Connect with us

ನಿತ್ಯ ಭವಿಷ್ಯ

ಮಾಂಗಲ್ಯ ದೋಷಕ್ಕೆ ಭಗವತಿ ದೇವಿಯ ಪೂಜಾ ಶಕ್ತಿಯಿಂದ ವಿಶೇಷ ಪರಿಹಾರ : ಕರೆಮಾಡಿ | 17-02-2020 ಸೋಮವಾರ

Published

on

ನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ  9964584883

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883

ಮೇಷ ರಾಶಿ

ವೃತ್ತಿರಂಗದಲ್ಲಿ ವಿಚಾರಗಳನ್ನು ಅವಲೋಕಿಸಿಯೇ ಮುಂದಿನ ಹೆಜ್ಜೆಯನ್ನು ಇಡಬೇಕಾದೀತು. ಆರ್ಥಿಕ ವಿಚಾರದಲ್ಲಿ ಧನಾಗಮನದಿಂದ ಕಾರ್ಯಾನುಕೂಲಕ್ಕೆ ಬಲ ತಂದೀತು. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದು ಒಳ್ಳೆಯ ವಾತಾವರಣ ನಿಮ್ಮನ್ನು ಶಾಂತಚಿತ್ತರನ್ನಾಗಿಸುತ್ತದೆ. ವಿದ್ಯಾರ್ಥಿಗಳಿಗೆ ಹೊರಗಿನ ವಾತಾವರಣ ವಿದ್ಯಾಭ್ಯಾಸದಲ್ಲಿ ಹಿನ್ನಡೆ ತಂದುಕೊಡಲಿದೆ. ಅವಿವಾಹಿತರಿಗೆ ನಿರೀಕ್ಷಿತ ಸಂಬಂಧಗಳು ಗಟ್ಟಿಯಾಗಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ವ್ಯವಸ್ಥೆ ಭದ್ರತೆಯನ್ನು ತಂದೀತು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಷಭ ರಾಶಿ

ಕಾರ್ಯರಂಗದಲ್ಲಿ ನಿರೀಕ್ಷಿತ ಅಭಿವೃದ್ಧಿ ಇಲ್ಲವಾದರೂ ನಿಭಾಯಿಸಿಕೊಂಡು ಹೋಗಬಹುದಾಗಿದೆ. ಆದರೂ ಸ್ಪಷ್ಟ ನಿರ್ಧಾರದ ಮೂಲಕ ಮುಂದುವರಿದಲ್ಲಿ ಅಡಚಣೆಗಳು ಕಡಿಮೆಯಾಗುತ್ತವೆ. ನಿಮ್ಮ ಕುಟುಂಬ ಹಾಗೂ ನಿಮ್ಮ ನಡುವಿನ ಸಂಬಂಧವನ್ನು ಗಟ್ಟಿಯಾಗಿರಿಸಿರಿ. ಸಾಂಸಾರಿಕವಾಗಿ ಹಿರಿಯರ ಸಲಹೆ ಅಗತ್ಯವಿರುತ್ತದೆ. ಮದುವೆಯಾಗ ಬಯಸುವವರು ಹೆಚ್ಚಿನ ಪ್ರಯತ್ನಕ್ಕೆ ಒತ್ತು ನೀಡಿದಲ್ಲಿ ಕಂಕಣ ಬಲದ ಸಾಧ್ಯತೆ ತಂದೀತು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಿಥುನ ರಾಶಿ

ಅನಗತ್ಯ ವಿಚಾರಗಳಿಂದ ದೂರವಿದ್ದಷ್ಟು ಉತ್ತಮ. ವ್ಯಾಪಾರ, ವ್ಯವಹಾರಗಳಲ್ಲಿ ನಿಮ್ಮ ಲೆಕ್ಕಾಚಾರ ಸರಿಯಾಗಲಿದೆ. ಒತ್ತಡಗಳೇ ನಿಮ್ಮನ್ನು ಚುರುಕಾಗಿಸಲಿವೆ. ನಿಮ್ಮ ಮನೋಕಾಮನೆಗಳು ಸದ್ಯದಲ್ಲೇ ಒಂದೊಂದಾಗಿ ನೆರವೇರಲಿವೆ. ಕಾರ್ಯ ಒತ್ತಡದಿಂದ ಸಂಗಾತಿಯ ಕಡೆ ಗಮನಹರಿಸಲು ಅವಕಾಶ ಇಲ್ಲವೇನೋ ಎಂಬಂತಾದೀತು. ಹೂಡಿಕೆಗಳು ಲಾಭದಾಯಕವಾಗಿ ಆರ್ಥಿಕ ಉನ್ನತಿಯನ್ನು ನೀಡಲಿವೆ. ವಾರಾಂತ್ಯದಲ್ಲಿ ಆತ್ಮೀಯರ ಆಗಮನ ನಿಮ್ಮ ಕಾರ್ಯಾನುಕೂಲಕ್ಕೆ ಇಂಬು ಕೊಡಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕರ್ಕಾಟಕ ರಾಶಿ

