ನಿತ್ಯ ಭವಿಷ್ಯ
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು : ಕರೆಮಾಡಿ | 29-02-2020 ಶನಿವಾರ
ಶತ್ರುಬಾಧೆ ಯಂತಹ ಸಮಸ್ಯೆ ನೀವು ಅನುಭವಿಸುತ್ತಿದ್ದರೆ ಪ್ರತಿನಿತ್ಯ ಇಪ್ಪತ್ತೊಂದು ಬಾರಿ ಕಾಳಿಮಾತೆಯ ಸರ್ವ ರಕ್ಷಾಮಂತ್ರವನ್ನು ಜಪಿಸುವುದು ಒಳಿತು.
ಓಂ ಕ್ರೀಂ ಘೋರಕಾಳಿ ಸರ್ವ ಶತ್ರು ಸ್ತಂಭನಂ
ಮಮ ರಕ್ಷಣಂ ಕುರುಕುರು ಸ್ವಾಹ॥
ಈ ಮಂತ್ರದಿಂದ ಶತ್ರುಗಳು ಮೆತ್ತಗಾಗಿ ಮೂಲೆ ಸೇರುವರು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ 9964584883
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883
ಮೇಷ ರಾಶಿ
ಸಮಯ ಪ್ರಜ್ಞೆ ಇಲ್ಲದೆ ಊಟೋಪಚಾರ ಸೇವನೆಯಿಂದ ಉದರ ದೋಷ ಬಳಲುವ ಸಾಧ್ಯತೆ. ಪ್ರಯತ್ನದಲ್ಲಿ ಹಿನ್ನಡೆ. ಕುಟುಂಬದಲ್ಲಿ ಮನಸ್ತಾಪ ಹಾಗೂ ಕಲಹ ವೈಮನಸ್ಸು ತಲೆದೋರಬಹುದು. ಶಾಂತಚಿತ್ತದಿಂದ ಎಲ್ಲವೂ ಆಲಿಸುವುದು ಉತ್ತಮ. ವಿಪರೀತ ಕೆಲಸಗಳಿಂದಾಗಿ ಒತ್ತಡ,ಕೆಲಸಕಾರ್ಯಗಳಲ್ಲಿ ತಪ್ಪಾಗುವ ಸಾಧ್ಯತೆ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗಬಹುದು. ಹಿರಿಯರ ಸಕಾಲಿಕ ನೆರವಿನ ಭರವಸೆ ಯಿಂದಾಗಿ ತೃಪ್ತಿ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಷಭ ರಾಶಿ
ತಮ್ಮ ಪ್ರಾಮಾಣಿಕ ಪ್ರಯತ್ನದಲ್ಲಿ ಯಶಸ್ಸು ಕಾಣುವಿರಿ. ಮಕ್ಕಳ ಮದುವೆ ಕಾರ್ಯಗಳು ನಿಗದಿ ಮಾಡುವ ಸಮಯ ಬಂದಿದೆ. ಆತ್ಮೀಯ ಸದಸ್ಯರು ಕುಟುಂಬ ಸೇರಲಿದ್ದಾರೆ. ಯಂತ್ರೋಪಕರಣಗಳ ಉದ್ಯಮ ಮಾಡುವವರಿಗೆ ಯಶಸ್ಸು. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ. ಗ್ರಾಮ ಪಂಚಾಯತಿಯಲ್ಲಿ ನಿಮಗೆ ನ್ಯಾಯ ಸಿಗಲಿದೆ. ಕೆಲಸಕಾರ್ಯಗಳು ತೀವ್ರತೆ ಕಾಣಲಿದೆ. ಸಂಗಾತಿ ಮುದ ನೀಡುವ ಸಮಯ ಬಂದಿದೆ. ಮರದ ವ್ಯಾಪಾರಿಗಳಿಗೆ ಕಿರಿಕಿರಿ. ಪ್ರೇಮಿಗಳಿಗೆ ಸರಸ-ಸಲ್ಲಾಪ ಗಳಿಂದ ಮನೋವೇದನೆ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಿಥುನ ರಾಶಿ
