Connect with us

ನಿತ್ಯ ಭವಿಷ್ಯ

ಶ್ರೀ ಮಹಾಲಕ್ಷ್ಮೀ ಒಲಿಸಿಕೊಳ್ಳುವುದು ಹೇಗೆಂದು ತಿಳಿಯಲು ಭವಿಷ್ಯ ವಾಣಿ ಮತ್ತು ಮಾರ್ಗದರ್ಶನ : ಗುರುವಾರ 08/08/2019

Published

on

ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅನುಗ್ರಹ ದೈವ ಶಕ್ತಿಯಿಂದ ನಿಮ್ಮ ಸರ್ವ ರೀತಿಯ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾದ ಪರಿಹಾರ ಕಂಡುಕೊಳ್ಳಬಹುದು. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು. 9900494333.

ನಿತ್ಯ ಭವಿಷ್ಯ

ಮೇಷ ರಾಶಿ

ಒತ್ತಡದ ದಿನ ಹೊರತಾಗಿಯೂ ನಿಮ್ಮ ಆರೋಗ್ಯ ಸರಿಯಿರುತ್ತದೆ. ವಿಭಿನ್ನ ರೀತಿಯಲ್ಲಿ ಪ್ರಣಯವನ್ನು ಅನುಭವಿಸುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಎಲ್ಲಾವೂ   ನಿಮ್ಮ ಪರವಾಗಿ ಇದ್ದಂತೆ ತೋರುತ್ತದೆ. ಕುಟುಂಬದಲ್ಲಿ ಬೆಂಬಲ ನೀಡುತ್ತಾರೆ. ಮನಸ್ಸಿನ ಹೊರೆಯೂ  ಕೂಡ ಕಡಿಮೆ ಆಗುತ್ತದೆ. ಆದಾಯ  ಮತ್ತು ಹಣಕಾಸು ಹೆಚ್ಚಳ ಆಗುತ್ತದೆ. ಮದುವೆ ಮುಂದೂಡಲ್ಪಡುತ್ತದೆ.    ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ವೃಷಭ ರಾಶಿ

ನೀವು ಒಂದು ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವುದು ಉತ್ತಮ ಅನಿಸುತ್ತದೆ. ನಿಮ್ಮ ದೈನಂದಿನ ಒತ್ತಡದ ಜೀವನ ದಿಂದ ನಿಮಗೆ ಸುಖ ಮತ್ತು ವಿಶ್ರಾಂತಿಯನ್ನು ತರುತ್ತದೆ. ದೂರದ ಸಂಬಂಧಿಗಳು ಹೆಚ್ಚಾಗಿ ಮಾತನಾಡಲು ಪ್ರಯತ್ನಿಸುತ್ತಾರೆ. ನಿಮ್ಮ ಕೆಲಸದಲ್ಲಿ ನಿಮ್ಮ ಸ್ನೇಹಿತರು ಸಹಾಯ ಮಾಡುವಂತರಾಗಿರುತ್ತಾರೆ. ಆರೋಗ್ಯವು ಸ್ವಲ್ಪಮಟ್ಟಿಗೆ ಉತ್ಸಾಹದಿಂದ ಕೂಡಿರುತ್ತದೆ. ಕಂಕಣಬಲ ಕೂಡಿಬಂದಿದೆ. ನೀವು ಹೆಚ್ಚುವರಿ ಹಣವನ್ನು ಸಂಪಾದಿಸುತ್ತೀರಿ.ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಮಿಥುನ ರಾಶಿ

ನೀವು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಕುಟುಂಬದವರೊಡನೆ ಯಾವುದಾದರೂ ಒಂದು ಯೋಜನೆಯನ್ನು ಕೈಗೊಳ್ಳಬೇಕು. ನಿಮ್ಮ ಸಂಗಾತಿಯೊಂದಿಗೆ ಪ್ರೀತಿ-ಪ್ರೇಮದಲ್ಲಿ ಪಾತ್ರರಾಗಿರಿ. ಜೀವನದ ನೋವುಗಳನ್ನು ಮರೆಯುವಿರಿ. ಶ್ರೀ ಲಕ್ಷ್ಮಿ ದಿಗ್ಬಂಧನ ಮಾಡಿಕೊಳ್ಳುವುದರಿಂದ ಹಣಕಾಸು ನಿಮ್ಮ ಮನೆಗೆ ಪೂರ್ಣವಾಗಿ ಸೇರುತ್ತದೆ. ಆರೋಗ್ಯದಲ್ಲಿ ಶಾಂತಿ ಕಂಡು ನಗುಮುಖದಿಂದ  ಇರಬಹುದು.  ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಕರ್ಕಾಟಕ ರಾಶಿ

ಕುಟುಂಬದ ಜೊತೆಗಿನ ಸಂಬಂಧಗಳು ಸಂದರ್ಭಗಳು ನಿಮಗೆ ಅಹಿತಕರ ಎನಿಸುತ್ತದೆ. ಹಣಕಾಸಿನ ಭಾಗ್ಯವು ಅತಿಶೀಘ್ರದಲ್ಲೇ ಒಲಿದು ಬರಲಿದೆ. ಮನೆಯಲ್ಲಿ ವಿಶೇಷ ಅರ್ಚಕರಿಂದ ಪೂಜೆಯನ್ನು ಮಾಡಿಸಬೇಕು. ಉದ್ಯೋಗಗಳಲ್ಲಿ ತುರ್ತುಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಶತ್ರುಗಳು ಯಾವಾಗಲೂ ನಿಮ್ಮ ಬೆನ್ನ ಹಿಂದೆ ಇರುತ್ತಾರೆ. ನಿಮ್ಮ ಮಕ್ಕಳು ಕೆಲವು ನಿರೀಕ್ಷೆಗಳನ್ನು ವಿಫಲತೆ  ಮಾಡಿ ನಿಮಗೆ ತೊಂದರೆ ಉಂಟುಮಾಡಬಹುದು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಸಿಂಹ ರಾಶಿ

ನಿಮ್ಮ ಉದ್ಯೋಗದಲ್ಲಿ ಸಹೋದ್ಯೋಗಿಗಳು ಬೇಗನೆ ನಿಮ್ಮನ್ನು ಅರ್ಥಮಾಡಿಕೊಳ್ಳುತ್ತಾರೆ. ಹಣಕಾಸು ನಿಮ್ಮ ಕೈಯಿಂದ ಸುಲಭವಾಗಿ ಜಾರಿ ಹೋದರು ನಿಮ್ಮ ಅದೃಷ್ಟದ ತಾರೆಗಳು ನಿಮಗೆ ಲಾಭವನ್ನು ದೊರಕುವಂತೆ ಮಾಡುತ್ತವೆ. ಮನೆಯಲ್ಲಿ ಹೆಣ್ಣುಮಕ್ಕಳು ಮನೆಯನ್ನು ಶುದ್ಧವಾಗಿ  ಇಡುವುದು  ಬಹುಮುಖ್ಯವಾಗಿದೆ. ಮದುವೆ ವಿಚಾರಗಳು ನಡೆಯುತ್ತವೆ. ಧೈರ್ಯದಿಂದ ಇರಬೇಕು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಕನ್ಯಾ ರಾಶಿ

ಅಲ್ಪಮಟ್ಟಿಗೆ ಈ ದಿನದ ಹಣಕಾಸು ಪರಿಸ್ಥಿತಿಗಳು ಸುಧಾರಿಸಬಹುದು. ಕುಟುಂಬದೊಡನೆ ಯಾವುದೇ ಭರವಸೆಗಳನ್ನು ನೀಡಬೇಡಿ ಅದರಿಂದ ನಿಮಗೆ ಪಶ್ಚಾತಾಪ ಉಂಟಾಗುತ್ತದೆ. ಉದ್ಯೋಗದಲ್ಲಿ ಕೆಲವು ನಿರಾಸೆಗಳನ್ನು ದೂರ ಮಾಡಬಹುದು. ಪ್ರೀತಿಯಲ್ಲಿ ಕೆಲವು ಸಂಕಷ್ಟಗಳು ಎದುರಾಗುತ್ತವೆ. ಆರೋಗ್ಯದಲ್ಲಿ ನಿಮಗೆ ವಿಪರೀತ ಜ್ವರ ಆರಂಭವಾಗುತ್ತದೆ. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ತುಲಾ ರಾಶಿ

ನೀವು ತುಂಬಾ ದಿನಗಳಿಂದ ಕಾಯುತ್ತಿದ್ದ ಕೆಲಸದ ಒತ್ತಡಗಳು ಇಂದು ದೂರ ಆಗಬಹುದು. ನಿಮಗೆ ಆರ್ಥಿಕ ಲಾಭವನ್ನು ತಂದುಕೊಡುತ್ತದೆ. ಕುಟುಂಬದಲ್ಲಿನ ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಇರುತ್ತದೆ. ನೀವು ಹುಡುಕುತ್ತಿರುವ ಕೆಲಸದಲ್ಲಿ ಹೆಚ್ಚು ಪ್ರತಿಸ್ಪರ್ಧಿಗಳು ಇರುತ್ತಾರೆ. ನಿಮ್ಮ ಮನಸ್ಸಿನ ಆಕಾಂಕ್ಷೆಗಳು ಮಡದಿಯೊಂದಿಗೆ ಹಂಚಿಕೊಳ್ಳಬೇಕು. ಮದುವೆ ವಿಷಯದಲ್ಲಿ ಒಂದು ಒಳ್ಳೆಯ ನಿರ್ಧಾರವನ್ನು ಹಿರಿಯರ ಮುಂದೆ ಮಾತಾಡಬೇಕು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ವೃಶ್ಚಿಕ ರಾಶಿ

ನೀವು ನಿಮ್ಮ ಆತ್ಮವಿಶ್ವಾಸವನ್ನು ಕೆಲಸ ಕಾರ್ಯದಲ್ಲಿ ಸರಿಯಾದ ಕ್ರಮದಿಂದ ಬಳಸಿಕೊಳ್ಳಬೇಕು. ಪ್ರೀತಿಯಲ್ಲಿ ನಿಮ್ಮ ಚೈತನ್ಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಕಾರ್ಯಗಳು ಸ್ಥಗಿತವಾಗುತ್ತದೆ. ಕುಟುಂಬಗಳಲ್ಲಿ ಮದುವೆ ವಿಚಾರಗಳನ್ನು ಲಘುವಾಗಿ ಮಾತನಾಡಬಾರದು. ಧರ್ಮಕ್ಷೇತ್ರ ಗಳ ಭೇಟಿ ಆಗಲಿದೆ. ಹಣಕಾಸಿನ ಸ್ಥಿತಿ ಸುಧಾರಿಸಬಹುದು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಧನಸ್ಸು ರಾಶಿ

ನೀವು ಹೆಚ್ಚಾಗಿ ಇವತ್ತು ಪ್ರಯಾಣ ಬೆಳೆಸಬಹುದು. ನಿಮ್ಮ ಕುಟುಂಬದ ಸದಸ್ಯರು ಹೇಳಿದ ಮಾತುಗಳಿಗೆ ನೀವು ಒಪ್ಪಿಗೆ ಕೊಡುವುದಿಲ್ಲ. ನಿಮ್ಮ ಹಠಮಾರಿ ವರ್ತನೆಯಿಂದ ದಾಂಪತ್ಯದಲ್ಲಿ ದೋಷತೆ  ಮೂಡಿಬರುತ್ತದೆ. ಒಬ್ಬಂಟಿಯಾಗಿ ನೀವು ಯೋಚನೆ ಮಾಡಲು ಸಹಾಕಾರ ಆಗುತ್ತದೆ.   ಶತ್ರುಗಳು  ತೀರಾ ಹತ್ತಿರದಲ್ಲೇ ಇದ್ದು ನಿಮಗೆ ಕಿರಿಕಿರಿ ಉಂಟುಮಾಡುತ್ತಾರೆ. ಹಣ ಖರ್ಚು ಮಾಡುವ ನಿಮಗೆ ಮನಸ್ಸು ಬಿಗಿಯಾಗುತ್ತದೆ. ಆರೋಗ್ಯ ಸಮಸ್ಯೆ ಬಹುದಿನದಿಂದ ಹಾಗೆಯೇ ಉಳಿದುಕೊಳ್ಳುತ್ತದೆ. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಮಕರ ರಾಶಿ

ಹೊರಗಡೆ ಹೋಗಿ ಹೆಚ್ಚು ಖರ್ಚು ಮಾಡುತ್ತೀರಿ. ಅದನ್ನು ಕಡಿಮೆ ಮಾಡಬೇಕು ಮನೆಯಲ್ಲಿ ಕೇಳಿದ ಹಾಗೆ ಕೆಲವು ಸಾಮಗ್ರಿಗಳನ್ನು ಒದಗಿಸಬೇಕು. ದಾಂಪತ್ಯದಲ್ಲಿ ರೋಮಾಂಚನಕರ ಕ್ಷಣದ ದಿನವಾಗಿರುತ್ತದೆ. ಉದ್ಯೋಗ ಪೂರ್ಣಗೊಂಡು ನಂತರ ನಿಮ್ಮ ಪ್ರಿಯತಮೆಯನ್ನು ನೋಡಲು ಸಾಗಬಹುದು. ಆರೋಗ್ಯದಲ್ಲಿ ಆನಂದಮಯ ಕೂಡಿರುತ್ತದೆ. ಮುಂದಿನ ದಿನಗಳಲ್ಲಿ ನಿಮಗೆ ಯಾರು ಸಹಾಯಕರಾಗಿ ಇರುವುದಿಲ್ಲ. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಕುಂಭ ರಾಶಿ

ನೀವು ಈ ದಿನ ಬಿಡುವಿಲ್ಲದೆ ಅತಿ ಶ್ರಮದಿಂದ ಕೆಲಸಗಳನ್ನು ಮಾಡುತ್ತೀರಿ. ಕುಟುಂಬದಲ್ಲಿ ಕೆಲವು ಪೂಜೆ ಮಾಡುವ ವಿಷಯಗಳನ್ನು ಸರಿಯಾದ ಕ್ರಮದಲ್ಲಿ ತಿಳಿದುಕೊಳ್ಳಬೇಕು. ಮಕ್ಕಳು ತುಂಬಾ ಕಿರಿಕಿರಿ ಉಂಟುಮಾಡುತ್ತಾರೆ. ಹಣಕಾಸು ಎಲ್ಲಿಲ್ಲದ ಹಾಗೆ ಖರ್ಚು ಉಂಟಾಗುತ್ತದೆ. ಕೆಲವು ಸಂತೋಷದ ಕ್ಷಣಗಳು ನಿಮ್ಮ ಆರೋಗ್ಯವನ್ನು ಕಾಪಾಡಬಹುದು. ಹಳೆಯ ಸ್ನೇಹಿತರನ್ನು ಈ ದಿನ ನೆನಪು ಮಾಡಿಕೊಳ್ಳಬಹುದು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಮೀನಾ ರಾಶಿ

ನಿಮ್ಮ ಹಲವು ಸಮಸ್ಯೆಗಳನ್ನು ಬಗೆಹರಿಸಲು ಹಣಕಾಸನ್ನು ಜೋಡಿಸಿ ಇಟ್ಟುಕೊಳ್ಳಬೇಕು. ನಿಮ್ಮ ಪ್ರೇಮಿಯಿಂದ ದೂರವಿದ್ದುದು ತುಂಬಾ ಕಷ್ಟಕರವಾಗುತ್ತದೆ. ವಿವಾಹದ ಕಾರ್ಯಕ್ರಮಗಳನ್ನು ನಡೆಸುವುದು ಉತ್ತಮವಾಗಿರುತ್ತದೆ. ಬಂಧುವರ್ಗದವರು ನಿಮ್ಮ ಮನೆಗೆ ಆಗಮಿಸುತ್ತಾರೆ. ಈ ದಿನ ಮನೆಯಲ್ಲಿ ಸಿಹಿತಿಂಡಿಗಳನ್ನು ಮಾಡಬೇಕು. ಉದ್ಯೋಗದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಶತ್ರುಗಳಿಂದ ಬಹಳಷ್ಟು ಅಪಾಯವಿದೆ ಎಚ್ಚರದಿಂದ ಇರಬೇಕು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂತರಂಗ2 days ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ3 days ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ4 days ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ6 days ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ1 week ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 weeks ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 weeks ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 weeks ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ3 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ3 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

Trending