ನಿತ್ಯ ಭವಿಷ್ಯ
ಬುಧವಾರ ಭವಿಷ್ಯ ವಾಣಿ ಶ್ರೀ ದುರ್ಗಾ ಪರಮೇಶ್ವರಿ ಅನುಗ್ರಹ ಸಮಸ್ಯೆಗಳ ಪರಿಹಾರ ಮಾರ್ಗದರ್ಶನ : 07/08/2019
ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅನುಗ್ರಹ ಶಕ್ತಿಯಿಂದ ಯಂತ್ರ ಮಂತ್ರ ತಂತ್ರದಿಂದ ನಿಮ್ಮ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಮಾಡಿಕೊಡಲಾಗುತ್ತದೆ. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.
ನಿತ್ಯ ಭವಿಷ್ಯ
ಮೇಷ ರಾಶಿ
ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಕಿರಿಕಿರಿ ನಿಮ್ಮ ಏಕಾಗ್ರತೆಗೆ ತೊಂದರೆ ಆಗಬಹುದು. ನಿಮ್ಮ ವಿದ್ಯೆಯಲ್ಲಿ ಅಸಭ್ಯ ವರ್ತನೆ ಪೋಷಕರಿಗೆ ನೋವುಂಟುಮಾಡುತ್ತದೆ. ಶತ್ರುಗಳು ನಿಮ್ಮನ್ನು ಸಂಪರ್ಕಿಸಬಹುದು. ನಿಮ್ಮ ಸಂಗಾತಿಯೊಂದಿಗೆ ಸಂತೋಷದ ಕ್ಷಣವನ್ನು ಕಳೆಯುವಿರಿ. ಮದುವೆಗೆ ಕೆಲವುಸಂಬಂಧಗಳುತೊಂದರೆಯನ್ನುಂಟುಮಾಡುತ್ತದೆಆರೋಗ್ಯದಲ್ಲಿ ಏರುಪೇರು ಕಂಡುಬರುತ್ತದೆ. ಧನಲಾಭ ಕಡಿಮೆ ಇದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ವೃಷಭ ರಾಶಿ
ಉದ್ಯೋಗದಲ್ಲಿ ನೀವು ಮಾಡುವ ಕೆಲಸಗಳಿಗೆ ಬೇರೆಯವರು ಗೌರವ ಮತ್ತು ಲಾಭಗಳನ್ನು ಪಡೆಯಲು ಮುಂದಾಗುತ್ತಾರೆ. ವೈವಾಹಿಕ ಜೀವನದಲ್ಲಿ ಕಠಿಣ ವಿಷಯಗಳು ಕಂಡುಬರುತ್ತದೆ. ನಿಮ್ಮ ಧರ್ಮಕಾರ್ಯಗಳಿಗೆ ಅತ್ಯುತ್ತಮ ದಿನವಾಗಿದೆ. ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣವನ್ನು ಸಂಗ್ರಹಿಸಿ ಇಡುವುದು ಉತ್ತಮ. ವಿವಾಹದ ವಿಚಾರಗಳು ಕಂಡುಬರುತ್ತದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ (ಪರಿಹಾರಕ್ಕೆ ಕರೆಮಾಡಿ) 9900494333.
ಮಿಥುನ ರಾಶಿ
ನೀವು ಹೆಚ್ಚಾಗಿ ಔಷಧಿ ಅಂಗಡಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ವೈದ್ಯರ ಸಲಹೆ ಪಡೆಯುವುದು ಉತ್ತಮ. ನಿಮ್ಮ ಜೀವನ ಸಂಗಾತಿಯನ್ನು ಭೇಟಿ ಮಾಡಲು ಉತ್ತಮ ಅವಕಾಶವಿದೆ. ಉದ್ಯೋಗಕ್ಕಾಗಿ ಹೊಸ ಅವಕಾಶಗಳನ್ನು ಹೊಂದುವಿರಿ. ಕುಟುಂಬದ ಜೀವನದಲ್ಲಿ ಲಕ್ಷ್ಮಿ ಭಾಗ್ಯವು ತುಂಬಾ ಮುಖ್ಯವಾಗಿದೆ ಇದರಿಂದ ನಿಮ್ಮ ಮನೆಯನ್ನು ಶುಚಿಯಾಗಿ ಇಡಬೇಕು. ಶತ್ರುಗಳು ನಿಮ್ಮ ಬಗ್ಗೆ ಯೋಚನೆ ಮಾಡುತ್ತಾ ಇರುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಕರ್ಕಾಟಕ ರಾಶಿ
ಉದ್ಯೋಗಸ್ಥರಿಗೆ ಕೆಲಸದ ನಡುವೆ ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಲು ಪ್ರಯತ್ನಿಸಬೇಕು. ಆರೋಗ್ಯದಲ್ಲಿ ಶೀತದ ತೊಂದರೆಗಳು ಇರುತ್ತವೆ. ಮನೆಯಲ್ಲಿ ಕೂಡಿಟ್ಟ ಹಣವು ಈ ದಿನ ನಿಮಗೆ ಲಾಭವಾಗಿ ಉಪಯೋಗ ಆಗುತ್ತದೆ. ಪ್ರೀತಿಯಲ್ಲಿ ಹೆಚ್ಚುವರಿ ಕಾಳಜಿಯನ್ನು ತೋರಿಸಬೇಕಾಗುತ್ತದೆ. ಮನೆಯಲ್ಲಿ ಹಬ್ಬದ ವಾತಾವರಣಕ್ಕೆ ಮುಂದಾಗುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಸಿಂಹ ರಾಶಿ
ಉದ್ಯೋಗದಲ್ಲಿ ನಿಮ್ಮ ದಿನನಿತ್ಯ ಕೆಲಸಕ್ಕಿಂತ ಹೆಚ್ಚುವರಿ ಕೆಲಸಗಳು ಒದಗಿಬರುತ್ತದೆ. ಅದನ್ನು ಒಪ್ಪಿಕೊಳ್ಳಲು ಯೋಚನೆಗಳು ಮಾಡಬೇಕಾಗುತ್ತದೆ. ನಿಮ್ಮನ್ನು ತನ್ನ ಜೀವಕ್ಕಿಂತಲೂ ಹೆಚ್ಚು ಪ್ರೀತಿಸುವ ಸಂಗಾತಿಯ ಬಗ್ಗೆ ಗಮನ ನೀಡಬೇಕು. ಕುಟುಂಬದವರ ಮೇಲೆ ಹೆಚ್ಚಾಗಿ ಹಣಕಾಸಿನ ಒತ್ತಡ ಹಾಕಬೇಡಿ. ವೈದ್ಯರಿಂದ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಚೇತರಿಕೆ ಕಾಣಬಹುದು. ವೈರಿಗಳ ಬಗ್ಗೆ ಚಿಂತಿಸುವ ಅವಶ್ಯಕತೆ ಇರುವುದಿಲ್ಲ.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಕನ್ಯಾ ರಾಶಿ
ಸಹೋದ್ಯೋಗಿಗಳ ಸಹಾಯಕ್ಕೆ ಮುಂದಾಗುತ್ತಿರಿ. ಒಳ್ಳೆಯ ಬಾಂಧವ್ಯವನ್ನು ಬೆಳೆಸಿಕೊಳ್ಳಬಹುದು. ಕುಟುಂಬದ ಕಾರ್ಯಗಳಲ್ಲಿ ಹೊಸ ಸಮಸ್ಯೆಗಳು ಉದ್ಭವವಾಗಿ ಕಾಣಿಸಿಕೊಳ್ಳುತ್ತವೆ. ದೂರದ ಪ್ರಯಾಣವನ್ನು ಮಾಡುವಿರಿ. ನಿರೀಕ್ಷೆಯಂತೆ ಹಣದ ಲಾಭ ನಿಮಗೆ ಬರುವುದಿಲ್ಲ. ಆಹಾರದಲ್ಲಿನ ವ್ಯತ್ಯಾಸದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ದಂಪತಿಯಲ್ಲಿ ಸುಖ ಬಾಂಧವ್ಯ ಇರುತ್ತದೆ.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ತುಲಾ ರಾಶಿ
ಬಹಳ ದಿನಗಳಿಂದ ಕಾಯುತ್ತಿದ್ದ ನಿಮ್ಮ ಕೆಲಸವು ಈ ದಿನ ಈಡೇರುವುದು ನಿಮಗೆ ಖುಷಿಯನ್ನು ತರುತ್ತದೆ. ಸ್ನೇಹಿತರ ಮಧ್ಯದಲ್ಲಿ ಹಣದ ವಿಷಯವಾಗಿ ಮಧ್ಯಸ್ಥಿಕೆಯನ್ನು ಮಾಡುವುದು ಉತ್ತಮವಾಗಿರುವುದಿಲ್ಲ. ಕುಟುಂಬದ ಸದಸ್ಯರೊಂದಿಗಿನ ಸಂತೋಷದ ಪ್ರಯಾಣ ನಿಮಗೆ ಸಮಾಧಾನ ನೀಡುತ್ತದೆ. ಅಕ್ಕಪಕ್ಕದವರ ಜಗಳ ನಿಮ್ಮ ಮನಸ್ಸು ಕೆಡಿಸುತ್ತದೆ. ಮದುವೆ ವಿಷಯದಲ್ಲಿ ಹುಡುಕಾಟ ಉತ್ತಮ ಲಾಭವಿದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ವೃಶ್ಚಿಕ ರಾಶಿ
ವಿದ್ಯಾಭ್ಯಾಸದಲ್ಲಿ ನಿಮ್ಮ ಮಕ್ಕಳು ನಿಮ್ಮ ಇಚ್ಛೆಯಂತೆ ನಡೆದುಕೊಳ್ಳುವುದಿಲ್ಲ. ಇದು ನಿಮಗೆ ಕೋಪ ಬರುತ್ತದೆ. ನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು ಹೊಗಳಬಹುದು. ಚೆನ್ನಾಗಿ ಅರ್ಥಮಾಡಿಕೊಳ್ಳದೆ ಕುಟುಂಬದಲ್ಲಿ ಹೆಚ್ಚು ಮಾತನಾಡಬೇಡಿ. ಉದ್ಯೋಗದಲ್ಲಿ ಕೆಲಸದ ಗಡಿಬಿಡಿ ಕಂಡುಬರುತ್ತದೆ. ಅನಾರೋಗ್ಯವು ನಿಮ್ಮ ಮನಸ್ಸನ್ನು ಕೆಡಿಸುತ್ತದೆ. ಧನಲಾಭ ಕಡಿಮೆ ಇದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಧನಸ್ಸು ರಾಶಿ
ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣವನ್ನು ತರುವುದು. ಉದ್ಯೋಗದಲ್ಲಿ ಮಂಕು ಕವಿದ ವಾತಾವರಣ ನಿಮ್ಮದಾಗುತ್ತದೆ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಪ್ರಗತಿಗೆ ಅಡ್ಡಿಪಡಿಸುತ್ತದೆ. ನಿಮ್ಮ ಸಂಗಾತಿ ನಿಮ್ಮ ಒಂದು ಯೋಜನೆಯನ್ನು ಹಾಳು ಮಾಡಬಹುದು ತಾಳ್ಮೆಯನ್ನು ಕಳೆದುಕೊಳ್ಳಬೇಡಿ. ಆರೋಗ್ಯದಲ್ಲಿ ಕಸಿವಿಸಿ ಇರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಮಕರ ರಾಶಿ
ನಿಮ್ಮ ಮನಸ್ಸಿನಲ್ಲಿ ಸಕರಾತ್ಮಕ ಆಲೋಚನೆಗಳನ್ನು ಮಾಡುವುದು ಒಳ್ಳೆಯದು. ನೀವು ನಿಮ್ಮ ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆಗಳನ್ನು ಹೊಂದಿದ್ದರೂ ಇದು ನಿಮ್ಮ ಮನಃಶಾಂತಿಯನ್ನು ಹಾಳುಮಾಡಲು ಬಿಡಬೇಡಿ. ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಗ್ರಹಿಸುತ್ತದೆ. ಶ್ರಮದಿಂದ ಹಣಕಾಸಿನ ಬಲವಿದೆ. ಉದ್ಯೋಗದಲ್ಲಿ ಉತ್ತಮ ಚೈತನ್ಯವನ್ನು ಹೊಂದುವಿರಿ. ಆರೋಗ್ಯಕ್ಕಾಗಿ ಮಾಡಿದ ಧ್ಯಾನ ಯೋಗ ನಿಮ್ಮ ಸಹಾಯಕ್ಕೆ ಬರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಕುಂಭ ರಾಶಿ
ಮನೆಯ ವಿಷಯಗಳಲ್ಲಿ ಅವಶ್ಯಕತೆ ಪೂರೈಸಲು ಸಹಾಯ ಮಾಡಬೇಕು. ವೈವಾಹಿಕ ಜೀವನದಲ್ಲಿ ಶಾಂತಿ ಕಡಿಮೆ ಇರುತ್ತದೆ. ಹೊಸ ಪಾಲುದಾರಿಕೆ ವ್ಯಾಪಾರ ವ್ಯವಹಾರದಲ್ಲಿ ಅಡೆ ತಡೆ ಗಳು ಬರಬಹುದು. ಉದ್ಯೋಗದಲ್ಲಿ ನಿಮಗೆ ಕೆಟ್ಟ ಸಮಯಗಳು ಕಂಡುಬರುತ್ತದೆ. ಆರೋಗ್ಯ ಕ್ಷೀಣಿಸುತ್ತದೆ. ಕೋಪವನ್ನು ನಿಯಂತ್ರಣದಲ್ಲಿ ಇಡಬೇಕು. ಮದುವೆ ಕಾರ್ಯಗಳು ಮುಂದೂಡಲ್ಪಡುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಮೀನಾ ರಾಶಿ
ನಿಮ್ಮ ಅಭಿಪ್ರಾಯಗಳನ್ನು ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೇಳಬೇಕು. ದಾಂಪತ್ಯದಲ್ಲಿ ಪ್ರೇಮ ತೋರಬೇಕಾಗುತ್ತದೆ. ಕಠಿಣ ಸಮಸ್ಯೆಗಳು ಎದುರಾಗಬಹುದು. ವ್ಯಾಯಾಮ ಮಾಡುವುದು ಆರೋಗ್ಯ ಕಾಪಾಡಬಹುದು. ಒಂದು ಸುಂದರವಾದ ಅದ್ಬುತ ದಿನವಾಗಿದೆ. ಬೇರೆಯವರಿಗೆ ನೀಡಿರುವಂತಹ ಹಣಕಾಸು ನಿಧಾನವಾಗಿ ನಿಮ್ಮ ಕೈ ಸೇರುತ್ತದೆ. ವಿವಾಹ ವಿಚಾರಗಳು ದೀರ್ಘವಾಗಿ ಕಾಣಬಹುದು.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