ಉದ್ಯೋಗ ಹುಡುಕಾಟ ಮಾಡುವವರಿಗೆ ಯಶಸ್ಸು ಕಾಣಲಿದೆ. ಹಿರಿಯರೊಂದಿಗೆ ಮನಸ್ತಾಪ ದೂರಸರಿಯುವುದು.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ. ಮಕ್ಕಳ ಸ್ವಭಾವದಿಂದ ಮನಸ್ತಾಪ. ಪತಿ-ಪತ್ನಿ ಸದಾ ಕಿರಿಕಿರಿ. ಕುಟುಂಬ ಸದಸ್ಯರ ವಿರೋಧದ ನಡುವೆಯೂ ಕೆಲಸ ಮಾಡುವಿರಿ. ಅನಗತ್ಯ ಖರ್ಚಿನಿಂದ ಮನಸ್ತಾಪ. ಆತ್ಮೀಯ ಸ್ನೇಹಿತರಿಂದ ಕೊಂಚ ನೆಮ್ಮದಿ. ಮಕ್ಕಳ ಸಂತಾನದ ಸಮಸ್ಯೆ ತಮಗೆ ಕಾಡಲಿದೆ. ಸಂಗಾತಿಯೊಂದಿಗಿನ ಮಧುರ ಸಂಬಂಧ ಅನುಭವಿಸಿ ಪಚ್ಚಾತಾಪ ಪಡುವಿರಿ. ಸಹ ಕುಟುಂಬದೊಂದಿಗೆ ಪ್ರವಾಸ. ಕೃಷಿಕರಿಗೆ ಉತ್ತಮ ಧನಲಾಭ ವಾಗಲಿದೆ. ದಿನಸಿ ವ್ಯಾಪಾರಸ್ಥರಿಗೆ ಪ್ರಗತಿ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕಟಕ ರಾಶಿ
ಮಕ್ಕಳ ವಿಷಯದಲ್ಲಿ ಅಸಮಾಧಾನ ಉಂಟಾಗುವ ಸಾಧ್ಯತೆ. ಆತ್ಮಬಲದ ಕೊರತೆಯಿಂದಾಗಿ ಉದ್ಯೋಗದಲ್ಲಿ ನಿರಾಸಕ್ತಿ. ವಿರೋಧಿಗಳ ಹಿಮ್ಮೆಟ್ಟಿಸುವಲ್ಲಿ ವಿಫಲ. ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ. ಆರೋಗ್ಯದಲ್ಲಿ ಸುಧಾರಣೆ. ಅಕಾಲ ಭೋಜನದಿಂದ ಅಲಸ್ಯ. ದೇವತಾಕಾರ್ಯದಲ್ಲಿ ಭಾಗವಹಿಸುವ ಸಾಧ್ಯತೆ. ಕೆಲಸಕಾರ್ಯಗಳಲ್ಲಿ ಸಣ್ಣಪುಟ್ಟ ಎಡರುಗಳು ಬರುವವು. ಹಣಕಾಸಿನ ವ್ಯವಹಾರಗಳಲ್ಲಿ ನಷ್ಟ ಸಂಭವಿಸಬಹುದು. ಹಿರಿಯರೊಂದಿಗೆ ಸಮಾಲೋಚನೆಯಿಂದ ತೃಪ್ತಿ. ವಿಚ್ಛೇದನದ ಮಕ್ಕಳ ಮರು ಮದುವೆ ಬಗ್ಗೆ ಚಿಂತನೆ ಮಾಡುವಿರಿ. ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆಯಲ್ಲಿ ಉತ್ತಮ ಲಾಭ. ಪ್ರೇಮಿಗಳಲ್ಲಿ ಒಡನಾಟದ ಮನಸ್ತಾಪ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸಿಂಹ ರಾಶಿ
ಕೆಲಸಕಾರ್ಯಗಳು ಸರಳವಾಗಿ ಜರುಗುವವು. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಸಿಹಿ ಸುದ್ದಿ ಕೇಳಲಿದ್ದೀರಿ. ತುಂಬಾ ದಿನದಿಂದ ಪೆಂಡಿಂಗ್ ಇರುವ ವ್ಯವಹಾರ ಇಂದು ಯಶಸ್ಸು ಕಾಣುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ. ಮಕ್ಕಳ ವಿಷಯದಲ್ಲಿ ಬೇಸರ ಉಂಟು ಮಾಡಬಹುದು. ಅಳಿಯನ ಭವಿಷ್ಯದ ಬಗ್ಗೆ ಚಿಂತನೆ ಕಾಡಲಿದೆ. ಮಕ್ಕಳ ಸಂತಾನದ ಫಲ ನಿರೀಕ್ಷಣೆ ಮಾಡುವಿರಿ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವ ಚಿಂತನೆ ಮತ್ತು ಯಶಸ್ಸು ಕಾಣುವಿರಿ. ಪತಿ-ಪತ್ನಿ ಸೇರಿ ಮನೆ ಕಟ್ಟುವ ಚಿಂತನೆ. ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕನ್ಯಾ ರಾಶಿ
ಪ್ರೇಮಿಗಳಲ್ಲಿ ಸಣ್ಣಪುಟ್ಟ ವಿಷಯಗಳಲ್ಲಿ ಮನಸ್ತಾಪ ಅತಿದೊಡ್ಡ ಆಗುವುದು. ಪ್ರಯತ್ನ ಮಾಡುವವರಿಗೆ ಕೆಲಸಕಾರ್ಯಗಳು ಸುಗಮ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪ್ರಗತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ. ಉದ್ಯೋಗದಲ್ಲಿ ಪ್ರಗತಿ. ಮನೆಯವರ ಆರೋಗ್ಯದಲ್ಲಿ ವ್ಯತ್ಯಯ.ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಒಲವು. ವಜ್ರಾಭರಣ ವ್ಯವಹಾರದಲ್ಲಿ ಉತ್ತಮ ಲಾಭ. ಸಾಮಾಜಿಕ ಕೆಲಸಗಳು ಕೀರ್ತಿ ತರುತ್ತವೆ. ದೂರದಿಂದ ಆತ್ಮೀಯರು ಮನೆಗೆ ಬರುವರು. ಲೇವಾದೇವಿಗಾರರ ಉತ್ತಮ ಲಾಭ ಸಿಗಲಿದೆ. ಸಾಲಗಾರರು ತಮ್ಮ ಸಾಲವನ್ನು ತೀರಿಸಲು ಒಂದು ಹಂತಕ್ಕೆ ಬಂದಿರುವಿರಿ, ಇನ್ನು ಮುಂದೆ ತಮಗೆ ಶುಭವಾಗಲಿದೆ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ತುಲಾ ರಾಶಿ
ಮಾತಾಪಿತೃ ಮತ್ತು ಸೂತರ ನಡುವೆ ಮನಸ್ತಾಪ. ಸೊಸೆಗೆ ಅತ್ತೆಯಿಂದ ಮನಸ್ತಾಪ. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಮಧ್ಯಸ್ಥಿಕೆ ಜನರಿಂದ ಅಶಾಂತಿ. ಹಣಕಾಸಿನ ವ್ಯವಹಾರದಲ್ಲಿ ಏರುಪೇರು. ಆಸ್ತಿ ಖರೀದಿಯ ವಿಚಾರ ಯಶಸ್ಸು. ಹೊಸ ಮನೆ ಕಟ್ಟುವ ವಿಚಾರ ಯಶಸ್ಸು ಕಾಣುವಿರಿ. ಪ್ರೀತಿಸಿ ಮದುವೆಯಾದ ಪ್ರೇಮಿಗಳಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಯಾಗುವುದು.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಶ್ಚಿಕ ರಾಶಿ
ಹೊಸ ವಾಹನ ಖರೀದಿ ಚಿಂತನೆ. ಹಳೆಯ ನಿವೇಶನ ನವೀಕರಣ ಮಾಡುವ ಯೋಜನೆ ಯಶಸ್ಸು. ಆಧುನೀಕರಣ ವ್ಯವಸಾಯಕ್ಕೆ ಒಲವು ತೋರಿಸಿ. ಕೃಷಿ ಯಂತ್ರೋಪಕರಣಗಳ ಖರೀದಿಗೆ ಚಿಂತನೆ. ಸಾಲದಿಂದ ಹಾಗೂ ಜಾಮೀನ್ದಿಂದ ಮನಸ್ತಾಪ. ನಿಮ್ಮ ಮನೆಯಲ್ಲಿ ಶುಭ ಕಾರ್ಯ ನೆರವೇರುವುದು. ಮಕ್ಕಳ ಆರೋಗ್ಯದ ಸಮಸ್ಯೆ ಕಾಡಲಿದೆ.
ಪತಿ-ಪತ್ನಿ ಮಧ್ಯೆ ಅನುಮಾನ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಧನಸ್ಸು ರಾಶಿ
ದೂರದ ಪ್ರಯಾಣ ಬೇಡ. ಮನೆಯಲ್ಲಿನ ವಾಸ್ತು ದೋಷದಿಂದ ಕಿರಿಕಿರಿ. ಖರೀದಿಸಿರುವ ನಿವೇಶನದಲ್ಲಿ ಗೊಂದಲ. ವ್ಯಾಪಾರಸ್ಥರಿಗೆ ಲಾಭ ಮತ್ತು ಅಧಿಕ ಅವಕಾಶಗಳು ಪ್ರಾಪ್ತಿ. ಆರೋಗ್ಯದಲ್ಲಿ ಶ್ವಾಸ ಸಂಬಂಧಿತ ಕಾಯಿಲೆಗಳು. ಶತ್ರುಗಳ ಭಯ. ಹಿರಿಯರಿಗೆ ಹಣವ್ಯಯ.ವ್ಯಾಪಾರಿಗಳಿಗೆ ಅನುಕೂಲ. ಪ್ರೇಮಿಗಳ ಮಧ್ಯೆ ಚಂಚಲ ಮನಸ್ಸು.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಕರ ರಾಶಿ
ಸಮಾಜದಲ್ಲಿ ಗಣ್ಯ ವ್ಯಕ್ತಿಗಳ ಭೇಟಿಯಿಂದ ಸಂತಸ. ಪ್ರಯಾಣದಲ್ಲಿ ಅಪಘಾತದ ಭಯ. ಮಕ್ಕಳ ಅಪರಾಧಗಳಿಂದ ಸಮಾಜದಲ್ಲಿ ಅಪಮಾನ. ಅಕ್ಕ ಪಕ್ಕದವರಿಂದ ಕಿರಿಕಿರಿ. ಉದ್ಯೋಗದಲ್ಲಿ ಒತ್ತಡ. ಅಧಿಕ ಶ್ರಮದಿಂದ ಕೆಲಸ ಕಾರ್ಯ ಪೂರ್ಣ ಮನಸ್ಸಿಗೆ ಬೇಸರ. ಪತ್ನಿಯ ವೈರಾಗ್ಯ ಮನೋಭಾವ. ಕೆಲವರಿಗೆ ಸ್ತ್ರೀ ವರ್ಗದಿಂದ ಆಕಸ್ಮಿಕ ಧನಲಾಭ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕುಂಭ ರಾಶಿ
ಆರ್ಥಿಕ ಪರಿಸ್ಥಿತಿಯಿಂದ ಸ್ವಲ್ಪ ಚೇತರಿಕೆ ಸಮಯ. ಉದ್ಯೋಗಿಗಳಿಗೆ ಅಧಿಕಾರಿಗಳ ಸಹಾಯದಿಂದ ಮನಸ್ಸಿಗೆ ಮುದ. ಉದ್ಯೋಗ ಹುಡುಕಾಟ ಮಾಡುವರಿಗೆ ಒಳ್ಳೆಯ ದಿನ ಬಂದಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನ ಹಾಗೂ ಶ್ರಮಕ್ಕೆ ಇಂದು ಶುಭದಾಯಕ. ಸಾಲದಿಂದ ಮುಕ್ತಿ ಹೊಂದುವಿರಿ. ಕೃಷಿಕರಿಗೆ ಧನಲಾಭ. ಪರಸ್ತ್ರೀ ಮೋಜು ಮಸ್ತಿಯಿಂದ ಅವಮಾನ ಹಾಗೂ ಮನಸ್ತಾಪ. ಮಕ್ಕಳ ಮದುವೆ ಚಿಂತನೆ ಸಮಸ್ಯೆ ಕಾಡಲಿದೆ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆ. ಪ್ರೇಮಿಗಳ ಕನಸು ನನಸಾಗಲು ಹರಸಾಹಸ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮೀನ ರಾಶಿ
ಹಣ ಇದ್ದರೂ ಮನಸ್ಸಿಗೆ ನೆಮ್ಮದಿ ಇಲ್ಲ. ತಪ್ಪು ನಿರ್ಧಾರಗಳು ಅಧಿಕವಾಗುತ್ತವೆ. ಅನಾವಶ್ಯಕವಾಗಿ ಮನಸ್ತಾಪ. ಜೀವನ ಮತ್ತು ಕುಟುಂಬದ ಬಗ್ಗೆ ತೀವ್ರ ಬೇಸರ. ಕಾರ್ಯವಿಳಂಬ. ವಿವಾಹದಲ್ಲಿ ವಿಳಂಬ . ಸರಕಾರಿ ಸಂದರ್ಶನದಲ್ಲಿ ಅಪಯಶ. ಉದ್ಯೋಗಸ್ಥರಿಗೆ ಹಿಂಬಡ್ತಿ. ಸಹೋದ್ಯೋಗಿಗಳ ಕಿರಿಕಿರಿ. ವ್ಯಾಪಾರಸ್ಥರಿಗೆ ಸಾಲಬಾಧೆ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 9964584883

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