ವೃತ್ತಿರಂಗದಲ್ಲಿ ಎಷ್ಟೋ ಬಾರಿ ಅನುಭವಕ್ಕೆ ನಿಲುಕದ ಸಂಗತಿಗಳು ಎದುರಾಗಲಿವೆ. ಇದು ನಿಮ್ಮ ಸ್ವಂತ ಅಸ್ತಿತ್ವವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಪೂರಕವಾದೀತು. ಸಾಂಸಾರಿಕವಾಗಿ ನಿಮ್ಮವರ ಪ್ರೀತಿ, ವಿಶ್ವಾಸ, ಸಹಕಾರಗಳು ಮುನ್ನಡೆಗೆ ಸಾಧಕವಾಗಲಿವೆ. ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರದ ಗಟ್ಟಿತನ ಧೈರ್ಯ ಕೊಡಲಿದೆ. ಹಾಗೇ ಆರ್ಥಿಕವಾಗಿ ಋಣ ಪರಿಹಾರ ನಿಮ್ಮ ಸ್ವಾಭಿಮಾನವನ್ನು ಉಳಿಸಲಿದೆ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿವೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಿಂಹ ರಾಶಿ

ನಿರೀಕ್ಷಿಸಿದಂತೆ ಆರ್ಥಿಕ ಸ್ಥಿತಿಯು ಉತ್ತಮಗೊಂಡು ಸಂಸಾರ ರಥ ಸರಿದೂಗಿಸಬಹುದಾಗಿದೆ. ವೃತ್ತಿರಂಗದಲ್ಲಿ ಇತರರ ದೃಷ್ಟಿಕೋನವನ್ನು ಬದಲಾಯಿಸಲು ಸಾಧ್ಯವಾಗದು. ಕೆಲವೊಂದು ಸಮಸ್ಯೆಗಳನ್ನು ನೀವೇ ನಿಭಾಯಿಸಬೇಕಾದೀತು ಹಾಗೂ ಆತ್ಮವಿಮರ್ಶೆಗೂ ಇದು ಸಕಾಲ. ಕೌಟುಂಬಿಕವಾಗಿ ಹೆಚ್ಚಿನ ಸಹಕಾರವಿಲ್ಲವಾದರೂ ಉತ್ಸಾಹದ ಪ್ರತಿಕ್ರಿಯೆ ಕೂಡ ಸಿಗಲಾರದು. ಅವಿವಾಹಿತರಿಗೆ ವೈವಾಹಿಕ ಸಂಬಂಧಗಳು ಕುದುರಿ ಮಾಂಗಲ್ಯ ಕಾರ್ಯಕ್ಕೆ ನಾಂದಿ ಹಾಡಲಿವೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕನ್ಯಾ ರಾಶಿ

ಸ್ಪಷ್ಟ ನಿರ್ಧಾರಗಳು ವೃತ್ತಿರಂಗದಲ್ಲಿ ಹೆಚ್ಚಿನ ಭದ್ರತೆಯನ್ನು ತಂದುಕೊಡಲಿವೆ. ಮುಖ್ಯವಾಗಿ ವೈಯಕ್ತಿಕ ಜೀವನದತ್ತ ಮನಸ್ಸನ್ನು ತಿರುಗಿಸುವುದು ಒಳಿತು. ಅವಿವಾಹಿತರು ವೈವಾಹಿಕ ಸಂಬಂಧಗಳ ಬಗ್ಗೆ ಹೊಂದಾಣಿಕೆ ತೋರಿಸಿದಲ್ಲಿ ಕಂಕಣಬಲದ ಭಾಗ್ಯ ಲಭಿಸಲಿದೆ. ದುಃಖ-ಸುಖಾನುಪಾತದಲ್ಲಿ ಸುಖಾಂಶ ಅಧಿಕವಾದೀತು. ವಿದ್ಯಾರ್ಥಿಗಳು ಶ್ರದ್ಧೆ ತೋರಿಸಬೇಕಾದೀತು. ಕೆಲವೊಮ್ಮೆ ಒತ್ತಡಗಳೇ ನಿಮ್ಮನ್ನು ಚುರುಕಾಗಿಸಲಿವೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ತುಲಾ ರಾಶಿ

ನಿರ್ಧಾರಗಳು ಅಚಲವಾಗಿರದೆ ಋಣಾತ್ಮಕ ಚಿಂತೆಗಳು ನಿಮ್ಮನ್ನು ಕಾಡಲಿವೆ. ಇದಕ್ಕಾಗಿ ಸ್ಪಷ್ಟ ನಿರ್ಧಾರವನ್ನು ಕೈ ಗೊಳ್ಳಲು ಮನಸ್ಸು ಮಾಡಬೇಕಾದೀತು. ಭವಿಷ್ಯ ನಿಮ್ಮನ್ನು ಕಾಯಲಿದೆ. ಸದುಪಯೋಗಿಸಿಕೊಳ್ಳಿ. ಸಾಮಾಜಿಕವಾಗಿ ಪ್ರತಿಷ್ಠಿತರ ಒಡನಾಟ ಕಾರ್ಯಾನುಕೂಲಕ್ಕೆ ಸಾಧಕವಾದೀತು. ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಆಗಾಗ ಸಂಚಾರ ದೇಹಾಯಾಸಕ್ಕೆ ಕಾರಣವಾಗಿ ಪ್ರತಿಕೂಲತೆಯನ್ನು ತೋರಿಸಲಿದೆ. ಕಾಳಜಿ ವಹಿಸಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಶ್ಚಿಕ ರಾಶಿ

ವೃತ್ತಿರಂಗದಲ್ಲಿ ಆಗಾಗ ಏರುಪೇರುಗಳು ತೋರಿಬಂದರೂ ನಿಮ್ಮ ಮನಸ್ಸಿನಾಳದ ಸುಪ್ತ ಬಯಕೆಗಳು ಸದ್ಯದಲ್ಲೇ ಪ್ರಕಟವಾಗಲಿವೆ. ಯಾವುದೇ ವಾದ-ವಿವಾದಗಳಿಗೆ ಸಿಲುಕದೆ ಮಂದುವರಿಯಿರಿ. ಅಸಾಧ್ಯವಾದದ್ದು ಸಾಧ್ಯವಾಗಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಯೋಚಿಸಿ ಚಿಂತಿಸಿ ಮುಂದುವರಿಯಿರಿ. ಸಾಂಸಾರಿಕವಾಗಿ ಆಗಾಗ ಒಣಜಗಳ, ಅವಮಾನ, ಮುಜುಗರವನ್ನು ಅನುಭವಿಸುವಂತಾದೀತು. ಆರೋಗ್ಯ ಭಾಗ್ಯಕ್ಕಾಗಿ ಹೆಚ್ಚಿನ ಕಾಳಜಿ ವಹಿಸಿದಲ್ಲಿ ಆಸ್ಪತ್ರೆಯ ಅಲೆದಾಟ ತಪ್ಪಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಧನುಸ್ಸು ರಾಶಿ

ನಿವೃತ್ತರು ಪ್ರವೃತ್ತಿಯಲ್ಲಿ ತೊಡಗುವುದು ಉತ್ತಮವೆನಿಸಲಿದೆ. ರಾಜಕೀಯ ವರ್ಗದಲ್ಲಿ ಚಾಣಾಕ್ಷತನ ಇರುವವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಬಹುದು. ಸಾಮಾಜಿಕವಾಗಿ ವಿವಿಧ ಚಟುವಟಿಕೆಗಳಲ್ಲಿ ಆಸಕ್ತಿ ತೋರಿಬರಲಿದೆ. ಬೇಸಾಯ, ಕೃಷಿ ಅಭಿರುಚಿ ಮೈಗೂಡಿಸಿಕೊಂಡು ಮುಂದುವರಿದಲ್ಲಿ ಬೇಸಾಯಗಾರರಿಗೆ ಹೆಚ್ಚಿನ ಲಾಭದಾಯಕ ಆದಾಯವು ತೋರಿಬರುವುದು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಸಮರ್ಪಣಾಭಾವ ಸಾರ್ಥಕ್ಯ ತಂದುಕೊಡಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಕರ ರಾಶಿ

ವೃತ್ತಿರಂಗದಲ್ಲಿ ಜವಾಬ್ದಾರಿಯಿಂದ ದುಡಿಯುವ ನಿಮಗೆ ತಡವಾಗಿಯಾದರೂ ಪ್ರತಿಫ‌ಲವು ನಿಶ್ಚಿತ. ನಿರ್ವಹಿಸುವ ಕೆಲಸಕಾರ್ಯಗಳು ಹಂತಹಂತವಾಗಿ ಚಾಲ್ತಿಗೆ ಭದ್ರತೆಯನ್ನು ನೀಡಲಿವೆ. ಕೆಲವೊಮ್ಮೆ ಯಾಂತ್ರಿಕ ಕ್ರಿಯೆಗಳಿಂದಾಗಿ ಉತ್ಸಾಹ ಕುಗ್ಗಲಿದೆ. ಅವಿವಾಹಿತರು ಯೋಗ್ಯ ವೈವಾಹಿಕ ಸಂಬಂಧಗಳ ಕುದುರುವಿಕೆ ವಿಚಾರದಲ್ಲಿ ಹೊಂದಾಣಿಕೆಯಿಂದ ಮುಂದುವರಿದಲ್ಲಿ ಕಾರ್ಯಸಾಧನೆಯಾಗಲಿದೆ. ನಿರುದ್ಯೋಗಿಗಳು ಪ್ರಯತ್ನ ಬಲವನ್ನು ಮುಂದುವರಿಸಿದಲ್ಲಿ ಯಶಸ್ಸು ಸಿಗಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕುಂಭ ರಾಶಿ

ವೃತ್ತಿರಂಗದಲ್ಲಿ ಅಭಿವೃದ್ಧಿಯು ತೋರಿಬಂದರೂ ತುಸು ಬದಲಾವಣೆಗೆ ನೀವು ಸಿದ್ಧರಾಗಬೇಕಾದೀತು. ಹೊಸತನ ಕಾರ್ಯಸಾಧನೆಗೆ ಪೂರಕವಾಗಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಲಾಭದಾಯಕವಾದರೂ ಕಳಂಕಿತರೊಡನೆ ವ್ಯವಹರಿಸಬೇಕಾದ ಸಂದಿಗ್ಧತೆ, ಆತಂಕ ಉಂಟಾದೀತು. ಸಾಂಸಾರಿಕವಾಗಿ ಹೆಚ್ಚಿನ ಹೊಂದಾಣಿಕೆ ಮಾನಸಿಕ ನೆಮ್ಮದಿಗೆ ಕಾರಣವಾದೀತು. ವಿದ್ಯಾರ್ಥಿಗಳಿಗೆ ನಿರೀಕ್ಷೆಯ ಫ‌ಲ ಮುನ್ನಡೆಗೆ ಪೂರಕವಾದೀತು. ನಿರುದ್ಯೋಗಿಗಳಿಗೆ ಅನುಕೂಲವಾದ ಅವಕಾಶಗಳು ಒದಗಿಬಂದು ಇಷ್ಟಾರ್ಥ ಸಿದ್ಧಿಸಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೀನ ರಾಶಿ

ವೃತ್ತಿರಂಗದಲ್ಲಿ ಬದಲಾವಣೆಗೆ ಸಿದ್ಧರಾಗಿರಿ. ಇದು ಕಾರ್ಯ ಸಾಧನೆಗೆ ಸಾಧಕವಾದೀತು. ಹಾಗೇ ಸಮಸ್ಯೆಗಳು, ವಿವಾದಗಳು ತಮ್ಮಿಂದ ತಾವೇ ಉಪಶಮನವಾಗಲಿವೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಭಾವೋದ್ವೇಗಕ್ಕೆ ಈಡಾಗದಂತೆ ಕಾಳಜಿ ವಹಿಸುವುದು ಉತ್ತಮ. ಆರ್ಥಿಕವಾಗಿ ಚೇತರಿಕೆ ತೋರಿಬಂದರೂ ಖರ್ಚುವೆಚ್ಚಗಳ ಲೆಕ್ಕಾಚಾರ ತಪ್ಪಾದೀತು. ಹಾಗೇ ಹೂಡಿಕೆಯಲ್ಲಿ ಯೋಚಿಸಿ ಮುನ್ನಡೆಯಿರಿ. ವೈವಾಹಿಕ ಅನ್ವೇಷಣಾ ಕಾರ್ಯಗಳು ಹಿನ್ನಡೆಯನ್ನು ಅನುಭವಿಸಿ, ಅವಿವಾಹಿತರಿಗೆ ಉತ್ಸಾಹ ಕುಗ್ಗಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ. 
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ. 
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.  9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending