಳಲ್ಲಿ ಬರುತ್ತದೆ. ಅದರಲ್ಲೂ ದೇಶೀ ತಳಿಗಳು ಇದಕ್ಕೆ ಜಾಸ್ತಿ ತುತ್ತಾಗುತ್ತವೆ. ದಪ್ಪ ಕೋಡು ಹೊಂದಿದ ಕಾಂಕ್ರೇಜ್, ದೇವಣಿ ಮತ್ತು ಗಿರ್ ತಳಿಯಲ್ಲಿ ಇದು ಬಹಳ ಸಾಮಾನ್ಯ.
ಉತ್ತರ ಕರ್ನಾಟಕದಲ್ಲಿ ಉಳುಮೆಗೆ ಉಪಯೋಗಿಸುವ ಎತ್ತುಗಳ ತಳಿಗಳಾದ ಹಳ್ಳಿಕಾರ್, ಕಿಲಾರ್, ಅಮೃತ್ ಮಹಲ್ ಇತ್ಯಾದಿಗಳಲ್ಲಿ ಇದರ ಸಂಭವ ಜಾಸ್ತಿ. ಕೋಣಗಳಲ್ಲೂ ಸಹ ಈ ಕಾಯಿಲೆ ಬರಬಹುದು. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಎತ್ತುಗಳಲ್ಲಿ ಇದು ಕಡಿಮೆ.
ಇದನ್ನೂ ಓದಿ | ಸಾಮಾಜಿಕ ಜಾಲತಾಣಗಳು ಮತ್ತು ಸುಳ್ಳು ಸುದ್ದಿಗಳು..!
ಮತ್ತೊಂದು ಮುಖ್ಯವಾದ ವಿಷಯವನ್ನು ರೈತರು ಗಮನಿಸಬೇಕಾದ್ದೆಂದರೆ, ಉಳುಮೆಗೆ ಉಪಯೋಗಿಸುವ ಎತ್ತುಗಳಲ್ಲಿ ಈ ಸಮಸ್ಯೆ ಜಾಸ್ತಿ. ಏಕೆಂದರೆ ಎತ್ತನ್ನು ಗಾಡಿಗೆ ಕಟ್ಟಿದಾಗ ಅಥವಾ ಉಳುಮೆಗೆ ಬಳಸುವಾಗ ನೊಗ ಪದೇ ಪದೆ ಕೊಂಬಿನ ಬುಡಕ್ಕೆ ಉಜ್ಜುತ್ತಿದ್ದಲ್ಲಿ ಅದರಿಂದ ಈ ಕಾಯಿಲೆಯ ಸಂಭವ ಹೆಚ್ಚು.
ಕೆಲವು ರೈತರು ಎತ್ತಿನ ಕೊಂಬು ಸುಂದರವಾಗಿ ಕಾಣಿಸಲೆಂದು, ಅದನ್ನು ಮೇಲಿಂದ ಮೇಲೆ ಕೆತ್ತುತ್ತಾರೆ. ಅಲ್ಲದೇ ವಿವಿಧ ಬಗೆಯ ಬಣ್ಣಗಳನ್ನೂ ಸಹ ಹಚ್ಚುತ್ತಾರೆ. ಇದರಿಂದ ಕೊಂಬಿನ ಕ್ಯಾನ್ಸರಿನ ಸಾಧ್ಯತೆ ಜಾಸ್ತಿ. ಇದಲ್ಲದೇ ಹಲವಾರು ಪತ್ತೆಯಾಗದ ಕಾರಣಗಳಿಂದಲೂ ಸಹ ಈ ಪಿಡುಗು ಎತ್ತುಗಳನ್ನು ಬಾಧಿಸಬಹುದು.
ಲಕ್ಷಣಗಳು
ಈ ಕಾಯಿಲೆ ಉದ್ದ ಕೊಂಬಿನ ಎತ್ತುಗಳಲ್ಲಿ ಸಾಮಾನ್ಯವಾಗಿ ಬರುತ್ತದೆ. ಪ್ರಾರಂಭಿಕ ಹಂತದಲ್ಲಿ ಕೋಡಿನ ಬುಡದಲ್ಲಿ ಮೇಣದಂತಹ ವಾಸನಾಯುಕ್ತ ಸ್ರಾವ ಶುರುವಾಗುತ್ತದೆ. ಕೆಲವೊಮ್ಮೆ ಮೂಗಿನಿಂದ ಸಣ್ಣದಾಗಿ ರಕ್ತ ಸ್ರಾವವೂ ಸಹ ಪ್ರಾರಂಭವಾಗಬಹುದು.
ಕೊಂಬಿನ ಬುಡದ ಒಳಗಿನಿಂದ ಗಡ್ಡೆಯು ಬೆಳೆಯಲು ಪ್ರಾರಂಭಿಸುತ್ತಿದ್ದ0ತೆ, ಎತ್ತು ನೋವಿನಿಂದ ಪದೇ ಪದೇ ಕೊಂಬುಗಳನ್ನು ಗೋಡೆಗೆ ಉಜ್ಜಲು ಪ್ರಾರಂಭಿಸುತ್ತದೆ. ತಲೆಯನ್ನು ಪದೇ ಪದೇ ಅಡ್ಡಡ್ಡ ಅಲುಗಾಡಿಸುತ್ತಾ ಗೋಡೆ ಇತ್ಯಾದಿಗಳಿಗೆ ಡಿಕ್ಕಿ ಹೊಡೆಯಲು ಪ್ರಾರಂಭಿಸುತ್ತದೆ. ಅಲ್ಲದೇ ಎತ್ತುಗಳು ತಲೇಯನ್ನು ಯಾವಾಗಲೂ ಕೆಳಗೆ ಹಾಕಿಕೊಂಡು ನಿಲ್ಲಬಹುದು.
ನಂತರ ಕ್ರಮೇಣವಾಗಿ ಕೊಂಬು ಬಾಗಲು ಪ್ರಾರಂಭಿಸುತ್ತದೆ. ಕೊಂಬಿನ ಬುಡ ಚರ್ಮಕ್ಕೆ ಅಂಟಿದ ಸ್ಥಳದಲ್ಲಿ ಸಣ್ಣದಾಗಿ ಪ್ರಾರಂಭವಾಗುವ ಗಾಯ, ಕ್ರಮೇಣ ದೊಡ್ಡದಾಗುತ್ತಾ ಹೋಗುತ್ತದೆ. ಸೂಕ್ತ ಸಮಯದಲ್ಲಿ ಉತ್ತಮವಾದ ಚಿಕಿತ್ಸೆ ದೊರೆಯದೇ ಹೋದಲ್ಲಿ, ಕೊಂಬಿನ ಸುತ್ತ ವೃತ್ತಾಕಾರವಾದ ಗಾಯವಾಗಿ, ವೃಣವಾಗಿ, ಕೊಂಬು ಬಿದ್ದು ಹೋಗಬಹುದು. ಅಲ್ಲದೇ ತೀವೃವಾದ ರಕ್ತ ಸ್ರಾವವಾಗುವುದರಿಂದ ಜಾನುವಾರು ರಕ್ತ ಹೀನತೆಯಿಂದ ಬಳಲುತ್ತದೆ. ನಂತರ ಎತ್ತು ನಿಶ್ಯಕ್ತಗೊಂಡು ಮರಣವನ್ನಪ್ಪಬಹುದು.
ಪತ್ತೆ ಹಚ್ಚುವಿಕೆ ವಿಧಾನ
ಈ ಕಾಯಿಲೆಯನ್ನು ಪತ್ತೆಹಚ್ಚುವುದು ಪ್ರಾರಂಭಿಕ ಹಂತದಲ್ಲಿ ಕಷ್ಟಕರ. ಕ್ಯಾನ್ಸರ್ ಗಡ್ಡೆಯು ಬೆಳೆಯುತ್ತಿದ್ದಂತೆ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸಬಹುದು. ರೋಗ ಲಕ್ಷಣವನ್ನು ಅವಲಂಬಿಸಿ ಕಾಯಿಲೆಯನ್ನು ಪತ್ತೆ ಹಚ್ಚುವ ವಿಧಾನವೊಂದೇ ಸಧ್ಯಕ್ಕೆ ಸುಲಭಕ್ಕೆ ಲಭ್ಯವಿರುವ ವಿಧಾನ. ಕ್ಷಕಿರಣ ವಿಧಾನದಿಂದಲೂ ಸಹ ಪತ್ತೆ ಹಚ್ಚಬಹುದಾದರೂ ಸಹ ಎಲ್ಲ ಕಡೆ ಈ ಸೌಲಭ್ಯ ಲಭ್ಯವಿಲ್ಲ. ಬಾಧೆಗೊಳಗಾಗಿರುವ ಕೊಂಬಿನ ಬುಡದ ಅಂಗಾAಶದ ಬಯಾಪ್ಸಿಯನ್ನು ಪರೀಶೀಲಿಸಿದರೂ ಸಹ ರೋಗ ಪತ್ತೆಯಾದೀತು.
ಚಿಕಿತ್ಸೆ
ಕ್ಯಾನ್ಸರ್ ಎಂದರೆ ಮನುಷ್ಯರಲ್ಲಿಯೇ ಉತ್ತಮವಾದ ಚಿಕಿತ್ಸೆ ಇಲ್ಲ. ಅದರಲ್ಲೂ ಪತ್ತೆ ಹಚ್ಚಲು ಕಷ್ಟಕರವಾದ ಈ ಪಿಡುಗಿನ ಚಿಕಿತ್ಸೆ ಕಷ್ಟಕರವೇ ನಿಜ. ಆದರೆ ರೋಗದ ಪ್ರಾರಂಭಿಕ ಹಂತದಲ್ಲಿ ಇಡೀ ಕೋಡನ್ನು ಬುಡ ಸಮೇತ ತಜ್ಞ ನುರಿತ ಶಸ್ತಚಿಕಿತ್ಸಾ ತಜ್ಞ ಪಶುವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ತೆಗೆದು ಹಾಕಿದಲ್ಲಿ ಎತ್ತಿನ ಜೀವವನ್ನು ಕಾಪಾಡಬಹುದು.
ಇದಕ್ಕೆ ರೈತರ ಇದಕ್ಕೆ ರೈತರ ಸಹಕಾರ ಬಹಳ ಮುಖ್ಯ ಬಹಳಷ್ಟು ರೈತರು ಎತ್ತಿನ ಕೊಂಬನ್ನು ತೆಗೆದರೆ ಅದರ ಅಂದಗೆಟ್ಟು ಅದರ ಬೆಲೆ ಹೊರಟು ಹೋಗುತ್ತದೆಂದು ಶಸ್ತ್ರ ಚಿಕಿತ್ಸೆಗೆ ಹಿಂಜರಿಯುತ್ತಾರೆ. ಎತ್ತಿನ ಜೀವಕ್ಕಿಂತ ಅದರ ಅಂದ ಮುಖ್ಯವಲ್ಲ ಎಂಬುದು ತಿಳಿದಿರಲಿ. ಇದು ಔಷಧಗಳಿಂದ ಗುಣಪಡಿಸಲು ಅಸಾಧ್ಯವೆಂದು ಹೇಳಬಹುದಾದ ಒಂದು ಕಾಯಿಲೆ.
ತಡೆಗಟ್ಟುವಿಕೆ
ರೈತರು ಅವರ ಎತ್ತುಗಳ ಕೊಂಬನ್ನು ನಿಯಮಿತವಾಗಿ ಗಮನಿಸುತ್ತಾ ಇರಬೇಕು. ಯಾವುದೇ ಕಾರಣಕ್ಕೂ ಅಂದ ಅಥವಾ ಬೆಲೆ ಹೆಚ್ಚಿಸಲು ಕೊಂಬನ್ನು ಕೆತ್ತುವುದು, ಬಣ್ಣ ಹಚ್ಚುವುದು ಇತ್ಯಾದಿ ಕಾರ್ಯಗಳನ್ನು ಮಾಡಬಾರದು. ಎತ್ತುಗಳನ್ನು ಉಳುಮೆಗೆ ಅಥವಾ ಗಾಡಿಗೆ ಕಟ್ಟುವಾಗ ನೊಗ ಕೊಂಬಿನ ಬುಡಕ್ಕೆ ಉಜ್ಜದಂತೆ ಎಚ್ಚರ ವಹಿಸುವುದು ಒಳಿತು.
ಪ್ರಾರಂಭಿಕ ಹಂತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದರೆ ಉತ್ತಮ ಪರಿಣಾಮ ಸಿಗಬಹುದು. ಚಿಕಿತ್ಸೆ ತಡವಾದಷ್ಟೂ ಗುಣವಾಗುವ ಸಾಧ್ಯತೆ ಕ್ಷೀಣಿಸುವುದು. ಕೊಂಬಿನ ಬುಡದಿಂದ ಸ್ರಾವವಾಗುತ್ತಿದ್ದಲ್ಲಿ ಮನೆಮದ್ದಿನ ಸಹವಾಸಕ್ಕೆ ಮತ್ತು ನಾಟಿ ವೈದ್ಯರ ಸಹವಾಸಕ್ಕೆ ಹೋಗದೇ ತಜ್ಞ ಪಶುವೈದ್ಯರನ್ನು ಶೀಘ್ರವೇ ಸಂಪರ್ಕಿಸಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

ದಿನದ ಸುದ್ದಿ
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್ಗಳಾದ ಓಲಾ, ಉಬರ್, ರ್ಯಾಪಿಡೋ ನಂತಹ ಆ್ಯಪ್ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
http://Visit : www.suddidina.com
ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.
ನಮ್ಮ ಬಿಎಂಟಿಸಿ 2.0′ ಆ್ಯಪ್ನಲ್ಲಿ ಏನಿದೆ ಹೊಸತು?
ಖಾಸಗಿ ಆ್ಯಪ್ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್ನಲ್ಲಿ ಬಿಎಂಟಿಸಿ ನೆಟ್ವರ್ಕ್ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್ಗಳು ಸೇರಿದಂತೆ ಒಟ್ಟು 6,938 ಬಸ್ಗಳಿವೆ. ಪ್ರತಿದಿನ ಸರಾಸರಿ 6,200 ಬಸ್ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.
ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ:
ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
200 ಹೊಸ ಮಿನಿ ಬಸ್ಗಳ ಖರೀದಿ:
ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:
ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್ಗಳ ಪೈಕಿ 200 ಮಿನಿ ಎಸಿ ಇ-ಬಸ್ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

-
ದಿನದ ಸುದ್ದಿ6 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ6 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ6 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ6 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ6 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ6 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ6 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ6 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್


