ನಿತ್ಯ ಭವಿಷ್ಯ
ಶ್ರೀ ಧನಲಕ್ಷ್ಮೀ ಭವಿಷ್ಯ ವಾಣಿ ಶ್ರಾವಣ ಶನಿವಾರ ಮತ್ತು ಪರಿಹಾರ ಮಾರ್ಗದರ್ಶನ : 10/08/2019
ಉತ್ತಮ ಭವಿಷ್ಯಕ್ಕಾಗಿ ಕರೆಮಾಡಿ. ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು PH: 9900494333
ಮೇಷ ರಾಶಿ
ಉದ್ಯೋಗದಲ್ಲಿ ನಿಮ್ಮ ಬಯಕೆಗಳು ಈಡೇರುತ್ತವೆ. ದಾಂಪತ್ಯದಲ್ಲಿ ಸುಖ-ಸಂತೋಷದಿಂದ ಇರಬಹುದು. ನಿಮ್ಮ ಭಯವನ್ನು ಬೇಗನೆ ತೊಡೆದು ಹಾಕಬೇಕು. ಸಹೋದ್ಯೋಗಿಗಳಿಂದ ಉತ್ತಮ ಬಾಂಧವ್ಯ ಉಂಟಾಗುತ್ತದೆ. ಹೆಂಗಸರಿಗೆ ಆಯಾಸ ತೊಂದರೆ ಕೀಲುನೋವು ಕಂಡುಬರುತ್ತದೆ. ವಿವಾಹದಲ್ಲಿ ಅವಕಾಶಗಳು ಹುಡುಕುತ್ತಾ ಬರುತ್ತದೆ. ಶತ್ರುನಾಶ, ಜನವಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳು (ಪರಿಹಾರ ಮಾಡಲು ಕರೆಮಾಡಿ) 9900494333.
ವೃಷಭ ರಾಶಿ
ನೀವು ಪ್ರಯತ್ನಿಸುವ ಕಾರ್ಯಗಳು ಕೈ ಗೂಡುವ ಸಂಭವವಿದೆ. ಗುರುಬಲದಿಂದ ಅವಿವಾಹಿತರಿಗೆ ವಿವಾಹ ಯೋಗ ಸಿಗುತ್ತದೆ. ಆರೋಗ್ಯದ ಚಿಂತೆ ನಿಮ್ಮ ಏಳಿಗೆಗೆ ಅಡ್ಡ ಬರುತ್ತದೆ. ಹಣಕಾಸಿನ ಲಾಭ ಈಗಿನಿಂದ ಬರುತ್ತದೆ. ಉದ್ಯೋಗದಲ್ಲಿ ಜಯ ಸಾಧಿಸಬಹುದು. ಗೃಹದಲ್ಲಿ ಕಲಹಗಳು ನಡೆಯುವುದು. ಮಾನಸಿಕ ರೋಗದಿಂದ ನರಳಬಹುದು. ಶತ್ರುನಾಶ, ವಶೀಕರಣ, ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಮಿಥುನ ರಾಶಿ
ಉದ್ಯೋಗದಲ್ಲಿ ಅಧಿಕಾರಿಗಳಿಂದ ಗೌರವ ಹಾಗೂ ಧನಲಾಭ ಉಂಟಾಗುತ್ತದೆ. ನಿಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಿ ತೃಪ್ತಿ ಪಡೆಯುವಿರಿ. ಗೆಳತಿಯೊಂದಿಗೆ ಪ್ರೀತಿಯಿಂದ ಸಮಯ ಕಳೆಯುವುದು. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ತೋರಬೇಕಾಗುತ್ತದೆ. ತಂದೆ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು. ಆಗಾಗ ಎದೆಯಲ್ಲಿ ಉರಿ ಕೀಲುನೋವುಗಳಿಂದ ನರಳುತ್ತಿರಿ. ವಿವಾಹ ಯೋಗ ಕಾಣಬಹುದು. ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಜನವಶ, (ಪರಿಹಾರ ಮಾಡಲು ಕರೆಮಾಡಿ) 9900494333.
ಕರ್ಕಾಟಕ ರಾಶಿ
ಉದ್ಯೋಗಸ್ಥರು ಬೇರೆಯವರ ಮಾತು ಕೇಳಬಾರದು ಧನ ಹಾನಿಯಾಗುತ್ತದೆ. ಬಂದು ಮಿತ್ರರಿಂದ ದೃಷ್ಟೀದೋಷ ಪೂಜೆಗಳಿಂದ ತೊಂದರೆ ಆಗಬಹುದು. ಯಾವುದೇ ಹೊಸ ಕಾರ್ಯಗಳಿಗೆ ಕೈ ಹಾಕಬೇಡಿ. ಗೌಪ್ಯ ವಿಷಯಗಳನ್ನು ನಿಮ್ಮ ಸಂಗಾತಿಯೊಂದಿಗೆ ಹಂಚಿಕೊಳ್ಳಿ ಸಂಸಾರ ಜೀವನ ಚೆನ್ನಾಗಿರುತ್ತದೆ. ಸ್ತ್ರೀಯರು ಓಡಾಟದಿಂದ ಸುಸ್ತಾಗಿ ಆಯಾಸ ಕಾಣಿಸಿಕೊಳ್ಳುತ್ತದೆ. ಪ್ರಯಾಣದಲ್ಲಿ ಎಚ್ಚರದಿಂದ ಇರಬೇಕು.ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಜನವಶ, ಸಮಸ್ಯೆಗಳು (ಪರಿಹಾರ ಮಾಡಲು ಕರೆಮಾಡಿ) 9900494333.
ಸಿಂಹ ರಾಶಿ
ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಎದುರಾಗಬಹುದು. ಉದ್ಯೋಗಿಗಳಿಗೆ ಉತ್ತಮ ಅವಕಾಶಗಳು. ಸಜ್ಜನರ ಸಂಗದಿಂದ ನಿಮ್ಮ ಕೆಲಸದಲ್ಲಿ ಜಯ. ಆಸ್ತಿಯಲ್ಲಿ ನಷ್ಟ ಎದುರಾಗಬಹುದು. ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಇಂಜಿನಿಯರಿಂಗ್ ಉಪಕರಣಗಳ ವ್ಯಾಪಾರಿಗಳಿಗೆ ಲಾಭವಿದೆ. ಸ್ನೇಹಿತರೊಂದಿಗೆ ವಾಗ್ವಾದವನ್ನು ಮಾಡುವುದರಿಂದ ದೂರವಾಗುತ್ತಾರೆ. ದಿನ ನಿತ್ಯ ಲಕ್ಷ್ಮೀ ಪೂಜೆ ನಿಮಗೆ ಒಳ್ಳೆದಾಗುತ್ತದೆ. ಜನವಶ, ಮಾಟಮಂತ್ರ ತಡೆ, ವಶೀಕರಣ, ಶತ್ರುನಾಶ, ಸಮಸ್ಯೆಗಳು (ಪರಿಹಾರ ಮಾಡಲು ಕರೆಮಾಡಿ) 9900494333.
ಕನ್ಯಾ ರಾಶಿ
ಉದ್ಯೋಗದಲ್ಲಿ ಮಹತ್ವದ ಬದಲಾವಣೆ ಕಂಡುಬರುತ್ತದೆ. ಬರಹಗಾರರು ವಿದ್ಯಾರ್ಥಿಗಳು ವಿದ್ಯೆಯಲ್ಲಿ ಜಯಗಳಿಸಬಹುದು. ಪೂಜೆಯನ್ನು ಮಾಡಿ ಆಯಾಸದಿಂದ ಅಜೀರ್ಣ ವ್ಯಾಧಿಯಿಂದ ಜ್ವರಬಾಧೆ ಉಂಟಾಗುತ್ತದೆ. ಅನವಶ್ಯಕ ಖರ್ಚು ಮಾಡುವಿರಿ. ಪ್ರಯತ್ನಿಸಿದ ಕಾರ್ಯದಲ್ಲಿ ಜಯ ಕಾಣುವಿರಿ. ವಾಹನ ಲಾಭವಿದೆ. ಕುಟುಂಬದ ವಿಷಯಗಳಲ್ಲಿ ಸುಮ್ಮನೆ ಕೂಗಾಟ ಮಾಡಬೇಡಿ. ಮನಸ್ತಾಪ ಹುಟ್ಟುತ್ತದೆ. ವಿವಾಹದಲ್ಲಿ ಹುಡುಕಾಟ ಇರುತ್ತದೆ. ಜನವಶ, ಮಾಟಮಂತ್ರ ತಡೆ, ವಶೀಕರಣ, ಶತ್ರುನಾಶ, ಸಮಸ್ಯೆಗಳು (ಪರಿಹಾರ ಮಾಡಲು ಕರೆಮಾಡಿ) 9900494333.
ತುಲಾ ರಾಶಿ
ವಿದ್ಯಾಭ್ಯಾಸದಲ್ಲಿ ಸ್ನೇಹಿತರೊಂದಿಗೆ ಕೂಗಾಟ ಮಾಡಬೇಡಿ. ಸಮಯ ಹಾಳಗುತ್ತದೆ. ನಂಬಿದ ಸ್ರ್ತೀಯಿಂದ ಧನಹಾನಿಯಾಗುತ್ತದೆ. ವಾಹನಗಳಿಂದ ಅಪಘಾತವಿದೆ. ಉದ್ಯೋಗದಲ್ಲಿ ಬಡ್ತಿ ಪದವಿ ಪ್ರಾಪ್ತಿಯಾಗಬಹುದು. ರಹಸ್ಯ ಪ್ರಣಯಗಳು ನಿಮ್ಮ ಖ್ಯಾತಿಯನ್ನೂ ಹಾಳು ಮಾಡುತ್ತದೆ. ಹೆಚ್ಚಾಗಿ ಸಿಹಿತಿನಿಸುಗಳು ಊಟ ಮಾಡುವವರಿಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಳ್ಳುತ್ತದೆ. ಸಂತಾನಹೀನರಿಗೆ ಸಂತಾನ ಲಾಭವಿದೆ. ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, (ಪರಿಹಾರ ಮಾಡಲು ಕರೆಮಾಡಿ) 9900494333.
ವೃಶ್ಚಿಕ ರಾಶಿ
ರಾಜಕಾರಣಿಗಳಿಗೆ ಗಣ್ಯವ್ಯಕ್ತಿಗಳಿಗೆ ಕಲಾವಿದರಿಗೆ ಉತ್ತಮ ದಿನವಾಗಿದೆ. ಸ್ತ್ರೀಯರಲ್ಲಿ ಆರೋಗ್ಯದಲ್ಲಿ ಏರು ಪೇರು ಆಗುತ್ತದೆ. ಮಕ್ಕಳಿಂದ ತೊಂದರೆ ಆಗಬಹುದು. ವಿವಾಹದಲ್ಲಿ ಅಡೆ ತಡೆಗಳು ಕುಟುಂಬದ ಹಿರಿಯರನ್ನು ಎದುರಿಸಬೇಕಾಗುತ್ತದೆ. ಯಾರಿಗೂ ಸಾಲವನ್ನು ನೀಡಬೇಡಿ. ಗ್ರಹಗಳು ಇಂದು ನೀವು ಸಂತೋಷದಿಂದ ಇರಲು ಕಾರಣವಾಗಿದೆ.ಸಹೋದ್ಯೋಗಿಗಳಿಂದ ಸಹಾಯದಿಂದ ಹಣಕಾಸು ಕಾಣಬಹುದು. ವಿದ್ಯಾರ್ಥಿಗಳು ಓದಿನಲ್ಲಿ ಹಿಂದೆ ಬೀಳುತ್ತಾರೆ. ಜನವಶ, ವಶೀಕರಣ,ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು (ಪರಿಹಾರ ಮಾಡಲು ಕರೆಮಾಡಿ) 9900494333.
ಧನಸ್ಸು ರಾಶಿ
ಆರೋಗ್ಯದಲ್ಲಿ ಸುಧಾರಣೆ ಆಗಬಹುದು. ಕುಟುಂಬದಲ್ಲಿ ಸಂತೋಷ ನೆಮ್ಮದಿ ಕಾಣುತ್ತೀರಿ. ಉದ್ಯೋಗಕ್ಕಾಗಿ ಹುಡುಕಾಟ ನಡೆಯುವುದು. ಪ್ರೇಮ ವೈಫಲ್ಯಗಳನ್ನು ಎದುರಿಸಬೇಕಾಗುತ್ತದೆ. ಬಂಧುಗಳಲ್ಲಿ ಚುಚ್ಚು ಮಾತು ಕೇಳಿ ಮಾನಸಿಕವಾಗುತ್ತದೆ. ನೆರೆ ಹೊರೆಯವರಲ್ಲಿ ವೈರತ್ವ ಕಂಡುಬರಬಹುದು. ಮನೆಯಲ್ಲಿ ಹಲವಾರು ಅನುಕೂಲ ಕೇಳುತ್ತಾರೆ. ವೃದ್ಧರು ಶುಭ ಫಲ ಕಾಣಬಹುದು. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬಹುದು. ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು, (ಪರಿಹಾರ ಮಾಡಲು ಕರೆಮಾಡಿ) 9900494333.
ಮಕರ ರಾಶಿ
ಪ್ರೇಮಿಗಳಿಗೆ ಉತ್ತಮ ದಿನವಾಗಿದೆ. ವಿದೇಶದಲ್ಲಿ ಇರುವ ಮಗ ವಾಪಸ್ಸು ಬಂದು ತಂದೆ ತಾಯಿಗಳೊಂದಿಗೆ ಜಗಳ ಆಡುತ್ತಾರೆ. ಸಾಲಗಾರರಿಂದ ಕಿರುಕುಳ ಆಗುತ್ತದೆ. ಕೆಟ್ಟ ಕೆಲಸದಿಂದ ಸ್ಥಾನ ಮಾನಕ್ಕೆ ಧಕ್ಕೆ ಅಂಗವೈಕಲ್ಯ ಉಂಟಾಗುತ್ತದೆ. ನಿವೃತ್ತ ಅಧಿಕಾರಿಗಳಿಗೆ ವಾಹನ ಆಘಾತ ಉಂಟು. ವಿವಾಹ ವಿಚ್ಛೇದನ ಆದವರಿಗೆ ಮದುವೆ ಆಗುವ ಸಂದರ್ಭ ಬರುವುದು. ಗುರುಗಳ ಸಹವಾಸದಿಂದ ಆಧ್ಯಾತ್ಮಿಕ ವಿಷಯದಲ್ಲಿ ಆಸಕ್ತಿ ಹೆಚ್ಚುತ್ತದೆ. ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ ) 9900494333.
ಕುಂಭ ರಾಶಿ
ವಿದ್ಯಾಭ್ಯಾಸ ಮಾಡಲು ಹೆಚ್ಚಾಗಿ ಶ್ರದ್ಧೆಯಿಂದ ಶ್ರಮವಹಿಸೇಕು. ಉದ್ಯೊಗಕ್ಕಾ ಗಿ ಪತ್ನಿಯಿಂದ ಸಹಕಾರ ಮತ್ತು ಲಾಭ ದೊರೆಯುತ್ತದೆ. ಸ್ತ್ರೀಯರು ಸೊಂಟ ಮತ್ತು ಮೂಳೆ ಮಾಂಸ ಖಂಡಗಳ ತೊಂದರೆಯಿಂದ ನರಳಬಹುದು. ಮನೆಗೆ ಬಂದುಗಳ ಆಗಮನವಾಗುತ್ತದೆ. ಸುಖ ಭೋಗವಸ್ತುಗಳನ್ನು ಖರೀದಿಸಬಹುದು. ಗೃಹ ಜೀವನ ಶಾಂತಿಯುತವಾಗಿ ಕಾಾಣಿಸಿಕೊಳ್ಳುತ್ತದೆ.ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು (ಪರಿಹಾರ ಮಾಡಲು ಕರೆಮಾಡಿ) 9900494333.
ಮೀನಾ ರಾಶಿ
ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನ ಬರುತ್ತದೆ. ಕುಟುಂಬದಲ್ಲಿ ನೆಮ್ಮದಿಯ ವಾತವರಣವಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಹಾಗೂ ನಿಂತ ಕೆಲಸ ಕಾರ್ಯಗಳು ಸಂಪೂರ್ಣವಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳಿಂದ ಲಾಭವಿದೆ. ಶತೃಗಳಿಂದ ಅನಾಹುತ ಕಾಣಿಸಿಕೊಳ್ಳುತ್ತದೆ. ಸ್ತ್ರೀಯರು ಸುಖಕರ ಜೀವನ ಕಾಣಬಹುದು. ಕಳೆದ ಬೆಲೆ ಬಾಳುವ ವಸ್ತುಗಳು ಹುಡುಕಬಹುದು. ವಿವಾಹ ಕಾರ್ಯಗಳು ನಡೆಯಬಹುದು. ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು (ಪರಿಹಾರ ಮಾಡಲು ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ4 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ3 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ1 day agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ24 hours agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ


